ಒಟ್ಟು 48 ಕಡೆಗಳಲ್ಲಿ , 18 ದಾಸರು , 48 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಿಯಾತಕೋ ಈ ಭವದೊಳು | ನೊಂದಿಯಾತಕೋ ನೀನೊಂದನರಿಯೆ || ಬಂದಿಯಾತನು ನೀ ಮತಿಮಂದನಾಗದೆ | ಗತಿ ಮುಂದೇನೆಂದು ತಿಳಿಯದಲೆ ಪ ನಾ ನಾ ಎನುತಲಿ ನಾನಾ ಯೋನಿಯೊಳು | ಜನಿಸಿ ಬಂದು ನೀ ಹೀನನೆನಿಸಿಕೊಂಡು || ಅಜ್ಞಾನದೊಳಗೆ ಬೆರೆತು ನೀ - | ನಾರೆಂಬದನರಿಯಲಿಲ್ಲವು ಗುರುತು | ಜ್ಞಾನಿ ಪುರುಷರ ಕೇಳುವದನೆ ಮರೆತು | ಇನ್ನು ಸದ್ಗತಿಗೆ ಆದಿಯೊ ಹೊರತು | ನೀ ಇದನರಿತು 1 ಆರರೊಳಗೆ ಬಿದ್ದು ಆರನು ನೋಡದೆ | ಆರು ಚಕ್ರದ ಮೇಲೆ ಏರಿ ಮ್ಯಾಲಕಿನ್ನು | ತೋರುತಿಹುದು ನೋಡು ರೂಪವಲ್ಲೀ | ಧಾರುಣಿಯೊಳಗೆಲ್ಲ ಅದರ ವ್ಯಾಪವು | ತೋರಿದಾಕ್ಷಣ ಅಳಿದ್ಹೋಯ್ತು ಪಾಪ | ಇದನು ಬಿಟ್ಟು ಮೂರ ನೆನಿಸಿ ಕೆಟ್ಟೀ | ಬಯಸಿ ನೊಂದೀ 2 ನರ ತನು ದೊರೆಕೋದು ಬರಿದೇನೊ | ಎರಡಿನ್ನು ಸರಿಯಾಗೊ ತನಕ | ಬರುವದೇನೊ ಸುಮ್ಮನೆ ಮರುಳಾಗ ಬ್ಯಾಡ || ಸರಿಸು ಅಸ್ಥಿರವೆಂದು ನೀ ಬೇಗದಲಿ | ಸಂಚಿತವೆಲ್ಲ ಕೂಡಿ ಬಂದಿತಿನ್ನೇನು | ಗುರು ಭವತಾರಕನ ಭಜಿಸು ನಿನ್ನ | ಮನಸಿನಿಂದಲಿ 3
--------------
ಭಾವತರಕರು
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
ಅಜಭವಾದಿ ವಂದ್ಯ ಚರಣೇ | ತಾಯಿನಿಜ ಜನರ ಪೊರೆವ ಕರುಣೇ ಪ ರಜತಮನ ಕಳೆವ ಹೊಣೇ | ಅಜನಮ್ಮ ನಿನ್ನ ಹವಣೇ ಅ.ಪ. ದಿವಿಜ ಪತಿ | ಪದ್ಮ ಪದಹವ | ನುದ್ಭವ ಗೈ 1 ಗುಣ ಮೂರ ಮಾನಿನಿಯೆ | ಗುಣ ದೊರೆ ಅಂಭ್ರಣೀಯೆಗುಣ ಜಡವ ಕಳೆಯದಿರೆಯೆ | ಘನವೇನೆ ನಿನಗೆ ತಾಯೇ ||ವಾನರನು | ನಾನಾ ದುರ್ | ಯೋನಿಯಲಿ | ಜನೀಸಿಹೆಮಾನೀಸನು | ಧ್ಯಾನಿಲ್ಲವು | ಏನುಗತಿ | ನೀನೇ ಪೊರಿ 2 ಭವ ನೀ ಕಳೆರಮೆ 3 ಅವ್ಯಕ್ತಾಭಿಮಾನಿ ಕಾಯೋ ಭವ್ಯಮೂರ್ತಿ ಹರಿಯ ಜಾಯೇ |ತ್ರಯ್ಯ ಗೋಚರ ಶ್ರೀ ಹರಿಯೇ | ಗಮ್ಯನೆಂಬುದ ತೋರಿ ಪೊರೆಯೆಶ್ರೋತವ್ಯನ | ಮಂತವ್ಯನ | ಧ್ಯಾತವ್ಯನ | ಸ್ಮರ್ತವ್ಯನಅಗಮ್ಯನೆ | ಪೂಜ್ಯನನೆ | ಶ್ರೀ ಸ್ತವ್ಯನ | ತೋರಯ್ಯೆನ 4 ತಾಪ ಇಂದಿರೆ ಸಿರಿ ಸಿರಿ ಸಿರಿ ಸಿರಿ ಸಿರಿ ಸಿರಿ ಮಾಯೆ | ಶ್ರೀ ಪೊರೆಯೇ... 5
--------------
ಗುರುಗೋವಿಂದವಿಠಲರು
ಅನಂತ ಯೋನಿಯೊಳಗೆ ಅನಂತ ಜನ್ಮತಿರುಗಿಅನಂತ ಯುಗಯುಗಂಗಳಲಿ ಸತ್ತು ಹುಟ್ಟೆಅನಂತನಾಟವೆಯೆಂದು ಅರಿವು ಇಲ್ಲದೆ ಹೋಗಿಅನಂತ ದುಃಖಸಾಗರದಿ ಹಿರಿದು ಬಳಲುವಿರಿ 1 ವಿಶ್ವತೈಜಸ ಪ್ರಾಜ್ಞ ಮೂವರೆಂದೆನಿಸಿವಿಶ್ವದೊಳು ನಾನಾ ರೂಪಗಳ ತಾಳಿವಿಶ್ವದೊಳ ಹೊರಗೆಲ್ಲ ಪೂರ್ಣ ತಾನೆಂದೆನಲುವಿಶ್ವಾತ್ಮಕನು ನೀವು ಮತ್ತಾರು ತಿಳಿಯಿರೋ 2 ಮೂರವಸ್ಥೆಗಳಲ್ಲಿ ಮೂರು ಮೂರ್ತಿಗಳಾಗಿತೋರುತಿಹ ನಾನಾ ಬಗೆ ಲೀಲೆಗಳನುಭೂರಿ ಸಂಸಾರಗಳ ದುಃಖ ಸುಖವೆಂದೆನಿಸಿತೋರಿ ನೋಡಿಪನವನು ಮತ್ತಾರು ತಿಳಿಯಿರೋ 3 ಸತಿ ಪುರುಷರಾಗಿಹನು ಸುತನು ತಾನಾಗಿಹನುಖತಿಯು ಶಾಂತಿಯು ಕಾಮವಾಗಿ ತಾನಿಹನುಅತಿ ಕುಲಗಳಾಗಿಹನು ಅತಿ ಜಂತುವಾಗಿಹನುಮಿತಿಯಿಲ್ಲದಾಗಿಹನು ನೀವಾರು ತಿಳಿಯಿರೋ 4 ಈ ವಾಕ್ಯಗಳನೇ ನೀವಾರಮುಂದುಸುರದಲೆಸಾವದಾನದಿ ತಿಳಿದು ನೋಡಿದೇವ ಚಿದಾನಂದ ಗುರು ತಾನೀಗ ನಿಜವೆಂದುಸಾವದಾನದಿ ಕಂಡು ಕಡೆಹಾಯಿರೋ 5
--------------
ಚಿದಾನಂದ ಅವಧೂತರು
ಅನುದಿನ ಘನ ತನ್ನೊಳಗೆ ತುಂಬಿಹದು ನಿನ್ನೊಳಗೆ ದ್ರುವ ಓದಿ ಕೇಳಿ ಮರುಳಾದ್ಯೊ ಮನವೆ ಸಾಧಿಸಲಿಲ್ಲ ಸ್ವರೂಪ ವೇದವೋದಿ ವಿವದಕೆ ನೀನು ಸಾಧಿಸಿದೊ ಬಲುಕೋಪ ಭೇದವಿಡಿದು ಬಾಧೆಗೆ ಗುರಿಯಾಗಿ ಆದಿ ನಿನಗೆ ನೀ ಪಾಪ ಘನಗುರು ಕುಲದೀಪ 1 ದೇಹದ ಒಳಗಿನ ದೇವರ ತಿಳಿಯದೆ ಬಾಹ್ಯ ರಂಜನಗೆದೆರದ್ಯೊ ಸೋಹ್ಯವರಿಯದೆ ಶ್ರೀಹರಿ ಭಕ್ತಿಯ ಅಹಂಭಾವದಿ ಮೆರೆದ್ಯೊ ದೇಹಾಭಿಮಾನದಲಿ ಸೋಹಂಭಾವದ ವಾರ್ತೆಯ ಜರಿದ್ಯೊ ಸವಿ ಸುಖವನು ಮರೆದ್ಯೊ 2 ಕನಸುದೋರುವ ಜನ ಪ್ರಪಂಚವ ನೆನೆಸಿ ಬಯಸುವದ್ಯಾಕೆ ಖೂನ ತಿಳಿಯದೆ ಸತ್ತು ಹುಟ್ಟಿ ಜನಿಸಿ ಬಾಹುದು ಯಾಕೆÉ ಹೀನಯೋನಿಯ ಮುಖದಲಿ ಬೀಳುವ ದಣುವಿಕಿ ನಿನಗಿದು ಬೇಕೆ ಅನುದಿನ ನಿನಗಿದು ತಾ ಸಾಕೆ 3 ಹಾದಿತಪ್ಪಿ ನಡೆವದು ವೇದಾಂತದ ಇದು ನಿನಗುಚಿತೆ ಸಾಧು ಸಜ್ಜನರನುಸರಿಸದೆ ತಾ ಇಹುದೊಂದು ಸ್ವಹಿತೆ ಗಾದಿಯ ಮಾತೆ ಬಂದುದು ಪುರುಷಾರ್ಥೆ 4 ಶರಣ್ಹೊಕ್ಕರ ಕರುಣಿಸಿ ನೋಡುವ ಎರಡಿಲ್ಲದೆ ಗುರುನಾಥ ಕರವಿಡಿದು ಪಾರನೆ ದಾಟಿಸುವಾ ಸುರಮುನಿಜನ ಸೇವಿತ ತರಣೋಪಾಯದ ಸಾಧನದೋರುವ ತರಳ ಮಹಿಪತಿ ದಾತ ಮನವೆ ನಿನಗಿದು ಸುಪಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸಮಯ ಹರಿಯೇ ಇದೇ ಸಮಯ ಪ ಕಮಲ ತೋರಿ ಸದಾ | ಬಿಡದೆ ಎನ್ನ ಮುದದಿ ಪೊರೆವುದಕೆ ಅ.ಪ ನಾನಾ ಯೋನಿಯಲಿ ಬಂದು ಜ್ಞಾನ ದುರ್ಲಭನಾಗಿ | ಹೀನನಾದವಗೆ ಸುಜ್ಞಾನ ಪಾಲಿಸುವುದಕೆ 1 ಆಶಾಪಾಶಕೆ ಸಿಲುಕಿ ಶ್ರೀಶನ ಮರೆತೆನೋ | ಲೇಸು ದಾರಿಯ ತೋರಿ ದಾಸನ ಕಾಯುವುದಕೆ 2 ಸಂತರ ಸಂಗವ ಸಂತತ ಪಾಲಿಸಿ ಅಂತರಂಗದಿ ನಿನ್ನ ಚಿಂತನೆ ಕೊಡುವುದಕೆ 3 ಹಿಂದಿನ ಸುಕೃತದಿ ಬಂದೆ ಭೂಸುರನಾಗಿ | ಮುಂದಿನ ಪದಕ್ಕಾಗಿ ಕುಂದದೆ ಸಲಹುವುದಕೆ 4 ಪತಿ ವಿಜಯವಿಠ್ಠಲ ವೆಂಕಟ | ತಾಪವ ಕಳೆದೆನ್ನ ಕಾಪಾಡುವುದಕೆ 5
--------------
ವಿಜಯದಾಸ
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎಲ್ಲಿಂದೆಲ್ಯರುಳಿದ್ಯೋ ಎಲೆ ಮನವೆ ಪ ಎಲ್ಲಿಂದೆಲ್ಯುರುಳಿದ್ಯೋ | ಎಲೆ ಮನವೇ | ಬಲ್ಲತನದಲಿಗಿಡ ಕೊನೆಯ ನೇರಿ ಬಿದ್ದಂತೆ 1 ದುರ್ಲಭ ನರದೇಹದಿ ಬಂದು | ಫುಲ್ಲನಾಭನ ನೆನೆಯದೆ | ಕ್ಷುಲ್ಲಗುಣದಲಿ ನಾನಾ ಹೀನ ಯೋನಿಯ ಮುಖಕ 2 ಅಗ್ರಜನ್ಮದಲಿ ಬಂದು ಸಂತರಾನುಗ್ರಹವ | ಪಡೆದುಕೊಳ್ಳದೆ | ವ್ಯಗ್ರಬುದ್ಧಿಯಲಿ ಅತಿ ಶೂದ್ರ ನಡುವಳಿವಿಡಿದು 3 ವರಗಳನು ಪಡಕೊಳ್ಳವೆ | ಶರೀರಾಭಿಮಾನಿ ಗೆಳೆತನ ಕಟ್ಟಿ ವಿಷಯಕ್ಕು 4 ತಂದೆ ಮಹಿಪತಿ ಸ್ವಾಮಿಯಾ ಮೊರೆ ಹೊಕ್ಕು | ಬಂದ ಸಾರ್ಥಕವ ಮಾಡು | ಇಂದಿನೆಚ್ಚರ ನಾಳೆ ಸಂಧಿಸಿದು ನಿಜದಿಂದ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ನಿನ್ನ ಹಿತವಾ ಪಡೆದ್ಕೋ ಯಲೆ ಜೀವವೇ | ಶ್ರೀನಾಥನಂಘ್ರಿ ನಂಬಿ ಸುಖಿಸಲಾರೆಯಾ ಪ ಶ್ವಾನ ಸೂಕರಾದಾ ನಾನಾ ಯೋನಿಯಲ್ಲಿ ತೊಳಲಿ ಬಂದು | ಮಾನವ ಜನ್ಮ ಪುಣ್ಯದಿಂದ ಬಂದುದಾ | ಭವ | ಕಾನನದ ಮಾರ್ಗವನು ಜರೆಯಲಾಪೆಯಾ 1 ಕಾಮ ಕ್ರೋಧ ಲೋಭವೆಂಬಾ ತಾಮಸದ ಬಲಿಗೆ ಸಿಲುಕಿ | ನೇಮಗೆಟ್ಟಾ ವ್ಯರ್ಥನಾದೆ ಹರಿಯ ನಾಮವಾ | ಪ್ರೇಮದಿಂದ ಸ್ಮರಿಸಿ ಭಕ್ತಿ ಸೀಮೆಯೊಳು ಪಡೆದು ಮುಕ್ತಿ | ಸಾಮರಾಜ್ಯ ಪದವಿಯನು ಸಾರಲಾಪೆಯಾ 2 ಮರದು ತನ್ನ ನಿದ್ರೆಯೊಳು ಅರಸು ರಂಕನಾಗಿವಂತೆ | ಶರೀರ ತಾನೆಂಬ ವಿದ್ಯಾವಳಿದು ಜಾಗಿಸೀ | ಗುರು ಮಹಿಪತಿಸ್ವಾಮಿ ಕಿರಣವೆಲ್ಲರೊಳು ಕಂಡು | ಶರಣರಾ ವೃತ್ತಿಯೊಳು ಬರಸಲಾಪೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಂದು ಬಾರಿ ಸ್ಮರಣೆ ಸಾಲದೆ ಆನಂದ- ಪ. ತೀರ್ಥರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರಅ.ಪ. ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದುಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ 1 ಪ್ರಕೃತಿ ಬಂಧದಲ್ಲಿ ಸಿಲುಕಿ ಸಕಲ ವಿಷಯಗಳಲಿ ನೊಂದುಅಕಳಂಕಚರಿತ ಹರಿಯ ಪಾದಭಕುತಿ ಬೇಕೆಂಬುವರಿಗೆ 2 ಆರುಮಂದಿ ವ್ಶೆರಿಗಳನು ಸೇರಲೀಸದಂತೆ ಜರಿದುಧೀರನಾಗಿ ಹರಿಯ ಪಾದವ ಸೇರಬೇಕೆಂಬುವರಿಗೆ 3 ಘೋರ ಸಂಸಾರಾಂಬುಧಿಗೆ ಪರಮಜ್ಞಾನವೆಂಬ ವಾಡೆಏರಿ ಮೆಲ್ಲನೆ ಹರಿಯಪಾದ ಸೇರಬೇಕೆಂಬುವರಿಗೆ4 ಹೀನಬುದ್ಧಿಯಿಂದ ಶ್ರೀ ಹಯವದನನ್ನ ಜರಿದು ತಾನು ಬದುಕಲರಿಯದಿರಲು ತೋರಿಕೊಟ್ಟ ಮಧ್ವಮುನಿಯ 5
--------------
ವಾದಿರಾಜ
ಕ್ಲೇಶ ಕಷ್ಟದಿ ಮುಳುಗಿ ಬಳಲಬೇಡ ಪ ಹಿಂದೆ ನಾನಾ ಯೋನಿಯಲ್ಲಿ ಹಡಿಕೆಯೊಳು ಜನಿಸಿ ಜನಿಸಿತಂದೆ ತಾಯಿ ಹೆಂಡಿರೇಸು ಲೆಕ್ಕವಾಯ್ತು ನೋಡಮುಂದೆ ಬಹ ದುಃಖಕೆ ಮುಳುಗಿ ಮುಳುಗಿ ಧೈರ್ಯ ಪಡೆದುಮಂದ ಮತಿಯಾಗಿ ಗುರುವ ಮರೆಯಲಿ ಬೇಡ 1 ದುರ್ಜನರ ಸಂಗ ಮಾಡಿ ದುಷ್ಟ ನಡತೆಯಲ್ಲಿ ನಡೆದುಸಜ್ಜನರ ಸಂಗ ನೀ ಮರೆಯಲಿ ಬೇಡಜಜ್ಜುಗಟ್ಟಿ ಪಾಪಕರ್ಮ ಜರಿದು ಜರಿದುಜೋಕೆಯಲ್ಲಿ ಸದ್ಗುರುನಾಥ ಸ್ಮರಣೆ ಮಾಡು2 ಮನೆಯು ಮಕ್ಕಳೆಂಬ ಧನವು ಪಶುಗಳಲ್ಲಿ ಆಸೆಯಿಟ್ಟುನೆನೆಸಿ ನೆನೆಸಿ ಬಿಕ್ಕಿ ಬಿಕ್ಕಿ ಅಳಲು ಬೇಡಚಿನ್ಮಯ ಚಿದಾನಂದಾವಧೂತನೊಳು ಬೆರೆತುಘನವನೈದಿ ಸದ್ಗುಣಾದಿ ತಿಳಿದು ನೋಡ 3
--------------
ಚಿದಾನಂದ ಅವಧೂತರು
ಗುರುದತ್ತ ದಿಗಂಬರ ಸ್ತುತಿ ಈಸಲಾರೆ ಗುರುವೆ ಸಂಸಾರಶರಧಿಯ ಮೋಸದಿಂದ ಬಿದ್ದು ನಾನು ಘಾಸಿಯಾಗಿ ನೊಂದೆ ಗುರುವೆ ಪ ಗುರುವೆ ಬೇರೆ ಗತಿಯ ಕಾಣೆ ನೀನೆಗತಿ ದಿಗಂಬರೇಶ ಮರಯ ಹೊಕ್ಕೆನಿಂದು ನಿಮ್ಮ ಚರಣ ಕಮಲವ ತರುಣ ದಿಂದಲೆನ್ನ ಭವದ ಶರಧಿಯನ್ನು ದಾಟುವಂಥ ಪರಿಯನೊರೆದು ನಾವೆಯಿಂದ ದಡವ ಸೇರಿಸೋ 1 ಮಡದಿ ಮಕ್ಕಳೆಂಬುದೊಂದು ನೆಗಳುಖಂಡವನ್ನು ಕಚ್ಚಿ ಮಡುವಿಗೆಳೆದು ತಿನ್ನು ತಾವೆ ತಡೆಯಲಾರೆನು ನಡುವೆ ಸೊಸೆಯು ಎಂಬನಾಯಿ ಜಡಿದು ಘೋರ ಸರ್ಪದಂತೆ ಕಡಿಯೆ ವಿಷಮ ನೆತ್ತಿಗಡರಿ ಮಡಿವಕಾಲ ಬಂದಿತು 2 ಹಲವು ಜನ್ಮದಲ್ಲಿ ಬಂದು ಹಲವು ಕರ್ಮವನು ಮಾಡಿ ಹಲವು ಯೋನಿಯಲ್ಲಿ ಹುಟ್ಟಿ ಹಲವು ನರಕವ ಹಲವು ಪರಿಯ ಲುಂಡು ದಣಿಯ ನೆಲೆಯ ಗಾಣದೆನ್ನಜೀವ ತೊಳಲಿತಿನ್ನುಗತಿಯ ಕಾಣೆ ಗುರು ಚಿದಂಬರ 3 ಕಾಲವೆಲ್ಲಸಂದು ತುದಿಯಕಾಲ ಬಂತು ಕಂಡ ಪರಿಯೆ ತಾಳಿ ಕಿವಿಗೆ ಊದ್ರ್ವಗತಿಗೆ ಪೋಪಮಂತ್ರವನ್ನು ತಿಳಿಸಿ ನಿರಾಳ ವಸ್ತುವನ್ನು ತೋರೋವರ ದಿಗಂಬರಾ 4 ಆಸೆಯೆಂಬ ನಾರಿಯನ್ನು ನಾಶಗೈದು ಗುರುವಿನಡಿಗೆ ಹಾಸಿತನುವ ದಡದಂತೆ ಬೇಡಿಕೊಂಡೆನು ಈಸ ಮಸ್ತಲೋಕವನ್ನು ಪೋಷಿಸುವ ಲಕ್ಷ್ಮೀಪತಿಯ ದಾಸಗಭಯವಿತ್ತು ಕಾಯೋವರ ದಿಗಂಬರ 5
--------------
ಕವಿ ಪರಮದೇವದಾಸರು
ಚಿತ್ತೈಸಬೇಕೆನ್ನ ಮಾತು ಕೇಳಯ್ಯ ಮತ್ತೆ ಹುಟ್ಟದಂತೆ ಮಾಡೊ ರಂಗಯ್ಯ ಪ ನಾನಾ ಯೋನಿಯಲೆನ್ನ ನೀನಿಡದಿರಯ್ಯ ಶ್ರೀನಿವಾಸ ಬೇಡಿಕೊಂಬೆ ಶ್ರೀ ರಂಗಯ್ಯ 1 ದೀನ ರಕ್ಷಕನೆಂದು ದೈನ್ಯದಿಂ ಬೇಡುವೆ ಜ್ಞಾನವಂತನ ಮಾಡಿ ಸಲಹೊ ರಂಗಯ್ಯ 2 ದಾನವಾಂತಕ ನಿನ್ನ ಭಕುತರಪರಾಧ ನೀನೆಣಿಸದೆ ನಿರುತ ಸಲಹೊ ರಂಗಯ್ಯ 3 ನಾ ನಿನ್ನ ಮರೆತರೂ ನೀ ನನ್ನ ಮರೆಯೆ ಏನೆಂಬೆ ನಿನ್ನ ಕರುಣಕೆ ಶ್ರೀ ರಂಗಯ್ಯ 4 ಭಾನು ಕೋಟಿ ಪ್ರಕಾಶ ಶ್ರೀ ರಂಗಯ್ಯವಿಠಲ ಮಾನದಿಂದಲಿ ಪೊರೆಯೊ ಶ್ರೀನಿಧಿ ರಂಗಯ್ಯ 5
--------------
ರಂಗೇಶವಿಠಲದಾಸರು
ಜಯ ಗೋಪಾಲ ವಿಠಲ | ದಯೆ ತೋರೋ ಇವಗೇ ಪ ನಯ ವಿನಯದಿಂ | ನಿನ್ನ | ದಾಸ್ಯಕಾಂಕ್ಷಿಪಗೇ ಅ.ಪ. ಜ್ಞಾನ ವಿರಹಿತನಾಗಿ | ಅನೇಕ ಜನುಮಗಳುಹೀನಯೋನಿಯ ಪೊಂದಿ | ಜನಿಸಿಹನು ಇವನೂಮಾನನಿಧಿ ಮೋಹನ್ನ | ದಾಸರರೊಲಿಮೆಯಲಿಂದಆನಂದ ಮುನಿ ಮತದಿ | ತನುವ ಪೊತ್ತಿಹನೊ1 ಲೇಸು ಮೋಹನರಾಯ | ದಾಸವಂಶದಿ ಬಂದುಆಶುಗಾಧ್ಯಾತ್ಮರಾ | ಹಸ್ಯ ವರಿಯದಲೇದಾಸ ದೀಕ್ಷೆಯ ನಡೆಯೆ ಆಶಿಸುತ್ತಿಹಗೆ ಉಪದೇಶವಿತ್ತೆ ನಿನ್ನಾ | ದೇಶ ಸುಸ್ತೀಶಾ 2 ಲೌಕಿಕದ ಬಹು ಮೋಹ | ನೀ ಕಳೆದು ಸುಜ್ಞಾನಭಕುತಿ ವೈರಾಗ್ಯಗಳ | ನೀ ಕೊಡುವುದ್ಹರಿಯೇಮಾಕಳತ್ರನೆ ತವಾ | ಲೌಕಿಕಸುಮಹಿಮೆಗಳಸಾಕಷ್ಟು ತಿಳಿಸುತ ಲೋಕದಲಿ ಮೆರೆಸೊ 3 ಸೊಲ್ಲು ಸೊಲ್ಲು ಸಲಿಸುವುದ್ಹರಿಯೆಖುಲ್ಲ ಜನದಲ್ಲಣನೆ | ಗೊಲ್ಲ ಗೋಪಾಲಾ 4 ಬೋವ ಶ್ರೀಹರಿ ಇವನಶೈವಲಾವರಣ ಕಳೆ | ದೀವುದೋಜ್ಞಾನಾಕೈವಲ್ಯದಾತ ಗುರು | ಗೋವಿಂದ ವಿಠ್ಠಲನೆನೀವೊಲಿಯದಿನ್ನಿಲ್ಲ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು