ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮ ಪುರುಷ ಬಾರೋ-ಪಾವನ- ಚರಣಯುಗವ ತೋರೋ ಪ ನಿರುತವು ನಿನ್ನನೆ ನೆರೆನಂಬಿದೆ ಹರಿ ಅ.ಪ. ದಿಕ್ಕು ನೀನೆ ಎಂದು-ನಂಬಿದನಕ್ಕರಿಂದ ಬಂದು ಘನ ರಕ್ಕಸ ವೈರಿಯೆ 1 ಇಷ್ಟದೇವನಾರೋ-ಮನಸಾಭೀಷ್ಟವ ಕೊಡುಬಾರೋ ನೀಂದೃಷ್ಟಿಸು ನಮ್ಮನು2 ಕೇಣವ್ಯಾಕೋಹರಿಯೇ-ಕಣ್ಣಿಲಿ-ಕಾಣ ಬಾರೋ ಧೊರೆಯೇ ಸರಿ ಜಾಣತನದಿಹರಿ3 ವಾರಿಧಿಕೃತಶಯನ-ವಿಕಸಿತ-ವಾರಿಜದಳನಯನ ಕಂಸಾರಿ ಸಾರಿದೆ ನರಹರಿ4 ಧರೆಯೊಳಧಿಕವಾದ-ಶ್ರೀ ಪುಲಿಗಿರಿಯೊಳು ನೆಲೆಯಾದ ವರದವಿಠಲಧೊರೆ ವರದ ದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಶ್ರೀ ರಮಣ ಸರ್ವೇಶ ತ್ವಚ್ಚರ- ಣಾರವಿಂದವ ನಂಬಿರುವನಲಿ ಘೋರ ಭಾವವ ತಾಳ್ದ ಹೂಣನ ದೂರ ಓಡಿಸುವ ಭಾರ ನಿನ್ನದು ಪರಮ ಕರುಣಾ ವಾರುಧಿಯೆ ನೀನಲ್ಲದೆನಗೆ- ಸಾರಥಿ 1 ಸುಗುಣ ಸಜ್ಜನ ಶಿರೋಮಣಿ ಮಗುವು ಪ್ರಹ್ಲಾದನ ಪದಾಂಬುಜ ಯುಗವ ನೆನೆವುದನರಿತು ತತ್ಪಿತನೆಂದು ರೋಷದಲಿ ನೆಗೆದು ಬಂಡೆಯ ಝಳಪಿಸುತ ಬರೆ ಧಗಧಗಿಸಿ ಕಂಬದಲಿ ತೋರುತ ಬಗೆದಿ ದೈತ್ಯನ ಕರುಳ ಜಯ ಜಯ ವಿಜಯಸಾರಥಿ 2 ದೋಷಿ ದೈತ್ಯಾವೇಷದಿಂದಲಿ ವಾಸವಾದಿ ಸಮಸ್ತ ದಿವಿಜರ ಘಾಸಿಗೊಳಿಸಿದ ದಶಶಿರನ ತದ್ವಂಶಜರ ಸಹಿತ ನಾಶಗೈದು ನಿರಾಪರಾಧಿ ವಿ- ಭೀಷಣಗೆ ಸಾಮ್ರಾಜ್ಯವಿತ್ತ ಪ- ರೇಶ ಸೀತಾಕಾಂತ ಜಯ ಜಯ ವಿಜಯಸಾರಥಿ 3 ಪೂತನಾ ಬಕ ಶಕಟ ಧೇನುಕ ಪಾತಕಿ ಶಾರಿಷ್ಠ ಕೇಶಿಕಿ- ರಾತ ಕಂಸಾಂಬಷ್ಟ ಮುಷ್ಟಿಕ ಮಲ್ಲ ಚಾಣೂರ ಕಾತರದ ಶಿಶುಪಾಲ ಮುಖ್ಯರ ಘಾತಿಸಿದ ಗರುಡಧ್ವಜನೆ ಪುರು- ಹೂತ ಸುತನನು ಕಾಯ್ದೆ ಜಯ ಜಯ ವಿಜಯಸಾರಥಿ 4 ಅತ್ಯಧಿಕ ಕೋಪದಲಿ ಪ್ರಜ್ವಲಿ ಕಮಲ ಜೌಸ್ತ್ರವ ನುತ್ತರೆಯ ಗರ್ಭದಲಿ ಬಿಡದೆ ಸುತ್ತಿಕೊಂಡಿರಲು ಸತ್ಯಭಾಮಾಕಾಂತ ಕರುಣದಿ ತೆತ್ತಿಯನು ಕಾಪಾಡಿದಖಿಳೋ- ತ್ಪತ್ತಿರಕ್ಷಣಕಾರಿ ಜಯ ಜಯ ವಿಜಯಸಾರಥಿ 5 ಇರುವೆ ಮೊದಲು ಬ್ರಹ್ಮಾಂತರಾಗಿಹ ಸುರನರಾಸುರ ಮುಖ ಪ್ರಪಂಚ ದೊ- ಳಿರುವೆ ಸರ್ವೇಂದ್ರ್ರಿಯ ನಿಯಾಮಕ ಸರಿವ ಕೃತ್ಯವನು ಅರಿತು ಮಾಡಿಸಿ ನೋಡಿ ನಗುತಿಹ ಪರಮ ಮಂಗಳ ಚರಿತ ನೀ ಯನ- ಗಿರಲು ಭಯವ್ಯಾಕಿನ್ನು ಜಯ ಜಯ ವಿಜಯಸಾರಥಿ 6 ಆದರೀ ತೆರದಿಂದ ನಿನ್ನಯ ಪಾದ ಪಂಕಜಗಳನು ಪೊಗಳಿದ- ರಾದುದೊಂದಾಶ್ಚರ್ಯ ನೋಡಲಿ ಸುಜನರಾದವರು ಮೋದ ಭೋದಿ ದಯಾಬ್ಧಿ ವೆಂಕಟ ಭೂಧರೇಶನೆ ಸತತ ನಮ್ಮನು ಕಾದಿರುವೆ ಕಮಲೇಶ ಜಯ ಜಯ ವಿಜಯಸಾರಥಿ7
--------------
ತುಪಾಕಿ ವೆಂಕಟರಮಣಾಚಾರ್ಯ
ಜಗದುದ್ಧಾರಕ ತನ್ನ ಮಗನೆಂದು ಬಗೆದು |ನಿಗಮಗೋಚರನ ಆಡಿಸಿದಳು ಯಶೋದೆ ಪವಟದೆಲೆಯ ಮೇಲು ಸಂಪುಟದ ಮೇಲೊರಗಿ ಉಂ-ಗುಟವ ಪೀರುವನ-ಆಡಿಸಿದಳು 1ವಿಶ್ವತಶ್ಚಕ್ಷುವ ವಿಶ್ವತೋಮುಖನ |ವಿಶ್ವವ್ಯಾಪಕನ-ಆಡಿಸಿದಳು 2ಅಣೋರಣಿಯನ ಮಹತೋಮಹೀಯನ |ಗಣನೆಯಿಲ್ಲದವನ-ಆಡಿಸಿದಳು 3ನಿಗಮಕೆ ಸಿಲುಕದಅಗಣಿತಮಹಿಮನ |ಮಗುಗಳ ಮಾಣಿಕ್ಯನ-ಆಡಿಸಿದಳು 4ಎಲ್ಲರೊಳು ಭರಿತನಾಗಿ ಇಪ್ಪ ಲಕುಮಿಯ |ವಲ್ಲಭಪುರಂದರವಿಠಲನ-ಆಡಿಸಿದಳು5
--------------
ಪುರಂದರದಾಸರು