ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಶ್ರೀ ಪರಾತ್ಪರವಿಠಲ ಪಾಲಿಸಿವರ ಪ ಚರಾಚರಾತ್ಮಕದೇವ ಪರಮ ಪ್ರೀತಿಯಿಂದ ಅ.ಪ. ಮೂರ್ತಿ ಭಾಗವತ ಪ್ರಧಾನ ಸಾಗರೋಪಮ ಭಕ್ತಿ ಪ್ರದದೇವ ಬಾಗಿ ಬೇಡುವೆ ವಿಜ್ಞಾನರೂಪದಿ ನಿನ್ನ 1 ಭಾಗವತೋತ್ತಮರ ಪದ್ಧತಿಯಲಿ ಗುಪ್ತಸಾಧನ ಪಾಲಿಸು ಶುಕಾನುಬಂಧದಿ ಶುಕಪ್ರೇಮ ಪಾತ್ರನಾಗಿ ಸುಖಮಯನ ಭಜಿಸುತಿರಲಿ 2 ಆಪ್ತತಮ ಗುಣಸಮುದ್ರ ಶ್ರೀಜಯೇಶ- ವಿಠಲ ಪೂರ್ಣ ಪ್ರೀತಿಯಲಿ ನಿತ್ಯ ಭಾಗವತರ ಸಂಗದಲಿಟ್ಟು ನಿರುಪಮ ಸುಖನೀಡು 3 ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲಶೀಲಗಳನ್ನು ಎಂದೊ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆನೆಲವಿತ್ತ ದಯವಂತ ಶ್ರೀಕಾಂತ 3
--------------
ಜಯೇಶವಿಠಲ
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಧ್ಯಾನವ ಕೊಡು ಹರಿಯೆ | ನಿರಂತರ ಧ್ಯಾನವ ಕೊಡು ಹರಿಯೆ ಪ ನೀನೆ ಗತಿಯೆಂದಾನುಪೂರ್ವಕ ಧ್ಯಾನ ಮಾಳ್ವರ ಜನ್ಮಕರ್ಮಗ ಳೇನು ನೋಡದೆ ಪೊರೆವೆ ನಿನ್ನ ಸುನಾಮವೆ ಸುರಧೇನುವೆಂದು ಅ.ಪ. ನಿನ್ನ ನಾಮವ ನೆನೆದು | ಅಜಾಮಿಳನು ಧನ್ಯನು ತಾನಾದನು ಈ ಭುವನದಿ ತನ್ನ ದೇಹಾತುರದೊಳನ್ಯರ ಬನ್ನ ಬಿಡಿಸುತಲಿದ್ದ ಖಳನು ನಿನ್ನ ನಾಮಸ್ಮರಣೆ ಮಾತ್ರದಿ ಘನ್ನ ಮುನಿಪತಿ ಎನ್ನಿಸಿದನು 1 ದುರುಳ ದುಶ್ಯಾಸನನು | ಸಭೆಯೊಳಗಂದು ತರಳೆ ದ್ರೌಪದಿದೇವಿಯ ಸೆರಗನ್ನು ಸೆಳೆಯೆ ಮುರಹರನೆ ಹಾ ಕೃಷ್ಣ ದ್ವಾರಕಾ- ಪುರನಿಲಯ ಪರಮಾತ್ಮ ಭಕ್ತರ ಸುರತರುವೆ ಎಲ್ಲಿರುವೆ ಏತಕೆ ಮರೆವೆ ಎನ್ನುತ ಮೊರೆಯೆ ಪೊರೆದೆಯೊ 2 ನರಕ ಕೂಪದೊಳು ಬಿದ್ದು | ಏಳುತ್ತ ಮುಳುಗುತ ಪರಿಪರಿ ಭಾಷೆಯಲಿ ಮುಂದೋರದೆ ಹೊರಳುತ್ಹೊರಳುತ ಮರುಕಗೊಳುತ ಹರಿಹರಿ ನಾರಾಯಣೆನ್ನಲು ಸುರಲೋಕವನ್ನಿತ್ತು ಸಲಹಿದೆ ವರದ ಲಕ್ಷ್ಮೀಕಾಂತ ಶಾಶ್ವತ 3
--------------
ಲಕ್ಷ್ಮೀನಾರಯಣರಾಯರು
ರಾಮ ರಮಾರಮ ರಾಮ ಶ್ರೀರಾಮ ಪ ರಾಮ ಸೀತಾರಾಮ ರಾಮ ಜಯರಾಮ ಅ.ಪ. ಶ್ರೀ ರಘುವಂಶ ಲಲಾಮನೆ ರಾಮ ತಾರಕ ಮಂಗಳ ರಾಮನೆ ರಾಮ ನೀರದ ನಿರ್ಮಲ ಶ್ಯಾಮನೆ ರಾಮ ಸಾರಸಲೋಚನ ಸೌಮ್ಯನೆ ರಾಮ 1 ಕೌಸಲ್ಯದೇವಿ ಕುಮಾರಕ ರಾಮ ಕೋಸಲ ದೇಶಾನಂದಕ ರಾಮ ಆಸುರೀ ತಾಟಕ ಶಿಕ್ಷಕ ರಾಮ ಕೌಶಿಕ ಯಜ್ಞ ಸಂರಕ್ಷಕ ರಾಮ 2 ಮುನಿಪತಿ ಶಾಪ ವಿಮೋಚಕ ರಾಮ ಕಾರ್ಮುಕ ಭಂಜಕ ರಾಮ ಜನಕ ಸುತಾನಂದ ವರ್ಧಕ ರಾಮ ಅನುಪಮ ಲೀಲಾದ್ಯೋತಕ ರಾಮ 3 ಸತ್ಯಪರಾಕ್ರಮ ಸಾತ್ವಿಕ ರಾಮ ಪಿತೃವಾಕ್ಯ ಪರಿಪಾಲಕ ರಾಮ ಉತ್ತಮ ಚರಿತಾದರ್ಶಕ ರಾಮ ಚಿತ್ರಕೂಟಾದ್ರಿ ನಿವಾಸಕ ರಾಮ 4 ಕಾಕುತ್ಥವಂಶ ಸುಧಾರಕ ರಾಮ ಲೋಕೇಶ ಲೋಕ ಮನೋಹರ ರಾಮ ಶ್ರೀಕರಾಶ್ರಿತ ಜನ ಮಂದಾರ ರಾಮ ಶ್ರೀ ಕರಿಗಿರೀಶ ಸುಂದರ ರಾಮ 5
--------------
ವರಾವಾಣಿರಾಮರಾಯದಾಸರು
ರಾಮಾ ನಿನ್ನ್ಹ್ಹೊರತನ್ಯರ ಕಾಣೆ ಪೊರೆ ನೀನೆನ್ನಾಣೇ ಶ್ರೀರಾಮಾ ಪ ಕಾಮಾಂತಕ ತನ್ನ ಭಾಮೆಗೊರೆದ ಶ್ರೀ ರಾಮತಾರಕಮಂತ್ರವೆ ಗತಿ ಲೋಕಕೆ ರಾಮಾಅ.ಪ ಮತಿವಂತ ದಶರಥ ಕೌಸಲ್ಯೆಯರ ಸುತನಾಗ್ಯವತರಿಸಿ ಅತಿ ಬಾಲ್ಯದಿ ಮುನಿಯೊಡನಡವಿಗೆ ನಡೆದು ಕಡು ದುರುಳೆಯಸದೆದು ಮತಿಹೀನ ರಕ್ಕಸರುಪಟಳವಳಿದು ಮುನಿಪತಿ ಮಖ ಬೆಳೆದು ಪತಿಸುತಸಖಹಿತ ಜನಪತಿ ಜೀವಿತ ಪಥದಾದರ್ಶವ ಜಗತಿಗೆ ತೋರಿದೆ1 ಮುನಿಗೌತಮಸತಿ ತಾ ಶಿಲೆಯಂತಿರಲು ಪದರಜದಿಂದುದ್ಧರಿಸಿ ಜಾಹ್ನವಿ ಚರಿತೆಯ ಕೇಳುತ ನಲಿದು ಅನುಜಾತನ ಬೆರೆದು ಜನನಾಥನ ಜನಕನ ಮಿಥಿಲೆಗೆ ನಡೆದು ಹರಧನುವನುಪಡೆದು ಅನುಪಮವೆನಿಪದ ನಡುವೊಳೆ ಖಂಡಿಸಿ ಜನಕಸುತೆಯ ಕರಕಮಲವ ಪಿಡಿದೆ 2 ಪರಶುಹಸ್ತರು ಮಾರ್ಗದಿ ಎದುರಾಗಿ ಅಂಜಿಸೆ ಬೆರಗಾಗಿ ಕರದಲ್ಲಾಟಿಕೆಯೊಲು ಧನುವದಗ್ರಹಿಸಿ ಕ್ಷಣದಲ್ಲುಪಹರಿಸಿ ಜನಕೆ ಹಿರಿಯರಿಗೆ ದಶರಥನಿಗೆ ಸುರನರರೆಲ್ಲರು ಪರಮಾನಂದದೊ ಳಿರುತಿರೆ ವಸಿದೆ ಸುದತಿಯೊಡನೆ ರಘುರಾಮ3 ಹಿಂದೆ ನಾ ಬಹುಜನ್ಮಗಳಲಿ ಬಂದು ನೊಂದೆನು ಈ ಭವದಿ ನಿನ್ನಲಿ ಬಂದು ನಿಂದೆ ಗತಿಯೆಂದು ಸಂದೇಹವಿಲ್ಲ ನೀನೇ ಗುಣಸಿಂಧು ಜಗಕಾಪದ್ಬಂಧು ತಂದೆ ನೀನಿಂದೆನ್ನ ಬಂಧನ ಬಿಡಿಸದೆ ಕೊಂದೆಯಾದರೆ ಕುಂದದು ನಿನಗಪಯಶ 4 ಆನಂದಮಯ ನೀನಾನಂದದಲ್ಲಿದ್ದೆ ಆಶ್ಚರ್ಯವದೇಳು ಆನಂದವನಂದು ಕುಂದದಲಿತ್ತೆ ಜಗಕತಿಶಯವೇಳು ಸಾನಂದದೊಳಿದ್ದರು ತವಸನ್ನಿಧಿಬಲದಿ ಅತಿಶಯಮತ್ತೇಳು ನ್ಹೊಂದಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
ಶ್ರೀರಾಮ ಎನ್ನಿರೊ ಶ್ರೀರಾಮ ಎನ್ನಿರೊ ಪ ದುರಿತ ಪರ್ವತಕೆ ವರವಜ್ರವೆನಿಪುದು ಜಗವರಿಯೆ ಅ.ಪ. ನಿತ್ಯ ಪೊರೆಯುವ ಸತ್ಯ ತಾರಕ ನಾಮಕೆ ಮತ್ತೊಂದು ಸಾರ ಸಹಸ್ರನಾಮಕೆ ಶ್ರೀರಘುನಾಥನ ನಾಮವೆಂತೆಂದು ಸಾರಿ ಮಹೇಶನು ಸುರನರ ವಂದ್ಯನು ಗಿರಿಜೆಗೆ ಪ್ರೇಮದಿ ಪೇಳಿದನು ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲ ಶೀಲಗಳನ್ನು ಎಂದೂ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆ ನೆಲವಿತ್ತ ದಯವಂತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು
ಸುಜನ ಬುಧಗೇಯ ಮೇದಿನೀ ಸುರವಂದ್ಯ ಶ್ರೀಪಾದರಾಯ ಪ ಸಕಲಶಾಸ್ತ್ರ ಕಲಾಪ ಸನ್ಯಾಸ ಕುಲದೀಪಸಕಲ ಸತ್ಯಸ್ಥಾಪ ಸುಜ್ಞಾನದೀಪಪ್ರಕಟ ಪಾವನರೂಪ ಅರಿಕುಜನ ಮತಲೋಪನಿಕಟ ವರ್ಜಿತ ಪಾಪ ಕೀರ್ತಿ ಪ್ರತಾಪ 1 ಭೃಂಗ ಶುಭ ಚರಿತಾಂಗ ಷಟ್ಫಾಸ್ತ್ರಸÀಂಗ 2 ಸಿರಿಕೃಷ್ಣ ದಿವ್ಯ ಪಾದಾಬ್ಜ ಚಿಂತಾಲೋಲವರ ಹೇಮವರ್ಣಮುನಿಪತಿಯ ಸುಕುಮಾರಗುರುತಿಲಕ ಶ್ರೀಪಾದರಾಯ ಅಮಿತೋದ್ಧಾರಶರಣ ಜನ ಸುರಧೇನು ಭಕ್ತಮಂದಾರ 3
--------------
ವ್ಯಾಸರಾಯರು