ಒಟ್ಟು 6 ಕಡೆಗಳಲ್ಲಿ , 3 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ಕಮಲನಾಭನ ಕಣ್ಣಾರೆ ಪುಂಡರೀಕನ ಪಾಲಿನ ಪಂಡರಿವಾಸನ ಸಕಲ - ಬೊ ಮ್ಮಾಂಡವ ಧರಿಸಿದನಾ ಪ ಸುಲಭ ದೇವರ ದೇವ ನಾನಾ - ಪರಿ ಮಳ ತುಲಸಿಗೆ ವಲಿವನ ಕಲಿಕಾಲ ಸಲಹುವನ ಭವದ - ಸಂ ಕಲೆ ಪರಿಹರಿಸುವನ 1 ಲಿಂಗ ಸಂಗವನೀವನ ಜಗದಂತರಂಗ ಮೋಹನರಾಯನ ಮಂಗಳ ದೇವೇಶನ ಸಿರಿಪಾಂಡು ರಂಗ ನೆನಸಿಕೊಂಬನ2 ಜಗದ ಸದ್ಭರಿತ ನಾನಾ ವನದಿ ಬಿಗಿದ ಪರಾಕ್ರಮನಾ ನಗವನೆತ್ತಿದ ಧೀರನಾ ತನ್ನನು ಪೊಗಳಲು ಹಿಗ್ಗುವನಾ 3 ಯಾದÀವ ಶಿರೋರನ್ನನ ಕೊಳಲು ಊದುವ ಚೆನ್ನಿಗನಾ ವೇದ ನಿಕರಮಯನಾ 4 ಇಟ್ಟಿಗೆಯಲಿ ನಿಂದನ ವರಂಗಳ ಕೊಟ್ಟರೆ ತಪ್ಪದವನ ಅಟ್ಟಿ ಖಳನ ಕೊಂದನಾ ವಿಜಯ ವಿಠ್ಠಲ ಜಗದೀಶನಾ 5
--------------
ವಿಜಯದಾಸ
ಜಯ ಗೋಪಾಲ ವಿಠಲ | ದಯೆ ತೋರೋ ಇವಗೇ ಪ ನಯ ವಿನಯದಿಂ | ನಿನ್ನ | ದಾಸ್ಯಕಾಂಕ್ಷಿಪಗೇ ಅ.ಪ. ಜ್ಞಾನ ವಿರಹಿತನಾಗಿ | ಅನೇಕ ಜನುಮಗಳುಹೀನಯೋನಿಯ ಪೊಂದಿ | ಜನಿಸಿಹನು ಇವನೂಮಾನನಿಧಿ ಮೋಹನ್ನ | ದಾಸರರೊಲಿಮೆಯಲಿಂದಆನಂದ ಮುನಿ ಮತದಿ | ತನುವ ಪೊತ್ತಿಹನೊ1 ಲೇಸು ಮೋಹನರಾಯ | ದಾಸವಂಶದಿ ಬಂದುಆಶುಗಾಧ್ಯಾತ್ಮರಾ | ಹಸ್ಯ ವರಿಯದಲೇದಾಸ ದೀಕ್ಷೆಯ ನಡೆಯೆ ಆಶಿಸುತ್ತಿಹಗೆ ಉಪದೇಶವಿತ್ತೆ ನಿನ್ನಾ | ದೇಶ ಸುಸ್ತೀಶಾ 2 ಲೌಕಿಕದ ಬಹು ಮೋಹ | ನೀ ಕಳೆದು ಸುಜ್ಞಾನಭಕುತಿ ವೈರಾಗ್ಯಗಳ | ನೀ ಕೊಡುವುದ್ಹರಿಯೇಮಾಕಳತ್ರನೆ ತವಾ | ಲೌಕಿಕಸುಮಹಿಮೆಗಳಸಾಕಷ್ಟು ತಿಳಿಸುತ ಲೋಕದಲಿ ಮೆರೆಸೊ 3 ಸೊಲ್ಲು ಸೊಲ್ಲು ಸಲಿಸುವುದ್ಹರಿಯೆಖುಲ್ಲ ಜನದಲ್ಲಣನೆ | ಗೊಲ್ಲ ಗೋಪಾಲಾ 4 ಬೋವ ಶ್ರೀಹರಿ ಇವನಶೈವಲಾವರಣ ಕಳೆ | ದೀವುದೋಜ್ಞಾನಾಕೈವಲ್ಯದಾತ ಗುರು | ಗೋವಿಂದ ವಿಠ್ಠಲನೆನೀವೊಲಿಯದಿನ್ನಿಲ್ಲ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಮುದ್ದು ಮೋಹನರಾಯಾ | ಅಸ್ಮದ್ಗುರೋರ್ಗುರುಶುದ್ಧ ಜನ ಸಂಪ್ರೀಯ | ನಿಮಗೊಂದಿಸುವೆ ಭವಬಂಧ ಪರಿಹರಿಸಯ್ಯಾ | ಬುಧರಿಂದಗೇಯಾ ಪ ಪಂಕಜ ಮೋದ ಪಾದ ನಂಬಿದೆ ಅ.ಪ. ದೇವಮುನಿನುತ ಪೀಠಾ | ವರ ಚಿಪ್ಪಿಗಿರಿಯಲಿ ದಿವ್ಯ ಭವಹರ ಮಂತ್ರಾ | ಅಂಕಿತ ಸುತಾರಕಪ್ರವರ ಪೊಂದಿದೆ ಪೋತ | ಜಪಿಸುತ್ತ ಮನದೀಶರ್ವವಂದ್ಯ ವಿಧಾತಾ | ಪಾದಾಬ್ಜ ಭಕುತಾ ||ಶ್ರೀ ವರರ ಕರಕಮಲಜಾತನೆ ಭುವಿಯ ಸತ್ತೀರ್ಥಗಳ ಚರಿಸುತ ಪಾವಮಾನಿ ಮತಾಬ್ಧಿಜಾತರ | ಪಾವನವ ಮಾಡ್ಯವನಿಯಲಿಮೆರೆದೆ 1 ಭೃಂಗ ಮುದ್ದು ಮೋಹನಾರ್ಯ ಗುರುರೂಪದೇಶವ ವಿಹಿತ ಮಾರ್ಗದಿಗೈದು ತಂದೆ ಮುದ್ದು ಮೋಹನಾಭಿಧನೆಂದು ಕರೆದೆಯೊ 2 ಗುರುವಿನಾಣತಿಯನ್ನಾ | ಪೊಂದುತಲಿಸ್ವಪ್ನದಿಸಿರಿವಿಜಯ ವಿಠಲನ್ನಾ | ನಿಜಪುರದಿ ನಿಲಿಸಿನಿರುತ ಅರ್ಚನೆಯನ್ನಾ | ಸ್ಥಿರಪಡಿಸಿ ಮುನ್ನಅರಿತು ಮನದಲಿ ನಿನ್ನ | ಉತ್ಕ್ರಮಣವನ್ನಾ ||ಶೌರಿ ದಾಮೋದರನ ಮಾಸದಿ | ವರದತುರ್ದಶಿ ಅಸಿತಪಕ್ಷದಿಸಿರಿ ಗುರೂ ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದೆ 3
--------------
ಗುರುಗೋವಿಂದವಿಠಲರು
ಶ್ರೀ ಮುದ್ದುಮೋಹನದಾಸರು ಮುದದಿ ಪಾಲಿಸೊ | ಮುದ್ದು ಮೋಹನರಾಯಾ | ಮದ್ಗುರುವರ ಪ್ರೀಯಾ ಪ ಮಧ್ವೇಶನ ಪದ ಪದುಮ ಪೂಜಿಪ ಮಧುಪಾ ಪರಿಹರಿಸೆಲೊ ತಾಪಾ ಅ.ಪ. ಜನುಮ ಪೊತ್ತೆ ನೀ ದೊಡ್ಡ ಬಳ್ಳಾಪುರದೀ | ಅನುನಯದಲಿ ಓದೀ |ಗುಣವಂತೆಯು ಕನ್ಯೆಯ ತಾ ಸ್ವೀಕರಿಸೀ | ಕನ್ಯಾಸೆರೆ ಬಿಡಿಸೀ |ವನಜನಾಭನನು ಕಾಣಲು ಮನಮಾಡೀ | ಶ್ರೀ ವರರನು ಬೇಡೀ |ಗಾನ ಲೋಲ ಮುದ್ದು ಮೋಹನ ವಿಠ್ಠಲನಾ ಘನನಾಮ ಪೊತ್ತೆ ನಿನ್ನಾ 1 ಅಂಗಜಗಳು ಕದಲರ್ಧಾಂಗಿಯನಾಳೀ | ಯಾತ್ರೆಗೆ ಮನತಾಳೀ |ಗಂಗೆಯಾತ್ರೆ ಮೂರೊಂದು ಬಾರಿ ಮಾಡೀ | ಉಡುಪಿಗೆ ಬಲುಬಾರೀ | ತುಂಗ ಮಹಿಮ ನಮ್ಮ ವೆಂಕಟ ನಿಲಯನ್ನಾ | ತುಂಗೆ ತೀರಗನನ್ನಾ |ಭಂಗವಿಲ್ಲದಾನೇಕ ಬಾರಿ ನೋಡೀ | ಮಂಗಳಾಂಗನ ಪಾಡೀ 2 ಸಿರಿ ವಿಜಯ ವಿಟ್ಠಲನ ನಿಜಪುರದಲ್ಲೀ | ಸಂಸ್ಥಾಪಿಸುತಲ್ಲೀ |ಪರಮ ಶಿಷ್ಯರಿಗುಪದೇಶಗಳನ್ನಾ | ವಿರಚಿಸಿದಿಯೊ ಘನ್ನಾ |ಪರಿಸರ ಮತ ಸರ್ವೋತ್ತಮವೆಂದೂ | ಸಾರಿದೆ ದಯಾಸಿಂಧೂ 3 ಸಿರಿ ತಂದೆ ಮುದ್ದು ಮೋಹನರಾ | ಉದ್ಧರಿಸಿದ ಧೀರಾ |ಮಧ್ವ ಮತಾಗಮ ಸದ್ವನದಿ ವಿಹಾರ | ಬುಧಜನರಘ ಹರಾ |ವಿದ್ವದಾರ್ಯ ಮುದ್ದು ಮೋಹನ ರಾಯ | ಮುದ ಬೇಡುವೆ ಜೀಯ 4 ಕೃತನಿತ್ಯಾಹ್ನಿಕನಾಗಿ ತೆವಳಿ ಬಂದೂ | ಚಕ್ರದಿ ಕುಳಿತಂದೂ |ವತ್ಸರ ವಿಳಂಬಿ ವದ್ಯ ಕಾರ್ತೀಕದೀ | ಚತುರ್ದಶಿ ನಡುದಿನದಿ|ಅತುಳ ಮಹಿಮ ಗುರುಗೋವಿಂದ ವಿಠಲನ್ನ | ಹೃದಯಾಬ್ಜದಿ ಪವನಾ | ಆತುಮಾಂತರದಿ ಕಾಣುತಲವನಾ | ಕಿತ್ತೊಗೆದೆಯೊ ತನುವಾ 5
--------------
ಗುರುಗೋವಿಂದವಿಠಲರು
ಶ್ರೀ ಮೋಹನದಾಸರು ಇನ್ನಾದರು ಎನ್ನ ಪೊರೆಯೊ | ಮೋಹನರಾಯನಿನ್ನವನಲ್ಲವೇನೋ ಪ ಬನ್ನ ಬಡಿಪದುಚಿತವೇನೋಚೆನ್ನ ಶ್ರೀ ವಿಜಯ ದಾಸಾರ್ಯರ ಚಿಣ್ಣಾ ಅ.ಪ. ಎನ್ನ ಪಾಲಿಸಿದಂದದೀ | ಸಕಲ ಪ್ರಪನ್ನರ ಸಲಹುವುದೆಂದೂ ಬಿನ್ನಪಗೈದು ಮೋಹನ್ನ ವಿಠಲನೀಗೆ ಘನ್ನುಪಕಾರವ ಮಾಡಿದ ಧೀರಾ 1 ಮನ್ನವಚ ಕಾಯದಿ | ನಿನ್ನಯ ಚರಣ |ವನ್ನು ಪೂಜಿಪೆ ಮೋಹನ್ನ |ಮನ್ನಿಸಿಯೆನ್ನಯ ಅವಗುಣವೆಣಿಸದೆಕುನ್ನಿಯ ಕಾಯೊ ಸದ್ಗುರುವೆ ಪ್ರಸನ್ನ 2 ಸಾರ |ಭಕ್ತರಿಗರ್ಥಿಲಿ ಸ್ತವನ |ಮುಕ್ತಿದಾಯಕ ಗುರುಗೋವಿಂದ ವಿಠಲನವ್ಯಕ್ತಮಾಡಿಸೊ ಗುರು ಮೋಹನ್ನರಾಯಾ 3
--------------
ಗುರುಗೋವಿಂದವಿಠಲರು
ಶ್ರೀ ಮೋಹನದಾಸರ ಸ್ತೋತ್ರಪಾಹಿಪಾಹಿಗುರುಮೋಹನರಾಯಾಪಾಹಿಪಾಹಿ ಪಪಾಹಿಪಾಹಿಗುರುಮೋಹನಸಿಂಧುರಹರಿಪಾದಪಂಕೇರುಹ ಮಧುಪಾ ಅ.ಪ.ನವ ವಿಧ ಭಕುತಿ ಎಂಬೊ ನವ ನವ ಸರಪಳಿಯೊಳು |ನವ ನವ ರೂಪದಿ ನಲಿವ ಸುಧೀರಾ 1ಪದುಮನಾಭನ ಧ್ಯಾನವ ಮದವೇರಿ |ಪದೋ ಪದಿಗೆಹರಿಪದಾವಗಾಹಿ 2ವಿಜಯರಾಯರ ಪಾದರಜವ ಧರಿಸಿ ನೀ- |ರಜ ಪ್ರಾಣೇಶ ವಿಠಲನಲ್ಲೆರಗಿದೊ 3
--------------
ಪ್ರಾಣೇಶದಾಸರು