ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಹವಸ್ತುವೊಂದೇ ಜಗದೊಳಗೆ ಇಹವಸ್ತುವೊಂದೇಸೋಹಂ ಸೋಹಂ ಸೋಹಂ ಸೋಹಂಸೋಹಂ ಸೋಹಂ ಸೋಹಂ ಎಂದೇ ಪ ಸಂಗ ದೂರೆನಿಸಿ ಸಂಗವೆ ತಾನೆನಿಸಿಮಂಗಳ ಮಂಗಳ ಮಂಗಳ ಮಂಗಳಮಂಗಳ ಮಂಗಳ ಮಂಗಳವೆಂದೇ 1 ಜ್ಞಾನವೆ ತಾನಾಗಿ ಅಜ್ಞಾನಕೆ ತಾದೂರಾಗಿತಾನೇ ತಾನೇ ತಾನೇ ತಾನೇತಾನೇ ತಾನೇ ತಾನೇ ಎಂದು2 ವರ್ಣಂಗಳು ಆರು ಮೀರುವರ ಚಿದಾನಂದ ಗುರುಪೂರಣ ಪೂರಣ ಪೂರಣ ಪೂರಣಪೂರಣ ಪೂರಣ ಪೂರಣವೆಂದು 3
--------------
ಚಿದಾನಂದ ಅವಧೂತರು
ಮನವೇ ನೀನೆಚ್ಚರಿಕೆ ಬಿಡದಿರು ಅನುದಿನವು ಹರಿಧ್ಯಾನದೊಳಗಿರು ಪ ವನಿತೆ ಧನಧಾರಿಣಿಯ ನೆಚ್ಚಿ ತನುವೆ ತಾನೆಂಬುದನುಚಿತವು ಅ.ಪ ಬರಿಯಕೈಯಲಿ ಭೂಮಿಗಳಿಸಿದೆ ದುರಿತಭಾರವ ಧರಿಸಿರ್ಪೆ ನರರೆ ಹರಿಸುವರಾರೋ ಕಾಣಿರ ಅರಿತುಕೊಂಡಿರೆ ತಿಳಿಸಿರೈ 1 ಕಾಯವಸ್ಥಿರ ಹೇಮಸಂಸ್ಕøತಿ ಮಾಯಾಪಾಶದ ಬಲೆಗೆ ಸಿಲ್ಕಿ ನಾಯಿನರಿಯಂದದಲಿ ತೊಳಲಿ ಸಾಯವರ ಕಂಡಳುವದೇಕೋ 2 ಜಾತಿಧನವಧಿಕಾರ ಖ್ಯಾತಿಗೆ ಆತುರದೊಳಭಿಮಾನ ಪಡುವೇ ಪಾತಕರೆ ಹಿಂಜರಿಯದಂತೇ ಪ್ರೀತಿಯಿಂ ಪರಪೀಡೆಗೈವೇ 3 ಪೊಡವಿಯೊಳ್ ಪೆಣ್ ಬಾಲ ವೃದ್ಧರು ಬಡವರಾರ್ತರು ಕುಂಟಕುರುಡರು ಎಡೆಯ ಜೀವಿಗಳನ್ನು ಕರುಣದಿ ಕಾಣೆಲೋ ಕಡುಜಾಣನೇ 4 ಸತ್ತಮೇಲೇನೆಂದು ಯೋಚಿಸು ಮುತ್ತಿ ಕತ್ತಿಯೊಳಿರಿವರೈ [ಮ]ತ್ತಕ್ಷಣದ ಫಲಕಾಶೆಪಡದಿರು ಸತ್ಯವಂ ಪಿಡಿ ನಿತ್ಯವೂ 5 ಯಮುನೆ ಹೊಕ್ಕರು ಯಮನು ಬಿಡನೂ ಅಮಮ ನರಕದೊಳಿಳಿಪರೈ ರಮಾರಮಣನ ಒಲುಮೆಗಾಗಿ ಶ್ರಮಿಸಿ ಪರರುಪಕಾರಿಯಾಗೋ6 ಪತಿತಪಾವನ ಜಾಜಿಕೇಶವ ನತಿಶಯದಿ ತಾ ಜಗವ ಪಾಲಿಪ ಚತುರ್ವೇದ ಶ್ರುತಿ ಪ್ರಮಾಣವ ಮತಿಯುತರು ಮೀರುವರೆ ಮರುಳೇ 7
--------------
ಶಾಮಶರ್ಮರು
ಎಷ್ಟು ಮರುಗಿದರು ನಿನ್ನ ಹಣೆಯ ಬರೆಹಅಷ್ಟಲ್ಲದಿಲ್ಲ ಸ್ತುತಿ ವಚನದ ಫಲ ಕಂದಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಂಬರದೊಳಾಡುವ ಪಕ್ಷಿ ತನ್ನ ವಶವಹುದೇಉಂಬುವರ ಕರುಬಿದಡೆ ಉದರ ತುಂಬುವುದೇಕಂಬಳಿಯ ಕೊಡಲು ಕನಕಾಂಬರ ತನಗಹುದೆಹಂಬಲಿಸಿ ಹಲವ ಹಲುಬಿದಡೆಸಿರಿಬಹುದೆ1ಇಲ್ಲದುದ ಬಯಸಿ ಬೇಡಿದೊಡೆ ಭಂಗಬಹುದೊಬಲ್ಲೆನೆಂದೊಡೆ ಮಣಿಸದೆ ಬಿಡಳು ವಿಧಿಯುಬಲ್ಲಿದನು ಬಡವನಿವನೆಂದು ನೋಡರುಸಿರಿವಲ್ಲಭನ ಮಗಳ ಮೀರುವರಾರು ಕಡೆಗೆ2ಸಿರಿಗೆ ಹಿಗ್ಗದೆ ಬಡತನಕೆ ಬೆಂಡಾಗದಿರುಸೇರಿದ ನೆಲೆಯಲಾ ಸುಖ ಸಾವ ಕಾಲದಲಿಶರಣ ಜನಾಶ್ರಿತ ನೆಲೆಯಾದಿಕೇಶವನಚರಣಕಮಲವ ಭಜಿಸಿ ಸುಖಿಯಾಗು ಮನವೆ3
--------------
ಕನಕದಾಸ
ಶ್ರೀಭಾವಸಂವತ್ಸರ ಸ್ತೋತ್ರ151ಭೇಶಸರ್ವೇಶ್ವರ ಶ್ರೀಪತಿಯೇ ಈಭಾವಸಂವತ್ಸರ ನಿಯಾಮಕÀನು ನಮೋ ನಮೋ ಸ್ವಾಮಿ ಪಇಲ್ಲಿ ಬರುವ ನುಡಿಗಳ ಅರ್ಥ ಅನುಸಂಧಾನಗಳಎಲ್ಲ ವೇದಆಗಮಗಾಯತ್ರಿ ಮಹಾಮಂತ್ರ ಬಾಹ್ಯರಿಗೆ ಅಲ್ಲಮೀರುವರಿಗೆ ಒಳ್ಳೇದು ಅಲ್ಲ 1ಶ್ರವಣ ಪಠನ ಫಲಮೋಕ್ಷಸಾಧನ ಜ್ಞÕನಅವಾಂತರ ಫಲ ಕೀರ್ತಿ ಯಶಸ್‍ಲಾಭ ಕಷ್ಟಕಲುಷÀನಾಶವಿವಾದ ಸಂವತ್ ಸಂಜ್ಞÕನ ಅಧೋಪ್ರಾಪ್ತಿಯಥಾಯೋಗ್ಯ2ಆಂಗೀರಸ ವರುಷ ಶ್ರವಣಕ್ಕೆ ಅನುಕೂಲ ಶ್ರೀ ಭಾವವುಮನನಕ್ಕೆ ಅನುಕೂಲ ಸಾಧನ ಈಗ ಈಭಾವಸಂವತ್ಸರ ಉತ್ತಮರೀತಿಯಲ್ಲಿ ಮಾಳು ಸುಧ್ಯಾನಕೆ 3ವೇದಪ್ರತಿಪಾದ್ಯ ಸರ್ವೋತ್ತಮ ಸರ್ವಸ್ವಾಮಿಯ ಸಾಕ್ಷಾತ್ಕಾರತನ್ನಿಚ್ಛೆ ಇಂದಲೇಈವಶ್ರೀ ವಿಷ್ಣು ಪ್ರೀತಿಕರ ಸಾಧನ4ಸದಾಗಮದಿಂದಲ್ಲೇ ಯಥಾಯೋಗ್ಯ ಸಂವೇದ್ಯ ವಿಷ್ಣುತ್ರಯೀಮಯನು ಧರ್ಮಮಯನು ತಪೋಮಯನು ಅವನೇಜಗಜ್ಜನ್ಮಾದಿ ಕರ್ತುತ್ಪಾದಿಗಳ ಕಲ್ಯಾಣತಮ ಮಹಿಮೆಗಳ 5ಶ್ರದ್ಧಾಭಕ್ತಿಯಿಂ ವಿಶೇಷ ಜಿಜ್ಞÕಸವ ಸೌಶೀಲ್ಯ ಗುಣವಂತಅಜಶಂಕರಾದಿಗಳಿಂ ಮಾಡಲ್ಪಟ್ಟ ಷಡ್ಗುಣೋಪಲಕ್ಷಿತ ಅನಂತಕಲ್ಯಾಣ ಗುಣರೂಪನಾದ ಭಗವಂತನ ಪ್ರಸಾದಲಭಿಸೇ ಸಾಧನಸುಧ್ಯಾನ 6ಭಗವಾನ್ಭೇಶಸರ್ವೇಶ್ವರ ಅಜನ ಪಿತ ಪ್ರಸನ್ನ ಶ್ರೀನಿವಾಸತನ್ನಿಚ್ಛೆ ಇಂದಲೇ ಸಜ್ಜೀವರಗೀವ ಯೋಗ್ಯತೆಅರಿತು ಅಪರೋಕ್ಷ್ಯ ಕರುಣಾಸಮುದ್ರ ಶ್ರೀಪ 7
--------------
ಪ್ರಸನ್ನ ಶ್ರೀನಿವಾಸದಾಸರು