ಒಟ್ಟು 23 ಕಡೆಗಳಲ್ಲಿ , 15 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ಕೋಲ ಕೋಲನ್ನ ಕೋಲ ಕೋಲ ಕೋಲನ್ನ ಕೋಲಕೋಲ ಹೊಯ್ದುಪಾಡಿ ನಮ್ಮ ಜಾಣರಂಗಗೆ ಪ. ಲೋಕನಾಯಕ ವ್ಯಾಸ ಮುನಿಗಳಿಗೆ ಏಕೋ ಭಾವದಿಂದ ನಮಿಸಿಹಾಕಿರೆಮ್ಮ ಕೋಲ ಹೊಯ್ದುವಾಕ್ಯಗೆಲಿಸೆಂದು1 ಮಿತ್ರೆ ರುಕ್ಮಿಣಿದೇವಿ ಕರೆದುಮಿತ್ರಾದಿಗಳಿಗೆ ಹೇಳಿದಳುಮುತ್ತಿನ ಕೋಲ ತೊಳಿಯಿರವ್ವಉತ್ತಮ ಜಲದೊಳು 2 ರಾಸ ಕ್ರೀಡೆಯಲ್ಲಿ ವನಿತೆಯರುವಾಸುದೇವ ಪಿಡಿದ ಕೋಲ ಸೋಸಿಲೆ ಪೂಜಿಸಿರಮ್ಮಲೇಸು ಕೊಡಲೆಂದು 3 ಮಂದಗಮನೆಯರೆಲ್ಲ ಕೋಲಿಗೆ ಗಂಧ ಅಕ್ಷತೆ ಏರಿಸಿರೆ ಮುಂದಾಗಿ ಬಲಗೊಳ್ಳಿರೆಲ್ಲವೃಂದಾರಕರನ್ನ4 ನಲ್ಲೆಯರು ಮುತ್ತಿನ ಕೋಲಿಗೆ ಮಲ್ಲಿಗೆ ಸಂಪಿಗೆ ಏರಿಸಿರೆಎಲ್ಲಾ ಫಲಗಳಿಟ್ಟು ಕೈಯ್ಯನಲ್ಲೆಯರು ಮುಗಿದಿರೆ 5 ಜಾಣೆಯರು ನೀವೆಲ್ಲ ಮೊದಲೆವಾಣಿಯ ಬಲಗೊಳ್ಳಿರೆ ಕಲ್ಯಾಣವಾಗಲೆಂದು ಕೈಯ್ಯಮಾಣಗೆ ಮುಗಿದಿರೆ 6 ಮೃಡನ ಮಗನ ಮೊದಲೆ ನೆನೆದುಪಿಡಿಯಿರಮ್ಮ ಕೋಲ ನಿಮ್ಮನುಡಿಯಗೆಲಿಸಲೆಂದು ದ್ರವ್ಯವಕೊಡಿರೆ ದಾನವ 7 ಇಂದು ಗೆಲಿಸೆಂದು 8
--------------
ಗಲಗಲಿಅವ್ವನವರು
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ತುರುಗಾಯ ಬಂದ ಗೋಪಿಯ ಕಂದಆನಂದದಿಂದ ಪ ಮೃಗ ಜಲಚರ ಮೋಹಿಸೆತರಳೇರ ಮನ ಸೂರೆಯಾಗೆ ಕೊಳಲಿನಿಂದ ಅ.ಪ. ತಂದೆಯ ಕಂದನೆಂದು ಕೊಂಕುಳೊಳಿಟ್ಟುಕಂದನ ಕೆಳಗಿಟ್ಟುಅಂದಿಗೆ ಗೆಜ್ಜೆ ಕಿವಿಗಳಿಗಿಟ್ಟುಮುತ್ತಿನ ಬಟ್ಟುಹೊಂದಿಸಿ ಗಲ್ಲದಲ್ಲಿ ತಾನಿಟ್ಟುಕಸ್ತೂರಿಯ ಬಟ್ಟುಮುಂದಾಗಿ ಮೂಗಿನ ಮೇಲಳವಟ್ಟುಮನೆಬಾಗಿಲ ಬಿಟ್ಟುಕಂದರ್ಪನ ಶರದಿಂದ ನೊಂದು ಬಹುಕಂದಿ ಕುಂದುತಲಿಂದುವದನೆಯರುಇಂದಿರೇಶನಾನಂದದ ಗಾನಕೆಚಂದ್ರಮುಖಿಯರೊಂದಾಗುತ ಬರುತಿರೆ 1 ಮುರಳಿಯ ಸ್ವರಕೆ ಮೋಹಿತರಾಗೆಕರುಗಳನು ತಂದುಕರದಿಂದಲೆತ್ತಿ ತೊಟ್ಟಿಲೊಳಗೆಇರಿಸುತ್ತ ಹಾಲಬೆರಸುತ್ತ ಮಜ್ಜಿಗೆ ಮೊಸರಿನೊಳಗೆಪರಮಾತ್ಮನ ನೆನೆದುಹೊರಟರು ಬಿಸಿಲು ಚಳಿ ಮಳೆಯೊಳಗೆಮನೆಮನೆಯೊಳಗೆತರಳರ ಬೆದರಿಸಿ ಮಾರ್ಜಾಲಕೆ ಮೊಲೆತ್ವರಿತದಿ ಉಣಿಸುತ ಸರಿಸರಿಯೆನುತಲಿಪರಿಪರಿ ಭ್ರಾಂತರಾಗಿ ನೋಡುತಪುರಮಾರ್ಗಕೆ ಬರುವರು ನಿರುಕಿಸುತ 2 ಮದನ ಶತಕೋಟಿ ತೇಜನು ಬಂದಸ್ತ್ರೀರೆದುರಲಿ ನಿಂದಅಧರಾಮೃತ ಪಾನವ ಮಾಡಿರೆಂದಬಾಯಾರಿದಿರೆಂದಬದಿಯಲ್ಲಿ ಬಂದು ಕುಳ್ಳಿರಿಯೆಂದಅವರಿರವನೆ ನೋಡ್ದಚದುರೇರ ಮೋಹಕನೆ ನಾನೆಂದವಾದ್ಯದ ರವದಿಂದಸದಯನೆದುರ ರಂಭೆ ಊರ್ವಶಿ ಮೇನಕೆಒದಗಿ ನಾಟ್ಯಗಳ ಚದುರತನದಲಾಡೆಮಧುಸೂದನ ಭಕ್ತರ ಕಾಯ್ವುದಕೀವಿಧದೊಳಗಾಡಿದ ರಂಗವಿಠಲ ತಾ 3
--------------
ಶ್ರೀಪಾದರಾಜರು
ದ್ವೈತ ಅದ್ವೈತೆಂದು ಹೊಡದಾಡದಿರೊ ಪ್ರಾಣಿ ಚೇತಿಸಿ ಬ್ಯಾರಿಹ ವಸ್ತುಗಾಣಿ ಧ್ರುವ ಅದ್ವೈತ ಅ- ದ್ವೈತ ಎನಲಿಕ್ಕೆ ಅದೆನೆ ತಾಂ ದ್ವೈತ 1 ಹಿಂದು ಮುಂದಾಗಿ ಆಡಿಸುತಿಹ್ಯ ನಿಜಖೂನ ಎಂದಿಗಾದರು ತಿಳಿಯಗುಡದು ಪೂರ್ಣ 2 ಅತಿಸೂಕ್ಷ್ಮ ತಿಳುವಾದರಲ್ಲೆ ಬಿದ್ದದ ಮಲಕು ನೇತಿ ನೇತೆಂದು ಸಾರುತಿದೆ ಶ್ರುತಿ ಇದಕೆ ತಿಳಿಕೊ 3 ದ್ವೈತ ಎಂದವನೆ ತಾಂ ಪರಮ ವೈಷ್ಣವನಲ್ಲ, ಅ ದ್ವೈತನೆಂದವನೆ ತಾಮ ಪರಮ ಸ್ಮಾರ್ತನಲ್ಲ 4 ಸ್ಮಾರ್ತ ವೈಷ್ಣವ ಮತ ಗುರು ಮಧ್ವಮುನಿಬಲ್ಲ ಅರ್ತು ಸ್ಥಾಪಿಸುವದು ಮನುಜಗಲ್ಲ 5 ಮೂರುವರಿ ಮೊಳದ ದೇಹದ ಶುದ್ಧಿ ನಿನಗಿಲ್ಲ ದೋರುವರೆ ತರ್ಕಸ್ಯಾಡುವ ಸೊಲ್ಲ 6 ದ್ವೈತ ಅದ್ವೈತಕ ಬ್ಯಾರಿಹ ಗುರುಗುಟ್ಟು ಚಿತ್ತ ಶುದ್ದಾಗಿ ಮಹಿಪತಿಯ ಮುಟ್ಟು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಲ್ಲೆಯರು ನಮೋ ಎಂಬೆವು ಸುರರಎಲ್ಲರ ಬಲಗೊಂಬೆವು ಪ. ಚಲ್ವೆ ಕಂಗಳೆಯರಿಗೆ ಹೊಲ್ಲವು ಎನುತಿರೆಹೊಲ್ಲ ತನವೆಲ್ಲ ಹೊರಗ್ಹಾಕಿ ಬಾಹೊಅ.ಪ. ಅಗಣಿತ ಮಹಿಮ ಹೌದೆಂದುಅಗಣಿತ ಮಹಿಮಎನುತಿರೆಮಗನ ಮುಂದಾಗಿ ಬಲಗೊಂಬೆ1 ಸಾಗರಶಯನಗೆ ಆಗುವ ಹಾಸಿಗೆ ಬ್ಯಾಗನೆ ವರವ ಕೊಡುವೋನುಬ್ಯಾಗನೆ ವರವ ಕೊಡುವ ನಾಗೇಂದ್ರನಮೋ ಎಂಬÉ ನಮ್ಮ ಗೆಲಿಸೆಂದು 2 ನಂದಿವಾಹನ ಶಿವನ ಮುಂದಾಗಿ ಬಲಗೊಂಬೆ ಇಂದಿಗೆ ಪಂಥಗೆಲಿಸೆಂದುಇಂದಿಗೆ ಪಂಥಗೆಲಿಸೆಂದು ಬ್ರಹ್ಮನ ಕಂದನ ಮೊದಲೆ ಬಲಗೊಂಬೆ 3 ಸೌಪರ್ಣವಾರುಣಿ ಅಪರ್ಣ ದೇವಿಯರು ಸೌಕರ್ಯದಿಂದ ನಮ್ಮ ಪಂಥಸೌಕರ್ಯದಿಂದ ನಮ್ಮ ಪಂಥಗೆಲಿಸೆಂದುಕರವ ಮುಗಿವೆವು ಕ್ಷಣಕ್ಕೊಮ್ಮೆ 4 ಇಂದು ರಾಮೇಶನನುಗಾಲ ನೆನೆಯುತ ಮುಂದಕ್ಕೆ ಹೆಜ್ಜೆನಿಡುವೋಣ5
--------------
ಗಲಗಲಿಅವ್ವನವರು
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಮಾರ ಎನ್ನ ಸಂ ಹಾರ ಮಾಡಲು ದಂಡು ತಂದನೆ ಪ ಮುಂದಾಗಿ ಬಂದೊದಗಿದವು 1 ಅಂತರಂಗದಿ ಮನೋಭ್ರಾಂತಿ ಬಿಡಿಸುವವ ಸಂತನೀಗಲೆ ಬಂದಿರುವನೆ2 ಭೃಂಗಗಳೇ ರಣರಂಗದಿ ಕೂಗುವ ಸಂಗತಿಗೆ ಬೆದರಿದೆನೆ 3 ಶುಕವೇರಿ ಧನುವಿನೋಳ್ ವಿಕಸಿತ ಸಮಬಾಣ ಮುಖದೊಳು ಗುರಿಯನ್ನೆ ನೋಡುವ 4 ಆವಾಗಲೂ ವಾಸುದೇವವಿಠಲನ ಪಾದವೆ ಗತಿಯೆಂದಿರುವೆನೆ 5
--------------
ವ್ಯಾಸತತ್ವಜ್ಞದಾಸರು
ಯಾದವೇಂದ್ರ ಪರಿಮೋದವ ಸೂಸುತ ಹಾದಿಯ ಹಿಡಿದಾನು ತಾಗುಣ ಸಾಂದ್ರ ಯಾದವೇಂದ್ರ ಪ. ಛತ್ರ ಚಾಮರದವರು ಜತ್ತಾಗಿ ನಡೆದರುಚಿತ್ತಜನೈಯನ ಹತ್ತಿರ ಕೆಲರು1 ಆನೆ ಅಂಬಾರಿಯವರು ಶ್ರೀನಿವಾಸನ ಮುಂದೆ ನಾನಾ ಭೂಷಿತರಾಗಿ ಮಾನದಿ ತೆರಳಿ 2 ರಾಜಪುತ್ರರು ದಿವ್ಯ ವಾಜಿಗಳೇರುತ ಬಾಜಾರದೊಳು ವಿರಾಜಿಸಿ ನಡಿಯೆ3 ಮಂದಗಮನೆಯರ ರಥ ಮುಂದಾಗಿ ನಡೆದವುಇಂದಿರೆ ಅರಸನ ಸಂದಣಿ ನೋಡ 4 ಎಲ್ಲೆಲ್ಲಿ ನೋಡಿದರೆ ಪಲ್ಲಕ್ಕಿ ಸಾಲಾಗಿ ಫುಲ್ಲನಾಭನ ಮುಂದೆ ನಿಲ್ಲಿಸಿ ನಡಿಯೆ5 ನೋಡ ಬಂದವರೆಲ್ಲ ಗಾಡಿ ವಯಲುಗಳೇರಿರೂಢಿಗೊಡೆಯನ ಮುಂದೆ ಓಡಿಸಿ ನಡಿಯೆ 6 ತಂದೆ ರಾಮೇಶನು ಬಂದ ಬೀದಿಯ ಸೊಬಗುಇಂದಿರೆವಶವಲ್ಲ ಚಂದಾಗಿ ರಚಿಸೆ 7
--------------
ಗಲಗಲಿಅವ್ವನವರು
ಯಾರಿಗೆ ದೂರುವೆನು ಗಿರಿಯ ರಾಯ ಯಾರೆನ್ನ ಸಲಹುವರು ಪ ಸಾರಿದ ಭಕ್ತ ಸಂಸಾರಿ ನಿನ್ನಯ ಪಾದ ವಾರಿಜವನು ತೋರಿ ಕಾರುಣ್ಯವೆನಗೀಯೊ ಅ.ಪ ಕಷ್ಟ ಜನ್ಮದಿ ಬಂದೆನು ಧಾರುಣಿಯೊಳು ದುಷ್ಟರಿಂದಲೆ ನೊಂದೆನು ನಿಷ್ಟುರ ಬೇಡವೊ ನಿನ್ನ ನಂಬಿದ ಮೇಲೆ ಸೃಷ್ಟಿಪಾಲಕ ಎನ್ನ ಬಿಟ್ಟು ಕಳೆಯಬೇಡ 1 ಹಿಂದೆ ಮಾಡಿದ ಕರ್ಮವು ಈ ಭವದೊಳು ಮುಂದಾಗಿ ತೋರುತಿದೆ ಇಂದಿಲ್ಲ ಗತಿಯದರಿಂದ ನೊಂದೆನು ನಾನು ಮಂದರಧರ ಗೋವಿಂದ ನೀನಲ್ಲದೆ 2 ಹಗಲುಗತ್ತಲೆ ಸುತ್ತಿಯೆ ಕಂಗೆಡಿಸುತ್ತ ಹಗೆಯೊಳು ನಗಿಸುತಿದೆ ಉಗುರಿನಸಿಗಿಗೆ ಮಚ್ಚುಗಳೀಗ ನಾಟ್ಯವು ಸೊಗಸು ಹಾರಿಸಿ ಎದೆ ದಿಗಿಲುಗೊಳಿಸುತಿದೆ 3 ಬಾಡಿದ ಅರಳಿಯನು ಕಲ್ಲೀನ ಮೇಲೆ ಈಡಾಗಿ ನಟ್ಟಿದರೆ ಬೇಡಿಕೊಂಡರೆ ತಳಿರ್ಮೂಡಿ ಬರುವುದುಂಟೆ ರೂಢಿಗೊಡೆಯ ನೀನು ನೋಡದಿದ್ದರೆ ಮೇಲೆ 4 ಹಲವು ಪರಿಯ ಕಷ್ಟವ ನಿನ್ನಯ ಪದ ಜಲಜದ ಕರುಣದಲಿ ಸುಲಿಗೆಗೊಟ್ಟೆನು ನಾನು ಸೂರೆಗಾರರಿಗೆಲ್ಲ ಒಲವಾಗೆನ್ನೊಳು (ವರಾಹತಿಮ್ಮಪ್ಪ)15
--------------
ವರಹತಿಮ್ಮಪ್ಪ
ಸರಿಯಾರೈ ಜಯಮುನಿ ಸಮರಾರೈ ಗುರುಮಧ್ವಕೃತಿ ವಿವೃತಿ ರಚಿಸುವಲ್ಲಿ ಪ ವರ್ಣವಂದಾರು ಬಿಡದಲೆ ಬಹುಫಲ ವರ್ಣಿಪೆ ಲೋಭದಿ ಶರಣ ಜನರಿಗೆ ಕರ್ಣಸುಧಾರಸ ಬೆರೆದು ನೀ ಬಲುಗೂಢ ಪೂರ್ಣಮತಿ ಭಾವವ ತೆಗೆವತಿ ಶೂರ 1 ಒಂದೊಂದು ವಚನವ ಹಿಂದಾಗಿ ಮುಂದಾಗಿ ಛಂದಾಗಿ ತಿರಿಗಿಸಿ ತಿರೆಯ ಸಿಂಧುರದಂತೆ ಬಂದಿಸಿ ಮುಂದಾಗಿ ಬಂದು ದುರ್ವಾದಿಯ ಸಂದುಗಳನೆ ಸೀಳಿ ಮೆರೆದತಿ ಶೂರ 2 ಕತ್ತಿಯ ಒಂದೇ ಹಿಡದೆ ಬಿಡದಲೆವೆ ಹತ್ತು ದಿಕ್ಕಿಗೆ ತಿರಿಗಿಪ್ಪ ವೀರನ ತೆರೆ ಅತ್ಯರ್ಥ ಮೂಲದ ಹಿಡಿದು ಅದನ್ನು ಸುತ್ತಿಸಿ ವಿಮತರ ತತ್ತರಿಸುವ ಧೀರ3 ಮೂಲ ವಚನಗಳ ಕಲ್ಪಲತೆಯ ಮಾಡಿ ಮೇಲಾದ ತತ್ವಗಳೆಂಬೊ ಫಲಗಳು ಶೀಲಮತಿಗಳುಳ್ಳ ಶಿಷ್ಯ ಶಿಶುವಿಗಳಿ ಗಾಲಿಸಿ ಮೇಳಿಸುತ ಒಲಿಸುವ ಧೀರ 4 ಅಕ್ಷೋಭ್ಯ ಮುನಿಗಳ ಪುಣ್ಯಫಲಗಳೆಂತೊ ಕರ್ಮ ಕಷ್ಟವೆ ಒದಗಿತು ಈ ಕ್ಷೋಣಿತಳದಲ್ಲಿ ವಾಸುದೇವವಿಠಲನಕಕ್ಷವ ವೊಹಿಸಿ ಪುಟ್ಟಿದ್ಯೊ ಜಯರಾಯ5
--------------
ವ್ಯಾಸತತ್ವಜ್ಞದಾಸರು
ಸರ್ವ ವಿದ್ಯದಾಗರಾ | ಪಾರ್ವತಿ ಕುಮಾರಾ | ದೋರ್ವ ವಿಘ್ನ ಸಂಹಾರಾ | ಶ್ರೀಗಣ ನಾಯಕನೇ | ಊರ್ವಿಲಿ ನಿನ್ನ ಬಲಗೊಂಬೆ 1 ತರುವಾಣಿ ಕರುಣಾ ಸಾಗರೆ | ಶರಣು ಶರಣು ಕಲ್ಯಾಣಿ 2 ಸಾರಸ ಲೋಚನ | ಕಾರುಣ್ಯ ನಿಧಿಯೇ ಸಲಹಯ್ಯಾ 3 ಮೂರಾವ ತಾರಿ ಸಹಕಾರೋ | ಶ್ರೀ ಹನುಮಂತಾ | ತಾರಿಸೋ ಭವದಿಂದಾ 4 ರಜನೀಶ ಮೌಳಿ | ನಿಜ ದೋರಿ ಎನ್ನ ಸಲಹಯ್ಯಾ 5 ಛಂದಾಗಿ ಸಲಹು ತಂದೆ ಗುರು ಮಹಿಪತಿ ರಾಯಾ 6 ಇಂದು ನಮ್ಮನಿಯಲಿ ಮುಂದಾಗಿ ನೀವು ವದಗೀರೇ 7 ಬನ್ನಿ ಭಾವಕಿಯರು ಮುನ್ನಿನಾಗುಣಬಿಟ್ಟು | ಅನ್ಯ ಕೆಲಸಕೆ ತೊಡಗದೇ | ನೈವೇದ್ಯಕೀಗ | ಸನ್ನೆಲ್ಲಕ್ಕಿ ಮಾಡೀರೇ 8 ಸೇರಲಿ ಅನುಮಾನಾ ತವಕದಿ ನೀವು ಕುಳ್ಳಿರೆ 9 ಉರ್ವಿಲಿ ನೀವು | ಕುಟ್ಟರೆ | ಜ್ಞಾನ ವಿಜ್ಞಾನದಿ | ಮೆರ್ವ ವನರೆಯಾ ಧರಿಸೀಗಾ 10 ಅಮೃತ ನಾಮವಾ ನೀವು ಬೆರೆಯಿರೇ 11 ಸಮಭಾವ ಯಾರಿಯಾ ಕ್ರಮಗೊಂಡು ಹಾಕುತಾ | ದಮಿಸಿ ಕ್ರಮ ಈಡ್ಯಾಡಿ ಕುಟ್ಟಿರೆ 12 ಕೆಟ್ಟ ಹೊಟ್ಟವ ಹಾರಿಸಿ | ಶುದ್ಧ ಅಕ್ಕಿಯ ನೆಟ್ಟನೆ ನೀವು ವಡಗೂಡೀ 13 ಏಕೋ ದೇವಗೆ ಅರ್ಪಿಸ | ದಯದಿಂದ ದೇವ | ಬೇಕಾದ ಸುಖ ಕೊಡುವನು 14 ಸಾರಥಿ ಬಂಧು ಬಳಗವು ಯನಗಾಗಿ | ಸಲಹುವಾ ನಮ್ಮ ಎಂದೆಂದು ಸಿಂಹಾದ್ರೀಶನು 15
--------------
ಕಾಖಂಡಕಿ ಶ್ರೀ ಕೃಷ್ಣದಾಸರು