ಜಯಜಯವೆಂದು ಶರಣೆನ್ನಿ ಹನುಮಯ್ಯಗ |
ಜಯ ಭೀಮಶೇನಾನಂದ ತೀರ್ಥರೇಯಗ ಪ
ಆದಿಲಿ ಅಂಜನಿ ಉದರದಲಿ ಬಂದಾ |
ಸಾದರ ರಘುಪತಿ ಸೇವೆಯಲಿ ನಿಂದಾ |
ಶ್ರೀದೇವಿ ಸುದ್ದಿ ಶರಧಿಯ ದಾಟಿ ತಂದಾ |
ಭೇದಿಸಿ ರಾವಣನಾ ದಳವೆಲ್ಲಾ ಕೊಂದಾ 1
ತರಿ ತರಿದೊಟ್ಟದಾ ಕುರುಕುಲಾನ್ವಯ ವೃಂದಾ
ಅರಸ ಯುಧೀಷ್ಠಿರನಾ ವಾಸಿಯ ತಂದಾ2
ಮೂರನೇ ರೂಪದಿ ಮಧ್ಯಗೇಹದಿ ಬಂದಾ
ನೆರೆ ಬಾದರಾಯಣನಾಜ್ಞೆಲಿ ನಿಂದಾ
ವರವರದ್ಹೇಳಿದ ತತ್ಪಾರ್ಥ ಛಂದಾ
ಗುರುವರ ಮಹಿಪತಿ ನಂದನ ಮನಕಾನಂದಾ3