ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ ಹೆಮ್ಮೆಯೆಂಬ ಹಲ್ಲು ಮುರಿದೆ ಪೂರ್ಣ ಸುಮ್ಮನಿರುವೆ ಕಂಡು ಸಂತತ ಚರಣ ಒಮ್ಮನದಿಂದೆ ತೃಪ್ತ್ಯಾಯಿತು ಜೀವನ 1 ಸದ್ಭೋಧದನ್ನ ನೀಡಲು ಓಡಿಬಂದೆ ಸದ್ಗುರುವೆ ಒಡೆಯ ನೀನಹುದೆಂದೆ ಬಿದ್ದುಕೊಂಡಿಹೆ ನಾ ನಿಮ್ಮ ಮನೆಯ ಮುಂದೆ ಬುದ್ಧಿವಂತರು ಬೆನ್ನಟ್ಟಿ ಹೋಗೆ ಹಿಂದೆ 2 ಹಳಿಯೆಂದರೆ ನಾ ಹೋಗೆ ಎಂದೆಂದಿಗೂ ಬಿಟ್ಟು ಗುಹ್ಯ ವಾಕ್ಯದ ಹೆಜ್ಜೆ ಮೆಟ್ಟು ಸುಳವುದೋರಲು ನಿಮ್ಮ ಸದ್ಗತಿ ಮುಕ್ತಿಯುಂಟು ತಿಳದ್ಹಾಕಿಹನಾ ನಿಮ್ಮ ಪಾದರಕ್ಷಕೆ ಗಂಟು 3 ಬಾಗಿಲಕಾಯಿಕೊಂಡು ಬಿದ್ದಿಹ್ಯ ನಿಮ್ಮ ಶ್ವಾನ ಹಗಲಿರುಳು ನಾ ನಿಮ್ಮ ಬೊಗುಳವೆ ನಿಜಗುಣ ಜಾಗಿಸುವದೆನ್ನೊಳು ನಮ್ಮಯ್ಯ ನಿಮ್ಮ ಖೂನ ಸುಗುಮದಿಂದ ದೊರೆಯಿತು ನಿಜ ಸ್ಥಾನ 4 ಹಿಡಿದು ಕಚ್ಚಿಹೆ ನಿಮ್ಮ ಪಾದರಕ್ಷ ಸಂಪೂರ್ಣ ಬಿಡೆ ಎಂದೆಂದು ನಾ ಹೋದರೆ ಜೀವ ಪ್ರಾಣ ಪಿಡಿದು ಮಾಡುವೆ ನಾ ಜತನ ಮೂಢ ಮಹಿಪತಿಗಿದೆ ಸುಖಸಾಧನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದ್ರೌಪದಿ ಕೃಷ್ಣಾ ಪಾಂಚಾಲಿ | ದೇವಿ |ಗೋಪತಿಧ್ವಜವಂದ್ಯೆಕಾಳಿ | ಆಹಾ |ಪಾಪಗಳೆಣಿಸದೆಲೇ ಪುನೀತನ | ಮಾಡೆ |ಶ್ರೀ ಪವನನ ಕರುಣಾಪಾತ್ರೆ ಸುಚರಿತ್ರೆ ಪವಾಣಿ ಭಕ್ತಿಗೆ ಅಭಿಮಾನಿ | ತಾಯಿನೀನೆ ಗತಿಯೆಲೆ ಸುಶ್ರೋಣಿ | ಶ್ರೀಶಧ್ಯಾನವ ಮಾಡಲು ಮನ ಪೋಣಿಸುವ |ದೇನನೊಲ್ಲೆನು ಪೂರ್ಣಜ್ಞಾನಿ| ಆಹಾ ||ದೀನ ರಕ್ಷಕೆ ಮಿಕ್ಕ ಹೀನ ದೇವರಪಾದ|ಕ್ಕೆ ನಮಿಸುವ ಮತಿಯನೆಂದು ಕೊಡದಿರೆ 1ಶಾರದೆ ಹರಿಯ ಕುಮಾರಿ | ನಿನ್ನ |ಸಾರಿದೆ ಕುಜನ ಕುಠಾರಿ | ದಯಾ |ವಾರಿಧೆ ಸುಜನೋಪಕಾರಿ | ತೋರೆ |ಸಾರೆಗರಿದು ಮುಕ್ತಿ ದಾರಿ | ಆಹಾ ||ಶ್ರೀ ರಮಣ್ಯುಳಿದೆಲ್ಲ ನಾರೀ ಶಿರೋಮಣಿ |ಆರಾಧಿಸುವೆ ಯೆನ್ನ ದೂರ ನೋಡಲು ಬೇಡ 2ಹಲವರಿಗೆಲ್ಲ ಬಾಯ್ದೆರೆದು | ಬೇಡಿ |ಕೊಳುವದೇನದೆ ದಿನ ಬರಿದು | ಸಾಧು |ನೆಲೆಯದೋರರು ಹತ್ಯಾಗರೆದು | ಬುದ್ಧಿ |ಕಲಿಸೆ ಭಾರತಿಯೆನ್ನ ಮರೆದು | ಆಹಾ |ಇಳೆಯೊಳು ಶ್ರಮಪಡಿಸಲು ಸಲ್ಲ ದಿತಿಜರ |ನಳಿದ ಪ್ರಾಣೇಶ ವಿಠಲಗಚ್ಛಿನ್ನ ಭಕ್ತಳೆ 3
--------------
ಪ್ರಾಣೇಶದಾಸರು