ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಕ್ತನಾವನೋ ಜೀವನ್ಮುಕ್ತನಾವನೋ ಪ ಮುಕ್ತನಾವನಿವರ ಪಾದಾಸಕ್ತನಾಗಿ ಸರ್ವಕರ್ಮ ಭಕ್ತಿಯಿಂದ ನೀಡಿ ವಿಷಯಾಸಕ್ತನಾಗದವನಿಗಿನ್ನ ಅ.ಪ ಉದಯಕಾಲದಲ್ಲಿ ಎದ್ದು ನದಿಯಸ್ನಾನಮಾಡಿ ಇವರ ಪದುಮಸಮಪಾದಯುಗಳ ಹೃದಯದಲ್ಲಿ ಭಜಿಪಗಿನ್ನ 1 ವನಿತೆ ಧಾನ್ಯ ಧನುವು ತನಯ ಪ್ರಾಣ ಇವರ ಪಾದವನಜಕರ್ಪಿಸಿರುವಗಿನ್ನ 2 ಊಟ ಕೂಟ ನೋಟಮಾಟ ಪಾಠ ಆಟ ಕಾಟ ಇವರ ಉದಧಿ ದಾಟುವಾವಗಿನ್ನಮತ್ತೆ 3 ಉಕ್ತ ಕರ್ಮದಲ್ಲಿ ಮನ ಸಕ್ತನಾಗಿ ಹರಿಯ ಪಾದ ಭಕ್ತಿಯಿಂದ ಭಜಿಸಿ ಪಾಪಮುಕ್ತನಾಗುವವಗಿನ್ನ 4 ಶಕ್ತಿ ಇದ್ದರೊಳಗೆ ಹರಿಯ ಭಕ್ತಜನರ ಭಜಿಸಿ ಸರ್ವೋ ವಿಭೂತಿ ಮನದಿ ವ್ಯಕ್ತಮಾಡಿದವಗಿನ್ನ 5 ಮೋದತೀರ್ಥ ಶಾಸ್ತ್ರಸಾರ ಸ್ವಾದ ಮನದಿ ತಿಳಿದು ಅವರ ಹಾದಿಹಿಡಿದು ಬುಧರ ದಿವ್ಯ ಪಾದಯುಗಳ ಭಜಿಪಗಿನ್ನ 6 ಶಿರದಿ ಇದ್ದ ಹರಿಯ ರೂಪ ಅರಿದು ಮನಸಿನಿಂದ ನಿತ್ಯ ಶಿರದಿ ಕಾರ್ಯಮಾಡಿ ತಾನು ಹಿರಿದು ಹಿಗ್ಗುವಗಿನ್ನ 7 ನೇತ್ರಮೊದಲಾದ ಸರ್ವಗಾತ್ರದಲ್ಲಿ ಇರುವ ತೀರ್ಥ ಕ್ಷೇತ್ರಮೂರ್ತಿ ತಿಳಿದು ತನ್ನ ಗಾತ್ರನಿರ್ಮಲ ಮಾಳ್ಪಗಿನ್ನ 8 ಈಶ ಹರಿಯು ಸರ್ವ ಜೀವ ದಾಸರೆಂದು ತನ್ನ ಹೃದಯೋ ಪಾಸನಾವ ಮಾಡಿ ವಿಷಯ ಆಶೆಬಿಟ್ಟು ಇರುವಗಿನ್ನ 9 ಎನು ಮಾಳ್ಪ ಕರ್ಮವೆಲ್ಲ ಶ್ರೀನಿವಾಸ ಮಾಳ್ಪನೆಂದು ಜ್ಞಾನದಿಂದ ಸರ್ವರಲ್ಲಿ ಧ್ಯಾನಮಾಳ್ಪ ಮನುಜಗಿನ್ನ 10 ಶ್ವಾನ ಗೋವು ದ್ವಿಜ ಮತ್ತೆ ಅನಿ ಮೊದಲು ಸರ್ವರಲ್ಲಿ ಜ್ಞಾನಗಮ್ಯ ತಾನು (ತಾನೆ) ಸಮಾನನೆಂದವಗಿನ್ನ 11 ಅಮೃತ ವಿಷವು ಎಲ್ಲ ಸ್ವಾದು ಸಮವೆಂದು ಅಲ್ಲಿ ಇಚ್ಚೇ ಮಾಡದವಗಿನ್ನ 12 ವೃತ್ರಸೂದನನುಜ ಸರ್ವಕರ್ತೃ ಎಂಬವಗಿನ್ನ 13 ಪಾದ ದೂತ ನಾನು ಎಂದು ನಿತ್ಯ ಪಾತಕಾರ್ಯ ಮಾಡಿದಾಗ್ಯು ಪೂತನೆನಿಪನವನಗಿನ್ನ 14 ಸಿಟ್ಟು ಶೋಕ ಹರ್ಷ ಮೋಹ ಸುಟ್ಟು ಗುರುಜಗನ್ನಾಥ ವಿಠಲನ್ನ ಭಜಿಸಿ ಜಗದಿ ಶಿಷ್ಟ ನಾಗಿರುವಗಿನ್ನ 15
--------------
ಗುರುಜಗನ್ನಾಥದಾಸರು
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು