ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದನಂದನ ಪದ್ಮಾನಂದನ ವಂದ್ಯನೇ| ತಂದೆ ಮಹಿಪತಿಸುತ ಪ್ರಭುವೇ ಮುಕುಂದ ಕೃಷ್ಣ ಪ ಸಿರಿಯಾ ಸೌಖ್ಯ ದಿಂದುಬ್ಬಿ ಮದದಿಂದ| ಸರಿಯನಗಾರು ಇಲ್ಲೆಂಬ ತಾಮಸದಿಂದ| ಮರದೆನೋ ಹರಿನಿಮ್ಮಾ ಸ್ಮರಣೆಯಾ ಮರವಿಂದ| ತಿರುಗಿ ದಣಿದೆ ನಾನು ನಾನಾಯೋನಿಗಳಿಂದ| ತರಹರಿಸಲಾರೆ ತಾಪತ್ರಯದುಃಖಗಳಿಂದ| ಶಿರಿಕೃಷ್ಣ ಸಲಹೆನ್ನ ಪರಮ ಕರುಣದಿ|1 ಮುನ್ನ ಮಾಡಿದಪರಾಧ ಸಕಲವ ನೀನು ಕ್ಷಮೆಯನುಮಾಡಿ ಚಿನ್ನ ಕಿಂಕರನೆಂದು ದಯದಲಿ ಅಭಯಕರವನು ನೀಡಿ ನಿನ್ನ ಸ್ಮರಣೆಯಕೊಟ್ಟು ಕರುಣ ಕಟಾಕ್ಷದಿಂದಲಿ ನೋಡಿ ಚಿನ್ನ ಶ್ರೀಕೃಷ್ಣ ಭವದಿಂದುದ್ಧರಿಸಯ್ಯಾ ತಾರಿಸಯ್ಯಾ ನೀನು2 ಪತಿತ ಪಾವನ ನೆಂಬಾಬಿರುದು ಸಾರುತಿದೆ ಗತಿಗೆಟ್ಟ ಅಜಮಿಳನ ತಾರಿಸಲಿಲ್ಲವೇ ಪಾಷಾಣ ಉದ್ದರಿಸಲಿಲ್ಲವೇ ಕ್ಷಿತಿಯೊಳೆನ್ನ ತಾರಿಸುವದೊಂದರಿದೇ ಶ್ರೀಕೃಷ್ಣಾ3 ಕರಿರಾಜನಂದದಿ ಹರಿತವಸ್ಮರಣೆ ಮಾಡಲರಿಯೇ ಶರಣ ಪ್ರಲ್ಹಾದನಂತೆ ಕರೆಯ ಬರಿಯೇ ನರೆನಂತೆ ನಾನಿನ್ನ ವಲಿಸಿಕೊಳ್ಳಲರಿಯೇ ತರಳ ಧ್ರುವನಂತೆ ಧ್ಯಾನಿಸಲರಿಯೇ ಶಿರಿಕೃಷ್ಣಾ ಗತಿಯಂಬದುವಿನಾ ಮತ್ತೊಂದರಿಯೇ 4 ನಿನ್ನ ನಾಮವನು ಕೊಂಡಾಡುವೆ ಪೊಗಳುವೆ ಚನ್ನಾಗ್ಯನುದಿನದಲನವರತಾ ತನ್ನಯಕರುವಿಗೆ ಕರುಣಿಪಗೋಪಂತೆ ಎನ್ನ ನೀಸಲಹುದು ಶಿರಿಕೃಷ್ಣರೇಯಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾರಾಯಣ ನಿನ್ನ ನಂಬಿದೆ ಲಕ್ಷ್ಮೀ-ನಾರಾಯಣ ನಿನ್ಹೊರತು ಪೊರೆವ ದೈವವೆಲ್ಲಿದೆ ಪ ನಾ ಮೀರಿ ದುಷ್ಕರ್ಮವ ಮಾಡಿದೆಅಪಾರಮಹಿಮ ದಯಾನಿಧೇ ಅ.ಪ ನಾನಾ ಯೋನಿಗಳಿಂದ ಬಂದೆನೋಮಾನತಾಳಲಾರದೆ ಬಲು ನೊಂದೆನೋದೀನರಕ್ಷಕ ಎನ್ನ ಗತಿ ಮುಂದೇನೋಮಾನದಿಂದಲಿ ಪಾಲಿಸುವಂಥ ದೊರೆ ನೀನೋ1 ದಾಸರ ಮನ ಉಲ್ಲಾಸನೆಶ್ರೀಶ ಆಶ್ರಿತ ಜನರ ಪೋಷನೆಸಾಸಿರ ಅನಂತಮಹಿಮನೆಕ್ಲೇಶನಾಶ ಮಾಡಿಸೋ ಶ್ರೀನಿವಾಸನೆ 2 ರಂಗನಗರ ಉತ್ತುಂಗನೆಗಂಗಾಜನಕ ಗರುಡತುರಂಗನೆ ಉ-ತ್ತುಂಗ ಗುಣಗಳಂತರಂಗನೆ ಅ-ನಂಗನ ಪೆತ್ತ ರಂಗವಿಠಲನೆ 3
--------------
ಶ್ರೀಪಾದರಾಜರು