ಒಟ್ಟು 8 ಕಡೆಗಳಲ್ಲಿ , 5 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ಜಾಣಳೆ ಸುಭದ್ರಾ ಎಷ್ಟು ಜಾಣಳೆ ನಷ್ಟ ಮಾತು ನಿನ್ನದುನಾವು ಅಷ್ಟು ತಾಳಿಕೊಂಡೆವಲ್ಲ ಪ. ಮಾನ್ಯ ಮಾನ್ಯರೊಳಗೆ ನೀನು ಕನಿ ರುಕ್ಮಿಣಿಗೆಧಿಕವಾಗಿಎನ್ನ ಹೀನ ನುಡಿದು ಹರಿಯ ನೀಬೆನ್ನ ಬಿದ್ದು ಬಂದುಕುಳಿತೆ1 ಫುಲ್ಲ ಮಲ್ಲಿಗಿ ಹಾಂಗಕುಳಿತೆ2 ಅಷ್ಟು ಜನರೊಳಗೆ ಎನಗೆ ನಿಷ್ಠುರವಾಡಿ ಬಹಳ ಕೃಷ್ಣರಾಯರ ಬದಿಲೆ ನೀನುಶ್ರೇಷ್ಠಳಾಗಿ ಬಂದು ಕುಳಿತಿ 3 ನೋಡ ಬಂದ ಜನರೊಳಗೆ ಆಡಿಕೊಂಡಿ ಅಕ್ಕನ ಬಹಳ ಮೂಡಲಗಿರಿವಾಸಗೆ ಮಾರಿ ಬಾಡಧಾಂಗೆ ತೋರಿಕೊಂಡಿ 4 ಮಾನ ಬಿಟ್ಟು ಮಂದಿಯೊಳಗೆ ನಾನಾ ಮಾತು ಎನಗೆ ಆಡದಿನೀನು ರಾಮೇಶನಂಫ್ರಿಯಲಿಮೌನ ದಿಂದ ಬಂದು ಕುಳಿತಿ 5
--------------
ಗಲಗಲಿಅವ್ವನವರು
ನೋಡಿರಯ್ಯ ಈ ರೂಢಿಯ ಜನರೆಲ್ಲಾ ಮೂಡಲಗಿರಿವಾಸನಾ ವೆಂಕಟೇಶನಾ ಪ ಬೇಡಿದ ವರಗಳ ಭಕ್ತ ಸಮೂಹಕೆ ನೀಡುತಲಿ ಕೊನೆಗೆ ನಿಜಪದವೀವನಾ ಅ.ಪ ಹರಿಬ್ರಹ್ಮರೊಳಾವನುತ್ತಮನೆಂದು ಪರೀಕ್ಷಿಸೆ ಭೃಗುಮುನಿಯು ತೆರಳಿಬಂದು ಅಜಹರನೊಪ್ಪದೆತಾ- ಪರಮಪದಕೆ ಬರಲು ಪರಿ ಸಿರಿಯ ತೊಡೆಯ ಮೇಲೆ ಹರಿಮಲಗಿರೆ ಕಂಡು ಚರಣದಿಂದ ಹೃದಯಕೆ ತಾಡನೆ ಮಾಡಲು ಪರಮ ಭಕುತಿಯಿಂದ ಋಷಿಯ ಪೂಜಿಸಿದ 1 ಸಿರಿಕರವೀರಪುರವನೈದಲು ಧರೆಯೊಳು ವೆಂಕಟಗಿರಿಯ ಸಾರುತ- ಲ್ಲಿರೆ ವಲ್ಮೀಕದಲಿ ಸರಸಿಜಭವ ಶಿವರು ತುರುಕರುವಾಗಿ ಪಾ ಲ್ಗರೆಯೆ ವಲ್ಮೀಕದಲಿ ದೊರೆ ಚೋಳನ ಭೃತ್ಯಗೋವನು ಭಾದಿಸೆ ಶಿರದೊಳಾಂತು ನೃಪಗೆ ಶಾಪವನಿತ್ತ 2 ಮನುಜನೋಲ್ ನಟಿಸುತಲಂಬರರಾಜನ ತನುಜೆಯ ಕೈಪಿಡಿದು ನೆನೆವರಿಗೆ ತಿರುಪತಿಯೆ ವೈಕುಂಠ- ವೆನುತ ಸಾರಿ ಒಲಿದು ಘನಮಹಿಮೆಗಳನು ತೋರಿ ಸಕಲರಿಂ ಗುಣನಿಧಿ ಶ್ರೀಗುರುರಾಮವಿಠಲ ಈ ಘಣಿಗಿರಿಯೊಳಗಿರುತಿಪ್ಪ ತಿಮ್ಮಪ್ಪ 3
--------------
ಗುರುರಾಮವಿಠಲ
ನೋಡೋರು ಕೃಷ್ಣನ ನಾಡಿನ ಪ್ರಜರೆಲ್ಲಮೂಡಲಗಿರಿವಾಸನ ಬೇಡಿದವರಗಳ ನೀಡುವ ದಯದಿಕೊಂಡಾಡುವರು ವೆಂಕಟರಾಯನ ಪ. ಶ್ರೀನಿವಾಸನ ಕೋಟಿ ಆನೆ ಶೃಂಗರಿಸ್ಯಾವ ನಾನಾರತ್ನಗಳಿಂದ ಭಾನು ಕೋಟಿ ತೇಜ ತಾನು ನಿರ್ಮಿಸಿದನು ಏನೆಂಬೆÉನು ಛಂದ 1 ಚಿತ್ರ ವಿಚಿತ್ರದ ಮುತ್ತಿನ ಪಲ್ಲಕ್ಕಿ ರತ್ನ ಮಾಣಿಕ ಹಚ್ಚಿಚಿತ್ತ ಜನೈಯನ ಪ್ರತ್ಯೇಕ ವಿವರಿಸಿ ಅರ್ಥಿಹೇಳುವೆನಂದ2 ಎಂಟು ದಿಕ್ಕಿಗೆ ಒಪ್ಪೊಒಂಟಿ ಸಾಲಗಳು ವೈಕುಂಠಪತಿಯ ಮುಂದೆ ಕಂಠಿ ಚಿತ್ರವÀ ಬರೆಸಿ ಕರುಣಿ ವೆಂಕಟದಿವ್ಯಗಿಲೀಟು ವಸ್ತ್ರಗಳ ಹೊಚ್ಚಿ 3 ಹೇಳಲು ವಶವಲ್ಲ ಕಾಲೊಳುಆಭರಣವ ಭಾಳ ಮುತ್ತಿನ ಕುಚ್ಚುವ್ಯಾಳಾಶಯನನು ಅವರಿಗೆ ಹೇಳಿನೇಮಿಸಿದನು ಆಳುಮಂದಿಯು ಮೆಚ್ಚ4 ವಾಹನ ಸುತ ಸತಿಯರಿಗಿತ್ತು ಅತಿ ಸೇವ್ಯರು ಮೆಚ್ಚಿ5 ಕೆಂಚೆ ಕೃಷ್ಣನ ರಥಕೆ ಗೊಂಚಲ ಮುತ್ತುಗಳೆಷ್ಟಮಿಂಚುವ ಸೂರ್ಯನಂತೆ ಮುಂದೆ ನೊಡುಣು ಬಾರೇಚಂಚಲಾಕ್ಷಿ ಕೇಳೇ ವಿರಂಚಿ ಬೆರಗಾಗೋನಂತೆ6 ಚದುರ ರಾಮೇಶನ ಕುದುರೆ ಸಾಲುಗಳಿಗೆ ಅದ್ಬುತ ರತ್ನಗಳೆ ಮದನಜನಯ್ಯನುಮುದದಿ ನಿರ್ಮಿಸಿದನು ಸುದತೆ ಹೇಳುವೆ ಕೇಳೆ 7
--------------
ಗಲಗಲಿಅವ್ವನವರು
ಮಹಾಲಕ್ಷ್ಮಿ ಏನಂತಿ ಕಮಲನಾಭನ ಪ್ರಿಯಳೆ ಜಗ- ದಾನಂತ ಪದುಮನಾಭನ ಭಾರ್ಯಳೆ ಪ ಸಿರಿ ಎನ್ನ ಮೊರೆ ಕೇಳೆ ಸಿದ್ಧವಾಗೆನಗ್ಹೇಳೆ ಶುದ್ಧ ಮಾರ್ಗವ ತೋರೆ ಬುದ್ಧಿಪೂರ್ವಕವಾಗಿ ಭುವನದೊಡೆಯನ ಪಾದ- ಪದ್ಮದಲ್ಲಾಸಕ್ತೆ ಬುದ್ಧಿ ಕೇಳುವೆ ಶಾಂತಿ1 ಜನಕಾತ್ಮಜಳೆ ನೀ ಜಗದೇಕ ಸುಂದರಿ ಜಗದಾಧಿಪತಿ ವಕ್ಷಸ್ಥಳ ಆಶ್ರಯಳೆ ಕೃತಿ ಸರ್ವಮಂಗಳಕಾರಿ ಪರಮ ಕರುಣದಿ ನೋಡೆ ವರಲಕ್ಷ್ಮಿ ದಯಮಾಡೆ ವರಗಳನೀಡ್ಯಾಡೆ 2 ಭೀಷ್ಮಕನ ಪುತ್ರಿ ಬಿರುದೇನೆ ಸರಸಿಜನೇತ್ರೆ ಮೃಡ ಬ್ರಹ್ಮರೊಡೆಯ ಭೀಮೇಶಕೃಷ್ಣನ ಮಿತ್ರೆ ಪೊಡವಿಗಧಿಕಳೆ ಜಯ ಮೂಡಲಗಿರಿವಾಸಿ ಬಿಡದೆ ಕೈ ಹಿಡಿದೆನ್ನ ಕಡೆಹಾಯ್ಸೆ ಕಮಲಾಕ್ಷಿ 3
--------------
ಹರಪನಹಳ್ಳಿಭೀಮವ್ವ
ವೆಂಕಟರಮಣ ಮಾಂಪಾಹಿ ಸಂಕಟಹರಣ ಸರ್ವಲೋಕಕಾಧಾರ ಪ ಮತ್ಸ್ಯರೂಪವತಾಳಿ ವೇದಗಳ ರಕ್ಷಿಸಿದೆ ಮತ್ತೆ ಬೆಟ್ಟವ ಪೊತ್ತೆ ಕೂರ್ಮನಾಗಿ ಹೊತ್ತು ಭೂಮಿಯ ಪೊರೆದೆ ವರಾಹಾವತಾರದಲಿ ಬತ್ತಿ ಕಂಬದಿ ಬಂದೆ ನರಸಿಂಹನಾಗಿ ನೀ ಇತ್ತೆ ವರವನು ತುಳಿದು ಬಲಿಯು ನೀಡಲು ತಲೆಯ ವಟುರೂಪಿನಿಂದ ವೆಂಕಟರಮಣ ಮಾಂ ಪಾಹಿ 1 ಹೊತ್ತು ಪರಶುವ ಭುವಿಯ ಕ್ಷಾತ್ರಿಯರನೀ ಕೊಂದೆ ಮತ್ತೆ ರಾಮಾವತಾರದಲಿ ರಾವಣನ ಕೊಂದೆ ನಿತ್ತು ಕಾಪಾಡಿದೆಯೋ ಕೃಷ್ಣ ಪಾಂಡವರನ್ನು ಮತ್ತೆ ಬುದ್ದನರೂಪ ತಾಳಿ ಮೆರೆದೆ ತಾಳಿ ದರುಳ ದುರ್ಜನರನ್ನು ಮೆಟ್ಟಿ ಕುಟ್ಟಿದೆಯೋ ವೆಂಕಟರಮಣ ಮಾಂ ಪಾಹಿ 2 ಬೇಡಿದವರ ಇಷ್ಟಾರ್ಥಗಳನೀವ ಕಾಡಿದ ರಕ್ಕಸರ ಜೀವ ಕೊಳುವ ನೋಡಿ ದಯಮಾಡಿ ನೀಸುಜನರನು ಕಾವ ಆಡಿ ಅಡಗಿಸೋ ನೀನೇ ಮನದ ನೋವ ಗಾಢ ರಕ್ಷಿಸು ಕಡು ಬಾಡಿದೆ ಭಯದಲ್ಲಿ ವೆಂಕಟರಮಣ ಮಾಂ ಪಾಹಿ 3 ವರ ಅಜಾಮಿಳಗೆ ವರವಿತ್ತು ಸಲಹಿದೆಯೋ ಕರಿ ರಾಜ ಬರಲಿದಡೆ ಬಂದು ಕಾಯ್ದೆ ದುರುಳ ಕಾಳಿಂಗನನು ಮೆಟ್ಟಿಕುಣಿದಾಡಿದೆಯೋ ಧರಿಸಿ ಗೋವರ್ಧನವ ಕಾಯ್ದೆಗೋವಳರನ್ನು ವೆಂಕಟರಮಣ ಮಾಂ ಪಾಹಿ 4 ಇಳೆಯೊಳಗೆ ಮೂಡಲಗಿರಿವಾಸನಾಗಿ ನೆಲೆಯ ನರಿದು ಭಜಿಪರ ಪಾಪನಾಶ ಸೂರ್ಯ ಕೋಟಿ ಪ್ರಕಾಶ ಕಲಿಯುಗದೊಳು ನಿನ್ನ ಮಹಿಮೆ ವಿಶೇಷ ಸಲಹೋ ಪಾತಳ ಸೇವೆಯ ಗೆಣಸಿನ ಕುಣಿ ವೆಂಕಟರಮಣ ಮಾಂ ಪಾಹಿ 5
--------------
ಕವಿ ಪರಮದೇವದಾಸರು
ಗಂಭೀರೆಯರ ನಿಲ್ಲಿಸಿದಿಪೋರಬುದ್ಧಿಯ ಬಾಲೆನೀರೆಮನಕೆ ತಾರೆ ಪ.ನೀರಜಾಕ್ಷೆಯರ ನಿನ್ನದ್ವಾರದಿ ನಿಲ್ಲಿಸಿದಿಪೋರಬುದ್ಧಿಯನೆಲ್ಲತೋರಿಸಿದೆ ಈಗ 1ನೋಡಿ ನಮ್ಮನು ಕರೆಯದೆಓಡಿದೆ ಒಳಗಿನ್ನುಮಾಡಿದ ಕಪಟದ ಸೇಡುತೆಗೆಯುವೆ ನೀಗ 2ಮೂಡಲಗಿರಿವಾಸನೋಡುವಂತೆಮಾರಿಬಾಡಿಸಿ ಕಳಿಸುವೆನೋಡಿಕೊ ರುಕ್ಮಿಣಿ 3ಹೀನಗುಣದ ಬಾಲೆಮಾನವು ನಿನಗಿಲ್ಲಶ್ರೀನಿವಾಸನು ನಿನ್ನಏನೆಂದು ಮದುವೆಯಾದ 4ರಜವೆಂಬೊಗುಣಸೇರಿರಾಜ್ಯ ಭೋಗವಬಟ್ಟೆತ್ರಿಜಗವಂದನ ಕೂಡಭುಜಗಾಲಿಂಗನೆಯಾಕೆ 5ಸತ್ವಗುಣವ ಸೇರಿಅತ್ಯಂತ ಸುಖಿಸಿದಿಚಿತ್ತಜನಯ್ಯಗೆಪತ್ನಿ ತಕ್ಕವಳಲ್ಲ 6ತಮವೆಂಬೊ ಗುಣಗಳಸುಮ್ಮನೆ ಗುತ್ತಿಗೆ ಹೊತ್ತಿರಮಿ ಅರಸನ ಕೂಡರಮಿಸೋದು ತರವಲ್ಲ 7
--------------
ಗಲಗಲಿಅವ್ವನವರು
ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ದ್ರೌಪತಿ ಕೋಪ ‌ಘನವಾಯಿತಮ್ಮ ಪ.ಮೂಡಲಗಿರಿವಾಸ ನಾಡು ನಾಡಿನ ಜವಳಿಬೇಡಿದ ಪರಿಯು ತರಿಸಿದನಮ್ಮಬೇಡಿದಪರಿತರಿಸಿದನು ಧರ್ಮನನೋಡ ಬಂದವರಿಗೆ ಉಡುಗೊರೆಕೆಲದಿ1ಚಂದದ ಜವಳಿ ಕಂದರಿಗೊಸ್ತವುಇಂದಿರಾರಮಣ ತರಿಸಿದನಮ್ಮಇಂದಿರಾರಮಣ ತರಿಸಿದನಮ್ಮ ಧರ್ಮನಬಂದ ಜನಕೆಲ್ಲ ಉಡುಗೊರೆಕೆಲದಿ2ಲೆಕ್ಕವಿಲ್ಲದ ಜವಳಿ ಮಕ್ಕಳಿಗೊಸ್ತವುಲಕ್ಕುಮಿರಮಣ ತರಿಸಿದನಮ್ಮಲಕ್ಕುಮಿರಮಣ ತರಿಸಿದನಮ್ಮ ಧರ್ಮನಮಿಕ್ಕ ಜನಕೆಲ್ಲ ಉಡುಗೊರೆಕೆಲದಿ3ಏಸುರತ್ನದಹೇರುವಾಸುದೇವನು ತರಿಸಿರಾಶಿ ಸುರುವಿದ ಸಭೆಯೊಳುಕೆಲದಿರಾಶಿ ಸುರುವಿದ ಸಭೆಯೊಳು ಧರ್ಮನಆಸು ಜನಕೆಲ್ಲ ಉಡುಗೊರೆಕೆಲದಿ4ಫುಲ್ಲನಾಭನು ದ್ರವ್ಯ ಚಲ್ಲಿದ ಸಭೆಯೊಳುಎಲ್ಲ ನಾರಿಯರು ಬಳಕೊಳ್ಳಿರಮ್ಮಎಲ್ಲ ನಾರಿಯರು ಬಳಕೊಳ್ಳಿರಮ್ಮ ಎನುತಲೆಚಲ್ವ ರಾಮೇಶ ನಗುತಿಹನಮ್ಮ 5
--------------
ಗಲಗಲಿಅವ್ವನವರು
ನೂತನಕೆ ನೂತನ ಬಲು ನೂತನಶೇಷಗಿರಿವಾಸ ನಿನ್ನ ಮಹಿಮೆ ನೂತನವು ಪಮಾಡದನೆ ಮಾಡಿಸುವಿ ನೋಡದನೆ ನೋಡಿಸುವಿಬೇಡದಿದ್ದುದನೆಲ್ಲ ಕಾಡಿ ಬೇಡಿಸುವಿನಾಡೊಳಗೆ ನಿನ್ನ ಪೋಲುವರುಂಟೆ ಸರ್ವೇಶಮೂಡಲಗಿರಿವಾಸ ನಿನ್ನ ಮಹಿಮೆ ನೂತನವು 1ಅಣುಮೇರು ಮಾಡಿಸುವಿ ಘನತೃಣವ ಮಾಡಿಸುವಿಘನಕೃಪಾಂಬುಧಿ ನಿನ್ನ ಮಹಿಮೆ ನೂತನವೊಅಣಕವಾಡುವರಲ್ಲಿ ಕುಣಿಸಿ ಮರೆಸುತಲಿರುವಿಫಣಿಶಾಯಿ ನಿನ್ನ ಮಹಿಮೆ ಪ್ರತಿಕ್ಷಣಕೆ ನೂತನವು 2ಕಮಲಸಂಭವ ಪಿತನೆ ಕಮಲಜಾತೆಯ ರಮಣವಿಮಲ ಮುನಿಗಳ ಹೃದಯಕಮಲಶೋಭಿತನೆಕಮಲದಳನೇತ್ರನೆ ಕಮಲನಾಭ ವಿಠ್ಠಲಕಮನೀಯರೂಪನಿನ್ನ ಮಹಿಮೆ ನೂತನವೊ3
--------------
ನಿಡಗುರುಕಿ ಜೀವೂಬಾಯಿ