ಒಟ್ಟು 932 ಕಡೆಗಳಲ್ಲಿ , 51 ದಾಸರು , 858 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ | ಶೃಂಗಾರದಿಂದ ಗೋಪಾಂಗನೆಯ ಕೂಡ | ತುಂಗ ವಿಲಾಸ ತಾ ರಂಗ ಕೇಳಿಯಲಿ | ಸಂಗೀತ ಪಾಡುತ ಸಾಂಗೋಪಾಂಗದಿಂದಾ ಪ ಹೊಳಿಯ ಜನಕೋಕುಳಿಯ ಕಲಿಸಿ | ಗೆಳೆಯರೊಂದಾಗೆ ಕಳೆಯೆವೇರುತ್ತ | ಅಳಿಯ ಗರುಳಬಲಿಯರರಸಿ | ಇಳಿಯಾಳಗೋಕುಳಿ ವಸಂತವಾ | ಹಳೆಯ ಬೊಮ್ಮನ ಬಳಿಯವಿಡಿದು | ಪಳಿಯ ಚಲುವ ತಿಳಿಯಗೊಡದೆ 1 ಸಕ್ಕರೆದುಟಿ ಹೆಮ್ಮಕ್ಕಳು ಯೆಲ್ಲರು | ನಕ್ಕು ಕೈಯ ಹೊಯಿದ | ಕ್ಕರದಿಂದ ತಾ | ವರ್ಕರಾಗಿ ನಿಂದೂ ತೆಕ್ರ್ಕೊರಂಗಯೆಂದು | ಜಿರ್ಕೊಳವಿಲಿಂದಲಿಕ್ಕಿದರು | ಸೊಕ್ಕಿದಾ ನೆಡಸಿ ಹೊಕ್ಕು ಎರಗಿದಂ | ತೊಕ್ಕಟರಾಗಿ ದೇವಕ್ಕಿ ತನುಜನ ಸಿಕ್ಕಿಸಿಕೊಂಡರು | ಅಕ್ಕಟಾಬ್ಜಗಬ್ಧಿ ಉಕ್ಕಿದಂತೆ ಮನ | ಉಕ್ಕುತಲಿ 2 ನಾರಿಯರಿಂದ ಉತ್ತರವ ಲಾಲಿಸಿ | ತುಂಬಿ ಅ | ಪಾರನಾರಿ ಪರಿವಾರದವರ ಶರೀರವ ಮೇಲೆ | ವಿ | ಸ್ತಾರವಾಗಿ ಕಾರಿ ವಾರಿದನು ನೀರೆರದಂತಾಗೆ | ಆರೊಂದು ಬುದ್ಧಿಗೆ ಮೀರಿತಿದೊ ಎಂದು | ವಾರುಣಿಪತಿ ಪಂಕೇರುಹಾಭವ ಕಂ || ದರವ ಬಾಗಿಸಿ ಸಾರಿದರು 3 ಮೃಗ ಧ್ವನಿದೆಗೆದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು ಪೊಗಳ ಬಗೆಯಿಂದ | ಮಣಿ ತಾರೆಗಳು ಚಂದ್ರ ನಗುತ ತಮ್ಮ ಪಥಗಳು ನಿಲಿಸಿ | ಮಂಗಳಕರವ ಮುಗಿದು ಸೋಜಿಗ ಜಗದೊಳಗಿದು ಮಿಗಿಲೆನುತಲಿ 4 ದುಂದುಭಿ ಮೊರಿಯೆ ಧಂ ಧಂ ಧಳಾ ಎಂದು | ವೃಂದಾರಕ ವೃಂದ ಚಂದದಿ ಪೂಮಳೆಯಂದುಗರಿಯಲು | ಚಂದಣಗಂದಿಯ ಒಂದಾಗಿ ನಿಂದರು ವಂದಿಸುತ | ಮಂದಹಾಸನಖ ದುಂದುಭಿ ಓಕಳಿಂದಲೆರಾರೈಪಾ ಸಿಂಧು ಮೆರೆದ ನಾರಂದವರದ ವಿಜಯವಿಠ್ಠಲ | ಪುರಂದರದಾಸರ ಮುಂದಾಡಿz ||5
--------------
ವಿಜಯದಾಸ
(ಎ) ಗುರುನಮನ ಶಿರಿವರನೆ ಕರುಣಾಂಬುನಿಧಿಯಮಲ ಚರಣಕಮಲವ ಬೇಡುತಿಪ್ಪರ ಪಾದಪಿಡಿವೆನು ನಾನು ಪ ಶಿರಿಲಕುಮಿ ಸರಸಿಜಭವ ಸರಸ್ವತಿ ಗುರುಪವಮಾನ ಭಾರತಿ ಮುಖ್ಯರ ವರ ಪಾದಂಗಳಿಗೆ ನಮಿಸುವೆ ಹರಿಯ ತೋರ್ಪದಕೆ 1 ಪನ್ನಗಾಶನ ಪನ್ನಗೇಂದ್ರರ ಪನ್ನಗ ವಿಭೂಷಣ ಸತಿಸುತರ ಸನ್ನುತಾಂಘ್ರಿಗಳ ಬಿಡದ್ವಿಡಿಪಿ ರಘುರನ್ನರರಪದಕೆ 2 ಗುರು ಶ್ರೀಪಾದರಾಯ ವ್ಯಾಸರ ಪುರಂದರ ವಿಜಯಾದಿ ಗುರುಗಳಿಗೊಂದಿಪೆನು ನರಸಿಂಹವಿಠಲನಂತುಪಾದ್ಯನು ದಾರಿತೋರ್ಪುದಕೆ 3
--------------
ನರಸಿಂಹವಿಠಲರು
(ಕಾರ್ಕಳದ ವೆಂಕಟೇಶನನ್ನು ನೆನೆದು) ಶ್ರೀನಿವಾಸ ನಮೋ ನಮೋ ಶ್ರುತಿಗಾನಲೋಲ ಪಾಹಿ ಪ. ವಿಪಿನ ನ- ವೀನದವಾನಲ ದೀನೋದ್ಧಾರ ದಯಾನಿಧೆ ಸುಂದರ ಅ.ಪ. ಶೇಷಗಿರಿಯಿಂದ ಸುಜನಗಳ ಘೋಷದಿ ನಂಬಿದ ದಾಸಜನರಭಿಲಾಷೆಯನು ಸಂತೋಷದಿ ಕೊಡಲು- ಲ್ಲಾಸದಿಂದ ಪರೇಶ ನಾನಾ ವಿಲಾಸದಿ ನೆಲಸುತ ಕಾಸುವೀಸದ ಭಾಷೆಯನು ದಿಗ್ದೇಶದಿಂದ ಮಹಾಸುಕೀರ್ತಿಯ ರಾಸಿಗಳಿಸಿ ಜಗದೀಶ ಪರೇಶ ಮ- ಹೇಶವಿನುತ ನಿರ್ದೋಷ ಜಗನ್ಮಯ 1 ಉತ್ತಮಾಂಗಸುರತ್ನಖಚಿತಕಿರೀಟದ ನಿಜಪದ- ಭಕ್ತಜನಮನವೃತ್ತಿ ಒಲಿಸುವ ಕೂಟದ ಕರುಣೋ- ತ್ಪತ್ತಿ ಸರಸಿಜನೇತ್ರಯುಗ್ಮದ ನೋಟದ ಭೂಷಣ- ಮೊತ್ತದಿಂದಾದಿತ್ಯಕೋಟಿಯನ್ನೆತ್ತಿಂದತೆಸೆವುತ್ತ ಮಂಗಲ- ಮೂರ್ತಿಧರಿಸಿ ಜನರರ್ತಿಯ ಸಲಿಸುವ ಚಿತ್ತಜಜನಕ ಸರ್ವೋತ್ತಮ ನಿರುಪಮ 2 ಪಂಕಜಾಂಬಕ ಶಂಕರಾಪ್ತ ಶುಭಾಕರ ಶ್ರೀವ- ತ್ಸಾಂಕ ಮುಕ್ತಾಲಂಕೃತ ಕರುಣಾಕರ ಭಕ್ತಾ- ತಂಕರಹಿತ ನಿಶ್ಯಂಕ ನಿತ್ಯನಿರಾಕರ ಪ್ರಭು ವೆಂಕಟೇಶ ನಿರಾಮಯಾಮರಸಂಕುಲಾರ್ಚಿತ ಶಂಖಚಕ್ರಗ- ದಾಂಕಿತ ದನುಜಭಯಂಕರ ವರ ನಿರ- ಹಂಕರ ನಿಜದ ನಿಷ್ಕಳಂಕಚರಿತ್ರ 3 ಮಂದರಾಧರ ಮಾಪತೇ ಮುಖಚಂದಿರ ಮೌನಿ ವೃಂದವಂದ್ಯ ಸುರೇಂದ್ರಪೂಜ್ಯ ಧುರಂಧರ ಮಹಾ- ಕಂಬುಕಂಧರ ಶೋಭಿಪ ಕುಂದರದನ ಕುಚೇಲಪಾಲಾರವಿಂದನಾಭ ಪುರಂದರಾರ್ಚಿತ ಮಂದಹಾಸ ಮುಚುಕುಂದವರದ ಗೋ- ವಿಂದ ಸಚ್ಚಿದಾನಂದ ಉಪೇಂದ್ರ 4 ಮೂರು ಲೋಕೋದ್ಧಾರಿ ಘನಗಂಭೀರನೆ ವೆಂಕಟ ಧೀರಕಾರ್ಕಳಸಾರನಗರಾಧಿಕಾರನೆ ಭೂಸುರ- ಭೂರಿವೇದಪುರಾಣಘೋಷಾದಿಹಾರನೆ ಸಂತತ ಚಾರು ಗೌಡಸಾರಸ್ವತಶೃಂಗಾರಋಗ್ವೇದಾಖ್ಯ ಉತ್ತಮ ದಾರುಣೀಸುರರಿಂದನವರತ ಮಂಗ- ಲಾರತಿಗೊಂಬ ಲಕ್ಷ್ಮೀನಾರಾಯಣ ಹರಿ 5
--------------
ತುಪಾಕಿ ವೆಂಕಟರಮಣಾಚಾರ್ಯ
(ನಾರದ ಪ್ರಾರ್ಥನೆ) ನಾರದ ಮುನಿಯ ನಂಬಿರೋ ಸಜ್ಜನರೆಲ್ಲ ಪ. ನಾರದ ಮುನಿಯ ನಂಬಿ ಸೇರಿ ರಮೇಶನ ಘೋರದುರಿತ ಪರಿಹಾರಗೊಳಿಸುವಂಥ ಅ.ಪ. ಫಾಲದಿ ತಿಲಕ ನಾಮವು ಕಂಠದ ಮೇಲೆ ಜೋಲುವ ತುಳಸಿ ಮಾಲೆಯು ತಾಳ ವೀಣೆಗಳಿಂದ ಕಾಲಾನುಗುಣಸ್ವರ ಮಾಲೆ ತೋರುತ ಲಕ್ಷ್ಮೀಲೋಲನ ವಲಿಸಿದ 1 ವೇದೋಪನಿಷತ್ತುಗಳಗಾಂಧರ್ವ ವಿದ್ಯ ಹಾದಿಲಿ ತರಲು ಬಲ್ಲ ಬೋಧಿಪ ಪರತತ್ವ ವಾದವ ಸುರಕಾರ್ಯ ಸಾಧಿಸಿ ಹರಿಯ ಪ್ರಸಾದಕೆ ಪಾತ್ರನಾದ 2 ಪ್ರಲ್ಹಾದ ಧ್ರುವ ದ್ರೌಪದಿ ಮುಖ್ಯ ವೈಷ್ಣವ ರೆಲ್ಲರೀತನ ದಯದಿ ಎಲ್ಲ ಠಾವಲಿ ಲಕ್ಷ್ಮೀವಲ್ಲಭನಿಹನೆಂಬ ಸೊಲ್ಲ ತಿಳಿದು ಪರಮೋಲ್ಲಾಸ ಪಡೆದರು 3 ದೇವಾಸುರರ ಬಳಿಗೆ ಪೋಗುವ ತನ್ನ ಭಾವಾ ತೋರನು ಕಡೆಗೆ ಆವಾವ ಜನಕನುವೀವ ಮಾತುಗಳಾಡಿ ಪಾವನಾತ್ಮಕ ಹರಿ ಸೇವಾಫಲವ ಕೊಂಬ 4 ಬಂದನು ಕಲಿಯುಗದಿ ದಾಸರೊಳು ಪುರಂದರ ನಾಮದಲೀ ಮಂದಮತಿಯ ಕಳೆವಂದದಿ ಪ್ರಾಕೃತ ದಿಂದ ವೆಂಕಟಪತಿಯಂದವ ತಿಳಿಸಿದ 5
--------------
ತುಪಾಕಿ ವೆಂಕಟರಮಣಾಚಾರ್ಯ
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ನಾಲ್ಕು ತೃಣಾವರ್ತ ಪ್ರಾಣಾಪಹತ್ರ್ತೇ ನಮಃ ಶ್ರೀ ಗುರುಭ್ಯೋ ನಮಃ ಪದ ರಾಗ:ದೇಶಿ ಅಟತಾಳ ಸ್ವರ ಷಡ್ಜ ಛಂದಾದುತ್ಸವ ಬರಲು ಆನಂದದಿಂದಿರುತಿಹಳು|| 1 ದ್ವಿಜವೃಂದಕ್ಕ ಭೋಜನವು|| ಕೊಂಡವರಿಂದ ಆಶೀರ್ವಾದವು|| 2 ಖಡುನಿದ್ರಿ ನೋಡಿದಳು| ಭಂಡಿಯ ಬುಡಕಮಲಗಿಸಿದಳು 3 ಮತ್ತ ಪೂಜಿಸುತಿಹÀಳು|| ಮತ್ತುಡಿತುಂಬಿದಳು|| 4 ಭಾಳಾಗಿ ರೋದನವು | ಕೇಳಲಿಲ್ಲ ಶಬ್ದವು|| 5 ಕಾಲಿಲೆ ಒದ್ದನಾಗೆ| ಬುಡಮೇಲಾಗಿಬಿದ್ದಿತಾಗೆ|| 6 ಕಡ ಶಬ್ದ ಮಾಡುತಲೆ|| ಕೊಡಗಳು ಒಡದವಲ್ಲೆ||7 ನೆರೆದು ಮಾತಾಡಿದರು| ಮುರಿದಂಥವರು ದಾರಿರದೆ ಭಂಡಿಯುತಾನೆ ಮುರದಿತು ಹ್ಯಾಗೆಂದರು|8 ಬಾಲಕರಂದರಾ ಕಾಲಕ್ಕೆ ಈ ಕೂಸಿನ ಕಾಲಿಲೇ ಒದ್ದಿತ್ತೆಂದು| ಬಾಲರನುಡಿಗೆ ಗೋಪಾಲರು ನಕ್ಕರು ಬಾಲರ ಮಾತೆನ್ಯಂದು|| 9 ಗೋಪಿ ಬಿಡದಪ್ಪಿ ಕೂಂಡಳಾಗೆ || ಬಿಡದೆ ಆಡಿಸಿದಳಾಗೆ|| 10 ಧಿಟ್ಟನಂದಗೋಪ ಥಟ್ಟನೆ ಭಂಡಿಯ ಮುಚ್ಚಿ ಪೂಜಿಸುತಿಹನು| ದಿಟ್ಟಾಗಿ ದ್ವಿಜರಿಗೆ ಕಟ್ಟ ಇಲ್ಲದಲೆ ಕೊಟ್ಟಾನು ಗೋಗಳನು||11 ಕಜ್ಜಲಾದಿಗಳಿಂದ ದುರ್ಜನದೃಷ್ಟಿ ವಿಸರ್ಜನ ಮಾಡಿಸುವಾ| ಸಜ್ಜನರಿಂದ ಸುಪೂಜ್ಯ ಮಂತ್ರಿಗಳಿಂದ ಮಾರ್ಜನ ಮಾಡಿಸುವಾ||12 ಖಳರನ್ನು ಕೊಲುವನು| ಬೆಳುವಾನಂತಾದ್ರೀಶನು||13 ಪದ್ಯ ಮಂದ ಗಮನಿಯು ತನ್ನ ಕÀಂದನ ಎತ್ತಿ ಆನಂದದಿಂದಾಡಿಸಲು ಕಂದನಾದನು ಭಾರದಿಂದ ಬೆಟ್ಟದ ಘಾಳಿಯ ರೂಪದಿಂದಲಿ ತೃಣಾವರ್ತ ಮುಂದ ಚಕ್ರದ ಕಂದನಾ ಎತ್ತಿ ತ್ವರದಿಂದ ಬಿಡದಲೆ ವೈದ ಮುಂದ ಗಗನಕ್ಕೆ|| 1 ತಿಳಿವುತಲೆ ಮರ್ತೆಲ್ಲ ಚಿಂತಿಗಳ ಮರ್ತಳಾಗೆ|| 2 ಶ್ರೀಕಾಂತನಾ ಜನನಿ ತೋಕ ಗೋವಿಂದನು ಮೊಲಿಯು ತಾ ಕುಡುತಲಿರುತಿರಲು ಆ ಕಾಲದಲ್ಯವನು ಆಕಳಿಸಿದನು ಬಾಲ ಆಕ್ಯವನ ಬಾಯ ಒಳಗೆ ತಾಕಂಡಳೆಲ್ಲ ಭೂಲೋಕ ಬಿಸ್ತರವು| ಆ ಮ್ಯಾಲಕೊಂದು ದಿನ ಆ ಮಹಾತ್ಮನು ಗರ್ಗನೇಮಿಷ್ಯಲ್ಲಿಗೆ ನಾಮಕರಣವ ಮಾಡಿ ನೇಮಿಸ್ಹೇಸರಿಟ್ಟ ಬಲರಾಮ ಕೃಷ್ಣೆಂದು|| 3 ಸಂಭ್ರಮದಿ ಮುಂದವರು ಅಂಬಿಗಾಲಿಕ್ಕಿ ಬಹಳ್ಹಬಲವತೋರಿ ಆಯತ ತಾಯಿ ಎಂಬುವರು ತೊಡಿಯ ಅವಲಂಬಿಸಲು ನೋಡುವರು ಸಂಭ್ರಮದಿ ಎತ್ರದ್ಯಕೊಂಬುವರು ಬ್ಯಾಗೆ| ಅಂಬುಜೋದ್ಭವಪಿತನು ಸ್ತಂಭಾದಿಗಳನು ಅವಲಂಬಿಸುತ ನಡಿದಾಡಿ ಹಂಬಲಿಸಿ ಮುಂದ ತನ್ನ ನಂಬಿದ್ದ ಗೆಳೆಯರನ ನಂಬಿಗೋಕುಲದಲ್ಲಿ ತುಂಬೆ ಓಡ್ಯಾಡಿದನು ಅಂಬುಜಾಕ್ಷಾ|| 4 ಮುಂದ ಬಹು ಮಂದಿಗಳ ಮಂದಿರದ ಒಳಘೋಗಿ ಸಂದೇಹ ಇಲ್ಲದಲೆ ಛಂದಾದ ಬೆಣ್ಣಿಯನು ತಿಂದಿರುವ ತಿಂದು ಇಲ್ಲಂದಿರುವ ಮನಿಯಲ್ಲಿ ಬಂದಿರುವ ಕಲಹವನು ತಂದಿರುವ ನಿತ್ಯಾ| ನಂದನಂದನವ ಒಂದೂಂದು ಅಪರಾಧವನು ನಂದ ಪತ್ನಿಗೆ ತಿಳಿಯತಿಂದು ಮನದಲಿ ಮಾಡಿ ಒಂದು ದಿನ ಎಲ್ಲಾರು ಒಂದಾಗಿ ಮನಿಮುಟ್ಟ ಬಂದು ಗೋಪಿಯರು ಹೀಗೆಂದರಾಗೆ|| 5 ಪದ, ರಾಗ :ಶಂಕರಾಭರಣ ತಾಳ ತ್ರಿವಡಿ ಅಟ್ಟುಳಿ ಕುಡುವನೋಡಮ್ಮಾ| ಈ ಕೃಷ್ಣ ನಿನ್ನ ಮಗ| ಅಟ್ಟುಳಿ ಯಥೇಷ್ಟ ಇರುವದು ಸ್ಪಷ್ಟ ನಾನಿನಗೆಷ್ಟು ಪೇಳಿದರಷ್ಟೆ ತಾ ಮತ್ತಿಷ್ಟು ಮಾಡುವಾ|| ಪ ಸಿಕ್ಕ ಮನಿಮನಿ ಹೊಕ್ಕು ನೋಡುವನೆ| ತಾ ಸಿಕ್ಕದಿರುವವ ತತ್ಕ ತುಡಗಿವ ಠಕ್ಕನಾಗಿಹನೆ ಅಕ್ಕಕೇಳ್ಬಹಳಕ್ಕರದಿ ಕೈಯಿಕ್ಕಿ ಕಡದಿಹ ಚೊಕ್ಕ ಬೆಣ್ಣಿÂಯ ಚಿಕ್ಕ ಬಾಲಕರಿಗಿಕ್ಕಿ ತಿಂಬುವ ಮಿಕ್ಕ ಬೆಣ್ಣಿಯ ಬೆಕ್ಕಿಗ್ಹಾಕುವಾ|| 1 ಅಡಗಿ ಮನಿಯಲಿ ಅಡಗಿ ಕೊಂಡಿರುವಾ | ಅಲ್ಲಿರುವ ಭಾಂಡವು ಬುಡವು ಮೇಲಾಗ್ಯಾಡಕಲೇರಿಸುವಾ| ಅಡಿಗಳನು ಅಲ್ಲಿಡುತ ನೆಲೆವಿನಲಿಡುವ ಪಾಲ್ಮಸರ್ಕುಡುವ ಗೆಳೆಯರಿಗಿಡುವ ತೀರಲು ಬಿಡದೆ ಮತ್ತಾ ಗಡಗಿಯನು ನಿಂತು ನಗುವನಂತಾದ್ರೀಶನು 2 ಆರ್ಯಾ ಪರಿ ಗೋಪಿ ಯಶೋದಿಯು ತಾ ನಕ್ಕು|| ಕೋಪಿಸಲಿಲ್ಲವು ವ್ಯಾಪಕನಾಗಿಹ ಆ ಪುತ್ರನ ಸ್ನೇಹದಿ ಸಿಕ್ಕು|| 1 ಪದ್ಯ ಒಂದು ದಿನದಲಿ ಸ್ನೇಹದಿಂದ ರಾಮಾದಿಗಳು ಛಂದಾಗಿ ಕೊಡಿ ಆನಂದ ದಿಂದಾಡುತಿರೆ ಮುಂದವರು ತಾಯಿಯ ಮುಂಧೇಳಿದರು ನಿನ್ನ ಕಂದ ಕೃಷ್ಣನು ಮಣ್ಣು ತಿಂದನೆಂದು ಅಂದ ಮಾತನು ಕೇಳಿ ಮಂದಗಮನಿಯು ತಾನು ಕಂದನಾ ಕೈ ಹಿಡಿದು ಮುಂದಕ್ಕೆ ಕರದು ಭಯದಿಂದ ಇರುವವನ ಕಣ್ಲಿಂದ ನೋಡುತಲೆ ಅಂದಳೀಪರಿಯು ಹಿತದಿಂದ ಬಣ್ಣೆಸುತಾ|| 1 ಪದ, ರಾಗ:ಶಂಕರಾಭರಣ ತಾಳ:ತ್ರಿವಿಡಿ ಮಣ್ಣ್ಯಾಕ ತಿಂಬುವಿಯೋ| ಅಪ್ಪಯ್ಯಾ ಕೃಷ್ಣಾ| ಮಣ್ಣ್ಯಾಕ ತಿಂಬುವಿ ಉಣ್ಣಂದರವಲ್ಲಿ|| ಪ ಅನ್ನದೊಳಗ ಸವಿ ಬೆಣ್ಣಿಯೊಳಗ ಸವಿ ಹಣ್ಣಿನೊಳಗ ಸವಿ ಮಣ್ಣೇನು ಸವಿ ಕೃಷ್ಣ|| 1 ಮಣ್ಣುತಿಂದಿಹನೆಂದು ಸಣ್ಣವರ್ಹೇಳೋರು ಕಣ್ಣತಿ ಕಂಡು ನಿಮ್ಮಣ್ಣ ಹೇಳುವ ಮತ್ತ|| 2 ಸಣ್ಣಕ್ಕಿ ಅನ್ನವು ಬೆಣ್ಣೆ ಕಾಶಿದ ತುಪ್ಪ ಉಣ್ಣೊ ಮತ್ತಿಷ್ಟು ನಮ್ಮಣ್ಣಾನಂತಾದ್ರೀಶಾ|| 3 ಆರ್ಯಾ ಜನನಿಯ ನುಡಿ ಸಜ್ಜನರೊಡಿಯನು ತಾ ಅನುಸರಿಸುತ ಮನಸಿಗೆ ತಂದು| ಜನನ ರಹಿತ ಆ ಜನನಿಗೆ ನುಡದನು ಅನುಮಾನವಿಲ್ಲದೆ ಹೀಗೆಂದ|| 1 ಪದ, ರಾಗ:ಶಂಕರಾಭರಣ ಮಣ್ಣು ತಿಂದಿಲ್ಲವÀಮ್ಮ| ತಿಂದಿಲ್ಲ ಮಣ್ಣು ಎಂದ್ಯಂದಿಲ್ಲವಮ್ಮ ಪ ಬಟ್ಟಹಚ್ಚಿಕೈಲೆ ಮುಟ್ಟಿಲ್ಲವಮ್ಮಾ| ಧಿಟ್ಟಾಗಿ ಹೆಜ್ಜೆ ಹೊರಗಿಟ್ಟಿಲ್ಲವಮ್ಮಾ|| 1 ಎಲ್ಲೆ ಹೋಗದೆ ನಾ ಇಲ್ಲಿದ್ದೇನಮ್ಮಾ | ಎಲ್ಲಾರು ಈ ಪರಿ ಸುಳ್ಳಾಡೋರಮ್ಮ|| 2 ಆಣಿ ಕಾಣಮ್ಮ|| 3 ಪದ್ಯ ಕಾಯಜನಪಿತ ತನ್ನ ಬಾಯಲೀ ಪರಿಯನಲು ತಾಯಿ ಆ ಕಾಲದಲಿ ಬಾಯಿನೋಡುವೆನೆನಲು ತಾಯಿ ನೀ ನೋಡೆಂದು ಆ ಯಶೋದಿಯ ಮುಂದ ಆ ಎಂದು ಬಾಯದೆಗೆದ ಆಯತಾಕ್ಷಾ| ಬಾಯವಳಗೆ ಕಂಡಳಾ ತಾಯಿ ಲೋಕಗಳೆಲ್ಲಾ ಬಾಯಿವಳಗ ಗೋಕುಲವು ತಾಯಿಇರುವಳಲ್ಲೆ ಭ್ರಮಿಸಿದಳು ಮಾಯವೊ ಇದು ಸ್ವಪ್ನ ಪ್ರಾಯವೂ ಬುದ್ಧಿ ವ್ಯವಸಾಯವೊ ಎಂದು|| 1 ಲಗಬಗಿಯ ಜ್ಞಾನಚಕ್ಷುಗಳಿಂದ ನೋಡಿ ರೋಮಗಳುಬ್ಬಿ ಗಂಟಲವು ಬಿಗಿದು ಸಂತೋಷದಲಿ ಮಗನಲ್ಲ ಇವ ಸರ್ವ ಜಗದೊಡೆಯನೆಂತೆಂದು ಬಗಿಬಗಿಯ ಸ್ತುತಿಮಾಡಿ ಕೈಮುಗಿದಳಾಗೆ | ಜಗದೀಶ ಮತ್ತ ಲಗಬಗಿಯ ಮೋಹಪಾಶ ಬಿಗದು ಕಟ್ಟಿದನಾಗೆ ಮಗನೆಂದು ತಿಳಿದಾಕಿ ಬಿಗಿದಪ್ಪಿ ಮುದ್ದಾಡಿ ಹಗಲಿರುಳು ತಾನು ಕಾಲವನು ಕಳದಳಾ ಮಗನಾ ಸಂಭ್ರಮದಿ|| 2 ಖಡುನಂದಗೋಪನಾ ಮಡದಿ ಒಂದಿನದಲಿ ಬಿಡದೆ ದಾಸಿಯಕಿಲ್ಲ ಬಿಡಿಗೆಲಸ ಮಾಡುತಿರೆ ಖಡು ಹರುಷದಲಿ ದೂಸರು ಕಡವುವಳು ತಾನೇವ ನಡುವೆ ಕೃಷ್ಣನ ಲೀತಿ ನುಡುವುತಿಹಳು| ಧಡಿಯ ಪೀತಾಂಬರವು ಶಡಗರದಿ ಉಟ್ಟಿಹಳು ಮಡಿಯ ಕುಪ್ಪಸವು ಬಿಗಧಿಡದು ತೊಳ್ಳಿಹಳು ಆ ಮಡಿಯ ಕುಪ್ಪಸದೊಳಗ ಅಡಗಿರುವ ಶುಚವೆರಡು ಬಿಡದೆ ಮಗನಲಿ ಸ್ನೇಹ ತೊಡಕಿ ತೊರದಿವಹು|| 3 ನಡವಿನೊಡ್ಯಾಣ ಬಡನಡುವಿನಲಿ ಇಟ್ಟಿಹಳು ಕಡಗ ಶಂಕಣ ಕೈಲೆ ಕಡಗೋಲಧಗ್ಗವನು ಹಿಡಿದೆಳೆದು ಶ್ರಮದಿಂದ ಕಡುವಂಥ ಕಾಲದಲಿ ನಡುಗುತಿಹವೆರಡೂ ಕುಚ\ ಬಡನಡವು ಬಳಕುವುದು ಬಿಡದೆ ಮುಖದಲ್ಲಿ ಬೆವರು ಬಿಡುವುದದು ತುರಬಿನಲಿ ಮುಡಿದ ಮಲ್ಲಿಗಿ ಹೂವು ಸಡಲುತಿಹವು| ಗಡಬಡಿಸಿ ಕೃಷ್ಣ ಮಲಿ ಕುಡಿಯ ಬೇಕೆನುತ ಆ ಕಡುವ ಕಾಲಕ ಬಂದು ದೃಢವಾಗಿ ಕಡಗೋಲು ಹಿಡಿದು ಮಾತಾಡಿದನು| ಕಡುವ ಈ ಕೆಲಸ ನೀ ಬಿಡು ಅಮ್ಮ ಎನಗಮ್ಮಿ ಕೂಡು ಬ್ಯಾಗ ಎಂದು|| 4 ಬಿಟ್ಟು ಆ ಕೆಲಸವನು ಥಟ್ಟನೆ ಆ ಮಗನ ಘಟ್ಟ್ಯಪ್ಪಿಕೂಂಡು ಮುದ್ದಿಟ್ಡು ಮುಖ ನೋಡುತಲೆ ದಿಟ್ಟಾಗಿ ತೂಡೆಯ ಮ್ಯಾಲಿಟ್ಟು ಬಹುಸಂಭ್ರಮ ಬಟ್ಟು ತೊರದಿಹÀ ಮೊಲಿಯ ಕಟ್ಟಕಡಿಗ್ಯಾಪಾತ್ರ ಬಿಡ್ಹೊರಗ ಛಲ
--------------
ಅನಂತಾದ್ರೀಶ - ಕಥನಕಾವ್ಯಗಳು
ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಆರುತೀಯ ತಾರೆ ಶ್ರೀಹರಿಗೆ ಸುರಸಾರ್ವಭೌಮಗೆ ಪ ಬೇಗನೆ ಸಾರಸಾಂಬಕಿಅ.ಪ ಮಾರಜನಕಗೆ ವಾರಿಜಭವ ಕು- ಮಾರ ಜನಕ ಮುಖಾಮರೇಡ್ಯಗೆ ಚಾಪ ಮುರಿದ ಸುಕು- ಮಾರ ಶರೀರ ಸೀತಾರಾಮ ಚಂದ್ರಗೆ 1 ಇಂದಿರವರಗೆ ಮಂದರಧರ ಪು- ರಂದರಾನುಜ ಸಿಂಧುಶಯನಗೆ ಮಂದಯಾನೆ ಛಂದದಿಂದ ಬಂದೀಗ ವಂದೀಶ್ಯಾನಂದಾದಿ ಬೆಳಗಲು 2 ವಾರಣಭಯ ನಿವಾರಣ ಜಗ- ತ್ಕಾರಣಗೆ ಸುಖಪೂರ್ಣದೇಹಗೆ ಸೇರಿ ತನ್ನ ಸೇವಿಪರಘ ದೂರ ಕೊಪ್ಪರ ಶ್ರೀ ನಾರಸಿಂಹನಿಗೆ 3
--------------
ಕಾರ್ಪರ ನರಹರಿದಾಸರು
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಇಂದು ನಿನ್ನ ಪಾದಕಮಲವಾ | ಪೊಂದಿದೆ ದೇವಾ ಪ ಪುರಂದರಾನುಜ | ಸಿಂಧೂರ ವರಪೋಷಕ ಸುರ ವಿನುತ ಇಂದಿರೇಶಾ ಅ.ಪ ಪಿತನೆ ನಿನ್ನ ಒಮ್ಮೆ ನೆನೆಯದೆ | ಮತಿಹೀನನಾಗಿ ಸ್ಮøತಿ ಪುರಾಣ ಕಥೆಯ ಕೇಳದೆ | ವಿತತ ಮಹಿಮ ಪತಿತ ನಾನಾದೆ ಅತಿವೇಗದಿ ಎನ್ನನು ನೀ ಹಿತದಿ ಪಾಲಿಸು ಕ್ಷಿತಿಜೇಶನೆ 1 ವಿಧಿಸುರೇಂದ್ರವಂದ್ಯ ನಗಧರ ಬಿಡದೆ ಸಲಹೊ ಮದನವಿತ ನೀನಧಮ ದೈತ್ಯರ ಮದವಳಿದು ಮುದದಿ ಒದಗಿದ ಸುಧೆಯನು ಸುರರಿಗೆ ನೀ ದಯದಿಕ್ಕಿದ ಪದುಮನಯನಾ 2 ಸಿಂಧುಶಯನ ಶಾಮಸುಂದರ ವಂದಿಸುವೆ ಕಂದುಗೊರಳ ಸಖ ಶ್ರೀಮನೋಹರ ಕಂದನೆಂದೀಮಂದಭಾಗ್ಯನ ತಂದೆಯ ಮರೆಯದೆ ನೀ ಚಂದದೀ ಪೊರೆ ದಶಕಂಧರಾರಿ 3
--------------
ಶಾಮಸುಂದರ ವಿಠಲ
ಈ ಉಪಾಯವು ತೋರಿ ಕೊಡುವೆನು ಪ ಉದಯದಲಿ ಎದ್ದೀಗ ಊರ ವಾರ್ತಿಯ ಬಿಟ್ಟು ಮುದದಿಂದ ವೃಂದಾವನ ಸೇವಿಸಿ ವದನದಲಿ ಶ್ರೀ ಹರಿಯನಾಮ ಗುಣಕಥೆಗಳನು ಪದೋಪದಿಗೆ ಪಾಡಿ ಕೊಂಡಾಡು ನಲಿದಾಡು 1 ಆಮೇಲೆ ದೇವರೆಡೆ ರಂಗವಾಲಿಯನಿಕ್ಕಿ ಕಾಮುಕನಾಗದಲೆ ಸ್ನಾನ ಸಂಧ್ಯಾ ನೇಮ ನಿತ್ಯವ ಮುಗಿಸಿ ದೇವತಾ ಪೂಜೆಗೈದು ಪ್ರೇಮದಿಂದಲಿ ದಾನ ಕರದಲ್ಲಿ ಮಾಡೊ 2 ಮಂಗಳ ಮೂರುತಿಯ ಅಂತರಂಗದಿ ನಿಲಿಸಿ ಶೃಂಗಾರದುಡಿಗೆ ಇಡಿಗಿಯನು ತೊಡಿಸಿ ಮಂಗಳಾರುತಿ ಬೆಳಗಿ ಮನದಲ್ಲಿ ನಲಿನಲಿದು ಕಂಗಳಿಂದಲಿ ನೋಡು ಹರಿಯ ಕೂಡಾಡು 3 ಮೂಲ ಗುಣ ಅವತಾರ ಮಹಿಮೆ ಮಹ ಉನ್ನತ ಲೀಲೆ ವಿನೋದ ಅತಿ ಆಶ್ಚರ್ಯವ ವ್ಯಾಳವ್ಯಾಳೆಗೆ ಪೋಗಿ ಉತ್ತಮ ಜ್ಞಾನಿಗಳಿಂದ ಕೇಳು ಕರ್ಣದಲಿ ಪರಮ ಹರುಷದಲೆ4 ಹರಿಚರಣಕ್ಕೇರಿಸಿದ ಶಿರಿ ತುಲಸಿ ಚಂಪಕ ವರ ಜಾಜಿ ಮಲ್ಲೆ ಮಲ್ಲಿಗೆ ಕ್ಯಾದಿಗೆ ಪರಿಪರಿ ಗಂಧ ಚಂದನ ದಿವ್ಯ ಪರಿಮಳ ಸರಕು ನಾಶಿಕದಲ್ಲಿ ಕೊಳ್ಳು ಸುಖ ಬಾಳು 5 ಅಶಿವರುಣ ಮಧ್ಯ ತ್ರಿವೇಣಿ ವಿಷ್ಣುಪಾದ ಎಸೆÀವ ಕುರುಕ್ಷೇತ್ರ ಅಯೋಧ್ಯ ಮಾಯಾ ವೃಷಭ ಗಿರಿ ಶ್ರೀರಂಗ ಕಂಚಿ ಮೊದಲಾಗ್ಯುಳ್ಳ ಹೆಸರಾದ ಪುಣ್ಯನಿಧಿ ಮಟ್ಟು ದುರಿತವ ಕುಟ್ಟು 6 ಬೇಸರದಲೀಪರಿಚರಿಸಿದರೆ ಜನನಾದಿ ನಾಶನವÀ ಮಾಡಿ ನಾರದವರದನು ದಾಸ ಪುರಂದರಗೆ ವೊಲಿದಂತೆ ವಿಜಯವಿಠ್ಠ ಲೇಶ ವೆಂಕಟ ನಿನಗೆ ಪರಮ ಪದವೀಯನೀವ 7
--------------
ವಿಜಯದಾಸ
ಈ. ಯತಿವರ್ಯ ನಮನ ಮಧ್ವರಾಯರಿಗೆ ನಮೋ ನಮೋ ಗುರು ಮಧ್ವಸಂತತಿಗೆನಮೋ ನಮೋ ಪ ಸಂತತ ಶುಭವಾದೆನುತ ದಾಸಜನರಿಗೇಕ ಚಿತ್ತದಿಂದವಂದಿಸಿ ಬೇಡುವೆ ಅ.ಪ. ಕುಸುಮನಾಭರ ಸಮ ನಾಲ್ವರುಯೆಂದೆನಿಪಹಸನಾದ ಗುರುಗಳ ಸ್ಮರಿಸುತಾನ್ಯಾಯಸುಧಾಕಾರರಿಗೆ ನಮೋ ನಮೋ 1 ರಘುಕುಲನಂದನ ಸುಬ್ರಮಣ್ಯತೀರ್ಥ ಕರದಿ ಪಾಲಿತಗೆಬಿಡದೆ ಬೋಧಿಸಿದ ತಲೆಗೆ ನಮೋ ನಮೋ 2 ರಘೋತ್ತುಮಾಖ್ಯರ ಕಾರುಣ್ಯಪರೆಂದೆನಿಪರಿಗೆಸೂರಿತಾರೇಶ ಜಾತ ವಿಜೇಂದ್ರತನಯನೆನಿಪಶ್ರೀ ಸುಧೀಂದ್ರ ಪೋಷಿತ ಸದ್ಗುರು ರಾಘವೇಂದ್ರತಾತಗೆನಮೋ ನಮೋ 3 ಗುರುಪುರಂದರ ದಾಸರ ಸುಜಾತರ್ಗೆ ನಮೋ ವೈಕುಂಠದಾಸರಿಗೆ ನಮೋ ನಮೋ ಚನ್ನ ಚಿಕ್ಕಬದರಿನಿಲಯನ್ನ ಕಂಡರ್ಗೆ ಕರುಣಾಪಾತ್ರರುಯೆನಿಪವರದಗುರುಗೋಪಾಲ ಸು ಜಗನ್ನಾಥರಾಯರಿಗೆನಮೋ ನಮೋ 4 ತತ್ವಮಸಿ ವ್ಯಾಸ ಶ್ರೀಧರ ಶ್ರೀಗುರು ಶ್ರೀಪತಿ ಪ್ರಾಣೇಶಗುರು ವಿಜಯ ರಾಮಚಂದ್ರದಾಸರಿಗೆ ನಮೋ ನಮೋಬಾದರಾಯಣಗುರು ವೆಂಕಟ ಶ್ರೀನಿವಾಸ ಜಯಜಯೇಶತಂದೆವರದಗೋಪಾಲವಿಠಲನ ದಾಸರಿಗೆ ನಮೋ ನಮೋ5
--------------
ತಂದೆವರದಗೋಪಾಲವಿಠಲರು
ಈತÀನೀಗ ವಿಜಯ ವಿಠ್ಠಲಾ ಯಾತನೆಯನು ಕಳೆದು ಪೊರೆವಾ ಪ ಕರೆದರೊಂದೆ ನುಡಿಗೆ ಬಂದು ಕರುಣದಿಂದ ಮುಂದೆ ನಿಂದು ಕರವ ಪಿಡಿದು ಅಂದು ಅಭಯ ಕರವ ಪಾಲಿಸಿದ ದಯಾಸಿಂಧು ಪರಿಪರಿಯಿಂದಲಿ ಹಿಂದು ಮುಂದು ದುರಿತದಿಂದ ನೊಂದು ಬಂದು ಮೊರೆ ವಿಚಾರಿಸಿ ಸಾಕಿದನಿಂದು 1 ಅಚ್ಯುತಾನಂತನೆಂಬ ನಾಮಾ ಅಚ್ಚು ಸುಧೆಯೆನಗೆ ನೇಮಾ ನಿಚ್ಚ ಉಣಲಿಕಿತ್ತ ಪ್ರೇಮಾ ಚಚ್ಚಲದಲಿ ಪೂರ್ಣಕಾಮಾ ಹೆಚ್ಚಿ ಬಪ್ಪ ಮದದಾ ಸ್ತೋಮಾ ನುಚ್ಚು ಮಾಡಿ ಬಿಡುವ ಭೀಮಾ ಸುಚ್ಚರಿತ ಸಾರ್ವಭೌಮಾ2 ಮೊದಲೆ ಗುರು ಪುರಂದರದಾಸರಾ ಹೃದಯದೊಳಗೆ ನಿಂದಾ ಶೃಂಗಾರಾ ಉದಧಿಯೋ ಇದು ಬಣ್ಣಿಸಿಬಲ್ಲ್ಲಿರಾ ತ್ರಿದಶರೊಳಗೆ ಕಾಣೆ ಜ್ಞಾನರ ಸದಮಲಾನಂದ ಪೂರ್ಣ ಇಂದಿರಾ ಸದನಾ ಪ್ರತಾಪಗುಣ ಪಾರಾವಾರಾ ಪದೋಪದಿಗೆ ಎನ್ನಯ ಮನೋಹರಾ3
--------------
ವಿಜಯದಾಸ
ಉಗಾಭೋಗ ದಾಸ ಭಾಗ್ಯವೆ ಭಾಗ್ಯ ಹರಿಕೊಟ್ಟ ಸೌಭಾಗ್ಯ ದಾಸ ಭಾಗ್ಯಕ್ಕೆ ಜಗದಿ ಸರಿಮಿಗಿಲಿಲ್ಲವೆಂದು ದಾಸತ್ವವೇ ಮಧ್ವಮತ ಸಾರತತ್ವವೆಂದು ವ್ಯಾಸರಾಯರು ಜಗದಿ ದಾಸರ ನಿಲ್ಲಿಸಿದರು ದಾಸರಿಗಂಕಿತ ಇರಲೇಬೇಕೆನುತಲಿ ದಾಸ ಪುರಂದರವಿಠ್ಠಲನಿಗೆನಿಸಿದರು ಈ ಸುಮಾರ್ಗವ ತಂದೆ ಮುದ್ದುಮೋಹನ ಗುರು ಮಾಸದಂತೀಗ ಮತ್ತೆ ಬಿತ್ತಿ ಬೆಳೆಸಿದರು ದಾಸ ಜನಪ್ರಿಯ ಗೋಪಾಲಕೃಷ್ಣವಿಠ್ಠಲ ತಾ ಸುಮ್ಮನೀವ ತನ್ನ ನಿಜದಾಸರಿಗೆ ಮುಕ್ತಿ
--------------
ಅಂಬಾಬಾಯಿ
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು