ಇನ್ನಾದರೂ ಬುದ್ಧಿ ಬಾರದು ಜನಕೆ
ಕಣ್ಣಾರೆ ಕಂಡರು ಮರವುದು ಮನಕೆ ಪ.
ಉದರದಲ್ಲಿ ರಚಿಸುವರ್ಯಾರು ರೂಪಾ-
ತದಧೀನವಾಗಿ ಬರುವದೆಂದು ತಾಪ
ಮದ ಮೋಹಾದಿಗಳೆಂತು ಮಸುಕುವದೆಂತರಿ-
ತಿದ ನೋಡಿದರೆ ಕರ್ತ ತೋರುವ ಭೂಪ 1
ಕಾರಣ ಸಾಮಥ್ರ್ಯಯಿದ್ದರು ಕಾರ್ಯ
ತೋರದು ಕೆಲರಿಗೆ ತನ್ನಂತಾಗುವದು
ವಾರಿಧಿ ಶಯನನ ವಶವಾದರಿಂದಹಂ-
ಕಾರದಿಂದಲಿ ತನ್ನಿಂದಹದೆಂಬ ಮೋಹದಿ 2
ರಕ್ಷಕರಿಲ್ಲದ ಶಿಶು ಬದುಕುವುದು
ಲಕ್ಷ ಜನರ ಯತ್ನದಲಿ ಮತ್ತೊಂದಿರದು
ಲಕ್ಷ್ಮೀರಮಣ ವೆಂಕಟೇಶನ ಗತಿಯೆಂದಾ-
ಪೇಕ್ಷಿಸದಿರೆ ಕುಕ್ಷಿಯೊಳಗಿಟ್ಟು ಸಲಹುವಾ 3