ಲಕ್ಷ್ಮೀದೇವಿಯ ಪ್ರಾರ್ಥನೆ
ಶ್ರೀನಿವಾಸನ ಕರುಣಾನು ಸಂಸರಣಿ
ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ.
ಅಜಭವಾದಿಗಳಿಗೆ ನಿಜಪದದಾಯಿನಿ
ವೃಜಿನ ಸಮೂಹ ನಿವಾರಿಣಿ
ಕುಜನ ಕುಠಾರಿಣಿ ಕುಂಜರ ಗಮನೆ ಪಾಲು
ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1
ಆರಿಗೆ ನಿನ್ನ ಕರುಣಾರಸ ದೊರೆವದೊ
ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ
ವೈರಿ ಜನರು ಬೇಗ ಗಾರಾಗದುಳಿವರೆ 2
ನೀನೊಲಿಯಲೂ ಸರ್ವ ಮಾನವರೊಳಗತಿ
ಮಾನ ಮಹತ್ವಾದಿ ಸದ್ಗುಣವೂ
ತಾನಾಗಿ ಬರುವವಿಂನೇನೆಂದು ನಿನ್ನ ಮಹಿ-
ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3
ಮಂದಿರದೊಳಗೆ ನೀ ನಿಂದು ನಗುತ ನಲಿ
ವಂದ ನೋಡುತ ಮಿತ್ರ ಬಂಧುಗಳು
ಮಂದರಧರ ತಾನೆ ನಿಂದು ರಕ್ಷಿಸನೆಂದಾ
ನಂದ ಪೂರಿತ ಮನದಿಂದ ಸೇರಿರುವರು 4
ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ
ದಿರಿಸಿ ಚತುರ್ವಿಧ ಪುರುಷಾರ್ಥವಾ
ಕರುಣಿಪೆನೆಂದು ಕಂಠಸರದ ಮಧ್ಯೂರದಲಿ
ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5