ಒಟ್ಟು 74 ಕಡೆಗಳಲ್ಲಿ , 36 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ರುದ್ರದೇವರು) ಬಾರೋ ಬ್ಯಾಗನೆ ಗಿರಿಜಾರಮಣನೆ ಪ ನಾರದನುತ ಪಾದಾರವಿಂದ ತೋರಲು ಅ.ಪ ಭಕುತರ ವೃಂದಕೆ ಭಕುತಿ ಮುಕುತಿಯಿತ್ತು ಯುಕುತಿಲೆÉ ಪೊರೆಯುವ ಶಕುತಿಯ ತೋರಲು 1 ಭೂಮಿಯೊಳಿಹ ಸರ್ವ ಪಾಮರ ಜನರಿಗೆ ಕಾಮಿತಫಲವೆಲ್ಲ ಪ್ರೇಮದಿ ಈಯಲು 2 ಮಡದಿಯ ನುಡಿಗೆ ನಿನ್ನಡಿಗೆ ಬಂದಂಥ ಬಡವನ ಪೋದಂತೆ ತಡವ ಮಾಡದೆ ಈಗ 3 ಶಿರಿವತ್ಸಾಂಕಿತನೆಂದು ವರಶ್ರುತಿಗಳು ನಿನ್ನ ಕರೆದು ತ್ರಿಜಗದ ನರಪನೆ ಈಗಲೆ 4
--------------
ಸಿರಿವತ್ಸಾಂಕಿತರು
ಅಗಣಿತ ಬಂಟ ನೆನೆವರಿಗೆ ನಂಟಪ. ನಿನ್ನ ಬಲವತ್ತರ ಶಕ್ತಿಯಿಂದಲಿ ಕಲಿಯಬಣ್ಣಗೆಡಿಸಿದೆ ಪಿಡಿದು ಗದೆಯಿಂದ ಸದೆದುಇನ್ಯಾರು ನಿನಗೆ ಸರಿ ರಿಪುಕದಳಿಮತ್ತಕರಿಎನ್ನ ನೀ ರಕ್ಷಿಸಯ್ಯ ಪಿಡಿ ಬ್ಯಾಗ ಕಯ್ಯ 1 ಕುಂತಿಯ ಕುಮಾರ ಕೌರವಕುಲಕುಠಾರಅಂತರಂಗದಿ ಶುದ್ಧ ಎನ್ನ ಮನದೊಳಿದ್ದಸಂತಾಪಗಳ ಕೆಡಿಸೊ ಹರಿಭಕುತಿಯನು ಕೊಡಿಸೊ ಅ-ಚಿಂತ್ಯ ಬಲ ಶೌರ್ಯ ದುರ್ಜನಕುಮುದಸೂರ್ಯ 2 ದೇವ ನೀ ವಿಷದಲಡ್ಡುಗೆಯನುಂಡು ದಕ್ಕಿಸಿದ ಕಂಡುಭಾವಶುದ್ಧದಿ ಮರೆಹೊಕ್ಕೆ ದೊರೆಯೆ[ಆವಾವುದುಂಡರೆನಗೆ ದಕ್ಕುವಂತೆ ಮಾಡೊ]ದೇವ ನಿನಗೆಣೆಗಾಣೆ ಹರಿಪದಗಳಾಣೆ 3 ಮೋದ 4 ಯುಕುತಿಯಲಿ ಕೊಡಿಸೊ ವಾದಿಗಳೋಡಿಸೊದುರುಳದೈತ್ಯರವೈರಿ ಖಳಕುಲಕೆ ನೀ ಮಾರಿ ದು-ಸ್ತರಣ ಭವತಾರಿ ಸುಜನರಿಗುಪಕಾರಿಹರಿಭಕುತಿ ತೋರಿಸಿದಿ ಮುಕುತಿಪಥ ಸೇರಿಸಿದಿಪೊರೆಯಯ್ಯ ಹಯವದನ ಶರಣ ಇದು ಕರುಣ 5
--------------
ವಾದಿರಾಜ
ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಪ ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ಅ ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು1 ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು 2 ಭೃತ್ಯ ಅವ ಕ್ರೂರ ಕೃತ್ಯ 3 ಬಂಟ ಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ 4 ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು 5
--------------
ಕನಕದಾಸ
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಇಂದು ಕಂಡೆನು ಹರಿಯ | ಭವಹಾರಿಯ ಇಂದು ಕಂಡೆನು ಕಂಬದಿಂದಲಿ ಪ ಬಂದು ದೈತ್ಯನ ಕೊಂದು ಕಂದನಿ- ಗಂದು ಒಲಿದಾನಂದ ಸಾಂದ್ರನ ಇಂದಿರಾ ಮಂದಿರನ ವಂದ್ಯನ ಅ.ಪ. ಎಂದಿನಂದದಿ ಬರುತ | ಮನದಲಿ ಶ್ರೀ ಮು- ಕುಂದ ನಾಮವ ನೆನೆಯುತ ಮುಂದು ಮುಂದಕೆ ನಡೆಯುತ | ಆ- ನಂದದಿ ಹೋಗುತಲಿರೆ ಸುಂದರಿ ಶ್ರೀ ತುಲಸಿಗೊಲಿದು ಬೃಂದೆಯನು ಕರವಿಡಿದು ಪೊಳೆದು ಬಂದು ಗಂಡಕಿಯಿಂದ ಭಕ್ತರ ವೃಂದ ಪೊರೆಯಲು ಪಥದಿ ನಿಂದನ1 ಸುಕೃತ | ಬಂದೊದಗಿತೊ ಶ್ರೀಶನೆನಗೆ ದೊರೆತ | ಪ್ರಭಾವದೆ ದುರಿತ | ರಾಶಿಯು ಇನ್ನು ದಾಸರಾಯರ ಕುಲದಿ ಜನಿಸಿದ ಕೂಸೆನುತ ದೇಸಿಗರ ಸೇವೆಗೆ ಮೀಸಲಾಗಿಸಲೋಸುಗೆನ್ನ ಮ- ಹಾಶಯವ ಲೇಸೆನಿಸಿ ಬಂದವ 2 ವಿಕಳ ತತಿಗೆ ಬಾಧಕ | ಈತನ ನಾಮ ಪ್ರಕಟಿಸಲಿನ್ನು ಸುಖ | ಪಾಲಿಸುವನು ಯುಕುತಿಗೆಂದಿಗು ನಿಲುಕ | ಸುಕೃತರಿಂದ ಭಕುತಿ ಸೇವೆಯನೊಂದೆ ಕೊಳ್ಳುವ ಭಕುತಿ ಮುಕುತಿಗಳನ್ನು ಕೊಡುವ ಸಕಲ ಕಾಲದಿ ನಿಂತು ಸಲಹುವ ಲಕುಮಿಕಾಂತನ ಸರ್ವ ಶಕ್ತನ 3
--------------
ಲಕ್ಷ್ಮೀನಾರಯಣರಾಯರು
ಈತನೆ ಕಾಣಿರೊ ಮಧ್ವಮುನಿ ಪ. ಪರಿಪರಿ ಶ್ರುತಿಗಳೆಂಬ ಗುಹೆಗಳಲಿ ಕೇ-ಸರಿಯಂತೆ ಚರಿಸುತ್ತಹರಿಯೆ ಸರ್ವೋತ್ತಮನೆಂಬ ಘೋಷಗಳಿಂದದುರುಳ ವಾದಿಗಳೆಂಬ ನರಿಗಳೋಡಿಸಿದಾತ 1 ಸಕಲಾಗಮಗಳೆಂಬ ಶರಧಿಯೊಳಗೆಯುಕುತಿಯಿಂದಲಿ ಮಥಿಸಿಅಕಳಂಕ ಶ್ರೀಹರಿಯೆಂಬ ರತ್ನವ ಕಂಡುಮಕುಟದೊಳಿಟ್ಟು ಲೋಕದಿ ಮೆರೆಸಿದಾತ 2 ವೇದಸಾರವೆಂಬ ಈಶತತ್ವವಾದಸುಧೆಯ ಕಲ್ಪಿಸಿಕೊಂಡುಆದಿಮೂರುತಿ ಶ್ರೀ ಹಯವದನನ ದಿವ್ಯಪಾದ ಸೇವಕನಾದ ಮಧ್ವಮುನಿಯೆಂಬಾತ 3
--------------
ವಾದಿರಾಜ
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ ಪ ನಗೆಮೊಗದ ನತಜನ ಬಂಧು ಬಾಬಾರೆನ್ನ ಬಿ - ಟ್ಟಗಲದಲೆ ಮನ ಮಂದಿರದೊಳಿರು ಮುನ್ನಾದರು ಸುಪ್ರಸನ್ನ ಮುಂದೆ ಗತಿ ಏನಯ್ಯ ಮುಕುತರ ಹಿಂದುಳಿದವನಲ್ಲದಲೆ ತನು ಸಂ - ಬಂಧಿಗಳ ವಶನಾಗಿ ದುರ್ವಿಷ - ಯಾಂಧಕಾರದಿ ಮುಳುಗಿದೆನೊ ನಾ ಅ.ಪ. ಹಲವು ಜನ್ಮದ ನೋವಾ ನಾ ಹೇಳಿಕೊಳಲೇನೆಲವೊ ದೇವರ ದೇವಾ ನೀ - ನಲ್ಲದಲೆ ಭೂವಲಯದೊಳಿಗಿನ್ನಾವಾ ನಂಬಿದರ ಕಾವ ಸುಲಭರೊಳಗತಿ ಸುಲಭನೆಂಬುವ ಅಲವಬೋಧಮತಾನುಗರು ಎನ - ಗೊಲಿದು ಪೇಳಲು ಕೇಳಿ ನಿಶ್ಚಂ - ಚಲದಿ ನಿನ್ನನೆ ಧೇನಿಸುವೆ ನಾ ಕಲುಷ ಸಂಸ್ಕಾರಗಳ ವಶದಿಂ ಹೊಲಬುಗಾಣದೆ ಹರುಷಗುಂದುವೆ ಹೊಲೆ ಮನದ ಹರಿದಾಟ ತಪ್ಪಿಸಿ ನೆಲೆಗೆ ನಿಲ್ಲಿಸದಿರ್ದ ಬಳಿಕಿನ್ನೆಂದು 1 ಭಾರತೀಪತಿಪ್ರೀಯಾ ಎಂದೆಂದು ಭಕುತರ ಭಾರ ನಿನ್ನದೊ ಜೀಯಾ ಜಗವರಿಯೆ ಕರುಣಾ - ವಾರಿಧಿಯೆ ಪಿಡಿ ಕೈಯ್ಯಾ ಫಣಿರಾಜಶಯ್ಯಾ ತಾರಕನು ನೀನೆಂದು ತಿಳಿಯದ ಕಾರಣದಿ ಸುಖ ದುಃಖಮಯ ಸಂ - ಸಾರ ದುಸ್ತರ ಶರಧಿಯೊಳು ನಾ ಪಾರಗಾಣದೆ ಪರಿದು ಪೋಪೆನೊ ದೂರನೋಳ್ಪದು ಧರ್ಮವಲ್ಲವೊ ದ್ವಾರಕಾಪುರನಿಲಯ ಪರಮೋ - ದಾರ ತನುವೆಂದೆನ್ನ ಪಾಲಿಗೆ ಬಾರದಲ್ಲದೆ ಭವವಿಮೋಚನ 2 ವಿಕಸನಾರ್ಚಿತಪಾದ ವಿಶ್ವೇಶ ಜನ್ಮಾ - ದ್ಯಖಿಲ ಕಾರಣನಾದ ನಿರ್ದೋಷ ಸತ್ಯಾ - ಸುಖಗುಣಾರ್ಣವ ಶ್ರೀದವಿಠಲಪ್ರಸೀದ ಸಕಲ ಕ್ರಿಯ ಯೋಗಗಳು ತನು ಬಂ- ಧಕವು ನಿನಗೊಪ್ಪಿಸದಿರಲು ಎನೆ ನಿಖಿಳ ಜೀವರ ಭಿನ್ನ ನಿನ್ನಯ ಯುಕುತಿಗೆ ನಮೊ ಎಂಬೆನಲ್ಲದೆ ಯುಕುತ ಯುಕ್ತಿಗಳೊಂದರಿಯದ - ರ್ಭಕನ ಬಿನ್ನಪ ಸಲಿಸಿ ನವವಿಧ ಭಕುತಿ ಭಾಗ್ಯವ ಕೊಟ್ಟು ತವ ಸೇ - ವಕರ ಸೇವಕನೆನಿಸದಿರ್ದೊಡೆ 3
--------------
ಶ್ರೀದವಿಠಲರು
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನಲ್ಲಿ ಅವಗುಣ ಶತಸಾವಿರವಿರೆ | ಅನ್ಯರ ಕರೆದಾನು ನಡತೆ ಇದೇನೆಂಬೆ ಪ ವೇದವನೋದಿದೆ ಪರರಿ | ಗಾದÀರಿಸಿ ಮುಕುತಿಗೆ | ಹಾದರಹಳು ನಾರಿ | ಮಾದಿಗÀನ ಪೋದಂತೆ 1 ಧನದಾಸೆಯಿಂದ ಸಾಧನವಾಗದೆಂದು | ಜನರಿಗೆ ಉಪದೇಶವನು ಮಾಡುವೆ | ತೃಣ ಹತ್ತದಿದ್ದ | ವಧನರಾಶಿ ಕದ್ದಂತೆ2 ರಸನೇಂದ್ರಿಯಗಳ ಬಂ | ಧಿಸಬೇಕೆಂದು ನಾನು | ಉಸುರುವೆ ಅಲ್ಲಲ್ಲಿ ಕುಶಲನಾಗಿ | ಅಮೃತ | ರಸವಲ್ಲೆನೆಂದಾವ ಮುಸುರಿಯ ಮೆದ್ದಂತೆ 3 ಒಡಿವೆ ವಸ್ತುಗಳು ಸಂಗಡ ಬಾರವು ಮಮತೆ | ಬಿಡು ಸಂಸಾರವಿದು ಕಡಿಗೆ ಭವದ | ಮಡವು ಸಿದ್ಧವೆಂದು ನುಡಿವೆನೊ ಪರರಿಗೆ | ಯಡಹಿಯೊ ಎಂದಾವ ಗಿಡನೇರಿ ಬಿದ್ದಂತೆ 4 ಭಕುತಿ ಕೂಡಿದ ವಿರಕುತಿ ಲೇಶವಿಲ್ಲಾ | ಯುಕುತಿ ಬಾಯಲಿ ನಾರಕಕೆ ಸಾಧನಾ | ಲಕುಮಿವಲ್ಲಭ ನಮ್ಮ ವಿಜಯವಿಠ್ಠಲ ನಿನ್ನ ಅ | ರ್ಚಕನಾಗಿ ಬದುಕತಕ್ಕದ್ದು ಮಾರ್ಗವ ತೋರೊ 5
--------------
ವಿಜಯದಾಸ
ಏನಿದು ಚಿತ್ರ ಎಲೋ ಕಂಜನೇತ್ರ ಪ ದೀನನು ನಾನೆಂದು ದಿನ ದಿನ ಮೊರೆಯಿಡೆ ನೀನು ಮಾಡಿದ ಕರ್ಮವೆಂದು ತಪ್ಪಿಸಿಕೊಂಬ ಅ.ಪ ಮಾನಸದಲಿ ಸಾಕ್ಷಿಯಾಗಿ ನೀನಿಲ್ಲವೇ 1 ಯುಕುತಿ ಮಾತು ಇದಲ್ಲ ವೇದಶಾಸ್ತ್ರ ಪ್ರಮಾಣ2 ಸತ್ಯ ಸಂಕಲ್ಪನೆಂದು ಪೇಳುವರೆಲ್ಲರು ಭೃತ್ಯರ ಸಲಹದ ಪ್ರಭುತ್ವವೇತಕೆ ನಿನಗೆ 3 ದೇವ ನಿನ್ನ ಚಿತ್ತವೋ ಎನ್ನ ಪುರಾಕೃತವೋ 4 ಕರಣಾಭಿಮಾನಿಗಳಿಗೊಡೆಯ ನೀನಲ್ಲವೇ 5 ಭಾವ ಕೊಡುವುದಕೆ ಬಡತನವೆ ನಿನಗೆ 6 ನೀನೆ ಸರ್ವ ಸ್ವತಂತ್ರ ಗುರುರಾಮ ವಿಠಲ 7
--------------
ಗುರುರಾಮವಿಠಲ
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು