ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರದೇವರು ಪರಿ ವೈರಾಗ್ಯವು ವೀರ ವೈಷ್ಣವ ಭಕ್ತಾಗ್ರಣಿಯೆ ಪ ಮಾರಹರನೆ ಮನ್ಮಥನ ವೈರಿಯೆ ಮನ- ಸಾರ ಶ್ರೀರಾಮ ನಾಮವ ಜಪಿಸುವದಿದು ಅ,ಪ ಮುತ್ತು ಮಾಣಿಕ್ಯದ ಕಿರೀಟವು ಧರಿಸದೆ ನೆತ್ತಿಲಿ ಕೆಂಜೆಡೆ ಸುತ್ತಿಹುದು ಹಸ್ತದಿ ಶಂಖು ಚಕ್ರಗದೆ ಪದುಮವು ಬಿಟ್ಟು ಉತ್ತಮ ಡಮರು ತ್ರಿಶೂಲ ಪಿಡಿವುದಿದು 1 ನೊಸಲಲಿ ಕಸ್ತೂರಿ ತಿಲಕವನಿಡದಲೆ ಭಸುಮವ ಲೇಪಿಸುವುದು ತರವೆ ಕುಸುಮಲೋಚನೆ ಪ್ರಿಯ ಸಖನಾಗಿರುತಿರೆ ಎಸೆವ ಕಪಾಲ ಪಿಡಿದು ಬೇಡುವದಿದು 2 ದುಂಡು ಮುತ್ತಿನ ಹಾರ ಪದಕಗಳಿರುತಿರೆ ರುಂಡಮಾಲೆಯ ಕೊರಳೊಳು ತರವೆ ತಂಡ ತಂಡ ಪರಮಾನ್ನ ಭಕ್ಷಗಳಿರೆ ಉಂಡು ತೇಗದೇ ವಿಷಪಾನ ಮಾಡುವದಿದು3 ಭರ್ಜರಿ ಪೀತಾಂಬರ ಉಡುವುದು ಬಿಟ್ಟು ಕರಿಯ ಚರ್ಮನುಡುವುದು ತರವೆ ಪರಿ ರತ್ನಾಭರಣಗಳಿರುತಿರೆ ಉರಗಗಳಿಂದಲಂಕೃತನಾಗಿರುವದು 4 ಭೃತ್ಯರು ಸೇವೆಗೆ ಬೇಕಾದವರಿರೆ ಮತ್ತೆ ಪಿಶಾಚ ಗಣಗಳೇತಕೆ ಹಸ್ತಿ ತುರಗ ಪಲ್ಲಕ್ಕಿ ಪುಷ್ಪಕವಿರೆ ಎತ್ತನೇರಿ ಚರಿಸುವುದುಚಿತವೆ ಶಂಭೊ 5 ಸಿರದಲಿ ಗಂಗೆಯು ಸ್ಥಿರವಾಗಿರುತಿರೆ ಪರ್ವತರಾಜಕುವರಿಯೇತಕೆ ಅರಮನೆ ವಾಸಕೆ ಯೋಗ್ಯವಾಗಿರುತಿರೆ ಗಿರಿ ಕೈಲಾಸ ಪರ್ವತದಿ ವಾಸಿಸುವದು 6 ಭಕ್ತರು ಭಕುತಿಲಿ ಪಾಡಿ ಕೊಂಡಾಡಲು ನೃತ್ಯವ ಮಾಡುತ ಹರುಷದಲಿ ಕರ್ತೃ ಶ್ರೀ ಕಮಲನಾಭ ವಿಠ್ಠಲನೆಂದು ಪತ್ನಿಗೆ ಉಪದೇಶ ಮಾಡುವದಿದು 7
--------------
ನಿಡಗುರುಕಿ ಜೀವೂಬಾಯಿ