ಒಟ್ಟು 8 ಕಡೆಗಳಲ್ಲಿ , 6 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ನಿನ್ನ ನಾನೇನೆಂದೆನೊ - ರಂಗಯ್ಯ ರಂಗನಿನ್ನ ನಾನೇಂದೆನೊ ಪ ನಿನ್ನ ನಾನೇನೆಂದೆ ನಿಗಮಗೋಚರ ಸ್ವಾಮಿಪನ್ನಗಶಯನ ಪಾಲ್ಗಡಲೊಡೆಯನೆ ರಂಗ ಅ ಧೀರ ಸೋಮಕ ವೇದಚೋರ ಖಳನನು ಸೀಳಿವಾರಿಧಿಗಿಳಿದು ಪರ್ವತವನೆತ್ತಿಧಾರಿಣಿಯನು ಕದ್ದ ದನುಜದಲ್ಲಣನಾದನಾರಸಿಂಹ ನಿನಗೆ ನಮೊ ಎಂದೆನಲ್ಲದೆನೀರ ಪೊಕ್ಕವನೆಂದೆನೆ - ಬೆನ್ನಲಿ ಘನ್ನಭಾರ ಪೊತ್ತವನೆಂದೆನೆ - ಮಣ್ಣನಗೆದುಬೇರ ಮೆದ್ದವನೆಂದೆನೆ - ರಕ್ಕಸನೊಳುಹೋರಿ ಹೊಯ್ದನೆಂದು ಹೊಗಳಿದೆನಲ್ಲದೆ 1 ಪಾಷಾಣ ಪತಿ ಶರಣೆಂದೆನಲ್ಲದೆತಿರುಕ ಹಾರುವನೆಂದೆನೆ - ಹೆತ್ತ ತಾಯಶಿರವ ತರಿದನೆಂದೆನೆ - ವನವಾಸಕೆಭರದಿ ಚರಿಸಿದನೆಂದೆನೆ - ಪೂತನಿಯನುಸರಕು ಮಾಡದೆ ಕೊಂದ ಹರಿಯೆಂದೆನಲ್ಲದೆ 2 ಚಿತ್ತಜಕೋಟಿ ಲಾವಣ್ಯ ಮುಪ್ಪುರದಉತ್ತಮಸ್ತ್ರೀಯರ ವ್ರತವಳಿದುಮತ್ತೆ ಕಲ್ಕಿಯಾಗಿ ಮಧುಪರ ಮಡುಹಿದಹತ್ತವತಾರದ ಹರಿಯೆಂದೆನಲ್ಲದೆಬತ್ತಲೆ ನಿಂತವನೆಂದೆನೆ - ತೇಜಿಯನೇರಿಒತ್ತಿ ನಡೆದವನೆಂದೆನೆ - ಬಾರಿಬಾರಿಗೆಸತ್ತು ಹುಟ್ಟುವನೆಂದೆನೆ - ಆದಿಕೇಶವಭಕ್ತವತ್ಸಲನೆಂದು ಪೊಗಳಿದೆನಲ್ಲದೆ 3
--------------
ಕನಕದಾಸ
ಯಾಕೆ ರಂಗ ನಿನಗೆ ಮಾಕಾಂತೆಯೊಳು ಗರ್ವ | ಲೋಕದೊಳು ಅಬಲೆಯೇನೋ ಕೇಳಯ್ಯಾ ನೀನು ಪ ಮೀನಾವತಾರವ ನೀನಂದು ವಿಡಿದರೆ | ಮೀನಾಂಬಕಿ ತಾನಾದಳೋ1 ಬೆಟ್ಟವ ಬೆನ್ನಿಲಿ ಕಷ್ಟದಿ ನೆಗೆದರೆ | ಬಟ್ಟ ಕುಚಗಳ ಹೊತ್ತಳೋ 2 ಧರೆಯ ಭಾರವ ತಾಳಿದರ ನಿನ್ನಾಭಾರವನು | ಧರಿಸಿದಳಂದಗಲದಲೆ 3 ಸಿಂಹಾನನನಾಗಿ ಮಹಿಮೆ ದೋರಿಸಿದರೆ | ಸಿಂಹದಂತೆ ನಡು ನಡುವಾದಳೋ 4 ಬಲಿ ಬಾಗಿಲಕಾಯಿದರೆ ನೆಲೆಸಿಹಳವಳಲ್ಲಿ | ಬಲಿಯಾ ಭಾಗ್ಯ ರೂಪವಾಗಿ5 ಸುರರ ಹೊರಿಯಲಿಕ್ಕೆ ಪರಶವ ಪಿಡಿದರೆ | ಪರಸಗೈಯ್ಯ ತಾನಾದಳೋ 6 ಹರನಾ ಚಾಪವನೆಗೆದರೆ ಅದನೆವೆ ಮುನ್ನೆ | ಕರೆದಲೆ ತ್ಯಾಡಿದಳೊ 7 ಸೆರೆಹರಿದು ಸ್ತ್ರೀಯರಾ ತಂದರೆ ನಾರದರಿಂದ | ಸೆರೆವಿಡಿಸೆ ಕೊಂಡಳೋ 8 ಮುಪ್ಪರ ಹೊಕ್ಕರೆ ನೀವಪ್ಪುತಲಿ ಹನಿನ್ನಾ | ಮುಪ್ಪುರದಲಿ ಮೆರೆದಳೋ 9 ತುರುಗವ ಏರಿಕೊಂಡು ತಿರುಗಲು ನಿನ್ನಾಕೂಡ | ತುರಗಮನಿ ತಾನಾದಳೋ 10 ಕಡೆಯಕಾಲಕ ನೀರೊಳೊಡಗೂಡಿ ಮಲಗಲು | ಒಡನೆ ವಟದೆಲೆ ಯಾದಳೋ11 ಗುರು ಮಹಿಪತಿ ಪ್ರಭು ಚರಿತೆಯಾ ನಿಮ್ಮೀರ್ವರ | ಭರದಿ ಹೇಳಲೆನ್ನಳವೇ 12
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿದ್ಯಾವಿದ್ಯಕಮೀರಿದಾಗುಣತ್ರಯಾ ದಾವನು ಹೊಂದಾದಿಯಾ ನಿಚಯಾಸರ್ವಕ್ಕುದಾವಾಶ್ರಯಾ ಶುದ್ಧಾತ್ಮಾ ಸುಖದಾಲಯಾ ಸತುಚಿದಾನಂದೈಕರಸನಿಶ್ಚಯಾ ಸಿದ್ಧಾಂತ ಪ್ರತಿಪಾದ್ಯದಾವನುದಯಾ ಶ್ರೀ ದೇವ ದತ್ತಾತ್ರಯಾ 1 ಜಗದೋಳಾವನಸದುಗುಣಾ ನಿರಗುಣಾ ಸ್ವಾರೂಪದಾ ಲಕ್ಷಣಾ ಬಗೆ ಬಗೆಯಲಿ ಮಾಡಲು ವಿವರಣಾ ನೇತಿನೇತಿ ಶೃತಿ ವಚನಾ ಮುನಿಜನಾ ನಿಶ್ಚೈಸದಿಹ ರಾವನಾ ಪ್ರಗಟೀಸಿಹನು ನೋಡಿದೇ ನಿಜಘನಾ ಶ್ರೀದತ್ತ ನಿರಂಜನಾ 2 ನಿಶ್ಚಯಿಸದಿಹದಾವನಲಿ ತಾಂಪೌರಾಣಿತಿಹಾಸ ಭೇದಿಸುತಲೀ ನೆಲೆ ಗಾಣದೇ ನಿಲ್ಲಲೀ ಅಪದಿಂದ ಮೀಮಾಂಸತರ್ಕವರಲೀ ಬೆಂಡಾದವು ನೋಡಲೀ ಅಪರ ಘನ ಬಂದಿದೇಧರಿಯಲೀ ಬೆಂಡಾದವು ನೋಡಲೀ 3 ಪಾತಾಳಾದಿಯ ಲೋಕವೇಳುಸರಳು ದಾವನ ಪದ ಕಟಗಳು ಖ್ಯಾತಿಂದೇಭುವನೇಳು ಊಧ್ರ್ವಕಿರಲು ನಾಭಿಂದ ಸಿರವಾಗಲು ಸೀತಾಂಶು ರವಿದಾವನಂಬಕಗಳು ಅಶಾವೆ ಶ್ರೀತಂಗಳು ದತ್ತೆನಿಸಲು4 ಅಮರಂಗಣಾ ದಾವನುದರ ವಿಶ್ವಕಾಗಿ ಭುವನಾ ಶ್ರೀಮದ್ರಮಾರಮಣಾ ನಖದಾಧೀನಾ ಶ್ರೀದತ್ತ ಮನ ಮೋಹನಾ 5 ಸರ್ವೆಶ ಸರ್ವೋತ್ತಮಾ ಸರ್ವಾಧಾರನುದಾವ ದೇವಗರಿಮಾ ಪೂಜ್ಯನು ಸಕಲಾಗಮಾ ಸರ್ವಾತೀತನು ದಾವನಂಘ್ರಿ ಕಮಲಾ ಸೇವಿಸುವಳು ಶ್ರೀರಮಾ ಶ್ರೀದತ್ತ ಗುರುವೇನಮಃ 6 ಅನಸೂಯಾ ಕರರತ್ನನಾಗಿಜನಿಸೀ ಇಷ್ಟಾರ್ಥವನು ಪೂರಿಸೀ ಯೋಗಾಂಗವನು ಪ್ರಕಟಿಸಿ ಸ್ಮರಿಸೀದವರಲ್ಲಿ ಬಹುಕರುಣಿಸೀ ಶ್ರೀ ದತ್ತಪದ ಧ್ಯಾಯಿಸೀ 7 ಮೆರೆವಾ ಮುಪ್ಪುರದಿಂದೇರುವಾ ಸಾರೀ ಸಾವಿರದಳ ಪದ್ಮದಿರುವಾ ಸ್ವಾನಂದ ಭೋಗಿಸುವಾ ಮುದ್ರಾಂಕುರವ ಬೀರುವಾ ಶ್ರೀದತ್ತ ಗುರು ಎನಿಸುವಾ8 ಕಾತ್ರ್ಯವೀರ್ಯವರವಾಯದುರಾಯನುದ್ಧರಿ ಸಿದಾ ಗುರುಮಹೀಪತಿ ನುಡಿಸಿದಾ ಸ್ವಾನಂದ ಸುಖ ಬೀರಿದಾ ಸದಾ ಪಡೆವನು ಗತಿಸಂಪದಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಮಂಗಳಂ ಮಹಾ ಶುಭಮಂಗಳಂಮಂಗಳಂಮದನಜನಕಂಗೆನಿತ್ಯಪ.ಶಂಕಾಸುರನ ಸೀಳಿ ಶ್ರುತಿಯ ತಂದವನಿಗೆಬಿಂಕದಿಂ ಮಂದರಕೆ ಬೆನ್ನಾಂತಗೆಪಂಕಜಾಸನಗೊಲಿದು ಪ್ರತ್ಯಕ್ಷನಾದವಗೆಶಂಕೆಯನು ಬಿಡಿಸಿ ಶಿಶುವನು ಹೊರೆದಗೆ 1ವಿತರಣಕೆ ಬಂದು ಬಲಿವಿಭವನಪಹರಿಸಿದಗೆಪತಿತ ಕ್ಷತ್ರಿಯರ ಸಂಹರಿಸಿದವಗೆಸತಿಯ ಕದ್ದವನ ದಶಶಿರಶತಖಂಡಿಸಿದಗೆಪಿತ ಮಾತೆ ಬಂಧನವ ಪರಿಹರಕಗೆ 2ಮುಪ್ಪುರದ ನಾರಿಯರ ಮನವ ಗೆದ್ದವಗೆತಪ್ಪದೆ ಕಲಿಬಲವ ತರಿದಾತಗೆಸರ್ಪಗಿರಿಯಲಿ ನಿಂತು ನಿತ್ಯಸುಖದಾತನಿಗೆಶ್ರೀಪ್ರಸನ್ವೆಂಕಟೊಡೆಯನೆನಿಪಗೆ 3
--------------
ಪ್ರಸನ್ನವೆಂಕಟದಾಸರು
ಧರೆಯದಾನವ ಬೇಡಿ ನೆಲವ ಮೂರಡಿ ಮಾಡಿಪರಶುವಿಡಿದು ಕ್ಷತ್ರಿಯರ ಸವರಿಚಿತ್ತಜಕೋಟಿಲಾವಣ್ಯ ಮುಪ್ಪುರದೊಳುಉತ್ತಮ ಸ್ತ್ರೀಯರ ವ್ರತವಳಿದೆಮತ್ತೆ ಕಲ್ಕಿಯಾದೆ ಮಲೆತರ ಮಡುಹಿದೆಉತ್ತಮ ಶ್ರೀರಾಮನೆಂದು ಸ್ತುತಿಸಿದೆನಲ್ಲದೆ.ಬತ್ತಲೆನಿಂತªನೆಂದೆನೆ ತೇಜಿಯನೇರಿಒತ್ತಿಬಾಹವನೆಂದೆನೆ ಬಾರಿಬಾರಿಗೆಸತ್ತುಹುಟ್ಟುವನೆಂದೆನೆಪುರಂದರವಿಠಲಹತ್ತವತಾರದ ಹರಿಯೆಂದೆನಲ್ಲದೆ
--------------
ಪುರಂದರದಾಸರು