ಒಟ್ಟು 12 ಕಡೆಗಳಲ್ಲಿ , 8 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳು ಬೆಳಗಾಯಿತು ಬಾಲಕೃಷ್ಣಬಹಳ ಮಕ್ಕಳು ನಿನ್ನ ಕೇಳುತಿಹರೋ ಪ ಬರುವಿ ಮನೆಯೊಳಗೆಂದು ಕರೆದು ಪಾಲನು ರುಚಿರತರುಣಿಯರು ಬಚ್ಚಿಟ್ಟು ಶರಣದೊಳಗೆಸರಸ ಮೊಸರನೆ ಕಡೆದು ತ್ವರದಿ ಬೆಣ್ಣೆಯ ತೆಗೆದುಮರೆಮಾಡಿ ಮೂಲೆಯೊಳು ಸುರಿಸುತಿಹರೊ 1 ತರಣಿ ಬಂದಾ2 ಏಸು ಪುಡುಗರು ನಮ್ಮ ವಾಸದೆದುರಿಗೆ ನಿಂತುಘೋಷದಿಂದಲೆ ವತ್ಸರಾಶಿ ತುರುವಾಕೂಸೆ ಕರೆವರು ನಿನ್ನ ಭೂಷಿಸುವೆ ಬೇಗೇಳುತಾಸು ಹೊರಗ್ಹೋಗಿ ಇಂದಿರೇಶ ಬಾ ಬೇಗ 3
--------------
ಇಂದಿರೇಶರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪುಟ್ಟ ಬಾಲನೆ ಮನೆ ಕಟ್ಟೀಲಾಡೋಕೆಟ್ಟ ಗೋಪರ ಮನೀಗ್ಹೋಗಬ್ಯಾಡಾ ಪ ನಿನ್ನ ಮಗನು ಮೆದ್ದು ಬೆಣ್ಣೆ ಪಾಲ್ ಮೊಸರನೆಉಣ್ಣೀಸುತಲೆ ಬೆಕ್ಕಿಗುಂಡನಮ್ಮಸಣ್ಣ ಮಕ್ಕಳ ಕೈಯ್ಯ ಕಣ್ಣಿನಿಂದಲೆ ಕಟ್ಟಿಓಡುತಲಿಹರಮ್ಮಾ ನೋಡೆಂಬರೋ 1 ಕಂದಯ್ಯಾ ಗೋಪೆಯರ ಮಂದಿರಕ್ಹೋಗದೆಇಂದು ಹುಟ್ಟಿದ ದಿನಾ ಎರಕೋ ಕೂಸಮಂದಿರದೊಳು ವಿಪ್ರವೃಂದವ ಪೂಜಿಸಿಛಂದಛಂದದ ವಸ್ತ ತಂದಿಡುವೆ 2 ಮಂದಿ ಮಕ್ಕಳು ನೋಡು ಛಂದದಿ ತಮ್ಮನೆಮುಂದಲೆ ಊರೊಳಗಾಡೆಂಬರೊನಿಂದ ಧಾಂಧಲೆ ಭಾಳ ಬಂದು ಹೇಳುವರಲ್ಲೋಇಂದೆಲ್ಲಿ ಪೋಗದಿರಿಂದಿರೇಶಾ 3
--------------
ಇಂದಿರೇಶರು
ಪೋಗುವೆವಮ್ಮ ಪ ಉದಯವಾಗದ ಮುನ್ನ ಬರುವ ಕಣಮ್ಮ ಕದವ ಬಾರಿಸಿ ಒಳಪೊಕ್ಕ ಕಣಮ್ಮ ಮೊದಲೆನ್ನ ಮಗಳ ತಕ್ಕೈಸಿದನಮ್ಮ ಸದರದಲಿ ಮೊಸರನೆಲ್ಲ ಕುಡಿದ ಕಣಮ್ಮ 1 ಉಟ್ಟ ಸೀರೆಯ ಬೆಲೆ ಏನೆಂದಮ್ಮ ಪಟ್ಟೆ ಕುಪ್ಪಸಕೇನು ಪಣವೆಂದನಮ್ಮ ತೊಟ್ಟು ಕೊಂಡೆನ್ನನು ಬಿಡದೆ ಕಾಣಮ್ಮ 2 ನಸುಗಪ್ಪಿನೊಳು ಸಜ್ಜೆಮನೆಯೊಳಗಮ್ಮ ಮೊಸರು ಪಾಲ್ಬೆಣ್ಣೆಯ ಮೆದ್ದ ಕಾಣಮ್ಮ ಸೊಸೆಯು ಪಿಡಿಯೆ ಬಿಗಿದಪ್ಪಿದನಮ್ಮ ನಸು ಬೆವರಿಡೆ ತನು ಬಿಡದೆ ಕಾಣಮ್ಮ 3 ಜಾರ ಜೋರರ ಶಿಖಾಮಣಿಯಿವನಮ್ಮ ಯಾರೆಂದು ಹೊರಗೊಬ್ಬ ಕರೆಯೆ ಗೋಪಮ್ಮ ಚೋರ ಗಂಡಿಯ ಪೊಕ್ಕು ಓಡಿದನಮ್ಮ 4 ಊಚು ನೀಚುಗಳೇನು ಇವಗಿಲ್ಲವಮ್ಮ ನಾಚಿಕೆನಮಗಾಗುತಿದೆ ಹೇಳಲಮ್ಮ ಕೀಚಕರಿಪು ಕೋಣೆ ಲಕ್ಷ್ಮೀಶಗಮ್ಮ ವಾಚಿಸೆ ನೀನೊಂದ ಮಾತ ನಮ್ಮಮ್ಮ 5
--------------
ಕವಿ ಪರಮದೇವದಾಸರು
ಬಂದವನಾವನೋ ನಾ ಕಾಣೆ ಇಂದೀವರ ನೇತ್ರಾ ಸುಗಾತ್ರಾ ಪ ಮೆಲ್ಲಡಿ ಇಡುವ ಮರೆಯಲಿ ನಿಲುವಾ ಕಾಂತಿಯ ಚೆಲ್ಲುವ ನೋಡಲು ನಗುವಾ ಅ.ಪ ಆಕಳ ಕರೆವಾಗ ಸಾಕೆಂದೆನುವಾ ಆಕಳ ಬೆಣ್ಣೆಯೇ ಬೇಕೆನುತಿರುವಾ ಏಕೆಲೊ ಮರೆಯಾಗಿ ನಿಂತಿಹೆ ಪೇಳೆನೆ ನೀ ಕೊಡೆ ನಾ ಬಿಡೆ ಕೇಳೆಂಬಾ 1 ಮೊಸರನು ಕಡೆವಾಗ ಹಸಿವೆಂದೆನುವ ಬಿಸಿಯನ್ನವನಿಡೆ ಹಸುವಿಗೆ ಕೊಡುವಾ ನುಸುಳಿ ಬಂದು ಕೆನೆಮೊಸರನೆ ಮೆಲ್ಲುವ ಕಿಸಿಕಿಸಿ ನಗುತಲಿ ಓಡುವನಾರೋ 2 ಕಣ್ಣು ಮುಚ್ಚಲು ಬೆಣ್ಣೆಯ ಕಳುವ ಹೆಣ್ಣುಗಳೆಡೆಯಲಿ ನಗುತಲಿ ಹುದುಗುವ ಚಿಣ್ಣನು ಮಾಂಗಿರಿರಂಗನೇ ಯೇನೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ಶ್ರೀ ಹರಿಸ್ತುತಿ ಗೋಪಿ ನಿನ್ನ ಮಗ ಪ ಯಥೇಷ್ಟ ಮಾಡುವ ಈ ಕಳ್ಳ ಕೃಷ್ಣನು ಅ.ಪ ಅಡಗಿ ಮನೆಯೊಳಡಗಿಕೊಂಡಿರುವ ಅಲ್ಲಿದ್ದ ಭಾಂಡಗಳ್ ಬುಡಮೇಲ್ ಮಾಡಿ ಅಡಕಲೇರಿಸುವಾ ಅಡಿಗಳನು ಮೆಲ್ ನಿಡುತ ನೆಲವಿಲಿ ಇಡುವ ಪಾಲ್ ಮೊಸರನೆಲ್ಲ ಸವಿಯುವ ಗಡನೆ ಗೆಳೆಯರ ನೊಡನೆ ಬಂದು ಕಡೆವ ಗಡಗಿಯ ನೊಡೆದು ಪೋಗುವಾ 1 ಸಿಕ್ಕಮನೆ ಮನೆ ಹೊಕ್ಕು ನೋಡುವನೆ ತಾ ಸಿಕ್ಕದಿರನು ತಕ್ಕ ಕಳ್ಳಿವ ಠಕ್ಕನಾಗಿಹನು ಅಕ್ಕ ಕೇಳೆÀ ಅಕ್ಕರದಿ ಕೈಯಿಕ್ಕಿ ಕಡೆದಿಹ ಚೊಕ್ಕ ಬೆಣ್ಣೆಯ ಚಿಕ್ಕ ಬಾಲರಿಗಿಕ್ಕಿ ತಿನ್ನುವ ಮಿಕ್ಕ ಬೆಣ್ಣೆಯ ಬೆಕ್ಕಿಗ್ಹಾಕುವ 2 ಎಂಥವನಿವ ಖಳರಂತೆ ಮಾಡುವನೆ ಬೇ ಕಂತೆ ಕರುಗಳ ತಂತುಬಿಚ್ಚಿ ನಿಂತುನೋಡುವನೆ ಅಂಥ ಇಂಥವನಲ್ಲ ನಿನ್ನ ಮಗ ಸಂತ ಜನಮನ ದಂತರಂಗನು ಕಾಂತೆಯರು ಮನದಂತೆ ಬೈದರೆ ನಿಂತು ನಗವಾನಂತಾದ್ರೀಶನು 3
--------------
ಅನಂತಾದ್ರೀಶರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಗೋಪಿನಿನ್ನ ಮಗನಿಗಾಗೆ-ಕೇರಿಯ ಬಿಟ್ಟು |ಪೋಪೆವೆ ಬೆಳಗಾಗೆ ಪಮಕ್ಕಳನಾಡಗೊಡ-ಮನೆಯ ಹೊಕ್ಕು |ಉಕ್ಕುವ ಪಾಲ್ ಕುಡಿವ||ಗಕ್ಕನೆ ಕಂಡರೊಡನೆ ನಮ್ಮೆಲ್ಲರ ಕೈಗೆ |ಸಿಕ್ಕದೆ ಓಡಿದನೆ 1ಮೊಸರನೆಲ್ಲವ ಸುರಿದ-ಮೇಲಿಟ್ಟಂಥ |ಹೊಸಬೆಣ್ಣೆಗೆ ತಾ ಹಾರಿದ ||ಕೊಸರಿ ನೆಲುವಿನ ಮೇಲಿರಿದ ಕೃಷ್ಣ ತಾ |ಮುಸುರೆನೊಳಗೆ ಸುರಿದ 2ಅಂತಿಂಥವನಲ್ಲ ಕಾಣೆ-ನಿನ್ನವ ಜಗ-|ದಂತರ್ಯಾಮಿಯು ಜಾಣೆ ||ಅಂತರಂಗದಲ್ಲಿ ನೋಡಲು ಪುರಂದರ-|ವಿಠಲ ಬಂದಿದ್ದ ಕಾಣೆ 3
--------------
ಪುರಂದರದಾಸರು
ಸೆರಗ ಬಿಡಯ್ಯ ಕೃಷ್ಣ - ಕರೆಯಲು ಪೋಪೆನು |ಕರುಗಳು ಹಸಿದಿವೆ ಕರುಣಿಗಳರಸನೆ ಪಕೆನೆಮೊಸರನೆ ಕಡೆದು ನಿನಗೀವೆ ಬೆಣ್ಣೆಯ |ಗೊನೆಯ ಬಾಳೆಯ ಹಣ್ಣ ತಿನಲು ಕೊಡುವೆ ||ನೆನೆಗಡಲೆ ಕೊಬ್ಬರಿ ನಿನಗೆ ಮೆಲಲಿಕ್ಕುವೆ |ತನಯರೊಡನೆ ಆಡಕಳುಹುವೆ ರಂಗಯ್ಯ 1ಗೋವಳರೆಲ್ಲ ಬಂದು ಬಾಗಿಲೊಳಗೆನಿಂದು|ಗೋವುಗಳನು ಬಿಡಲು ಸಾರುತಿಹರು ||ನೋವುಗೊಳಿಸಬೇಡ ಪರರ ಮಕ್ಕಳ ನೀನು |ಭಾವಜನಯ್ಯನೆ ಲಾಲಿಸೀ ನುಡಿಯನು 2ಶರಧಿಯ ತಡಿಯಲಿ ನೆರೆದಿಪ್ಪ ಸತಿಯರ |ಪರಿಪರಿ ವಸ್ತ್ರವ ಸೆಳೆಯಬೇಡ ||ನೆರೆಮನೆ ಹೊರೆಮನೆ ಕರುಗಳ ಬಿಡಬೇಡ |ಸುರರಿಗೊಡೆಯ ನಮ್ಮ ಪುರಂದರವಿಠಲ 3
--------------
ಪುರಂದರದಾಸರು