ಶ್ರೀನಿವಾಸ ನಿನ್ನ ಕರುಣಾ ಏನೆಂದು ಸ್ತುತಿಪೆ ಪ.
ಮಾನವರೊಳಗತಿ ಹೀನಬುದ್ಧಿಯಲಿ
ಏನೊಂದು ಮಾರ್ಗ ಕಾಣದೆ ಬಹು ಬಳಲಿ
ನಾನಾ ಚಿಂತೆಗಳಿಂದ ಧ್ಯಾನಿಪ ಸಮಯದಿ
ತಾನಾಗಿ ಕರುಣಿಸಿ ಮಾನ ಪಾಲಿಸಿದಿ 1
ಹುಣಾರುವೆನ್ನನು ನಾನಾ ತರದೊಳು
ಮಾನಹಾನಿಯ ಮಾಡಿ ಮರಳಿ ಬಾಧಿಸಲು
ತಾನೆಂದು ಪೇಳುವರಿಲ್ಲದಂತಿರಲು
ನೀನೆ ಬಂದೊದಗಿ ರಕ್ಷಿಸಿದೆ ಕೃಪಾಳು 2
ತದನಂತರದಲಿ ಕಷ್ಟದ ಬಾಧೆ ಸಹಿಸದೆ
ಮದರಾಶಿಯೆಂಬ ಪಟ್ಟಣಕೆ ನಾ ಸರಿದೆ
ಸದರವಲ್ಲೆಂದು ತಿಳಿದು ನಿನಗೊದರೆ
ವಿಧಿಪಿತ ನೀನಲ್ಯು ಪ್ರೇರಿಸಿ ಪೊರೆದೆ 3
ಸಿರಿವರ ನಿನ್ನಯ ಪರಮ ಮಂಗಳಮೂರ್ತಿ
ಹರುಷದಿಂದಲಿ ನೋಡಿ ಬರಲು ನಾನಿಲ್ಲಿ
ದೊರೆತನದಲಿ ಮಾನಿತಪದಲ್ಲಿ
ಇರಿಸಿ ನಿರಂತರ ಕಾವುದ ಬಲ್ಲಿ4
ಶರಣಾಗತ ರಕ್ಷಾಕರನೆ ಮಂದಿರದ
ವರನಾಗಿ ಸಲಹುವ ದೊರೆ ನಿನ್ನ ಬಿರುದ
ತರಳ ಬುದ್ಧಿಯೊಳೆಂತು ವರ್ಣಿಪೆ ವರದ
ಕರುಣಾ ಸಾಗರ ವೆಂಕಟಾದ್ರಿಯೊಳ್ಮೆರೆದ 5