ಒಟ್ಟು 509 ಕಡೆಗಳಲ್ಲಿ , 81 ದಾಸರು , 431 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೂಢನಾದ ಯೋಗಿಯ ಬಗೆಯಿದು | ಈ | ರೂಢಿಯೊಳು ಜನಕಿನ್ನು ಕಾಣಿಸದು ಪ ಮಾತುಗಳ ಆಡನು | ಮೌನಗಳ ಮಾಡನು | ನೀತಿ ಅನೀತಿಗಳೆಂಬುದ ನೋಡನು | ಯಾತರೊಳು ತನಗೆ ಸಂಪ್ರೀತಿಯೆಂಬುವದಿಲ್ಲ | ದಾತನಾಗಿನ್ನಾತ ಚರಿಸುತಿಹನು 1 ವೇದಗಳ ನೋಡನು ಶಾಸ್ತ್ರಗಳ ಕೇಳನು | ನಾದ ಬಿಂದು ಕಳಾತೀತ ತಾನು | ಸಾಧು ಸಂತರ ಸಂಗದೊಳು ಬೋಧದಲಿ ನಲಿವುತಲಿ | ಆದ್ಯನಾದಿ ತಾನೆಂದು ತಿಳಿದಿಹನು 2 ವಂದಿಸಲು ಹಿಗ್ಗನು | ನಿಂದಿಸಲು ತಗ್ಗನು | ಬಂದದಕೆ ತಾ ಹಿಂದು ಮುಂದಾಗನು | ತಂದೆ ಭವತಾರಕನ ಚರಣಾರವಿಂದವನು | ಹೊಂದಿ ಪೂರ್ಣಾನಂದದೊಳಗಿಹನು 3
--------------
ಭಾವತರಕರು
ನಾದವನಾಲಿಪ ಯೋಗಿಯ ನೋಡಿ | ಕಕುಲ ಮಾಡಬ್ಯಾಡಿ ಪ ಪಂಚಭೂತದ ಸಂಚಿತ ಬಿಟ್ಟು | ಪಂಚಾದಶಿಯಲಿ ಮನವಿಟ್ಟು 1 ಪರಮ ವೈರಾಗ್ಯದ ಭೋಗಿ | ಪರಶಿವ ರೂಪನೆ ತಾನಾಗಿ 2 ಇಹಪರವೆರಡೆಂಬುದ ಕಡಿದು | ಹಂಸೋಹಂ ಎಂಬನ ಪಿಡಿದು 3 ಭವ ಭಯ ಸಂಶಯಗಳನೆ ಜರಿದು |ಭವತಾರಕನಂಘ್ರಿಯ ಬೆರೆದು 4 ತಾರಕ ಮಂತ್ರವ ಜಪಿಸುತಲಿರಲು | ಅರಿತು ಜ್ಞಾನಿಯಾಗುವನೆನಲು 5
--------------
ಭಾವತರಕರು
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ಸಿದ್ಧಗುರುತ್ರಿಪುರಾಂತಕ
(2) ರಾಮಾನುಜರು ಬೇಡಿಕೊಂಬುವೆನು ನಿಮ್ಮ ರಾಮಾನುಜರೆ ಬೇಡಿಕೊಂಬುವೆನು ನಿಮ್ಮಾ ಪ ಪಾಡಿ ಹಿಗ್ಗುವ ಸುಖವ ಸಂತತ ಕಮಲ ಮಧ್ಯದೊ ಳಾಡುತೆನ್ನನು ರಕ್ಷಿಸೆನುತಲಿ ಅ.ಪ ಚರಮ ಶ್ಲೋಕವ ಬೋಧಿಸಿ ಅಷ್ಟಾಕ್ಷರಿಯೊ ಳಿರುವ ಗೋಪ್ಯವ ತೋರಿಸಿ ಗೈವುತ ಪ್ರಣವ ಶಬ್ದದಿ ಬೆರಸಿ ನಿನ್ನನೆ ಭಜಿಸಿ ಸ್ಮರಿಸುತ ಪರಮನಾಗುವ ಮತಿಯ ತ್ವರಿತದಿ 1 ಅಷ್ಟಮದಗಳು ಎನ್ನನೂ ಬಂಧಿಸಿ ಮಾಯಾ ಅಷ್ಟಪಾಶದಿ ನೊಂದೆನೊ ದುಷ್ಟಕಾಮಾದಿಗಳ ಭ್ರಾಂತಿಯು ಕಟ್ಟ ನರಕದಿ ಕೆಡಹಿ ಸುಡುತಿದೆ ಭ್ರಷ್ಟಗುಣಗಳ ದೂರಸೇರಿಸಿ ಶ್ರೇಷ್ಠಮುಕ್ತಿಯ ಪಡೆವ ವಿರತಿಯ 2 ಜ್ಯೋತಿ ಜ್ಯೋತಿಯ ನಿಲ್ಲಿಸಿ ಹೂಬಳ್ಳಿಯೊಳ್ ಜ್ಯೋತಿನೋಡು ಪೂಜಿಸಿ ಮಾತೆ ಮಾತುಳ ಪಾಲಕಾನುಜ- ಸತಿ ಸುತ ಬಂಧು ಮಿತ್ರ ವ್ರಾತ ಸಂಗಡಬಂಧಬಿಟ್ಟು ಪು ನೀತನಾಗಲಿಬೇಕು ಎನುತಲಿ 3 ಯಾದವಾದ್ರಿಯ ವಾಸನೆ ಭಕ್ತರನೆಲ್ಲ- ಮೋದದಿಂದಲಿಯಾಳ್ವನೇ ಮೇದಿನೀಮಹದೇವಪುರವರ ನಾದಶ್ರೀಗುರುರಂಗ ನಿನ್ನ ಸು- ಪಾದನಂಬಿದ ರಂಗದಾಸನ ಪರಮಯೋಗಿಯು ಎನ್ನಿಸೆನುತಲಿ 4 ಅಷ್ಟಾಕ್ಷರದ್ವಯದರ್ಥದಿ ನಿಷ್ಠಾಪರನಾಗಿ ಮನದಿ ನಿರುತಂ ಜಪಿಸಲ್ ಇಷ್ಟಾರ್ಥವು ಸಿದ್ಧಿಸುತಂ ಅಷ್ಟಮನೋಳ್ಬೆರದುನಿಲ್ವನಿದು ಸಿದ್ಧಾಂತಂ ಕಂದ
--------------
ರಂಗದಾಸರು
ಯೋಗಿ ಬಂದನೇ ಶಿವಯೋಗಿ |ಭೋಗ ಸುಖವ ತ್ಯಾಗ ಮಾಡಿ | ಆಗಮೋಕ್ತದಿಂದ ನಡಿವ ಪ ಪರ |ಬ್ರಹ್ಮ ತೋರಬೇಕೆಂದು 1 ನಿತ್ಯ ಸುಖವನು ನಿಲಿಸುವಂಥ 2 ಪಾದ | ಹೊಂದಿದವರಿಗೆಲ್ಲರಿಗೆ | ಪರಮಾ- | ನಂದ ಪದವಿಯ ತೋರಿ | ದಯಾಸಿಂಧು ಮತ್ರ್ಯದೊಳಗೆ 3
--------------
ಭಾವತರಕರು
ಹ್ಯಾಗೆ ಸದ್ಗತಿ ಆಗುವುದೆನಗೆ ಯೋಗಿಗಳ ಒಡೆಯ ಹರಿಯೆ ಈಗಾಗಲೆ ತಿಳಿಸಿ ಸಾಗುವಂತೆ ಸಾಧನ ಬ್ಯಾಗ ಮಾಡಿಕೊ ನಾಗತಲ್ಪನೆ ಪ ಮೇಲಧಿಕಾರಿಯು ಕೊಂಡಾಡಲು ಕುಲ ಉದ್ಧಾರವೆಂದು ಹಿಗ್ಗುವೆ ಕಲುಷ ಕಂಡಾಗÀಲು ಅಳುತ ಧರೆಗೆ ಇಳಿವೆನೊ ನಾನು 1 ಶಿಕ್ಷ ರಕ್ಷ ಸಧ್ಯಕ್ಷ ಲಕ್ಷ್ಮೀಪತಿಯೆಂದರಿಯದೆ ಕುಕ್ಷಿ ಭರಣಕೆ ಯೋಚಿಸುವೆ ಪಕ್ಷಿವಾಹನನಲ್ಲಿ ಲಕ್ಷ್ಯವಿಲ್ಲದೆ ಬಕ ಪಕ್ಷಿಯಂತೆ ಧೇನಿಸುವೆ ನಾ 2 ನಷ್ಟ ದೇಹ ಪುಷ್ಟಿಗಾಗಿ ದುಷ್ಟರಿಗೆ ಎನ್ನ ಕಷ್ಟ ಪೇಳಲು ದೃಷ್ಟಿಸಿ ನೋಡಿದರೆ ಬೆಟ್ಟ ಮೇಲಿದ್ದಂತೆ ಕಂ ಗೆಟ್ಟು ಮೊರೆಯಿಸುವೆ 3 ಒಂದು ಲಾಭವಿಲ್ಲದೆ ಮಂದಿ ನೆರಹಿ ಸಂದಿಗೊಂದ್ಹರಿದ್ಯಾಡಿ ಸಂದು ಹೋಯಿತÀು ಹೊತ್ತಯೆಂದು ಆಸ್ಥಾನಕೆ ಮಿಂದು ಬ್ಯಾಗನ್ನ ತಿಂದೋಡುವೆನೊ 4 ಮಾನನೀರ ಚೆಲ್ವಿಕೆಗೆ ಮನಸೋತು ನೆನೆನೆನೆದು ಬೆಂಡಾಗುವೆ ಹೀನರಾ ಕೂಡಿಕೊಂಡು ದೀನರಾ ಬಾಯಿಬಡಿದು ಧನ ಸಾಧಿಸಿದ್ದು ಕೊನೆಗೆ ಸಾಯುವ ನರಗೆ 5 ಉದಯದಲೆದ್ದು ನದಿಗೆ ಪೋಗಿ ನಾ ಮುದದಿಂದ ಮಿಂದು ಉದಯಾರ್ಕಗಘ್ಯ ಒದಗೀಸಿ ಕೊಡದ ಮದಡನಾಗಿದ್ದವಗೆ 6 ವರ ಸುದರ್ಶನ ಗ್ರಂಥಗಳ ಗುರುಗಳಲ್ಲಿ ನಿರುತ ಪಠಿಸಲಿಲ್ಲ ಭಾಗವತ ಪುರಾಣಗಳು ಪರಮ ಭಕ್ತೀಲಿ ಕೇಳಲಿಲ್ಲ 7 ಭಾವ ಶುದ್ಧಿಯಿಂದ ದೇವತಾರ್ಚನೆ ಆವ ಕಾಲಕು ಮಾಡಲಿಲ್ಲ ಪವನಸಖ ಮಖದೊಳಾಹುತಿನಿತ್ತು ಕವಿಗಳಿಗನ್ನ ಕೊಟ್ಟವನಲ್ಲ 8 ಧ್ಯಾನ ಮಾಡುವುದನ್ನು ಮೌನಿಗಳ ಕೇಳಿ ಮನನ ಮಾಡಲಿಲ್ಲ ಪಾದ ಕನಸಿನಲಾದರೂ ಒಮ್ಮೆ ನೋಡಲಿಲ್ಲ 9
--------------
ವಿಜಯ ರಾಮಚಂದ್ರವಿಠಲ
(ಅ) ತಂದೆ ಮುದ್ದುಮೋಹನ ದಾಸರೆನಿಸಿದ ತಂದೆ ಶ್ರೀ ಗುರುವರ್ಯರೆ ಪ. ತಂದಿರಿ ಜ್ಞಾನಾಂಬುಧಿ ಮಧ್ಯದೊಳಗೀಗ ತಂದಿಹ ಎನ್ನ ದುಷ್ಕರ್ಮವ ತರಿಯುತ ಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಮಂದಮತಿಯಿಂದ ಜಗದೊಳಗೆ ಕುಂದುಗಳೆಣಿಸದೆ ಬಂದು ದರ್ಶನವಿತ್ತು ಕಂದನಂದದಿ ದಯದಿಂದ ಪಾಲಿಸಿದಿರಿ 1 ಯೋಗಿಗಳೆನಿಸಿದ ಭೋಗಿವರರೆ ಶಿರ ಬಾಗಿ ನಮಿಸುವೆ ಈಗ ನಾನು ನಾಗಶಯನನ ತೋರಿ ಬೇಗ ಪಾಲಿಸಿರಿ ಪೋಗುತಿದೆ ದಿನ ಜಾಗು ಮಾಡದೆ ಮುನ್ನ 2 ನರಸಿಂಹನನು ಹೃತ್ಸರಸಿಜದಲಿ ಕಾಂಬ ಗುರುವರ ನಿಮ್ಮಂಘ್ರಿಗೆರಗುವೆನು ಪರಿಪರಿ ತಾಪವ ಹರಿಸಿ ಎನ್ನ ಮನ ಹರಿಗುರು ಚರಣದೊಳಿರುವಂತೆ ಕೃಪೆಗೈದೆ 3 ಪರಮ ಗುರುಗಳಿಗೆ ಪ್ರಿಯರಾಗಿ ಇಳೆಯೊಳು ಚರಿಸಿ ಸುಜನರ ಪಾವನಗೈದು ಪರಮ ಗುಪ್ತದಿಂದ ಹರಿಯ ಧ್ಯಾನಿಸುತ್ತ ಧರೆಯೊಳಗಿರುವ ಪಾಮರರ ಮೋಹಿಸುವಂಥ 4 ಕಷ್ಟವ ಬಿಡಿಸಿರಿ ತುಷ್ಟರಾಗಿ ನೀವೆ ಇಷ್ಟು ಪರಿಯಿಂದ ಬೇಡಿಕೊಂಬೆ ಇಷ್ಟದೈವರು ನೀವೆ ಶ್ರೇಷ್ಠ ಶ್ರೀ ಗೋಪಾಲ ಕೃಷ್ಣವಿಠ್ಠಲನ ಉತ್ಕøಷ್ಟದಿ ತೋರಿರಿ5
--------------
ಅಂಬಾಬಾಯಿ
ಅ ಸಾಗಿ ಬಾರೋ ಗುರುರಾಘವೇಂದ್ರರಾಯ | ವರ ಸತ್ಕಲುಗೇಯ ಪ ಕೂಗುತ ಕರೆಯುವ ಭಾಗವತರ ಮೊರೆಯ ಲಾಲಿಸೋ ಮುನಿವರ್ಯ ಅ.ಪ ಪಾವನಘನ ವೃಂದಾವನ ಮಂದಿರನೆ ಸದ್ಗುಣ ಬಂಧುರನೇ ಪಾವಮಾನಿಮತಶರಧಿ ಚಂದಿರನೇ ಧರಸಮ ಕಂದರನೇ ಛಾವಣಿಪುರ ಸುಜನಾವಳಿ ಕೋರಿಕೆಯ ಗರೆಯಲು ಶುಭಕಾಯ 1 ಶರಣಜನರು ಮೈಮರೆದು ಕರೆಯಲಾಗಿ ನಿಲ್ಲದೆ ವರಯೋಗಿ | ಭರದಿ ಬಂದು ಕರಪಿಡಿಯುವ ಧೊರೆ ನೀನು ಎಂದರೀತೆವು ಸುರಧೇನು ಗತಿದಾಯಕ ನೀನೆಂದು ಭಜಿಪೆವು ದಯಾಸಿಂಧು 2 ಶಾಮಸುಂದರನ ಪ್ರೇಮವ ಪಡೆದಾತ ಜಗದೊಳು ಪ್ರಖ್ಯಾತ ನೇಮದಿ ಭಜಿಪರ ಕಾಮಿತ ಕೊಡುವಾತ ದೈಶಿಕ ಕುಲನಾಥ ಹೇಮಶಯ್ಯ ಸುಕುಮಾರ ಮಮತೆಯಿಂದ ಮಂತ್ರಾಲಯದಿಂದ 3
--------------
ಶಾಮಸುಂದರ ವಿಠಲ
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ಶ್ರೀ ಭೂಮಿದುರ್ಗ ಮತ್ತೇಭೇಂದ್ರಿಗಮನೆ ಸ್ವ ರ್ಣಾಭ ಗಾತ್ರೆ ಸುಚರಿತ್ರೆ | ಸುಚರಿತ್ರೆ ಶ್ರೀ ಪದ್ಮ ನಾಭನ್ನ ಜಾಯೆ ವರವೀಯೆ 1 232 ದರಹಸಿತವದನೆ ಸುಂದರಿ ಕಮಲ ಸದನೆ ನಿ ವಿಧಿ ವಿಧಿ ಮಾತೆ ಲೋಕಸುಂ ದರಿಯೆ ನೀ ನೋಡೆ ದಯಮಾಡೆ 2 233 ತ್ರಿಗುಣಾಭಿಮಾನಿ ಎನ್ನವ ಗುಣದ ರಾಶಿಗಳ ವರವೀಯೆ ನಿನ್ನ ಪಾದ ಯುಗಳಕ್ಕೆ ನಮಿಪೆ ಜಗದಂಬೆ 3 234 ಪ್ರಳಯ ಕಾಲದಲಿ ಪತಿ ಮಲಗ ಬೇಕೆನುತ ವಟ ದೆಲೆಯಾಗಿ ಹರಿಯ ಒಲಿಸಿದಿ | ಒಲಿಸಿದಿ ಜಗದ ಮಂ ಗಳ ದೇವಿ ನಮಗೆ ದಯವಾಗೆ 4 235 ತಂತು ಪಟದಂತೆ ಜಗದಂತರ್ಬಹಿರದಲ್ಲಿ ಕಾಂತಮೊಡಗೂಡಿ ನೆಲೆಸಿಪ್ಪೆ | ನೆಲೆಸಿಪ್ಪೆ ನೀನೆ ನ್ನಂತರಂಗದಲಿ ನೆಲೆಗೊಳ್ಳೆ 5 236 ಈಶಕೋಟಿ ಪ್ರವಿಷ್ಟೆ ಈಶ ಭಿನ್ನಳೆ ಸರ್ವ ದೋಷವರ್ಜಿತಳೆ ವರದೇಶ | ವರದೇಶ ಪತಿದೊಡನೆ ವಾಸವಾಗೆನ್ನ ಮನದಲ್ಲಿ 6 237 ಆನಂದಮಯಿ ಹರಿಗೆ ನಾನಾಭರಣವಾದೆ ಪಾನೀಯವಾದೆ ಪಟವಾದೆ | ಪಟವಾದೆ ಪಂಕಜ ಪಾಣಿ ನೀನೆಮಗೆ ದಯವಾಗೆ 7 238ಮಹದಾದಿ ತತ್ವಗಳ ವಹಿಸಿ ನಿನ್ನುದರದೊಳು ದ್ರುಹಿಣಾಂಡ ಪಡೆದೆ ಪತಿಯಿಂದ | ಪತಿಯಿಂದ ಶ್ರೀಲಕ್ಷ್ಮಿ ಮಹಮಹಿಮಳೆ ಎಮಗೆ ದಯವಾಗೆ 8 238 ಆವ ಬ್ರಹ್ಮಾದಿ ದೇವರೆಲ್ಲರು ತವ ಕೃ ಪಾವ ಲೋಕನದಿ ಕೃತಕೃತ್ಯ | ಕೃತಕೃತ್ಯರಾಗಿ ಹರಿ ದೇವಿ ನಾ ಬಯಸುವುದು ಅರಿದಲ್ಲ 9 240 ಪಕ್ಷೀಂದ್ರವಾಹನನ ವಕ್ಷಸ್ಥಳವಾಗಿ ಅಕ್ಷಯಜ್ಞಾನಿ ಸುಖಪೂರ್ಣೆ | ಸುಖಪೂರ್ಣೆ ಕಮಲದ ಳಾಕ್ಷಿ ನೋಡೆನ್ನ ದಯದಿಂದ 10 241 ಹಲವು ಮಾತ್ಯಾಕೆ ಶ್ರೀಲಲನೆ ಶ್ರೀಜಗನ್ನಾಥ ವಿ ಮನದಲ್ಲಿ ವಾಸವಾಗೆಲ್ಲ ಕಾಲದಲಿ ಅವಿಯೋಗಿ 11
--------------
ಜಗನ್ನಾಥದಾಸರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು