ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಜಯದೇವ ಜಯದೇವ ಜಯ ರಾಘವ ರಾಮಾ ದಯದಲಿಯಚ್ಚರನೀವದು ಸ್ಮರಿಸಲುತವನಾಮಾ ಪ ಹಭವ ಭವಮುಖರಮೊರೆಯನು ಕೇಳುತಲಿ ದಶರಥ ಕೌಲಸ್ಯರಾ ಬಸಿರಿಂದುದಿಸುತಲಿ ರುಷಿ ಮುಕರಕ್ಷಿಸಿ ತಾಟಕಿ ದೇಹದಿಬಿಡಿಸುತಲಿ ವಸುಧಿಲಿ ಶಿಲೆಯನು ಪಾದದದಿಮೆಟ್ಯುದ್ಧರಿಸುತಲಿ 1 ಹರುಷದಿ ಕೌಶಿಕನೊಡನೆ ಮಿಥಿಲೆಗೆ ಪೋಗುತಲಿ ಹರದು ಮುರಿದು ಜನಕಜೆ ಮಾಲೆಯ ಧರಿಸುತಲಿ ಬರಲಾನಂದದಿ ಭೃಗುಪತಿ ದಶರಥ ದರಶನ ಪಾಡುತಲಿ ಅರಸುತನಕ ಕೈಕೆಯು ಬ್ಯಾಡೆನೆ ನಡೆದೈತ್ವರಿಲಿ 2 ವನದಲಿ ಭಂಗಿಸಿಶೂರ್ಪನಖಿಖರ ದೂಶಣರಾ ಅನುವರ ಕಾಂಚನ ಮೃಗವಾ ಬೆಂಬೆತ್ತಲು ದೂರಾ ಜನಕಜೆಯಾಕೃತಿ ವೈಯ್ಯಲು ಕಪಟದಿದಶಶಿರಾ ಅನುಭಜಟಾಯುವಿನಿಂದಲಿ ಕೆಳಿ ನಡದೆ ಧೀರಾ 3 ಪಥದಲಿ ಮುರಿದುಕಬಂಧವ ಶಬರಿಗೆ ಗತಿನೀಡಿ ಪ್ರಥಮದಿ ಹನುಮನ ಕಂಡು ವಾಲಿಯ ಹತಮಾಡಿ ರತಿಯಲಿ ಸುಗ್ರೀವಜಾಂಭವ ಸೈನ್ಯದ ಲೋಡಗೂಡಿ ಕ್ಷಿತಿಜೆಯಾ ಸುದ್ದಿಯತರಿಸಿ ನಡೆದೈನಲಿದಾಡಿ 4 ಸೇತುವೆ ಗಟ್ಟಿಸಿ ಶರಣವ ಬರಲು ವಿಭೀಷಣನು ಭೀತಿಯ ಹಾರಿಸಿಸೈನ್ಯದಿ ದಾಟಿದೆ ಶರಧಿಯನು ನೀತಿಯ ತಪ್ಪಿದ ರಾವಣ ಕುಂಭಶ್ರವಣರನು ಖ್ಯಾತಿಲಿ ಮಡಹಿದೆ ಅವರಾಸಂತತಿ ಸಂಪದನು 5 ಶರಣಗಸ್ಥಿತಪರಪದವಿತ್ತು ದೇವರ ಶೆರೆಬಿಡಿಸಿ ಮರಳಿದಯೋಧ್ಯಕಪುಷ್ಪಕದಿಂ ಸೀತೆಯವರೆಸೀ ಮೆರೆವತ್ಸಜರಜನನಿಯರ ಸಕಲರಸುಖಬಡಿಸಿ ಸುರಮುನಿಜನರನುಸಲಹಿದೈ ಸಾಮ್ರಾಜ್ಯವನು 6 ನಾಮದಮಹಿಮೆ ಹೊಗಳಲು ಶೃತಿಗಳಿಗಳವಲ್ಲಾ ಪ್ರೇಮದಿಸವಿಸದುಂಬುವ ಶಿವ ಸೀತಾಬಲ್ಲಾ ನೇಮದಿಸುರನಂದಾನ್ನರ ಬವ ತರಿಸಿದರಲ್ಲಾ ಕಾಮಿತ ದಾಯಕ ಗುರುಮಹಿಪತಿ ಪ್ರಭುಶಿರಿನಲ್ಲಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆಂಬೆ ಗುರುರಾಯಾ ಶರಣ ಜನರಾಶ್ರಯಾ ಶರಣು ಸಮೀರ ಕುಮಾರ ಉದಾರನೆ ಶರಣು ಪಾವನ ಕಾಯಾ ಪ ಹರಿ ಪೂರ್ಣಾಂಶದಿ ಜನಿಸಿ ಹರಿ ಕುಲೋದ್ಬವ ನೆನಿಸಿ ಹರಿಯತುಡಕಿ ಬಂದು ಹರಿತೇಜದಿ ನಿಂದು ಹರಿಸೆ ಧನುಜ ಮೃಗವಾ ಹರಿರೂಪದಲಿ ನಿಂದೆಹರಿಮಂದಿರದಲಿನಲಿದೆ ಹರಿಬರಲು ನಮಿಸಿ ಹರಿದಶ್ವಜ ಗೊಲಿಸಿ ಹರಿಹಯಜಗ ಮುನಿದೇ 1 ಗೋಪೆಂದ್ರ ನಾಜÉ್ಞಯಲಿ ಗೋಪದಾಂಬುಧಿ ಪರಿಲಿ ಗೋಪನಲಂಘಿಸಿ ಗೋಪುತ್ರಿಯ ಕಂಡು ಗೋಪೀಡಕರ ಮುರಿದೇ ಗೋಪಾಲಗಿದಿರಾಗಿ ಗೋಪಾಸ್ತ್ರವಶವಾಗಿ ಗೋಪುರವ ನುರುಹಿ ಗೋಪಾನ್ವಯ ಗುರುಹಿ ಗೋಪದವಿಯ ಪಡೆದೆ 2 ಮಹಿದರಾನೇಕವತಂದು ಮಹೋದಧಿಯನೆ ಜಿಗಿದು ಅಹಿ ಮಹಿರಾವಣಾನ್ವಯ ಮಹಿರುಹದಲಿ ತರಿದೇ ಮಹಿಯೋಳು ಮೂರವತಾರಿ ಮಹಿಮಾನೆಕವಬೀರಿ ಮಹಿಪತಿ ಸುತಪ್ರಭು ಮಹಿಜಳ ಕೂಡಿಸಿ ಮಹದಾ ಗ್ರಣಿಯಾದೆ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಥಳವಲ್ಲದ ಸ್ಥಳದಲ್ಲಿ ಕಸ್ತೂರಿಯನಿಟ್ಟ ಬ್ರಹ್ಮಬಳಿಕ ಬೈದರೆ ವಿವೇಕವಹುದೇ ಎಲೆ ತಮ್ಮಪಶೀಲಮೃಗ ನಾಭಿಯಲಿ ಕಸ್ತೂರಿಯನಿಡುವುದುಖೂಳರ ಜಿಹ್ವೆಯಲಿ ಅದನಿಡಲು ನೀತಿಯಹುದುನಾಲಗೆಯ ಲೋಕೋಪಕಾರವಹುದುಮೇಲೆ ಕಸ್ತೂರಿಬಹುದು ಜಗಸಮ್ಮತವಹುದು1ಕಸ್ತೂರಿಗೋಸ್ಕರವೆ ಧರ್ಮ ಮೃಗವಾದುದನು ಬಿಡದೆಕೊಲ್ಲುವವನು ವ್ಯಾಧನೀಗಸಂಚಲ ಚಿತ್ತವುಳ್ಳವನು ವಿಧಿವರವರಿಯನುಅಸ್ತವ್ಯಸ್ತದಿ ಪಶುಗೆ ನೀರತಿದ್ದಿದನು2ಧರಿಸಿದನು ದೋಷವನು ತಾನೀಗ ಎರಡನ್ನಹಿರಿಯರನು ನಿಂದಿಪುದು ಮೃಗವ ಕೊಂದವನುಕರುಣೆ ಚಿದಾನಂದ ಸದ್ಗುರುವಿಗೆ ಮೆಚ್ಚಿಸು ಅದುಮರವಾದ ಮುಪ್ಪಿನಲಿ ವಿಧಾತ್ರನು3
--------------
ಚಿದಾನಂದ ಅವಧೂತರು