ಒಟ್ಟು 18 ಕಡೆಗಳಲ್ಲಿ , 13 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನಂತ ಅಪರಾಧ ಅನುಗಾಲ ಮಾಡುತಿಹೆ ಪ ಸ್ನಾನ ಸಂದ್ಯಾ ಜಪ ಮೌನವೇ ಮೊದಲಾದ ನಾನಾವಿಧದ ವಿಹಿತ ಧರ್ಮತೊರೆದು ನಾನು ನನ್ನದು ಎಂಬೊ ಹೀನ ಬುದ್ಧಿಗಳಿಂದ ಹೀನ ಜನರೊಡಗೂಡಿ ಙÁ್ಞನಿಗಳ ನಿಂದಿಸುವೆ 1 ಶ್ರೀಕಾಂತ ನಿನ್ನ ಸೇವೆಯನು ಮರೆದು ಬೇಕಾದ ವೈಷಿಕವ ಸ್ವೀಕರಿಸಿ ಲೋಕÀದೊಳು ಸಾಕಿದವರನು ನಾ ನಿರಾಕರಿಸಿ ಬಾಳುವೆನು 2 ಎನಗಿಂತ ಅಧಿಕರಾದವರ ಕೂಡ ದ್ವೇಷವನು ಅನುಗಾಲ ಮಾಡುವೆನೊ ಅನಿಮಿಷೇಶಾ ಎನಗೆ ಸರಿಯಾದವರ ಕಂಡು ಮತ್ಸರಿಸುವೆನು ಎನಗಿಂತ ನೀಚರನು ನಾ ನೋಡಿ ನಗುತಿಪ್ಪೆ 3 ಕಾಸಿನಾಸೆಗೆ ಪೋಗಿ ದಾಸವೇಷವÀ ಧರಿಸಿ ಮೋಸಮಾಡುವೆ ಜನರ ಪಾಶದಿಂದಾ ವಾಸುದೇವನೆ ಸರ್ವದೇಶ ಕಾಲಾದಿಗಳಿ ಗೀಶನೆಂದರಿಯದಲೆ ಮೋಸಹೋದೆನು ಸ್ವಾಮಿ 4 ಸಕಲ ದುರ್ಗುಣಕೆ ಆಗಾರ ನಾನವನಿಯೊಳು ಭಕುತಿ ವೈರಾಗ್ಯ ಪ್ರಸಕುತಿಯಿಲ್ಲಾ ಭಕುತವತ್ಸಲ ಗುರುಜಗನ್ನಾಥವಿಠಲನೆ ಅಕಳಂಕಮಹಿಮನೆ ಮುಕುತಾಮುಕುತರೊಡೆಯಾ 5
--------------
ಗುರುಜಗನ್ನಾಥದಾಸರು
ಉಪ್ಪವಡಿಸಯ್ಯ ತ್ರಿವಿಕ್ರಮ ನಿನ್ನ ಪುರದೊಳಗೆ ಇಪ್ಪ ಮುಕುತರಿಗೆ ಸಲ್ಲದು ನಿದ್ರೆ ನಿನಗಿಲ್ಲ ಕಲ್ಪಾಂತದಲಿ ನಿತ್ಯವಾದ ವೇದವ ನೆನೆವ ಸುಪ್ರಭಾವನಿಗೇಕೆ ಹೀನಮನುಜರ ಸಾಮ್ಯ ಪ. ಹರಿನಾಲ್ಕು ಮನ್ವಂತ್ರಗಳನು ಹಗಲನು ಮಾಳ್ಪ ವಿಧಿ ನಿನ್ನ ಕುವರನೆ ನಿದ್ರೆಗೊಪ್ಪದೆ ಬಂದ ಇದು ಸರ್ವಸೊಪನ ಅನಿಮಿಷರೆಂಬ ಬಿರುದಿನವ ರಿದಕೆ ಕೋಪಿಸಿ ಬಂದರು ವಿಧಿ ತನ್ನ ಹಗಲ ನಡೆಸುತ ನಿನಗೆ ಈ ತೆರನ ಮದನಪಿತ ತಾಳದೆ ಇಳೆಗೆ ನಡೆತಂದ ಸದುಬುಧರು ತಮ್ಮ ವಿಷಯವ ನೆನೆವ ಜಂತುಗಳು ಇದು ತಾಳೆವೆನುತ ಬಾಗಿಲೊಳು ಬಂದೈದಾರೆ 1 ನಿದ್ರೆಗೈವರ ಹೃದಯದಲ್ಲಿ ಭೂಭೂಯೆಂಬ ಎದ್ದು ಬಹ ಶ್ವಾಸದಭಿಮಾನಿ ಮುಖ್ಯಪ್ರಾಣ ಕ್ಷುದ್ರಗತಿ ತನ್ನಾಳ್ದಗಿದು ಪುಸಿಯೆನುತ ಬಂದ ಮಧ್ವಸದ್ಭಾಷ್ಯಕಾರ ಹೊದ್ದಿ ಕರಗಳ ಮುಗಿದು ಜೀವರಿಗು ನಿನಗು ಪ್ರ- ಬುದ್ಧಜನೆನುತ ಬಂದ ವೇದಾಂತದೇವಿಯರು ನಿರ್ದೋಷ ನೀನೆತ್ತ ನಿದ್ರೆಯೆತ್ತೆನುತ ಪಾದ- ಪದ್ಮಗಳ ಪಿಡಿದು ಪಾಡುವ ಸಾಮಗಳ ಸವಿದು 2 ಅಪ್ರಾಕೃತನೆ ನಿನಗೆ ಈ ಪ್ರಕೃತಿಗುಣಗಳಿಂ- ದಿಪ್ಪ ಯುಕ್ತಿಗಳ ಸುಪ್ತಿಗಳು ಸಲ್ಲವು ದೇವ ಅಪ್ರಬುದ್ಧರ ಮುಂದೆ ಆಡುವಾಟಗಳು ಈ ಸುಪ್ರಬುದ್ಧರ ಸಭೆಯಲಿ ಸರ್ಪತÀಲ್ಪನೆ ತೋರಿದಯ್ಯ ಸಾಕೈನಟನೆ ಸುಪ್ರಭಾತವು ಬಂತು ಹಯವದನ ದಿನದಿನದಿ ತಪ್ಪದೆ ಮಾಡುವಘ್ರ್ಯದಿ ಸತ್ಕರ್ಮಗಳ ಒಪ್ಪುಗೊಳು ಅಪ್ರತಿಮಮಹಿಮ ತ್ರಿವಿಕ್ರಮರಾಯ 3
--------------
ವಾದಿರಾಜ
ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು
ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ ಪ ನಗೆಮೊಗದ ನತಜನ ಬಂಧು ಬಾಬಾರೆನ್ನ ಬಿ - ಟ್ಟಗಲದಲೆ ಮನ ಮಂದಿರದೊಳಿರು ಮುನ್ನಾದರು ಸುಪ್ರಸನ್ನ ಮುಂದೆ ಗತಿ ಏನಯ್ಯ ಮುಕುತರ ಹಿಂದುಳಿದವನಲ್ಲದಲೆ ತನು ಸಂ - ಬಂಧಿಗಳ ವಶನಾಗಿ ದುರ್ವಿಷ - ಯಾಂಧಕಾರದಿ ಮುಳುಗಿದೆನೊ ನಾ ಅ.ಪ. ಹಲವು ಜನ್ಮದ ನೋವಾ ನಾ ಹೇಳಿಕೊಳಲೇನೆಲವೊ ದೇವರ ದೇವಾ ನೀ - ನಲ್ಲದಲೆ ಭೂವಲಯದೊಳಿಗಿನ್ನಾವಾ ನಂಬಿದರ ಕಾವ ಸುಲಭರೊಳಗತಿ ಸುಲಭನೆಂಬುವ ಅಲವಬೋಧಮತಾನುಗರು ಎನ - ಗೊಲಿದು ಪೇಳಲು ಕೇಳಿ ನಿಶ್ಚಂ - ಚಲದಿ ನಿನ್ನನೆ ಧೇನಿಸುವೆ ನಾ ಕಲುಷ ಸಂಸ್ಕಾರಗಳ ವಶದಿಂ ಹೊಲಬುಗಾಣದೆ ಹರುಷಗುಂದುವೆ ಹೊಲೆ ಮನದ ಹರಿದಾಟ ತಪ್ಪಿಸಿ ನೆಲೆಗೆ ನಿಲ್ಲಿಸದಿರ್ದ ಬಳಿಕಿನ್ನೆಂದು 1 ಭಾರತೀಪತಿಪ್ರೀಯಾ ಎಂದೆಂದು ಭಕುತರ ಭಾರ ನಿನ್ನದೊ ಜೀಯಾ ಜಗವರಿಯೆ ಕರುಣಾ - ವಾರಿಧಿಯೆ ಪಿಡಿ ಕೈಯ್ಯಾ ಫಣಿರಾಜಶಯ್ಯಾ ತಾರಕನು ನೀನೆಂದು ತಿಳಿಯದ ಕಾರಣದಿ ಸುಖ ದುಃಖಮಯ ಸಂ - ಸಾರ ದುಸ್ತರ ಶರಧಿಯೊಳು ನಾ ಪಾರಗಾಣದೆ ಪರಿದು ಪೋಪೆನೊ ದೂರನೋಳ್ಪದು ಧರ್ಮವಲ್ಲವೊ ದ್ವಾರಕಾಪುರನಿಲಯ ಪರಮೋ - ದಾರ ತನುವೆಂದೆನ್ನ ಪಾಲಿಗೆ ಬಾರದಲ್ಲದೆ ಭವವಿಮೋಚನ 2 ವಿಕಸನಾರ್ಚಿತಪಾದ ವಿಶ್ವೇಶ ಜನ್ಮಾ - ದ್ಯಖಿಲ ಕಾರಣನಾದ ನಿರ್ದೋಷ ಸತ್ಯಾ - ಸುಖಗುಣಾರ್ಣವ ಶ್ರೀದವಿಠಲಪ್ರಸೀದ ಸಕಲ ಕ್ರಿಯ ಯೋಗಗಳು ತನು ಬಂ- ಧಕವು ನಿನಗೊಪ್ಪಿಸದಿರಲು ಎನೆ ನಿಖಿಳ ಜೀವರ ಭಿನ್ನ ನಿನ್ನಯ ಯುಕುತಿಗೆ ನಮೊ ಎಂಬೆನಲ್ಲದೆ ಯುಕುತ ಯುಕ್ತಿಗಳೊಂದರಿಯದ - ರ್ಭಕನ ಬಿನ್ನಪ ಸಲಿಸಿ ನವವಿಧ ಭಕುತಿ ಭಾಗ್ಯವ ಕೊಟ್ಟು ತವ ಸೇ - ವಕರ ಸೇವಕನೆನಿಸದಿರ್ದೊಡೆ 3
--------------
ಶ್ರೀದವಿಠಲರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಕಾಣೆವಾವಿದನು ಕಾಣೆವಾವಿದನಾವ ಶಾಸ್ತ್ರದಲಿ ವಿದುಗಳ ಪ್ರಮಾಣ ವಚನದಲಿ ಮೂರನೆಯ ಪಥದಾಪಜಾಣಿಲಾತ್ಮನ ಸಮಾಧಿಯಲನುಭವಿಸಿ ಸುಖವಕಾಣದೆ ಬರಿದೆ ಮುಕುತರಾವೆಂಬ ಪರಿಯಾ ಅ.ಪತಾನೆ ಚೇತನವಂತೆ ತನಗೆ ಕರ್ಮಗಳಂತೆತಾನೆ ಸುಖಮಯನಂತೆ ತಾಪವನಂತೆತಾನೆ ಬೋಮವದಂತೆ ಹಾನಿವೃದ್ಧಿಗಳಂತೆತಾನೆ ನಿರ್ಲೇಪಸ್ತುತಿನಿಂದೆ ತನಗಂತೊ 1ಬೋಧೆಯು ತಾನಂತೆ ಸಾಧನವು ಬೇಕಂತೆಭೇದವಿಲ್ಲವದಂತೆ ಭೀತಿ ತನಗಂತೆನಾದ ಬಿಂದುಗಳನರಿದಿಪ್ಪಗತಿಯಂತೆಪಾದಾಭಿಮಾನ ಚಿಂತೆಯು ಪೋಗದಂತೆ 2ಕಾಯ ಕರುಣಾಭಿಮಾನಗಳಿಲ್ಲ ತನಗಂತೆಮಾಯೆ ಬಾಧಿಪುದಂತೆ ಮನಸಿನೊಳಗೆಈಯಹಂಕಾರವಿಲ್ಲದ ಬೊಮ್ಮಪದವಂತೆಹೇಯವಿದುಪಾದೇಯವೆನಿಪ ಭ್ರಮೆಯಂತೆ 3ಈಶ ತಾನಂತೆ ತನ್ನಾಶೆಗಳು ಬಿಡವಂತೆಕೋಶ ಸಾಕ್ಷಿಕನಂತೆ ಕೋಪ ತನಗಂತೆಪಾಶವಿಲ್ಲವದಂತೆ ಪಾಡುಪಂಥಗಳಂತೆಈ ಸಕಲ ತಾನಂತೆ ಇನ್ನು ವಿಧಿಯಂತೆ 4ಚೇತನವೆ ತಾನಂತೆ ಚಿತ್ತನಿಲ್ಲದುದಂತೆಪಾತಕಗಳಿಲ್ಲವಂತೆ ಪರಪೀಡೆಯಂತೆಜಾತಿಸೂತಕವೆಂಬ ಜಂಜಡಗಳಿಲ್ಲವಂತೆಮಾತಿನ ರಿಪು ಮತ್ಸರಗಳು ಬಿಡವಂತೆ 5ವಿಶ್ವಾತ್ಮತಾನೆಂಬ ವಿಶ್ವಾಸವುಂಟಂತೆವಿಶ್ವತ್ರೈಜಸರ ನಿಜವರಿಯನಂತೆನಶ್ವರದ ಭೋಗಂಗಳೆಂಬ ನಂಬಿಗೆಯಂತೆವಿಶ್ವಾದಿಗಳ ರೀತಿಯಲ್ಲಿ ಪಗೆಯಂತೆ 6ಅಂಡಪಿಂಡಗಳೈಕ್ಯವೆಂಬ ಬುದ್ಧಿಗಳಂತೆಚಂಡಾಲನಿವನೀತ ಮೇಲೆಂಬುದಂತೆಪಂಡಿತನು ಪ್ರವುಢ ತಾನೆಂಬ ಭಾಷೆಗಳಂತೆಕುಂಡಲಿಯ ಹೆಳವ ಕೇಳ್ದಡೆ ಕುದಿವನಂತೆ7ಚಿನ್ಮಯಾತ್ಮಕನು ತಾನೆಂಬ ಚಿಂತೆಗಳಂತೆತನ್ನವರು ತಾನೆಂಬ ಭ್ರಮೆಪೊಗದಂತೆಸನ್ಮುದ್ರೆಯಂತೆ ಸತ್ಯಾಸತ್ಯವೆರಡಂತೆತನ್ಮಯತೆಯಂತೆ ಲಕ್ಷಣೆಯರಿಯನಂತೆ 8ಗುರುಭಕುತಿಯಂತೆ ವರಕರುಣವಿಲ್ಲವದಂತೆಗುರುಶರಣನಂತವರನುಗೇಳನಂತೆಪರಮಪದ ತಾನಂತೆ ಪಿರಿದು ಸಂಶಯವಂತೆವರ ಮುಕ್ತಿಯಂತೆ ವಾಸನೆಯು ಬಿಡದಂತೆ 9ಈ ಪರಿಯ ಸಂಭಾವನೆಗಳ ಪರಿಹರಿಸಿ ಶ್ರೀಗೋಪಾಲಾರ್ಯ ಜನರಿಗೆ ದಯದಲಿತಾಪಂಗಳನು ಸವರಿ ದಾಟಿಸಯ್ಯಾ ಚಿತ್ಪ್ರತಾಪದಿಂ ನಿಜಪಾದ ಬೋಧೆಯನು ಕೊಟ್ಟು10
--------------
ಗೋಪಾಲಾರ್ಯರು
ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ಕೊಳಲನೂದುವ ಬಗೆಯ ನಳಿನಜಾಂಡವು ತಾನೆ ತಲೆದೂಗುತಲಿದೆ ಕುಳಿತಿರೆ ವಶವಲ್ಲವೆ ಪ ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ- ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು ಲೋಲ್ಯಾಡದೆ ಬಿಡರು 1 ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು ಕಾಮತನಯ ಕಾಮದೇವ ಸೋಮಶೇಖರ ತಾನು ತಾಮರಸಾಸನ ಪ್ರೇಮಾದಿ ನಲಿಯುವ ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ ಸೇವೆ ಮಾಡುವರು 2 ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು ತೋರುವರಿಲ್ಲಿ ಆನಂದ ಈ ರಭಸದಿ ವೇಣು ಪೂರೈಸಿ ಸುಖವೀವ ಧೀರ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಗೌತಮ ಗೊಲಿದನೆ ರಂಗನಾಥದಾತನೆ ನಮಿಸುವೆ ರಂಗನಾಥ ಪ ಕಾವೇರಿ ತೀರಗ ರಂಗನಾಥ ಮಾವಾರಿ ಸಲಹೆನ್ನ ರಂಗನಾಥ 1 ಭಕುತಾಭೀಷ್ಟ ಪ್ರದ ರಂಗನಾಥಮುಕುತರೊಡೆಯ ಶ್ರೀರಂಗನಾಥ 2 ವಕ್ಷದಿ ಲಕ್ಷ್ಮಿಯು ರಂಗನಾಥಕುಕ್ಷಿಯೊಳ್ಬ್ರಹ್ಮಾಂಡ ರಂಗನಾಥ 3 ರಂಗಧಾಮನೆ ಶಿರಿ ರಂಗನಾಥಮಂಗಳ ಮಹಿಮಾನೆ ರಂಗನಾಥ 4 ಅಜಭವ ಸುರವಂದ್ಯ ರಂಗನಾಥನಿಜ ಗುರು ಗೋವಿಂದ ರಂಗನಾಥ 5
--------------
ಗುರುಗೋವಿಂದವಿಠಲರು
ಜಯತೀರ್ಥ ಗುರು ಹೃದ್ಗುಹಾಂತರವಾಸ ಪ ವಾಯುವಂತರ್ಗತ ಕೃಷ್ಣಯ್ಯ ಜೀಯ್ಯ ಅ.ಪ ಕಾಯಯ್ಯಇವ ನಿನ್ನವನೆಂದು ಅನುದಿನ ಕಾಯ ವಾಚದಲಿ ನಿನ್ನ ನೆನವಿರಲಿ ಜೀಯ ಶ್ರೀ ವಿಜಯರಾಯರ ಸೇವಾ ಕಾರ್ಯಗಳಿಗಭಯವ ನೀಡಯ್ಯ 1 ಲೌಕಿಕದಲ್ಲಿಹನೆಂದು ನಿರಾಕರಿಸದಲೆ ನಿನ್ನ ಏಕಾಂತ ಭಕ್ತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲವ ಹರಿಸಿ ಕೃ ಪಾ ಕಟಾಕ್ಷದಿ ನೋಡಿ ಕಾಯಬೇಕಯ್ಯ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸೊ ಭಕ್ತಿಬಲಜ್ಞಾನ ಸಾಧನವನಿತ್ತು ಭಕ್ತವತ್ಸಲನೆಂಬೊ ಬಿರುದು ನಿನ್ನೊಳು ಇರಲಿ ಮುಕುತರೊಡೆಯ ದೇವಾ ಶ್ರೀ ವೇಂಕಟೇಶ 3
--------------
ಉರಗಾದ್ರಿವಾಸವಿಠಲದಾಸರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನೋಡಿದೆನು ಯಾದವ ಕೃಷ್ಣನ | ಪಾಡಿದೆನೊ ಮನದಣಿಯ ವರಗಳ | ಬೇಡಿದಾಕ್ಷಣ ಕೊಡುವ ಜಗತ್ರಯ | ವಾಡಿಸುವ ವಾಗೀಶ ಜನಕನ ಪ ಮೇದಿನಿ ಪ್ರ | ಹ್ಲಾದ ಸುರಪನ ಕಾದ ವಂಶವ | ಛೇದ ಸಾಗರ | ಹಾದಿ ಬಿಗಿದ ಗೋಯಿದ ಬತ್ತಲೆ | ಯಾದ ತುರಗವ | ಬೀದಿ ವದಿಸಿದನೀತ ಹಯಮೊಗ | ಬಾದರಾಯಣ ದತ್ತ ವೈಕುಂಠ | ಬೋಧ ಮೂರುತಿ ಕಪಿಲ ನಾನಾ ವಿ | ನೋದ ರೂಪದ ಆದಿ ದೈವವ 1 ಜನನಿಗಾಟವ ತೋರಿ ಕಡಗೋ | ಲನು ನೇಣರು ಕರದಲಿ ಪಿಡಿದು | ರು ಕ್ಮಿಣಿಯ ಕೈಯಿಂದ ಪೂಜೆಗೊಂಡರ್ಜು | ಗೋಪಿ ಚಂ | ದನದೊಳಡಗಿ ಅಲ್ಲಿಂದ ಆನಂದ | ಮುನಿಗೊಲಿದು ಬಲು ವೇಗ ಪಡುವಣ | ವನಧಿ ತೀರದಲಿಪ್ಪನಂತಾಸನ ಬಳಿಯ ನಿಂದಿದ್ದ ಚಲುವ 2 ಸುತ್ತ ಯೋಜನ ಕ್ಷೇತ್ರವಿದರೊಳು | ಉತ್ತಮ ವಿಮಾನ ವೇದ ಪ | ರ್ವತಗಳು ಅಲ್ಲೆಲ್ಲಿ ಸರೋವರ | ಕತ್ತಲಿಗಭಿಮಾನಿನಿ ದುರ್ಗಾ | ದುರಿತ ಪರಿಹರ | ಸೋತ್ತಮರಿಗಿದು ಸಿದ್ಧ ಸರ್ವದ | ತತ್ತಳಿಪ ಪರತತ್ವ ಹರಿಯ3 ತಂತ್ರ ಸಾರೋಕ್ತದಲಿ ಪೂಜೆ ನಿ | ರಂತರದಿ ಕೈಗೊಂಬ ಬಲು ಗುಣ | ವಂತ ನೀತನ ಹೊಳವು ಪೊಗಳಿದ | ರಂತ ಗಾಣವು ಶ್ರುತಿ ಪುರಾಣಗ | ಳೆಂತು ಪೇಳಲಿ ಮೆರೆವ ವೈಭವ | ಸಂತರಿಗೆ ಅತಿ ಪ್ರಿಯನಾಗಿಪ್ಪ | ನಿತ್ಯ ಸ್ವಾತಂತ್ರ ಪುರುಷನ 4 ಮಕರ ತಿಂಗಳು ಮೊದಲು ಪಕ್ಷದ | ಲಕುಮಿರಮಣನ ದಿವಸದಲ್ಲೀಗ | ಭಕುತಿಯಿಂದಲಿ ಬಂದು ವಂದಿಸಿ | ಅಕುಟಿಲರ ವೊಡಗೊಡಿ | ನಿಂದು ಗೋ | ಳಕವ ಚಿಂತಿಸಿ ಸ್ನಾನ ಒಂದೆ | ಸುಖ ತೀರ್ಥ ಸರೋವರದಲಿ ಮಾಡೆ | ಮುಕುತರೊಳು ಪೊಂದಿಸುವ ದಾತನ 5 ಶುಕ್ರವಾರದ ಪೂಜೆ ನೋಡಲು | ವಕ್ರಗತಿಗಳು ಮುಟ್ಟಲಂಜೊವು | ಚಕ್ರವರ್ತಿ ತಾನಾಗಿ | ಸಕಲ ಪರಾಕ್ರಮದಲಿ ಚರಿಸಿ ಜಗದೊಳು | ಶುಕ್ರ ದೇವಸ್ಥಾನದೊಳು ಕಾ | ಲಕ್ರಮಣ ಮಾಡೆ | ಗೋತ್ರದೊಡನೆ ಪೂ ರ್ಣ ಕ್ರೀಡೆÀಯಾಡಿಸುತ ಸಲಹುವ | ಚಕ್ರಧರ ಅಕ್ರೂರ ವರದನ 6 ಕಣಿಸಿ ಉಡಿಸುವ ಕುಣಿಸಿ ನೋಡುವ | ಕನಸಿನೊಳಗಾವಾಗ ತನ್ನನು | ಮನಸಿನಲಿ ಕ್ಷಣ ಬಿಡದೆ ಗುಣಗಳ | ಎಣಿಸಿ ಮೈ ಮರೆದಡಿಗಡಿಗೆ ಈ | ತನುವೆ ನಿನ್ನಾಧೀನವೆಂದಾ | ಜನರಿಗಪವಾದ ಬರಲೀಸನು | ದನುಜದಲ್ಲಣ ವಿಜಯವಿಠ್ಠಲನ್ನ 7
--------------
ವಿಜಯದಾಸ
ಭಕುತಿಯಾಬೇಡುವೆ ಪ ಮುಕುತರೊಡೆಯ ನಿನ್ನಪದಪಂಕಜದೊಳುಅ.ಪ ಬಾರಿಬಾರಿಗೆ ನಿನ್ನ ನಾಮವ ನಾ| ಸ್ಮರಿಸಲು ದಾರಿಯ ಕಾಣೆನೊ ಮಾರಮಣನೆ ದಯತೋರದಿರಲು ಇ- ನ್ಯಾರಿಗೆ ಮೊರೆಯಿಡಲಯ್ಯ ಶ್ರೀಹರೇ 1 ಘನ್ನದುರಿತಗಳಿಂದ ಹಿಂದೆ ನಾ ಬನ್ನಪಟ್ಟು ಬಹು ಖಿನ್ನನಾಗಿಹೆ ಸನ್ನುತಾಂಗ ಶ್ರೀನಲ್ಲನೆ ನೀ ಇನ್ನುಮನ್ನಿಸದಿರೆ ಇನ್ನಾರಿಗೆ ಪೇಳಲೊ 2 ಮಂಕುಮತಿಯಾಗಿದ್ದರೆನ್ನ ಹೃ- ತ್ಪಂಕಜದೊಳಗೆ ಅಕಳಂಕನಾಗಿಹೆ ಶಂಕೆ ಏಕೋ ನಿನ್ನ ಕಿಂಕರನಲ್ಲವೇ ಸಂಕಟ ಹರಿಸೋ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಭವ ಎನಗೆ ಹಿಂಗಿತು ಪ ಪದುಮನಾಭನ ಪಾದದೊಲುಮೆ ಎನಗಾಯಿತು ಅ ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತುಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು 1 ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ 2 ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತುತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ 3
--------------
ಕನಕದಾಸ
ಮಂದರೋದ್ಧರಾ-ಬಂದು ಕಣ್ಣಮುಂದೆ ನಿಲ್ಲೋ ಪ ಬಡವರೊಡೆಯನೆಂದು ನಿನ್ನ ಅಡಿಯ ಬಿಡದೆ ನಂಬಿದೆನೋ ಕಡುದಯಾನಿಧೆ ಬಡಕುಚೇಲನ ಪಿಡಿಯವಲಿಗೆ ಒಲಿದು ಪೊರೆದೆ1 ಸರ್ವಸಾರಭೋಕ್ತ ನೀನೆ ತೋರ್ವುದಿಲ್ಲ ಕೊಡಲು ನಿನಗೆ ಸರ್ವದೇವಸಾರ್ವಭೌಮನೀ ನೋರ್ವ ವ್ಯಾಪ್ತನಿರ್ಲಿಪ್ತ 2 ಪ್ರಣತಕಾಮದನೆಂದು ಅಂದು ಅಣುಗಧೃವನಾಕ್ಷಣದಿ ದಣಿಸಲಾಗದೋ ದೀನರಕ್ಷಕ 3 ಮುಕುತರೊಡೆಯ ಭಕುತವತ್ಸಲ ಯುಕುತಿತೋರದೊ ನಿನ್ನ ಧ್ಯಾನಕೇ ಶಕುತಿಯಿತ್ತು ಸಲಹೊ ಎನ್ನನು ಸಕಲಲೋಕೋದ್ಧ್ದಾರ ಧೀರ 4 ಎಲ್ಲಜನರ ಪೊರೆಯಲು ಶ್ರೀನಲ್ಲ ನಿಂತೆಯೊ ಶೇಷಶೈಲದಿ ವಲ್ಲಭಾ ಶ್ರೀ ವೆಂಕಟೇಶ ನೀ- ನೆಲ್ಲಬಲ್ಲೆನ್ನ ಸೊಲ್ಲ ಲಾಲಿಸೊ 5
--------------
ಉರಗಾದ್ರಿವಾಸವಿಠಲದಾಸರು
ಮಹಾಲಕ್ಷ್ಮಿ ಇಂದಿರೆ ಮುಕುಂದ ಹೃನ್ಮಂದಿರೆ ಪ. ಇಂದಿರೆ ಲೋಕವಿಖ್ಯಾತೆ | ಶ್ರೀ- ನಂದನ ಕಂದನೊಳು ಪ್ರೀತೆ | ಆಹ ಬಂದೆನೆ ಭವದೊಳು ನಿಂದೆನೆ ನಿನ ಪದ ದ್ವಂದ ಸನ್ನಿಧಿಯಲಿ ಇಂದಿರೇಶನ ತೋರೆ ಅ.ಪ. ತ್ರಿಗುಣಾಭಿಮಾನಿಯೆ ದೇವಿ | ನಿನ್ನ ಜಗದೊಳು ನುತಿಪರ ಕಾಯ್ವಿ | ನಿತ್ಯ ನಗಧರನನು ಸೇವಿಸುವಿ | ಲಯ ಜಗ ಸೃಷ್ಟಿ ಸ್ಥಿತಿಯಲ್ಲಿ ದೇವಿ | ಆಹ ಬಗೆ ಬಗೆ ರೂಪದಿ ಸುಗುಣವಂತೆಯಾಗಿ ನಿಗಮಾದಿಗಳಿಂದ ನಗಧರನನು ಸ್ತುತಿಪೆ 1 ಸಕಲಾಭರಣ ರೂಪದಿಂದ | ಹರಿಯ ಅಕಳಂಕ ಭಕ್ತಿಗಳಿಂದ | ಪಂಚ ಪ್ರಕೃತ್ಯಾದಿ ರೂಪಗಳಿಂದ | ನಾನಾ ಸಕಲ ಸಾಮಗ್ರಿಗಳಿಂದ | ಆಹಾ ಮುಕುತಿ ನಾಲ್ಕರಲ್ಲಿ ಭಕುತಿಯಿಂ ಸೇವಿಸುತ ಮುಕುತರಿಂದೋಲಗ ಅಕಳಂಕದಿಂ ಕೊಂಬೆ 2 ಪಾದದಿ ಪಿಲ್ಯೆ ಪಾಡಗವೊ | ಮೋದ ವಾದ ನೆರೆಗೆ ವೈಭವವೂ | ಗಾಂಭೀ- ರ್ಯದ ವಡ್ಯಾಣ ನಡುವು | ಮೇಲೆ ಭಾ- ರದ ಕುಚದ್ವಯ ಬಾಹು | ಆಹ ಶ್ರೀದನ ಪೆಗಲೊಳು ಮೋದದಿಂದೆಸೆವ ಕೈ ಆದರದಲಿ ನಿನ್ನ ಪಾದಸೇವೆಯ ನೀಡೆ 3 ಕರದಲ್ಲಿ ಕಡಗ ಕಂಕಣ | ಬೆರಳ ವರ ವಜ್ರದುಂಗುರಾ ಭರಣ | ನಾಗ- ಮುರಿಗೆ ಸರಿಗೆ ಕಂಠಾಭರಣ | ಬಲ ಕರದಲ್ಲಿ ಪದ್ಮ ಭಕ್ತರನ | ಆಹ ವರದೃಷ್ಟಿಯಿಂದಲಿ ನಿರುತ ಈಕ್ಷಿಸುತ ಪರಿಪರಿ ಬಗೆಯಿಂದ ಪೊರೆವೊ ಸುಂದರಕಾಯೆ4 ಗೋಪಾಲಕೃಷ್ಣವಿಠ್ಠಲನÀ | ನಿಜ ವ್ಯಾಪಾರ ಕೊಡೆ ಎನಗೆ ಮನನ | ಪೂರ್ಣ ರೂಪಳೆ ಮುಖದ ಚಲುವಿನ | ನಿನ್ನ ರೂಪವ ತೋರಿಸೆ ಮುನ್ನ | ಆಹ ತಾಪ ಹರಿಸಿ ಲಕುಮಿ ಶ್ರೀಪತಿ ಪದದಲ್ಲಿ ಕಾಪಾಡು ನಿತ್ಯದಿ 5
--------------
ಅಂಬಾಬಾಯಿ