ಒಟ್ಟು 2 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಸೆವ ಸಮುದ್ರವ ಮಥನ ಮಾಡಿತಯ್ಯಾ ನಿನ್ನ ನಾಮ ಹರಿ ಶಶಿಧರ ಶಿವನಿಗೆ ಶಾಂತಿಮಂತ್ರಾಯ್ತಯ್ಯಾ ನಿನ್ನ ನಾಮ ಪ ಚೋರನೆನಿಸಿವನ ಸೇರಿಕೊಂಡವನಿಗೆ ನಿನ್ನ ನಾಮಾ ಪಾರ ಜ್ಞಾನವಿತ್ತು ಮುಂದಕ್ಹಾಕಿತಯ್ಯಾ ನಿನ್ನ ನಾಮ1 ಮೀರಿದ ನಿನ್ನ ಮಾಯೆಗೆ ಸಿಲ್ಕಿದ್ಯೆತಿವರಗೆ ನಿನ್ನ ನಾಮ ಭೂರಿಕರುಣದಿನೆರಗಿ ರಕ್ಷಿಸಿತಯ್ಯಾ ನಿನ್ನ ನಾಮ 2 ಅಮೃತ ಮಾಡುಣಿಸಿ ಪಾಲಿಸಿತಯ್ಯಾ ನಿನ್ನ ನಾಮ 3 ಕಡುರೋಷದೆಸೆದ ವಜ್ರಾಯುಧದೆಚ್ಚೆ ನಿನ್ನ ನಾಮ ಸಿಡಿ ಮುಳ್ಳಿಗಿಂತ ಕಡೆಮಾಡಿಬಿಟ್ಟಿತಯ್ಯಾ ನಿನ್ನ ನಾಮ 4 ನೂರುಯೋಜನದ ವಿಸ್ತೀರ್ಣದ್ವಾರಿಧಿಯ ನಿನ್ನ ನಾಮ ತೋರಿಸಿತೊಂದು ಕಿರಿ ಸರೋವರ ಸಮಮಾಡಿ ನಿನ್ನ ನಾಮ 5 ಮೀರಿದ ದೈತ್ಯರಪಾರಂಗರುವಮಂ ನಿನ್ನ ನಾಮ ಹೀರಿ ಕ್ಷಣದಿ ಸುರಲೋಕ ಸೇರಿಸಿತಯ್ಯಾ ನಿನ್ನ ನಾಮ 6 ತ್ರಿಣಯರ್ಹೊಗಳಲು ಶಕ್ತಿ ಸಾಲದ ಪಟ್ಟಣ ನಿನ್ನ ನಾಮ ಅಣುಗಿಂತ ಅಣುಮಾಡಿ ತೋರಿಸಿತ್ಹನುಮಂಗೆ ನಿನ್ನ ನಾಮ 7 ಅಸಮಪರಾಕ್ರಮ ಅಸುರಕುಲಾಳಿಯಂ ನಿನ್ನ ನಾಮ ನಶಿಸೆ ಶಿವಪುರ ಭಸ್ಮಮಾಡಿತಯ್ಯಾ ನಿನ್ನ ನಾಮ 8 ಪಕ್ಷಿಗಮನ ಪಾಂಡುಪಕ್ಷನೆನಿಸಿತಯ್ಯಾ ನಿನ್ನ ನಾಮ ಅಕ್ಷಯಾಂಬರವಿತ್ತು ಸತಿಯ ರಕ್ಷಿಸಿತಯ್ಯಾ ನಿನ್ನ ನಾಮ 9 ಕಾದು ದಳ್ಳುರಿಹತ್ತಿದೆಣ್ಣೆ ಕೊಪ್ಪರಿಗೆಯ ನಿನ್ನ ನಾಮ ಸುಧನ್ವಂಗನುಪಮ ಶೀತಲವೆನಿಸಿತು ನಿನ್ನ ನಾಮ 10 ಅರಿತು ಭಜಿಪರ ಭವರೋಗಕ್ವೈದ್ಯೆನಿಸಿತು ನಿನ್ನ ನಾಮ ಅರಿದು ಭಜಿಪೆ ನಿನ್ನವರ ಮುಕ್ತಿ ಕರುಣಿಸೋ ಸಿರಿರಾಮ 11
--------------
ರಾಮದಾಸರು