ಯಮುನೇ ದುರಿತೋಪಶಮನೇ ಪ
ಶರಣೆಂಬೆ ತವ ಪಾದಾಂಬುರುಹ ಯುಗಳಿಗೆ ದಿವಾ
ಕರತನಯೆ ಸಪ್ತಸಾಗರ ಭೇದಿನೀ
ಹರಿತೋಷ ಲಾಭ ಸುಂದರಿ ಸುಭಗೆ ನಿನ್ನ ಸಂ
ದರುಶನಕೆ ಬಂದೆ ಭಕ್ತರ ಪಾಲಿಪುದು ಜನನಿ 1
ಮಕರಾದಿ ಮಾಸದಲಿ ವಿಖನಸಾವರ್ತ ದೇ
ಶಕೆ ಬಂದು ವಿಜ್ಞಾನ ಭಕುತಿಯಿಂದಾ
ತ್ರಿಕರಣದ ಶುದ್ಧಿಯಲಿ ಸಕೃತ ಸ್ನಾನದ ಗೈಯೆ
ಸಕಲ ಸುಖವಿತ್ತು ದೇವಕೀಸುತನ ತೋರಿಸುವೆ 2
ಕನಕಗರ್ಭಾವರ್ತವೆನಿಪ ದೇಶದಲಿ ಸ
ಜ್ಜನರ ಪಾಲಿಪೆನೆಂಬ ಅನುರಾಗದಿ
ಪ್ರಣವಪಾದ್ಯಗೆ ವಿಮಲ ಮುನಿಯಂತೆ ನಿರುತ ಕುಂ
ಭಿಣಿಯೊಳಗೆ ಸರಸ್ವತಿ ದ್ಯುನದಿಯಂದದಿ ಮೆರೆದೆ 3 ಜಮದಗ್ನಿ ಮುಖ್ಯ ಸಂಯಮಿಗಳನುದಿನದಿ ಆ
ತಮ ತಮ್ಮೊಳಗೆ ರಮಾರಮಣ ದಾಮೋದರನ
ಸುಮಹಿಮೆಗಳನು ಪೊಗಳುತಮಿತ ಮೋದದಲಿಹರು 4
ಪಿಂಗಳಾಧಿಷ್ಠಿತೆ ಶುಭಾಂಗಿ ಸುಮನವನಿತ್ತು
ಕಂಗೊಳಿಸು ಎನ್ನಂತರಂಗದಲ್ಲಿ
ತುಂಗ ಸುಮಹಿಮ ಜಗನ್ನಾಥ ವಿಠಲನ ಸುಗು
ಣಂಗಳ ತುತಿಪುದಕೆ ಮಂಗಳ ಮತಿಯನೀಯೇ 5