ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ನಿತ್ಯಾನಂದ ಸದ್ಗುಣ ಸಾಂದ್ರ, ನಿನ್ನ |ಚರಣಕಮಲಂಗಳಿಗೆ ಶ್ರೀ ವರದೇಂದ್ರ ಪನಿನ್ನ ನಂಬಿದ ದಾಸರನವನಿಯೊಳು ಇಂಥ |ಬನ್ನಪಡಿಸುವುದುಚಿತವೆ ದಯಾಳು ||ಅನ್ಯರುಂಟೇ ನೀವಲ್ಲದುದ್ಧರಿಸಲು ಪ್ರ |ಪನ್ನ ಪೋಷಕ ಯನ್ನಬಿನ್ನಪಕೇಳು 1ನರರ ಪಾಡಿಸದಿರೊ ಯತಿರಾಯಾಹರಿ|ಸ್ಮರಣೆ ಮಾಡಲು ಮನಕೊಡುಜೀಯ||ಕರಕರೆ ಭಾವದೊಳಗೊಂದುಪಾಯ ಕಾಣೆ |ಹರಿಸಿ ಕ್ಲೇಶವಮೋದತೋರಿಸಯ್ಯ 2ಧರೆಗೆ ಪ್ರಸಿದ್ಧ ಪುಣ್ಯಾಲಯವಾಸ ಕಾಯೊ |ನೆರೆನಂಬಿದವರನ್ನ ರವಿಭಾಸ ||ಹರಿದಾಸರ ಕಾಡುವರನ್ನಾ ಭಾಸ ಮಾಡೊ |ಗುರುಪ್ರಾಣೇಶ ವಿಠಲನ್ನ ನಿಜದಾಸ 3
--------------
ಪ್ರಾಣೇಶದಾಸರು