ಒಟ್ಟು 332 ಕಡೆಗಳಲ್ಲಿ , 64 ದಾಸರು , 270 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಶುಭಮಂಗಳಂ ಪ ಬಂದು ಜಮದಗ್ನಿಗಳಿಗೊಲಿದು ಬಂದು ನಿಮ್ಮಯ ಸೇವೆ ಮಾಡಿದ ಭಕ್ತರಿಗೆ ಆ ನಂದ ಪದವಿಯನೀವ ಇಂದಿರೇಶನಿಗೆ 1 ಅಂದು ಗೌತಮಸತಿಯ ಇಂದ್ರನು ಮೋಹಿಸಿ ಬಂಧನಕ್ಕೊಳಗಾಗೆ ಬಂದು ನಿಮ್ಮ ಪಾದಸೇವೆಯ ಮಾಡೆ ಪಾಪವೆಲ್ಲವ ಕಳೆದು ಅಮರಪದವೀವ ನಿತ್ಯಪರಮಪುರಷನಿಗೆ2 ಇಂದ್ರಗಿರಿ ಮಹೇಂದ್ರತೀರ್ಥವೆಂದೆನುತ ಆ ನಂದದಿಂದಲೆ ಪ್ರವಾಸ ಮಾಡೀ ಬಂದು ಸ್ನಾನ ಪಾನ ಸೇವೆ ಮಾಡಿದವರ ಜಾರದೋಷದ ಕಳೆವ ಶ್ರೀನಿವಾಸನಿಗೆ 3
--------------
ಯದುಗಿರಿಯಮ್ಮ
ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
(ಅ) ತಂದೆ ಮುದ್ದುಮೋಹನ ದಾಸರೆನಿಸಿದ ತಂದೆ ಶ್ರೀ ಗುರುವರ್ಯರೆ ಪ. ತಂದಿರಿ ಜ್ಞಾನಾಂಬುಧಿ ಮಧ್ಯದೊಳಗೀಗ ತಂದಿಹ ಎನ್ನ ದುಷ್ಕರ್ಮವ ತರಿಯುತ ಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಮಂದಮತಿಯಿಂದ ಜಗದೊಳಗೆ ಕುಂದುಗಳೆಣಿಸದೆ ಬಂದು ದರ್ಶನವಿತ್ತು ಕಂದನಂದದಿ ದಯದಿಂದ ಪಾಲಿಸಿದಿರಿ 1 ಯೋಗಿಗಳೆನಿಸಿದ ಭೋಗಿವರರೆ ಶಿರ ಬಾಗಿ ನಮಿಸುವೆ ಈಗ ನಾನು ನಾಗಶಯನನ ತೋರಿ ಬೇಗ ಪಾಲಿಸಿರಿ ಪೋಗುತಿದೆ ದಿನ ಜಾಗು ಮಾಡದೆ ಮುನ್ನ 2 ನರಸಿಂಹನನು ಹೃತ್ಸರಸಿಜದಲಿ ಕಾಂಬ ಗುರುವರ ನಿಮ್ಮಂಘ್ರಿಗೆರಗುವೆನು ಪರಿಪರಿ ತಾಪವ ಹರಿಸಿ ಎನ್ನ ಮನ ಹರಿಗುರು ಚರಣದೊಳಿರುವಂತೆ ಕೃಪೆಗೈದೆ 3 ಪರಮ ಗುರುಗಳಿಗೆ ಪ್ರಿಯರಾಗಿ ಇಳೆಯೊಳು ಚರಿಸಿ ಸುಜನರ ಪಾವನಗೈದು ಪರಮ ಗುಪ್ತದಿಂದ ಹರಿಯ ಧ್ಯಾನಿಸುತ್ತ ಧರೆಯೊಳಗಿರುವ ಪಾಮರರ ಮೋಹಿಸುವಂಥ 4 ಕಷ್ಟವ ಬಿಡಿಸಿರಿ ತುಷ್ಟರಾಗಿ ನೀವೆ ಇಷ್ಟು ಪರಿಯಿಂದ ಬೇಡಿಕೊಂಬೆ ಇಷ್ಟದೈವರು ನೀವೆ ಶ್ರೇಷ್ಠ ಶ್ರೀ ಗೋಪಾಲ ಕೃಷ್ಣವಿಠ್ಠಲನ ಉತ್ಕøಷ್ಟದಿ ತೋರಿರಿ5
--------------
ಅಂಬಾಬಾಯಿ
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಚಿತ್ರಾಪುರದ ದುರ್ಗಾ) ಚಿತ್ರಾಪುರ ನಾಯಕಿ ಪಾಲಿಸು ನಮ್ಮ ಗೋತ್ರ ವೃದ್ಧಿದಾಯಕಿ ಭ್ರಾತ್ರವ್ಯ ಭಯದಿಂದ ಭಜಿಸಿದ ವಿಧಿಯ ಸ್ತೋತ್ರಕೊಲಿದ ಮೊದಗಾತ್ರದೇವನ ರಾಣಿ ಪ. ಸರ್ವಮಂಗಲೆ ನಿನ್ನನು ಕಾಣಲು ಕಷ್ಟ ಪರ್ವತ ಪುಡಿಯಾದುದು ಶರ್ವ ಸುರೇಂದ್ರಾದಿ ಗೀರ್ವಾಣವಂದ್ಯೆ ನೀ ನಿರ್ವಹಿಸುವುದೆನ್ನ ಸರ್ವಕಾರ್ಯಗಳನ್ನು 1 ಕ್ಷುದ್ರರ ಮೋಹಿಸಲು ಹರಿಯು ನಿದ್ರಾ ಮುದ್ರೆಯ ಧರಿಸಿರಲು ರೌದ್ರ ರಕ್ಕಸ ಮಧುಕೈಟಭರನು ಕರು- ಣಾದ್ರ್ರ ಹೃದಯದಿಂದ ಕೊಲಿಸಿದ ಪತಿಯಿಂದ 2 ವಹಿಸಿದೆ ಸಕಲವನ್ನೂ ಸಹಿಸದ ಶತ್ರು ಪುಂಜಗಳನ್ನು ತ್ವರಿತದಿ ದಹಿಸು ದಾಸನೆಂದು ಗ್ರಹಿಸೆನ್ನ ಪಾಲಿಸು 3 ಚಂಡಮುಂಡರ ಶಿರವ ಕತ್ತರಿಸುತ ಚಂಡನಾಡಿದ ಭರವ ಕಂಡು ಮನಕೆ ರೋಷಗೊಂಡು ದೈತ್ಯರ ರಕ್ತ ಹಿಂಡಿ ದೇಹವ ತುಂಡು ತುಂಡು ಮಾಡಿದ ಧೀರೆ 4 ತಪ್ಪುಗಳೆಣಿಸದಿರೇ ಶೇಷಾದ್ರೀಶ- ನೊಪ್ಪಿದ ಗುರುವ ತೋರೆ ಅಪ್ಪಿಳಿಸರಿಗಳ ಚಿಪ್ಪನುಳಿಯದಂತೆ ತಪ್ಪಿಸು ಭಯವ ತಿಮ್ಮಪ್ಪನ ರಾಜನ ನೀರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಪಾರ್ವತಿ) ಬಾರಮ್ಮ ಬಾ ಬಾ ಬೊಮ್ಮನ ಮಗನಾಂಗೀ ಪ ತೋರೆ ತೋರೆ ತವ ಕರುಣಾಪಾಂಗೀ ಅ.ಪ. ಮನವೆಲ್ಲಾ ತಿರುತಿರುಗಿದೆ ಮದನಾಂಗೀಮಾವನ ಮಗನಿಗೆ ಪೇಳೆ ಶುಭಾಂಗೀಮನೋಹಾರನ ತಾಪವ ಹರಿಸು ಕೃಪಾಂಗೀ ಮಧ್ಯದಯಾಂಗೀಮದಪಿತ ಪತಿಯ ಮೋಹಿತಳಾಗಿ ಮರೆಪೊಕ್ಕುದು ಪದೋಪದಿಗೆ ಸ್ಮರಿಸುತ ಬೇಗಾ 1 ಗತಿಯಾರು ಪೇಳಮ್ಮಾ ನಿನ್ಹೊರತು ಮತ್ತೊಬ್ಬನ ನಾ ಕಾಣೆನಮ್ಮಾಬೊಮ್ಮನ ಮಗನಿಹನಮ್ಮಾ ಮದುವ್ಯಾದೆಯಮ್ಮಾಮದುವಿಯ ಮಾಡಿಕೊಂಡು ಮರುಳುಮಾಡಿ ನಿನ್ನ ಕರಪುಟದೊಳಗಿಟ್ಟು ಬಾಯ್ಬಾಯ್ಬಿಡಿಸಲು 2 ಯಷ್ಟೆಂದು ಪೇಳಲಮ್ಮಾ ಇನ್ನೆಷ್ಟೆಂತು ತುತಿಸಾವೆಮ್ಮ ಕಷ್ಟಪಡಲಾರೆ ನಮ್ಮಾ ಬಲು ಭ್ರಷ್ಟನಾದೆನಮ್ಮಾಇಷ್ಟನ ಕರಪುಟ ಜೇಷ್ಠ ಸುರರ ಗೆಲಿದಗುರುಕೃಷ್ಣವಂದಿತ ತಂದೆವರದಗೋಪಾಲವಿಠಲನ ಪಠಿಸುವ 3
--------------
ತಂದೆವರದಗೋಪಾಲವಿಠಲರು
(ಮಂಗಳೂರಿನ ಶ್ರೀ ವೆಂಕಟರಮಣ ದೇವರನ್ನು ನೆನೆದು) ವೈರಿ ವಿದಾರಣ ವೀರ ವೆಂಕಟಪತಿಯಾ ಪ. ಸುಜನಾರ್ತಿ ವಾರಣಾ ಮೃತ್ಯಬ್ಧಿತಾರಣ ಧೀರತನದಿ ಕಠಾರಿ ನಡುವಿಗೆ ಸೇರಿ ದಟ್ಟಿಯನುಟ್ಟು ಕೊಂಕಣ ಸ್ವಾರಿ ಬರುವನ 1 ಪಿಡಿವುತ್ತ ನಡುನಡು- ಮತ್ತಲ್ಲಿ ಮೆರೆವಾ ಸಿರಿನಲ್ಲ ದಾಸರ ಮಸ್ತಕದಿ ಕರ ಪಲ್ಲವವನಿರಿಸೆಲ್ಲರನು ತಡವಿಲ್ಲದಲೆ ಸುಖದಲ್ಲಿ ಸಲಹುವÀ 2 ಮಂಗಳಾಭಿದ ಪಟ್ಟಣಾಧೀಶಾ ಪದ್ಮಾ ಪುರುಷಾ ಶ್ರೀ ವೆಂಕಟೇಶಾ ತುಂಗವಿಧಿ ಮಾಲಿಕಾಭೂಷಾ ಅತಸೀ ಭಾಸಾ ಸ್ಮಿತಪೂರ್ಣಭಾಷಾ ಇಂಗಿತಗಳರಿತೀವ ಸೌಖ್ಯ ತರಂಗಗಳ ಸುರ ಸಾರ್ವಭೌಮ ಕು- ರಂಗ ನಯನಾಲಿಂಗಿತಾಂಗ ಮತಂಗಜಾವರಮೋಹಿರೂಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ರಮಣನೆಲ್ಲಿಹ ಕರೆತಾರೆ ಸಖಿಯಳೆ ) * ಪ ಮನು ಕಮಂಡಲ ಕೂಪದಲ್ಲಿ ಹಿಡಿಯದಂತೆ ಬೆಳೆದು ಅವರ ಶರಧಿ ಒಳಗೆ ಹರಿದಾಡುತಿರುವ ಕೇಳ್ ಸಖಿಯಳೆ ಶರಧಿ ಒಳಗೆ ಹರಿದಾಡುತಲೆ ವೇದತಂದು ತೋರಿದ್ಹೊಳೆವ ಮಚ್ಛನ್ನ ಬಲಗೊಂಬೆ ಕೇಳ್ ಸತಿಯಳೆ 1 ಸೃಷ್ಟಿಗೆ ಅಧಿಕ ಸ್ತ್ರೀಯಳ ದೈತ್ಯರು ಮೋಹಿಸಲು ಕಂಡು ಹುಟ್ಟಿಸಿದ ಸುಧೆಯ ಸುರರಿಗೆರೆದ ಕೇಳ್ ಸಖಿಯಳೆ ಹುಟ್ಟಿಸಿದ ಸುಧೆಯ ಸುರರಿಗೆರೆದು ಬೆಟ್ಟವನು ಬೆನ್ನ- ಲಿಟ್ಟ ಕೂರ್ಮನ ಬಲಗೊಂಬೆ ಕೇಳ್ ಸತಿಯಳೆ 2 ವಾಸುದೇವ ಕ್ರೋಡರೂಪಿಲಿಂದ ಹಿರಣ್ಯಾಕ್ಷನ ನಾಶವ ಮಾಡಿ ಕೋರೆಯಿಂದ ಕೇಳ್ ಸಖಿಯಳೆ ನಾಶವ ಮಾಡಿ ಕೋರೆಯಿಂದ ಧರಣಿ ತಂದು ಹರ್ವಿ (ರವಿ?)ದ ಭೂಪತಿವರ್ಹ(ರಾಹ?)ನ್ನ ಬಲಗೊಂಬೆ ಕೇಳ್ ಸತಿಯಳೆ 3 ಒಡೆದು ಕಂಬ ಕಡೆಗೆ ಕಿತ್ತು ಬಿಡದೆ ಅರಿಯ ತೊಡೆಯಲಿಟ್ಟು ಒಡಲ ತಾ ಬಗೆದ ಭಕ್ತರೊಡೆಯ ಕೇಳ್ ಸಖಿಯಳೆ ಒಡಲ ತಾ ಬಗೆದ ಭಕ್ತರೊಡೆಯನಾಗಿದ್ದ ಲಕ್ಷ್ಮೀ- ನಾರಸಿಂಹನ್ನ ಬಲಗೊಂಬೆ ಕೇಳ್ ಸತಿಯಳೆ 4 ಪಾದ ದಾನ ಬೇಡಿ ಪೃಥ್ವಿ ಆಕ್ರಮಿಸಿದ ಪರಮಾತ್ಮ ಕೇಳ್ ಸಖಿಯಳೆ ಪೃಥ್ವಿ ಆಕ್ರಮಿಸಿದ ಪರಮಾತ್ಮನಾದ ನಮ್ಮ ಕಶ್ಯಪರ ಸುತ ವಾಮನನ ಬಲಗೊಂಬೆ ಕೇಳ್ ಸಖಿಯಳೆ 5 ಋಷಿಗಳಲ್ಲಿ ಜನಿಸಿ ಕರದಿ ಧರಿಸಿ ಕುಠಾರವನ್ನು ಅರಸು ಕ್ಷತ್ರಿಯರಿಗಂತಕನ ಕೇಳ್ ಸಖಿಯಳೆ ಅರಸು ಕ್ಷತ್ರಿಯರ ಕುಲಕೆ ಅಂತಕನಾಗಿದ್ದ ನಮ್ಮ ಪರÀಶುರಾಮನ್ನ ಬಲಗೊಂಬೆ ಕೇಳ್ ಸಖಿಯಳೆ 6 ಮುದ್ರೆ ಕಳುವಿ(ಹಿ?) ಲಂಕಾಪುರದಲ್ಲಿದ್ದ ವಾರ್ತೆ ಕೇಳಿ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೇಳ್ ಸಖಿಯಳೆ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೂಡಿ ಬಂದ ಅ- ಯೋಧ್ಯಾರಾಮನ್ನ ಬಲಗೊಂಬೆ ಕೇಳ್ ಸಖಿಯಳೆ7 ಎಲ್ಲ ಜಗವ ತನ್ನ ಉದರದಲ್ಲೇ ಇಟ್ಟು ಗೋಕುಲದ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕೇಳ್ ಸಖಿಯಳೆ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕದ್ದು ಮೆಲ್ಲುವಂಥ ಚೆಲ್ವ ಕೃಷ್ಣನ್ನ ಬಲಗೊಂಬೆ ಕೇಳ್ ಸುಖಿಯಳೆ 8 ಮಾಯಾಶಿಶುರೂಪ ತಾನಾಗಿ ವೇದನಿಂದ್ಯವನ್ನು ಮಾಡಿ ಬೋಧಿಸಿದ ದುರ್ಮತವ ಕೇಳ್ ಸಖಿಯಳೆ ಮಾಡಿ ಬೋಧಿಸಿದ ದುರ್ಮತವ ತ್ರಿಪುರಜನರಿಗೆಲ್ಲ ಬೋಧಿಸಿದ ಬೌದ್ಧನ್ನ ಬಲಗೊಂಬೆ ಕೇಳ್ ಸಖಿಯಳೆ 9 ಕಲಿಸಮಾಪ್ತಿ ಕಾಲದಲ್ಲಿ ಚೆಲುವ ಅಶ್ವಾರೂಢನಾಗಿ ಬಿಡದೆ ಪಾಲಿಸಿದ ಶರಣಜನರ ಕೇಳ್ ಸಖಿಯಳೆ ಬಿಡದೆ ಪಾಲಿಸಿದ ಶರಣಜನರನು ಭೀಮೇಶಕೃಷ್ಣನ ಚರಣಕಮಲಕೆರಗಿ ಬಲಗೊಂಬೆ ಕೇಳ್ ಸಖಿಯಳೆ 10
--------------
ಹರಪನಹಳ್ಳಿಭೀಮವ್ವ
(ಶ್ರೀ ವಿಷ್ಣುತೀರ್ಥರು) ಮೋದ ಬೀರುತ ತಾ ಮೋದಪುರಕೆ ಬಂದವನ್ಯಾರೆಪೇಳಮ್ಮಯ್ಯಾ ಪ ಶುಕಮುನಿ ಪೇಳಿದ ಶಾಸ್ತ್ರದ ಸಾರವ ಸುರಿಸಿದ ಧೀರ ಶ್ರೀ ವಿಷ್ಣುತೀರ್ಥಾರ್ಯ ಕಾಣಮ್ಮಾಅ.ಪ. ಶುದ್ಧವೃತ್ತಿಗಳಿಂದನುಭೋಗಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಜೀವರತಾ ಬುದ್ಧಿ ಭೇದಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಶೂನ್ಯರುಪದ್ರವ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಶುದ್ಧ ಶೃತಿ ಸ್ಮøತಿ ಪದ್ಧತಿ ತಪ್ಪದೆ ಇರುವೋ ಯತೀಶ್ವರರೇ 1 ಮರೆಪೊಕ್ಕವರನು ಮರೆಯದೆ ಪೊರೆವನದಾರೆ ಪೇಳಮ್ಮಯ್ಯಾ ಮೋರೆಯ ತೋರೆಂದು ಮಾರನಯ್ಯ ಮುರಾರಿಗೆ ಪೇಳ್ವವನಾರೆ ಪೇಳಮ್ಮಯ್ಯಾ ಮೋರೆ ಮೋಹಿಸಿ ಮೂಲೋಕವ ಸುತ್ತಿದನ್ಯಾರೆ ಪೇಳಮ್ಮಯ್ಯಾ ಮೋರೆ ಒಂದು ಮೂರು ಕಣ್ಣುಳ್ಳ ಬೊಮ್ಮನ ಪ್ರೀತಿಯ ಮಗನಮ್ಮ 2 ಬಂದು ಸೇವಿಸೆ ಘನ ಬಂಧನ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಹಿಂದು ಮುಂದು ತನ್ನ ನಂಬಿದವರ ಮನಮಂದಿರ ದಿಪ್ಪುವನ್ಯಾರೆ ಪೇಳಮ್ಮಯ್ಯಾ ಇಂದುಧರ ಖಳವೃಂದ ಮೋಹನ ಗುರು ನಂದಿವಾಹನನೇ ಪೇಳಮ್ಮಯ್ಯಾ ಇಂದಿರೇಶ ತಂದೆವರದಗೋಪಾಲವಿಠಲನ ಸೇವಿಪ ನೀಲಕಂಠ ಕಾಣಮ್ಮಾ 3
--------------
ತಂದೆವರದಗೋಪಾಲವಿಠಲರು
(ಶ್ರೀಹರಿಯ ಮೋಹಿನಿ ರೂಪ) ನೋಡಿರೊ ಸ್ತ್ರೀರೂಪವ ನೋಡಿರೋ ಪ. ನೋಡಿರೊ ಹರಿಯ ಸ್ತ್ರೀರೂಪ ಸ್ತುತಿ ಮಾಡಿರೊ ಮಹಿತಾ ಪ್ರತಾಪ ಅಹ ಜೋಡಾದ ಸತಿಯರ ನೋಡಿ ನಗುತ ನಲಿ- ದಾಡುವ ಶ್ರೀಕೃಷ್ಣ ಪ್ರಹುಡೆಯಾಗಿರುವುದ ಅ.ಪ. ಭಾರ್ಗವ ವಾಸರದಲ್ಲಿ ಯತಿ ವರ್ಗವೆಲ್ಲವು ಸೇರುತಿಲ್ಲಿ ಪಂಚ ಮಾರ್ಗಣಪಿತನಿದಿರಲ್ಲಿ ಅಷ್ಟವರ್ಗೋಪಚಾರಗಳಲ್ಲಿ ವಿಧಿ ಭರ್ಗ ವಂದ್ಯ ಪ್ರಭು ದುರ್ಗಾರಮಣ ಸತ್ವ ಸರ್ಗಪಾಲನ ಸನ್ಮಾರ್ಗದಿ ಸ್ತುತಿಪುದ 1 ಧೀರಮರಾಸುರರಂದು ಕ್ಷೀರವಾರಿಧಿ ತಡಿಯಲ್ಲಿ ಬಂದು ಬಹು ಮಂದರ ಕಟ್ಟಿ ನಿಂದು ಸುಧ ಸಾರವ ತೆಗೆಯಲು ಕಾರುಣ್ಯದಲಿ ದಾನ ವಾರಿಗಳಿಗೆ ಕೊಟ್ಟ ನಾರಾಯಣಿಯನ್ನು 2 ನಾಯಕ ಧೀರ ಕಂಜ ನಿವಹ ರಕ್ಷಿಸು ಗಂಭೀರಾ ಅಹ ಪವನಾವತಾರನ ಸ್ತವನಕೊಲಿದು ಬಂದ ಕವಿ ಶೇಷಗಿರಿವಾಸ ಭವಭಯಹಾರಿಯ 3
--------------
ತುಪಾಕಿ ವೆಂಕಟರಮಣಾಚಾರ್ಯ
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
ಅ. ಶ್ರೀಹರಿಸ್ತುತಿಗಳು ಉಯ್ಯಾಲೆಯ ನೀರಜೋದರನಾಡಿದಾ ನಿಗಮಾಂತ ನಾರೀಜನರು ಪಾಡಲೂ ಪ ಮೆರೆವ ಯೌವನದ ವಸಂತಾ ನಾದ ಶ್ರೀ ಧರಣಿಯರ ಮಧ್ಯದಲ್ಲೀ1 ಭಿಸುವೊಡಲ ನೀಡು ಮಾಡೀ 2 ಮೈಯನುರದಾ ಲೊರಗಿಸೀ ಕೈಯೊಡನೆ ತನುವ ತೀಡೇ 3 ಎಡದ ಧರಣಿಯ ನೋಡಲೂ ಬಲದ ರಮೆ ಕಡುಮುನಿಯೆ ಸಂತವಿಸುತಾ ಒಡನೆ ಭೂದೇವಿ ಮುನಿಯೇ ಮನ್ನಿಸುವ ಸಡಗರದಿ ಜಗವ ಮೋಹಿಸೀ 4 ಎಡದ ಕೈಯಿಂದಿಂದಿರೇ ಧರಣಿ ತಾ ಪಿಡಿದು ಬಲಗೈಯಿಂದಲೇ ಕಡಲ ಮಧ್ಯದಿ ಮುಳುಗುತಾ 5 ಅರಿ ಶಂಖ ಕೌಮೋದಕೀ ಸರಸಿರುಹ ವರಕರ ಚತುಷ್ಟಯಗಳೂ ಕುಂಡಲ ಕಿರೀಟಾ ನಗೆಮೊಗದ ಸುರರತಾತನ ಜನಕನೂ 6 ಅಂಬುಜಾಂಘ್ರಿಯ ತಡೆಯದಾ ಪೊಂಬಣ್ಣ ದಂಬರದ ಸಿರಿಯ ನಡುವಿನಾ ಕಂಬುಕಂಠದ ಚೆನ್ನಿಗಾ 7 ಹರಿಯ ಮೈಸೋಂಕಿನಿಂದಾ ಶರೀರಗಳ ಗೊರೆವನ್ನಲು ಪರಿಶೋಭಿಸೀ 8 ಹೂತ ಹೊಂಬಳ್ಳಿಗಳನೇ ತೊಡಿಗೆಯಿಂ ಜೋತೊರಗುತಿಕ್ಕೆಲದಲೀ ಶ್ರೀತರುಣಿ ಧರಣಿ ಮೆರೆಯೇ ವೈಕುಂಠ ಪ್ರೀತ ಚನ್ನನಾಡಿದನುಯ್ಯಲಾ 9
--------------
ಬೇಲೂರು ವೈಕುಂಠದಾಸರು