ಒಟ್ಟು 11 ಕಡೆಗಳಲ್ಲಿ , 8 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿಕಕ್ಷೆ - ದಾಸಕಕ್ಷೆ ಮುನಿಜನರ ನೆನೆಸಿ ಜನರೂ | ಮುನಿ ಜನರ ನೆನೆಸಿ ಬಿಡ | ದನುದಿನದಲಿ ನಿಮ್ಮ | ಮನ ಮಲಿನ ಪೋಗಿ ಸ | ವನಧಿ ಹರಿವೊಲಿದು | ಘನವಾಗಿ ಪಾಲಿಸುವನು ಪ ವಿಶ್ವ | ಮಿತ್ರ ಮೈತ್ರಾವಾರುಣಿ ಭೃಗು | ವೀತಿ ಹೋತ್ರ ಕಪಿ ಗಾಗ್ರ್ಯ ಗಾಲವ | ಗರ್ಗಗಾರ್ಚಮಾ || ಪತ್ರ ಫಾಲಾಶವಟು | ಶಾಂಡಿಲ್ಯ ಶಕಟ ಸು | ಕೃತಿ ಗೋತ್ರ ಗೌರೀವೀತಹವ್ಯ | ಕಪಿ ಶಂಖಕಟ ಮೈತ್ರಾವರುಣವಾಧುಳಾ || 1 ಉಪಮನ್ಯು ಶಂಕು ಉದ್ದಾಲಕ ಕೌಂಡಿಣ್ಯ | ಅಪುನವಾನ ಅತಿಥಿ ಪಾಂತುಚಾವನ ಚವನ | ಕ | ಶ್ಯಪ ಪೂತಿಮಾಷರೈಭ || ವಿಪುಳ ಜಮದಗ್ನಿ ವಾಲ್ಮಿಕಿ ರೇಭ ಜಾಬಾಲಿ | ಸ್ವಪನ ಸಾತ್ಯಕಿಯು ಸಾಮ್ಯಾಳ ದೇವರತತಿ | ಕಪಿಕುತ್ಸ್ನ ಪೌರಕುತ್ಸಾ 2 ಮುನಿಮಾದ್ರಮ ಶಣಶರ್ಮ ಬಾದರಾಯಣ | ಕನಕ ಕಾತ್ಯಾಯನ ಮಾರ್ಕಾಂಡ್ಯ ಮಾಂಡವ್ಯ | ತೃಣಬಿಂದು ಭಾಷ್ಕಾಳಾಖ್ಯ || ಪನಸ ಅಘಮರ್ಷಣ ಪ್ರಮಧ ಪ್ರಾಗಾಧ ಜೀ | ವನಯಾಜ್ಞವಲ್ಕ್ಯ ಜಿವಂತಿ ಮಾತಂಗ ಶೋ | ದನ ಧೌಮ್ಯ ಆರ್ಯ ರುಚಿರಾ || 3 ವಾಸಿಷ್ಟ ಶ್ರೀವತ್ಸ ಲೋಹಿತಾಷ್ಯಕಶರ್ವ | ಕರ್ದಮ ಮರೀಚಿ ಪಾ | ಬೇಷಿ ಜಾವಾಯುಲಿಕೆಯೂ || ಭೂಷಣೌ ಬಾರ್ಹಸ್ಪತ್ಯದಾಲ್ಭ್ಯ ಸುಯಜ್ಞಾಜ್ಞಿ | ವೇಶ್ಯ ಮುಖ ಸಪರಿಧಿಸಾಲಂಕಾಯನಾ ಧರ್ಮ | ನಾಶಯ ದೇವಶ್ರವತಾ ||4 ಶ್ರವ ಪೂರ್ಣವಾಹಕ ಕೃತು ಅಂಗಿರಸಾಂಗಿರಾ || ಲವ ಶಮನ ಋಷಿಶೃಂಗ || ಕವಿ ವೇದಶಾಲ ವಿಶಾಲ ಕೌಶಿಕ ಶುಚಿ | ಭುವನ ಉರ್ಜಯನ ಮಾಹಋಷಿಭಹುದ ಸಂ | ಭವಸ್ತಂಭ ಕಿರಾಠಿ ಕಪಿಸೇನ ಶಾಂಡಿಲ್ಯ | ಪವನದಮ ಬೀಜವಾಪಿ || 5 ಉಲಿಖಲು ಧನಂಜಯ ವಾಲಿಖ್ಯಮಾಯ | ಕಲಿಕಿ ಸೃಂಗಿ ಮಧು ಚಂದವಿತನು ಬಹು | ಶರಭ || ಪುಲಸ್ತ್ಯ ದಧೀಚಿ ಕಥಾಸೂನು ಸೇವಾಸ್ಯ ಮಾ | ದ್ಗಲ ವಿಷ್ಣು ತ್ರಿಧಕುಕ್ಷಿ ಶುಕ್ಷ ಮನತಂತು | ಬಲವೀರ್ಯ ಬಬ್ರಾಮೇನೂ6 ಅಪವರ್ಗ ಹಿರಣ್ಯನಾಭ ಅ | ದ್ಭುತ ಅಜಾಮೀಡ ಪರ್ವತ ಶ್ವೇತಕೇತಮಾಹ || ಸತ್ಯವ್ರತ ಶ್ರ್ರುತಿದೃತಿ ಆಯತಾ || ಶ್ರುತಿಕೀರ್ತಿ ಸುಪ್ರಭಾವತ್ಸ ಮೃತಾಂಡ ಸೂ | ಕ್ರೋಢ ಕೋಲ ಗೋಬಲ ಮಾತೃಕಾನಂದ || ಕಥನ ಸರ್ವಸ್ಥಂಬವಾ 7 ನೈಧ್ರುವಾ ದೀರ್ಘತಮ ಜಮದಗ್ನಿ ಕಾರುಣಿ | ಸದ್ಮುನಿಕಾಂಡಮಣಿ ಮಾಂಡವ್ಯವಾಚÀಸಕ | ಶಿದ್ಧಿಸನಕಸ ನಂದನಾ || ವಿದ್ಯಾಂಗ ಹವ್ಯರೋಹಿತಶರ್ಮ ಸೂಕರ್ಮ | ಮೇಧ ಮೇಧ ಪ್ರ | ಶುಕ ಬುದ್ಧಿ ಸಮೇಧ ಪೇರ್ಮಿ 8 ಪಂಚ ಪಂಚಾಸಪ್ತ ಅಪ್ಟ ಕಾಲದಲಿ ಪ್ರಾ | ಪಂಚದೊಳು ತೊಡಕದಲೆ ಬುದ್ಧಿ ಚಿತ್ತದೊಳಿಟ್ಟು | ಗಿದ್ದವರ ಕೊಂಚ ಮುನಿಗಳ ಪೇಳಿದೆ || ವಂಚನೆಯಿಲ್ಲದೆ ಸ್ಮರಿಸಿ ಮಧ್ವಮತಪೊಂದಿ | ಸಂಚಿತಾಗಮ ಕಳೆವ ಸರ್ವಸುಖವೀವ ವಿ | ಮಿಂಚಿನಂದದಿ ಪೊಳೆವನು 9
--------------
ವಿಜಯದಾಸ
--------ನಿಲಯ ಮನೆಗೆ ಭವರೋಗ ವೈದ್ಯಾ ತೋರಯ್ಯ ------ಕರುಣಿ ದಯಾರಸವೆಂಬ ಔಷದ ಪ ಸಂಸಾರವೆಂಬಂಥಾ ಸಾಗರ ಬಹುದು:ಖ ------ದೊಳಗೆ ಬಿದ್ದು ಇರುವಾರೋಗಾ ಹೇಮ ಮಕುಟಧರನೆ ---------ಸಲಹುವ ಕ್ರಿಯವು ನಿನ್ನದೊ 1 ಜನ್ಮಾಜನ್ಮಾಗಳಿಂದಾ ಚಿನ್ಮನೆ-------- ಕಲ್ಮಾಷಾ ದೋಷ ಕಳೆವಾ ಘನಾಮಾತ್ರ ನಿನ್ನಲ್ಲಿ --------ನೆ ಬಿಟ್ಟು ಕೈಯ್ಯಾನಾದೆನ್ನ ಕೈಯ್ಯ ಪಿಡಿದು ನಿರ್ಮಲ ಜ್ಞಾನವೆಂಬ ನಿಜಾ ಔಷಧ ಕೊಡಲು 2 ಅಖಿಲಲೋಕಾಗಳಿಗೆ ಆದಿ-------ತ್ರಿಯಾದಿ ಸಕಲಾ ಚರಾಚರ ಸರ್ವದಾನೀ ನಿ-------ರಾದಿ ಪುರವಂತ ನಿಜ 'ಹೆನ್ನ ವಿಠ್ಠಲನಂಥ’ ಭಕ್ತವತ್ಸಲ ಲಕ್ಷ್ಮೀಕಾಂತ ಶ್ರೀಮಂತಾ 3
--------------
ಹೆನ್ನೆರಂಗದಾಸರು
ಅರಿತವರಿಗತಿ ಸುಲಭ ಹರಿಯ ಪೂಜೆ ಪ ಅರಿಯದವ ನಿರ್ಭಾಗ್ಯತರ ಲೋಕದೊಳಗೆ ಅ.ಪ. ಹೈಮಾಂಡ ಮಂಟಪವು ಭೂಮಂಡಲವೆ ಪೀಠ ಸೋಮ ಸೂರ್ಯರೆ ದೀಪ ಭೂರುಹಗಳು ಚಾಮರಗಳತಿ ವಿಮಲ ವ್ಯೋಮ ಮಂಡಲ ಛತ್ರ ಯಾಮಾಷ್ಟಕರಗಳಷ್ಟದಳದ ಪದ್ಮವುಯೆಂದು 1 ಮಳೆಯೆ ಮಜ್ಜನವು ದಿಗ್ವಲಯಂಗಳೇ ವಸನ ಮಲಯಜಾನಿಲವೇ ಶ್ರೀಗಂಧ ಧೂಪಾ ಇಳೆಯೊಳಗೆ ಬೆಳೆದ ಧಾನ್ಯಗಳೆಲ್ಲ ನೈವೇದ್ಯ ಥಳ ಥಳಿಪ ಮಿಂಚು ಕರ್ಪೂರದಾರತಿಗಳೆಂದು 2 ನಕ್ಷತ್ರ ಮಂಡಲವೇ ಲಕ್ಷ ದೀಪಾವಳಿಯು ದಕ್ಷಿಣೋತ್ತರ ಅಯನಗಳೇ ಬನವು ವೃಕ್ಷ ವಲ್ಲಿಜ, ಸುಫಲ ಪುಷ್ಪಗಳೊಳಗೆ ಲಕ್ಷ್ಮೀ ವಕ್ಷ ವ್ಯಾಪಕನಾಗಿ ತಾನೆ ಭೋಗಿಪನೆಂದು 3 ಗುಡುಗು ಸಪ್ತ ಸಮುದ್ರ ಸಿಡಿಲು ಘೋಷವೇ ವಾದ್ಯ ಪೊಡವಿಪರಿಗೀವ ಕಪ್ಪವೇ ಕಾಣಿಕೆಗಳು ಉಡುಪ ಭಾಸ್ಕರರ ಮಂಡಲಗಳಾದರ್ಶಗಳು ನಡೆವ ನಡೆಗಳು ಹರಿಗೆ ಬಿಡದೆ ನರ್ತನವೆಂದೂ 4 ಯುಗ ಚತುಷ್ಟಯವೆ ಪರಿಯಂಕ ಪಾದಗಳಬ್ದ ಬಿಗಿವ ಪಟ್ಟಿಗಳು ಕಂದಾಯ ಕಸಿ ಯೊ ಗಗನ ಮೇಲ್ಗಟ್ಟು ಸಂಕ್ರಮಣಗಳೇ ಬಡವುಗಳೂ ಭಗವಂತಗುಪಬರ್ಹಣಗಳು ಷಡೃತುಗಳೆಂದೂ 5 ನಾಗವಲ್ಲೆಗಳೆ ದಿವಸಗಳು ಕರಣವೇ ಕ್ರಮಕೆ ಯೋಗಗಳೇ ಚೂರ್ಣ ರಾತ್ರೆ ತಾಂಶೊಕ ಭೋಗವತೀ ಜಲವೆ ಗಂಡೂಷೋದಕ ಶುದ್ಧ ಸಾಗರವೆ ಪಾದೋದಕ ವಿರಾಡ್ರ್ರೂಪಗೆಂದು6 ಶಾತಕುಂಭೋಧರಾಂಡಾಂತಸ್ಥ ರೂಪ ಸಂ ಪ್ರೀತಿಯಿಂದಲಿ ಯಜಿಸಿ ಮೋದಿಪರನಾ ಮಿತ ಶೋಕರ ಮಾಡಿ ಸಂತೈಸುತಿಹ ಜಗ ನ್ನಾಥ ವಿಠಲ ಒಲಿದು ಸರ್ವ ಕಾಲಗಳಲ್ಲಿ 7
--------------
ಜಗನ್ನಾಥದಾಸರು
ಬನ್ನಿರಿ ಬನ್ನಿರಿ ಪುರಜನರೆಲ್ಲರು ಕೃಷ್ಣನ ದರುಶನಕೆ ಪೋಗುವ ಪ ಕೃಷ್ಣನು ಜನಿಸಿದ ಈ ದಿನ ಇಷ್ಟವ ಪ್ರಾರ್ಥಿಸಲು ಪೋಗುವಅ.ಪ ದುಂದುಭಿ ನಾದವು ಕೇಳುತಿದೆ ಬಲು ಮಂದಿಯ ತಂಡವು ಹೋಗುತಿದೆ ಕಂದನ ರೂಪದಿ ಬಂದಿಹ ಆನಕ ದುಂದುಭಿ ಕುವರನ ಸಂಭ್ರಮ ನೋಡಲು 1 ಪೇಳಿರಿ ನಿಮ್ಮಯ ಕೊರತೆಗಳೆÀಲ್ಲವ ಕೇಳಿರಿ ವರಗಳ ಧೈರ್ಯದಲಿ ಬಾಲನು ಸುಲಭದಿ ಒಲಿಯುವ ಒಳ್ಳೆಯ ಕಾಲವಿದೆಲ್ಲರಿಗೆ ಬೇಗನೆ 2 ಜನುಮ ಜನುಮಗಳ ಪುಣ್ಯದ ರಾಶಿಯು ಜನುಮಾಷ್ಟಮಿ ದಿನದಿ ಲೋಕಕೆ ಜನುಮಾದ್ಯಷ್ಟಕದಾತನ ದರುಶನ ಮನಕೆ ಪ್ರಸನ್ನತೆ ಕೊಡುವುದು ಪೋಗುವ 3
--------------
ವಿದ್ಯಾಪ್ರಸನ್ನತೀರ್ಥರು
ವೆಂಕಟಗಿರಿವಾಸ ವೆಂಕಟಗಿರಿವಾಸ ವೆಂಕಟಗಿರಿವಾಸ ಶ್ರೀ ವೆಂಕಟೇಶ ಪಸುರ ಸಮುದಾಯ ಶಿರೋಮಣಿ ರಾಜಿತಚರಣಸರೋರುಹ ಶ್ರೀ ವೆಂಕಟೇಶ 1ಕಮನೀಯ ವಿಗ್ರಹ ಕಮಲಾಲಯಾಕರಕಮಲಶೋಭಿತಪಾದ ಶ್ರೀ ವೆಂಕಟೇಶ 2ವಿಧಿಮುಖಾಮರಗಣ ವಿಧಿವಿಹಿತಾರ್ಚಿತಬುಧಹೃದಯಾಲಯ ಶ್ರೀ ವೆಂಕಟೇಶ 3ಸನಕಾದಿಮುನಿವಂದ್ಯ ಸಾಧುಸಂರಕ್ಷಕವನಧಿಸುತಾ ಭೂಮಿಧವ ವೆಂಕಟೇಶ 4ಅಂಜನವೃಷಶೇಷ ವಿನತಾತನುಜ ನಾಮರಂಜಿತಾಚಲವಾಸ ಶ್ರೀ ವೆಂಕಟೇಶ 5ನಾರಯಣಾದ್ರಿ ಸಿಂಹಾದ್ರಿ ಶ್ರೀಶೈಲೇತಿಸಾರ ವೆಂಕಟನಾಮಾಷ್ಟಕ ಭೂಧರೇಶ 6‘ವೆಂ ಪಾಪಂ ಕಟತಿ ನಾಶಯತೀತಿ’ ವಿಖ್ಯಾತಸಾಂಪ್ರತ ಸುಸ್ಥಿರ ಶ್ರೀ ವೆಂಕಟೇಶ 7ನಿತ್ಯ ನಿಜಾನಂದ ನಿರುಪಮಾಮಿತಶಕ್ತಿವೃತ್ತಿ ಪ್ರವರ್ತಕ ಶ್ರೀ ವೆಂಕಟೇಶ 8ದಿವ್ಯ ದಕ್ಷಿಣಮುಖ್ಯದೋರ್ಧೃತ ಶ್ರೀ ಚಕ್ರಸವ್ಯದೋರ್ಧೃತ ಶಂಖ ಶ್ರೀ ವೆಂಕಟೇಶ 9ಭಜಿತವ್ಯಂ ಪಾದಪಂಕಜಮಿತಿ ದರ್ಶಿತನಿಜ ದಕ್ಷಾಧಃಪಾಣೇ ಶ್ರೀ ವೆಂಕಟೇಶ 10ಭಜತಾಂ ಭವಾಂಭೋಧಿ ಕಟಿಮಿತಮಿತಿ ವಾಮಕಟಿ ನ್ಯಸ್ತ ಕರಕಂಜ ಶ್ರೀ ವೆಂಕಟೇಶ11ಹಾರ ಕಿರೀಟ ಕುಂಡಲ ಗಾತ್ರ ಶ್ರೀ ವೆಂಕಟೇಶ 12ಕಂಕಣ ಕೇಯೂರ ವಲಯ ಶೋಭಿತ ಕರಕುಂಕುಮಾಂಕಿತ ಮಾಲ ಶ್ರೀ ವೆಂಕಟೇಶ 13ಕಟಿಸೂತ್ರ ಕಲಿತ ಪೀತಾಂಬರ ಕಿಂಕಿಣಿಕಟಕಮಂಡಿತಪಾದ ಶ್ರೀ ವೆಂಕಟೇಶ 14ತಿರುಪತೀತಿಖ್ಯಾತ ತೀರ್ಥಭೂತಾದ್ರೀಶವರದ ವಿಶ್ವಾಧಾರ ಶ್ರೀ ವೆಂಕಟೇಶ 15ಓಂ ಮುರಾರಯೇ ನಮಃ
--------------
ತಿಮ್ಮಪ್ಪದಾಸರು
ಶ್ರೀ ರಾಮನಾಮ ಸ್ಮರಿಸೀಕ್ಷಕಾರಿ ಘೋರಾವತಾಪಗಳದಾಗಳದಾ ಪುರಾರಿ ಆರಾದರೇನು ಜಪಿಸೀ ಜಪಸೀದ ಯೋಗಿ ಸಾರುವೆ ನೊಡಿ ಸುಖವಾ ಸುಖವನು ನೀಗಿ1 ಸೋಕಲು ರಾಮಪದವಾ ಪದವನು ನೀಗಿ ತಾಕನ್ಯಳಾದಳರಿಯಾ ಅರಿಯಾದ ಹೋಗಿ ನೀ ಕೇಳಿ ಕೇಳಿ ಮರವೇ ಮರವೇನೋ ನೀನು ಲೋಕೇಶಗ್ಹೋಗುಶರಣಾ ಶರಣಾಗುವನು 2 ಏನಿತ್ತಳಂದು ಶಬರಿ ಬರಿಯಹಣ್ಣಾ ತಾನುಂಡುಕೊಟ್ಟು ಭವವಾಭವವಾರಿಸಣ್ಣಾ ಅನಾಥಬಂದು ಮರಿಯಾಮರಿಯಾದಹೋಗಿ ಸ್ವಾನಂದಸಾಖ್ಯಗರೆವಾಗರೆವಾಗೊವಲ್ಲಿ 3 ಇಂದಿರೆ ಸುದ್ದಿ ಸುಧಿಯಾ ಸುಧಿಯಾದಲಿಂದಾ ತಂದಾರೆಪದ್ಮಭವನಾ ಭವಸಾದರಿಂದಾ ಆದನೇವೆ ಕೊಟ್ಟುಕರದೀ ಕರದೀಶನಾಥಾ ಮುಂದಿನಭಾವ್ಯ ಹನುಮಾ ಹನುಮಾವಿಧಾತಾ4 ರಾಮೆಂದುಕೂಗಿ ಗಿಳಿಯಾ ಗಿಳಿಯಾಗಣಿಕೆ ನೇಮದಲಿ ಮುಗುತಿಯಾ ಗತಿಯಾಬೇಕೆ ಪ್ರೇಮದಿ ಮಾನವರುತಾ ವರತಾತನೆಂದಾ ಕಾಮಾರ್ಥನೀವ ಚಲುವಾ ಚಲುವಾ ಮುಕುಂದಾ5 ಸುಗ್ರೀವ ಬಂದು ಅಡಿಯಾ ಅಡಿಯಾಗಲೆಂದು ಶೀಘ್ರದಿಶೀಳಿತರುವಾ ತರುವಾಯಲಿಂದು ಅಗ್ರಜನೊತ್ತಿ ಅವನೀ ಅವನೀಯ ರಾಮಾ ನುಗ್ರಹ ಮಾಡದರಿಯಾದರಿಯಾಗು ವಾತ್ಮಾ6 ಶುಭವಾಕ್ಯ ದೂರಿದನು ಜಾಣನು ಜಾಣನಾಗಿ ವಿಭೀಷಣಬಂದ ಕಣವೀಕ್ಷಣದಲಿ ಸಾಗಿ ವಿಭುಕೊಟ್ಟಲಂ ಕಾಶ್ರಯವಾಶ್ರಯವಾಗಿ ರಾಮಾ ಅಭಿವರ್ಣಿಸುದುರಸನಾ ರಸನದಿ ನೇಮಾ7 ಶೇವೆಯನು ಮಾಡಿ ತಣಲೀತಣಲೀಯ ನೋಡಿ ತಾವರಿ ಕೈಯ್ಯಳೆಳದಾಲೆಳದಾದಯ ಮಾಡಿ ಭಾವಾರ್ಥಿಯಾದ ನರನಾ ನರನಾಥವೇಷಾ ಕಾವನುಲೋಕಜನ ಕಾಜನಕಾತ್ಮಜೇಶಾ 8 ರಾಮಾಷ್ಟಕಾದ ಕವಿತಾ ಕವಿತಾನೆ ಆಗೀ ಶ್ರೀ ಮಹಿಪತಿ ವರದಾ ವರದಾತ ಯೋಗಿ ಕುಂದ ಗುರುತಾಗುರುತಾತ ಮಾಡಿ ನೇಮದಿ ಕಾವಕರುಣೀಕರುಣೀಯ ನೋಡಿ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀನಿವಾಸ ವಾಸವಿಸೂನು ಪ ಪತಿ ತ್ಯಜನೆ ತಥ ಚರಣಪಾಣಿ ಪರಮಾನಂದಾ ಚರಣಾಯುಧನಾದವಗೆ ಸೋಕಿದಳ ಚರಣದಿ ಪಾವನಗೈಸಿದೆ ದೇವಾ1 ಪತಿ ಗುರು ಪಿತೃ ಪಿತಾಮಹಾ ದೈ ವತ ಗುರೋರ್ಗುರು ಸ್ವಶುರ ಜಾರಾ ಅತಿಶಯ ಭೂತಿರಭೂತಿ ಎಂದು ಸಂ ತತ ಉಪಾಸ್ಯತನಾಗಿ ಮೆರೆವನೆ 2 ಪಂಚಾದಿಗ್ಬರಸ್ಮಿಗಳಲ್ಲಿ ಪೂಜೆ ಪಂಚ ರೂಪದಿ ಕೊಂಬನಾಡಿಸ್ಥ ಪಂಚಜನ ಪಂಚಮೊಗವೇಶ ತಾಳಿದ ಪಂಚ ಕುಸುಮಸಾರ ಮಧು ವಿದ್ಯಮೂರ್ತಿ 3 ಹೃದಯಾಖ್ಯಪುರ ಪಂಚದ್ವಾರದಲಿ ನೀ ವಿಧಿ ಭವರಿಂದಾರ್ಚನೆ ಗೊಂಬೆ ಪದುಮಾಷ್ಟ ದಳದಲಿ ಪ್ರಹರೇಯ ತಿರುಗುವ ಸುದರುಶನಾಬ್ಜಾದಿ ಅಷ್ಟಬಾಹು ಚನ್ನಾ 4 ಗುಣಪೂರ್ಣ ಐಶ್ವರ್ಯಾನಂತ ಮೋದಾ ಗಾನೆ ತ್ರಾಣ ಕರ್ತೃ ಪ್ರಣವ ತ್ರಿಚರಣಸ್ತಾ ಎಣಿಸುವೆ ಷÀಟುಚತು ತ್ರಿಭಿರೂಪಾತ್ಮಾ5 ಪದ್ದುಮ ಶಾಂತಸಿಂಹ ಅನಿರುದ್ಧ ಪ್ರದ್ಯುಮ್ನ ಸಂಕರುಷಣ ವಾ ಸುದೇವ ನಾರಾಯಣ ರೂಪಗಳಿಂದ ಹೃದ್ಗತನಾಗಿ ಒಪ್ಪುವ ಮಹಾಮಹಿಮಾ 6 ಗೋಕುಲನಾಥ ಗೋವಿಂದ ತಿರುಮಲ ಕಾಕೋದರಾದ್ರಿನಿಲಯ ಸ್ವಾಮಿ ಸಿರಿ ವಿಜಯವಿಠ್ಠಲ ಪ ರಾಕು ಈ ರಥದೊಳು ಕುಳ್ಳಿ ವೇಗಸಾಗಿ7
--------------
ವಿಜಯದಾಸ
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ
ಸರ್ವದೈವ ಸ್ತುತಿಗಳು 1. ಶ್ರೀ ಗಣಪತಿ ಸ್ತುತಿಗಳು 163 ಗಜಮುಖ ಗಣಪ ಪಾಹಿಮಾಂ ಪ ತ್ರಿಜಗಾಧಿಪ ಸಂಪೂಜಿತ ಅಜವಂದಿತ ಏಕದಂತಂ ಅ.ಪ ಗಿರಿಜಾಸುತ ಸುಖವರ್ಧನ | ಉರಗಾಧಿಪ ಕಟಿಬಂಧನ ವರದಾ ಮೌಕ್ತಿಕ ರದನ [ವರಮಾಷಿಕವಾಹನಾ] 1 ಗಂಗಾಧರ ಮನಮಂದಿರ ಇಂಗಿತೇಷ್ಟದಾತಾರ ಮಂಗಳ ಪಾಶಾಂಕುಶಧರ ಮಾಂಗಿರೀಶ ಪ್ರಿಯಶಂಕರ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣು ಆತ್ಮಕ ಸರ್ವತೋಮುಖ ಶರಣು ಸರ್ವಲೀಲಾತ್ಮಕಶರಣುಗುರುಚಿದಾನಂದ ವಿಗ್ರಹ ಶರಣು ಸುರಮುನಿ ಪಾಲಕಪರೂಪು ಹರ ನಿರ್ಲೇಪಘನಚಿದ್ರೂಪರೂಪವಿರೂಪಕತಾಪನಾಶಕ ಪೋಷ ಭಕ್ತಕೃತಪರಾಧಿ ಪವಿತ್ರಕದೀಪ ಹೃದಯ ಸಭಾಸ ಉನ್ಮನ ದೀಪ್ಯಮಾನ ಮಹಾತ್ಮಕಭೂಪ ಸುರಮುನಿ ಸಿದ್ಧರಕ್ಷಕ ಭುವನದಧಿಪತಿ ರಕ್ಷಕ1ಪ್ರಣವಪುರುಷ ಪರೇಶಪಾವನ ಪ್ರಣತಸುಜನಪರಾವರ ಮರಣರಹಿತ ನಿಜ ನಿಶ್ಚಲಾತ್ಮಕ ಗುಪ್ತ ಮೂರುತಿ ಗುರುವರಎಣಿಸಬಾರದನಂತ ಲೋಕಕೆ ಏಕನಾಥದಿವಾಕರಅಣಿಮ ಮಹಿಮಾಷ್ಟಾಂಗ ಯೋಗಗಳಳವಿಗೊಡದ ಪ್ರಭಾಕರ2ಎರಡು ಮೂರಾರೆಂಬವೆಲ್ಲವ ಎಣಿಸೆ ಏಳೈದೆಂಬವಪರಿವಿಡಿಯ ನಾಲ್ಕೆಂಟು ನವದಶ ಪರಿಪರಿಯ ವಿಕಾರವಹರಿಹರ ಬ್ರಹ್ಮಮರೇಂದ್ರರು ಹರಿವರಿಯದ ಸ್ವಭಾವವಬೆರಸದಿಹ ಚಿದಾನಂದ ಮೂರ್ತಿಯ ಭೇದವಿರಹಿತ ಚಿತ್ಪ್ರಭಾ3
--------------
ಚಿದಾನಂದ ಅವಧೂತರು