ಒಟ್ಟು 10 ಕಡೆಗಳಲ್ಲಿ , 6 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅರುಣಾನುಜ ವೈರಿಯಾ ಭರಣನ ಮಿತ್ರನ ತೋರೇ ಪ ಉರಗಾ ಹರಿಧ್ವಜಪಿತನಾ | ಅರಿಪಿತ ಸಂಹಾರಕನಾ | ಗಿರಿಜಾವಲ್ಲಭರಿಯನಾ | ಶರಗರ್ಭನನುತನ ತೋರೆ 1 ಶೂರರಾಯನಂದನಾ | ಅರಸಿ ಯಣ್ಣನ ಮದನನಾ | ಮೈರೋಚನ ಆತ್ಮಜನಾ | ವರದನ ತಂದು ತೋರೆ 2 ಗಿರಿ ರಿಪುತನು ಸಂಭವನಾ | ಅರಸಿಯಣ್ಣನನುಜನಾ | ಗುರುವರ ಮಹಿಪತಿ ಪ್ರೀಯನಾ | ಹರಿಣಾನೇತ್ರನೀ ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಾರು ಗಾಯನ ರತನಾ | ಸಾಕಾರನ ತಂದು ತೋರೇ ಪ ಇರುವ ದಿಕ್ಕಿನೋಳಿಹನಾ ಪರಮ ಮಿತ್ರನಾಹಾರಾ ಮಾಳ್ವೆರಿಯಣ್ಣನಾ ನಿರುತ ಸೇವೆಯ ಕೊಂಬನಾ | ಶರೀರದಿ ಜನಿಸಿದಾವಳ ಕೂಡಿಕೊಂಡಳ ಅರಸನ ಸ್ನೇಹವ ಮಾಳ್ವನಾ ಹರಿಣಾಕ್ಷಿ ತಂದು ತೋರೇ 1 ಯೊಡಲೊಳು ತ್ವರಿತದಿ ಜನಿಸಿದನಾ | ಬಂದನಾ ಶರದೆಚ್ಚ ಸ್ಥಳ ಕೊಂಡನೇ | ಅಸುರನ ಕಂದನಾ ಕೊಂದನಾ | ಜಗ ದರಿಯನ ತಂದು ತೋರೇ 2 ಮಂದಗಮನಿ ಪ್ರಿಯನಾ | ಮುಂದ ಗಾಣದ ಲೊಲ್ಲನಾ | ಕೈಯಿಂದ ಕೊಲಿಸಿದನಾ | ನಂದನ ತಂದು ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನನೆ ನೀ ಕಾಣಣ್ಣನಿನ್ನ ಕಾಣುವುದರಿಯಣ್ಣನಿನ್ನಯ ದೇಹದೊಳಣ್ಣನಿನಗೆ ಹೇಳುವೆನಣ್ಣ ಪ ಕಣ್ಣನೆ ಮುಚ್ಚಣ್ಣ ಕಪ್ಪನು ಲಕ್ಷಿಸೋ ಅಣ್ಣಹೊನ್ನು ಕಳೆಗಳಣ್ಣ ಹುಟ್ಟುವುದು ಮುಂದಣ 1 ಕಪ್ಪದು ಅಡಗಲಿ ಅಣ್ಣ ಕಪ್ಪಿನ ಸ್ಥಳ ಹಿಡಿಯಣ್ಣಕುಪ್ಪಳಿಸುವುದು ಬೆಳಗಣ್ಣ ಕಾಡು ಕಿಚ್ಚಿನಂತಣ್ಣ 2 ದೃಷ್ಟಿಯಲಿ ದ್ರಷ್ಟಿವಣ್ಣ ದೃಷ್ಟಿಯ ನೆಲೆಯಾಗಲಣ್ಣಶಿಷ್ಟ ಚಿದಾನಂದನಣ್ಣ ಸಾಕ್ಷಾತ್ ನೀನಹೆಯಣ್ಣ3
--------------
ಚಿದಾನಂದ ಅವಧೂತರು
ಪುಣ್ಯದ ಹಾದಿಯ ಪೇಳ್ವೆ ಪೇಳಿದಂದದಲಿರೆ ಪುಣ್ಯಲೋಕವು ನಿನಗಣ್ಣಪುಣ್ಯವ ಕೆಡುಗೊಡದಲೆ ನೀನು ನಡೆದರೆ ಪುಣ್ಯ ಪುರುಷನಹೆಯಣ್ಣ ಪ ಬಿಸಿಲೊಳಗಿದ್ದವರ ನೀನು ನೆರಳಿಗೆ ಕರೆದರೆ ಬಹಳ ಸುಖವು ನಿನಗಣ್ಣಹಸಿದು ಬಂದವರಿಗೆ ತುತ್ತನಿಕ್ಕಲು ನಿನಗೆ ಅರಕೆಯಿಲ್ಲದ ಅನ್ನವಣ್ಣ 1 ನೀರಡಸಿದವರಿಗೆ ನೀರನ್ನು ಎರೆದರೆ ನಿನಗೆಂದು ಕಷ್ಟವಿಲ್ಲಣ್ಣದಾರಿ ತಪ್ಪಿದವರಿಗೆ ದಾರಿಯ ತೋರಿಸೆ ಧಾವತಿ ನಿನಗಿಲ್ಲವಣ್ಣ 2 ಮನೆಯಿಲ್ಲದವರಿಗೆ ಮನೆಯ ಕೊಟ್ಟೊಡೆ ನಿನಗೆ ಮುಂದಿಹುದು ಮನೆಯಣ್ಣಇನಿತು ವಸ್ತ್ರವಿಲ್ಲದವಗೆ ವಸ್ತ್ರವನು ಕೊಡೆ ಏನು ವಿಪತ್ತು ನಿನಗಾಗದಣ್ಣ 3 ಬಡವರನು ಮುಂದಂತೆ ತಂದರು ನೀನೀಗ ಬಲವಂತನಾಗುವೆಯಣ್ಣನುಡಿಯಲು ಒಳ್ಳೆಯ ವಾಕ್ಯವ ನೀನೀಗ ನೋಯದಂತಿರುವೆ ಮುಂದಣ್ಣ4 ವನಗುಡಿ ಕೆರೆಬಾವಿ ಧರ್ಮ ಮಳಿಗೆ ಹಾಕೆ ಒಲಿವನು ಶಿವನು ನಿನಗಣ್ಣಘನ ಚಿದಾನಂದ ಸತ್ಪುರುಷರ ಸೇರಲು ಘಟ್ಟಿ ಮುಕ್ತಿಯು ನಿನಗಣ್ಣ5
--------------
ಚಿದಾನಂದ ಅವಧೂತರು
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ಸತ್ಕವೀಂದ್ರ ಬಾಬೇಂದ್ರೆ ಸುಗುಣಸಾಂದ್ರ ಪ. ನಮ್ಮ ಮಾನವಿ ಸ್ಥಳದಿ ಅಚ್ಚಗನ್ನಡ ನುಡಿಯ ಸಮ್ಮಿಲನ ಸಾಗಿಸಲು ನಿಶ್ಚಯಿಸಿದೆ ನಿಮ್ಮ ಬರುವಿಗೆ ಬಯಕೆ ಇಮ್ಮಡಿಸಿದೆಮಗೆ ಸಮ್ಮತಿಸಿ ಬಾರಯ್ಯ ಸತ್ಕವೀಂದ್ರ ಶ್ರೀ ಬೇಂದ್ರೆ ಸುಗುಣೇಂದ್ರ 1 ಅಚ್ಚಗನ್ನಡ ತಾಯಿಗಚ್ಭದ ಮನೆಂದು ಹೆಚ್ಚಾಗಿ ನಿಮ್ಮನ್ನು ಮೆಚ್ಚುವೆವೋ ಮುಚ್ಚುಮರಿಯಾಕೆ ಈ ಉತ್ಸವಕೆ ಬರದಿರೆ ವಾಗ್ದೇವಿ ಸತ್ಕವೀಂದ್ರ 2 ದಾತರಾದವರಾರ್ತರಾತುರದಿ ತ್ವರದಿಂದ ಪ್ರೀತಿಯಲಿ ಪೂರ್ತಿಸಲು ಒಪ್ಪಿರೆಂಬಾ ನೀತಿ ಮಾತನು ನೀ ತಿಳಿಯದಾತನೆ ಹಾತೊರೆಯುತಿದೆ ಮನವು ಸತ್ಕವೀಂದ್ರ 3 ಕನ್ನಡದ ನುಡಿ ಸುಧೆಯ ಕನ್ನಡಿಗರಿಗೆ ಬೀರಿ ಕನ್ನಡ ನಾಡೆಂಬ ಪಾಲ್ಗಡಲಕೆ ಜೇನ್ನೊಡಲನೆಂದೆನಿಸಿ ಕನ್ನಡಿಗರಿಂ ಮನ್ನಣೆಯ ಪಡೆದಂಥ ಸತ್ಕವೀಂದ್ರ 4 ಉಸಿರಲೆನ್ನಯ ಮತಿಗೆ ವಶವಲ್ಲವೈನಿನ್ನ ರಸವತ್ಕವಿತಾ ಪ್ರತಿಭಾಚಾರ್ತುರ್ಯವಾ ಹೊಸಗನ್ನಡ ನುಡಿ ರಸದ ಮಾಧುರ್ಯಮಂ ರಸಿಕರಿಗೆ ನೀ ನೀಡು ಸತ್ಕವೀಂದ್ರಾ 5 ಕನ್ನಡ ನುಡಿ ಸಾರಿ ಕನ್ನಡಕುಪಕಾರಿ ಕನ್ನಡದ ಜಯಭೇರಿ ಹೊಡೆದ ನಗಾರಿ ಕನ್ನಡದ ಹೊಸ ಸಿರಿಯು ಕನ್ನಡ ರಸಝರಿಯು ನಿನ್ನಿಂದ ಲಭಿಸಿತೈಸತ್ಕವೀಂದ್ರಾ6 ನಿನ್ನಿಂದ ಕನ್ನಡದ ಮ್ಲಾನತೆಯು ದೂರಾಯಿತು ನಿನ್ನಿಂದ ನಮಕವನ ಕವಲೊಡೆದು ಸರ್ವತ್ರ ಉನ್ನತೆಯ ನೈದಿತೈ ಸತ್ಕವೀಂದ್ರಾ 7 ವೃತ್ತಪತ್ರಿಕೆಗಳಲಿ ಮತ್ತೆ ಸಮ್ಮೇಳನದಿ ನಿತ್ಯ ಓದುವ ಮನೆ ಶಾಲೆಯಲ್ಲಿ ಚಿತ್ತಪೂರ್ವಕ ನಿನ್ನ ಉತ್ತಮೋತ್ತಮ ಕವನ ಮತ್ತೆ ಪೇಳುವರು ಸತ್ಕವೀಂದ್ರಾ8 ನುಡಿಯಣ್ಣನೊಲುಮೆಯೋ | ನುಡಿಯೊಡೆಯನನುಗ್ರಹವೋ ಪಡೆದ ಮಾತೆಯ ಜೀತನೋಪಿ ಫಲವೋ ಕಡು ಸರಳ ಬಿಡಿವೃತ್ತ ಸಡಗರದಿ ರಚಿಸುತ್ತ ಪೊಡೆವಿಯೊಳು ಪಸರಿಸಿದ ಸತ್ಕವೀಂದ್ರಾ 9 ಪ್ರೇಮದಿಂದಲಿ ನಿನ್ನ ಪ್ರೇಮಿತಾರ್ಥವಗರೆದು ಶಾಮಸುಂದರವಿಠಲ ಸಲಹೋ ಎಂದು ನಾ ಮುದದಿ ಪ್ರಾರ್ಥಿಸುವೆ ನೀಮಾಡ್ವ ಉಪಕಾರ 10
--------------
ಶಾಮಸುಂದರ ವಿಠಲ
ಹರಿಮುಖಿ ಹರಿವಾಣಿ ಹರಿವೇಣಿ ಹರಿಣಾಕ್ಷಿಹರಿಮಧ್ಯೆ ಹರಿಗಮನೆ ಪ ಹರಿಯ ನಂದನ ಸಖನೆನಿಪ ಅಹೋಬಲದಹರಿಯ ನೀ ತಂದು ತೋರೆ ಅ ಎರವಿನ ತಲೆಯವನಣ್ಣನಯ್ಯನಪರಮ ಸಖನ ಸುತನಹಿರಿಯಣ್ಣನಯ್ಯನ ಮೊಮ್ಮನ ಮಾವನತಂದೊಟ್ಟಿದನ ಹಗೆಯಗುರುವಿನ ಮುಂದೆ ಮುಂದಿಹ ಬಾಹನಕಿರಿಯ ಮಗನ ರಾಣಿಯದುರುಳತನದಿ ಸೆಳೆದುಕೊಂಡನ ಕೊಂದನತರಳೆ ನೀ ತಂದು ತೋರೆ 1 ಸೋಮನ ಜನಕನ ಸತಿಯ ಧರಿಸಿದನರೋಮ ಕೋಟಿಯೊಳಿಟ್ಟಹನಕಾಮಿನಿ ಸತಿಯ ಕಂದನ ತಮ್ಮಗೊಲಿದನಭಾಮೆ ನೀ ತಂದು ತೋರೆ 2 ಶ್ರುತಿಯನುದ್ಧರಿಸಿ ಭೂಮಿಯ ಪೊತ್ತು ಅಡವಿಯಪಥದೊಳು ತಿರುಗಿದನ ಅತಿಶಯ ನರಹರಿ ವಾಮನ ರೂಪಿನಪಿತನ ಮೋಹದ ರಾಣಿಯ ಹತ ಮಾಡಿ ಸತ್ಯಕ್ಕೆ ನಿಂತು ನಗವ ಹೊತ್ತುಪತಿವ್ರತೆಯರ ಭಂಗಿಸಿಕ್ಷಿತಿಯೊಳು ರಾಹುತನಾದ ಬಾಡದಾದಿಕೇಶವನ ತಂದು ತೋರೆ3
--------------
ಕನಕದಾಸ
158ಭಳಿಭಳಿರೆ ಎನ್ನ ಸುಖವೆಂಬುದೇ ಸುಖವುಹಲಕಾಲಕಿದೆ ಇರಲಿ ಕಾವೇರಿ ರಂಗ ಪತಂದೆ ನೀನೇ ಕೃಷ್ಣ ತಾಯಿ ಇಂದಿರೆದೇವಿಮಂದಹಾಸನನೆನಗೆ ಹಿರಿಯಣ್ಣನು ||ಇಂದುಶ್ರೀ ಸರಸ್ವತೀದೇವಿ ಅತ್ತಿಗೆಯುಎಂದೆಂದಿಗೂ ವಾಯುದೇವರೇ ಗುರುವು 1ಗುರುಪತ್ನಿ ಶ್ರೀಭಾರತಿಯು ನೋಡೆ ಮೇಲಾಗಿಗರುಡಾಹಿ ರುದ್ರರಣ್ಣನ ಮಕ್ಕಳು ||ಸುರರುಸನಕದಿಗಳು ಪರಮಬಾಂಧವರೆನಗೆಸ್ಥಿರವಾದ ವೈಕುಂಠವೆನಗೆ ಮಂದಿರವು 2ನಿನ್ನ ಪಾದಾಂಬುಜವ ಭಜಿಸುವುದೆ ಸೌಭಾಗ್ಯನಿನ್ನ ನಿರ್ಮಾಲ್ಯಗಳೆ ಭೋಗದ್ರವ್ಯ ||ನಿನ್ನ ಕಥೆ ಕೇಳುವುದೆ ಮಂಗಳಸುವಾದ್ಯಗಳುನಿನ್ನಂಥ ಅರಸೆನಗೆ ಪುರಂದರವಿಠಲ 3
--------------
ಪುರಂದರದಾಸರು