ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
124-1ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಸತ್ಯವರ್ಯ ತೀರ್ಥರು ಭಾವಿ ಸತ್ಯಪ್ರಿಯರುಗೋದಾವರಿಯಿಂದ ರಾಯಚೂರು ಪೋಗಿಆ ದೇಶ ಅಧಿಪತಿ ಪೀತಾಸಿಂಗನಿಗೆಒದಗಿ ಅನುಗ್ರಹಿಸಿ ಬಂದರು ಮೇಲುಕೋಟೆ 1ಮೇಲುಕೋಟೆ ರಾಜನು ಸ್ವಾಮಿಗಳಲಿ ಬಹುಭಕ್ತಿಯಿಂದಲಿ ಪೂಜೆ ಮಾಡಿದನು ಆಗ್ಗೆಮೇಲುಕೋಟೆ ಗಿರಿ ಮೇಲೆ ನರಸಿಂಹನ ಗುಡಿಬೀಗ ಹಾಕಿತ್ತು ಸ್ವಾಮಿಗಳು ಹೋದಾಗ 2ಶ್ರೀ ಸ್ವಾಮಿಗಳು ಬಾಗಿಲ ಸ್ಪರ್ಶ ಮಾಡಿದರುಸ್ಪರ್ಶಮಾತ್ರದಿ ಬಾಗಿಲು ತೆರೆಯಿತು ಆಗಶ್ರೀಸ್ವಾಮಿ ನರಸಿಂಹನ ಮುದದಿ ಪೂಜಿಸಲುಶ್ರೀ ಸ್ವಾಮಿಗಳ ಅರಸ ಪೂಜಿಸಿದನು 3ತರುವಾಯ ಶ್ರೀರಂಗಪಟ್ಟಣಕೆ ಬಂದುಶ್ರೀರಂಗನಾಥನ್ನ ಸೇವಿಸಲು ಮುದದಿಶ್ರೀರಂಗಪಟ್ಟಣದ ಅರಸನು ಭಕ್ತಿಯಿಂಪರಿಪರಿವಿಧದಿ ಕಾಣಿಕೆಗಳ ಅರ್ಪಿಸಿದ 4ರತ್ನ ಖಚಿತ ಪೂಜಾ ಸಾಧನಗಳು ಸ್ವರ್ಣರಜತ ದಂಡಗಳುಶ್ವೇತಛತ್ರಇಂಥಾವು ಸಂಸ್ಥಾನ ಚಿಹ್ನೆಗಳ ರಾಜನುಇತ್ತನು ಶ್ರೀಗಳಿಗೆ ಭಕ್ತಿಪೂರ್ವಕದಿ 5ನಂತರ ಸ್ವಾಮಿಗಳು ಶ್ರೀತುಂಗಭದ್ರಾದಿತೀರ್ಥಾಟನ ಮಾಡಿ ಗದ್ವಾಲು ಸೇರಿಮತ್ತೆತೋಂಡದೇಶದ ಆರ್ಕಾಟಿಗೆ ಹೋಗಿಆದೇಶ ಮಂತ್ರಿಯಿಂದ ಕೊಂಡರು ಸೇವ 6ಈ ಸಮಯ ಶ್ರೀ ಸತ್ಯವಿಜಯ ತೀರ್ಥಾರ್ಯರುಸಂಸ್ಥಾನ ಸಹ ಹತ್ತಿರ ಪ್ರಾಂತದಲ್ಲಿಶಿಷ್ಯೋದ್ಧಾರಕ್ಕೆವಿಜಯಮಾಡುತ್ತಿರಲುಶ್ರೀ ಸತ್ಯವರ್ಯರು ಬಂದರು ಆರಣಿಗೆ 7ಆರಣೀರಾಯನು ವೇಂಕಟನು ಸ್ವಾಮಿಗಳಚರಣಕ್ಕೆ ಎರಗಿ ಪೂಜೆಯನ್ನು ಸಲ್ಲಿಸೇವಸ್ತ್ರಾಭರಣ ಹೇಮಾಭೀಷೇಕಾದಿಗಳಅರ್ಪಿಸಿದ ಭಕ್ತಿಯಿಂ ಕೃಷ್ಣಾಜಿಪಂತ 8ಈ ರೀತಿ ಪೂಜೆ ಮರ್ಯಾದೆಗಳ ತಾ ಕೊಂಡುಹರಿಕೃಷ್ಣ ಶ್ರೀಶನಿಗೆ ಸಮಸ್ತ ಅರ್ಪಿಸುತಹೊರಟರು ಮುಂದಕ್ಕೆ ದಿಗ್ವಿಜಯ ಕ್ರಮದಲ್ಲಿಪುರಿ ಜನರು ಜಯ ಘೋಷ ಮಾಡುತಿರಲು 9ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 10 ಪ
--------------
ಪ್ರಸನ್ನ ಶ್ರೀನಿವಾಸದಾಸರು
124-2ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಆರಣೀ ಸಜ್ಜನರ ಸೌಭಾಗ್ಯ ಏನೆಂಬೆಸೂರಿವರ ಸತ್ಯವರ್ಯ ಭಾವಿ ಸತ್ಯಪ್ರಿಯರಆರಾಧಿಸಿ ಕಳುಹಿಸಿದ ಸ್ವಲ್ಪ ಕಾಲದಲೆಆರಣಿಗೆ ಬಂದರು ಸತ್ಯವಿಜಯಾರ್ಯ 1ಸಂಸ್ಥಾನ ಮೂರ್ತಿಸ್ಥ ಹರೀಪೂಜೆ ವೈಭವವುನಿತ್ಯಪ್ರವಚನ ಪಾಠ ಕೀರ್ತನೆ ಏನೆಂಬೆಸತ್ಯವಿಜಯರು ಯುಕ್ತ ಕಾಲದಲಿ ದೇಹಅದಾರುಢ್ಯ ಹೊಂದಿದರು ರಾಜಗೆ ಹೇಳಿದರು 2ತಮ್ಮ ತರುವಾಯ ಸಂಸ್ಥಾನ ಸರ್ವಾಡಳಿತಶ್ರೀಮನೋಹರ ಹರಿಪ್ರಿಯರು ಸತ್ಯವರ್ಯಸುಮನೋಹರ ಸತ್ಯಪ್ರಿಯ ತೀರ್ಥ ನಾಮದಲಿರಮಾರಮಣನ ಸೇವೆಗೆ ವಹಿಸಬೇಕೆಂದು 3ಆದ ಕಾರಣ ಆ ಸ್ವಾಮಿಗಳ ಕರೆತರಿಸಿಭಕ್ತಿ ವಿನಯದಿ ಮಠವ ಒಪ್ಪಿಸಬೇಕೆಂದುಹಿತದಿ ಆಜ್ಞಾಪಿಸಿ ಹರಿಪುರಯೈದಿದರುಚೈತ್ರ ಕೃಷ್ಣ ಪುಣ್ಯದಿನ ಏಕಾದಶಿ ದ್ವಾದಶಿಲಿ 4ಆರಣೀರಾಜನು ಸತ್ಯವರ್ಯ ತೀರ್ಥರಲಿಅರಿಕೆ ಮಾಡಿ ಸ್ವಾಮಿಗಳು ಕೆಲವು ದಿನಮೇಲ್ಆರಣಿಗೆ ಪೋದರು ಶ್ರೀಮಠದ ಆಡಳಿತಹರಿಪ್ರೀತಿ ಸೇವೆಗೆ ಕೊಂಡರು ತಾವು5ಮೊದಲೇವೆ ಶ್ರೀ ಸತ್ಯವರ್ಯ ತೀರ್ಥರ ಮಠಸಂಸ್ಥಾನ ವೈಭವದಿ ಪ್ರಕಾಶಿಸುತ್ತಿತ್ತುಸತ್ಯ ವಿಜಯರ ಕೋರಿಕೆಯಂತೆ ಈವಾಗಹೊಂದಿದರು ಸತ್ಯವಿಜಯರ ಸಂಸ್ಥಾನ 6ಸತ್ಯಾಭಿನವರ ಪದ್ಧತಿಯಲ್ಲಿ ಶ್ರೀಮಠಸತ್ಯಪೂರ್ಣ ಸತ್ಯವಿಜಯರಿಂದ ವೈಭವದಿಇದ್ದ ಆಮಠ ಪೀಠ ಅಲಂಕರಿಸಿದರೀಗಸತ್ಯವರ್ಯ ವೈರಾಗ್ಯ ನಿಧಿಯು ಶ್ರೀಮಾನ್ 7ಬಾದರಾಯಣರಾಮ ಯದುಪತಿಯ ಸೇವೆಗೆಪ್ರೀತಿಗೆ ಸ್ವಾಮಿಗಳು ಮಠವನ್ನು ಹೊಂದಿಸತ್ಯವಿಜಯರು ಕೋರಿದಂತೆ ತಮ್ಮಯನಾಮಸತ್ಯಪ್ರಿಯತೀರ್ಥರೆಂದು ಕೊಂಡರು ಮುದದಿ 8ಧನ ಸತ್ಯಪ್ರಿಯ ತೀರ್ಥರುವಿಜೃಂಭಣೆಯಿಂದ ಚರಿಸಿ ಪುರಜನರ್ಗೂರಾಜನಿಗೂ ಫಲ ಮಂತ್ರಾಕ್ಷತೆಗಳ ಕೊಟ್ಟುರಾಜ ಮಾರ್ಯಾದೆ ಕೊಂಡುಹೊರಟರು ಅಲ್ಲಿಂದ 9ಆಂಧ್ರದೇಶದ ಕಡಪ ಉತ್ತರ ಕರ್ನಾಟಕಮತ್ತು ದಕ್ಷಿಣ ಕರ್ನಾಟಕ ಶ್ರೀರಂಗಇಂಥ ಸ್ಥಳಗಳಲ್ಲಿ ಸಂಚಾರ ಮಾಡುತ್ತಾಹಿತದಿ ಅನುಗ್ರಹಿಸಿದರು ಭಕ್ತವೃಂದಕ್ಕೆ 10ಪೀತಾಸಿಂಗ ರಾಘವಜಿ ಮುರಾರಿ ಮೊದಲಾದಕೃತಜÕ ಜನ ಪ್ರಮುಖರ ಭಕ್ತಿ ಯುತವಾದಭೂದಾನ ಗ್ರಾಮದಾನ ಮಾಡಿದ್ದ ಸ್ವೀಕರಿಸಿಶ್ರೀದನಿಗೆ ಅರ್ಪಿಸುತ ಒಲಿದರು ಸಜ್ಜನಕೆ 11ರಾಯಚೂರು ಹರಿಯಾಚಾರ್ಯರೆಂಬ ವೈಷ್ಣವಕಾಯವಾಙ್ಮನ ಇದ್ದ ಬ್ರಾಹ್ಮಣ ದಂಪತಿಯುಪ್ರಿಯ ವತ್ಸರುಗಳೊಡೆ ಸ್ವಾಮಿಗಳ ಕಡೆ ಬಂದುವಿನಯದಿ ನಮಿಸಿ ನಿಂತರು ಮಠದಲ್ಲಿ 12ಹರಿಯಾಚಾರ್ಯರ ಮಕ್ಕಳಲಿ ರಾಮಾರ್ಯಸ್ಫುರದ್ವರ್ಚಸ್ ಯುತ ಬಹುಚೂಟಿಯಾದ ಮಗನುಶ್ರೀ ಶ್ರೀಗಳು ಆ ಹುಡುಗಗೆ ಮಠದಲ್ಲಿಶಾಸ್ತ್ರಾಭ್ಯಾಸಾದಿಗಳ ಒದಗಿಸಿದರು 13ಕಾಲಕ್ರಮದಲ್ಲಿ ವಟುಗೆ ವಿವಾಹ ಮಾಡಿದರುಮಕ್ಕಳು ರಾಮಚಾರ್ಯರಿಗೆ ಎರಡುಮಾಲೋಲ ಇಚ್ಛೆಯಿಂ ಸ್ವಾಮಿಗಳು ದಕ್ಷಿಣಸ್ಥಳ ಯಾತ್ರೆ ಗೈದರು ಸೇತು ಸಮೀಪ 14ಮಾನಾಮಧುರೆಯ ವೇಗವತೀ ತೀರವುತನ್ನ ಮಠವನ್ನು ಸ್ಥಾಪಿಸಿದರು ಅಲ್ಲಿಘನಮಹಾ ಸೂರಿಯು ರಾಮಚಾರ್ಯರನ್ನತನ್ನ ಸಮೀಪದಲ್ಲೇ ನಿಲ್ಲಿಸಿದರು 15ಬಹು ವರ್ಷ ಸಂನ್ಯಾಸ ರತ್ನರಾಗಿ ಬೆಳಗಿವಹಿಸಿ ಸಂಸ್ಥಾನವ ಏಳು ವರ್ಷಶ್ರೀಹರಿಗೆ ಪ್ರಿಯರಾಮಾಚಾರ್ಯರಿಗೆ ಸಂನ್ಯಾಸವಿಹಿತದಿ ಇತ್ತರು ಶ್ರೀ ಸ್ವಾಮಿಗಳು 16ಸತ್ಯಪ್ರಿಯ ಗುರುವರ್ಯ ತಮ್ಮ ಪ್ರಿಯ ಶಿಷ್ಯರಿಗೆಸತ್ಯಬೋಧ ತೀರ್ಥವೆಂಬ ಸಂನ್ಯಾಸ ನಾಮವನ್ನಿತ್ತುಚೈತ್ರ ಶುದ್ಧ ಹದಿಮೂರನೆ ಪುಣ್ಯ ದಿನದಿಯದುಪತಿಯ ಧ್ಯಾನಿಸುತ ಹರಿಪುರಯೈದಿದರು 17ಮತ್ತೊಂದು ಅಂಶದಲಿ ಬೃಂದಾವನದಲ್ಲಿನಿಂತಿಹರು ಅಶ್ವಾಸ್ಯಧ್ಯಾನಪರರಾಗಿಹಿತದಿ ಕೊಡುತಿಹರು ವಾಂಛಿತವ ಶರಣರಿಗೆಸದಾನಮೋ ಮಾಂಪಾಹಿ ಗುರುವರ್ಯ ಶರಣು 18ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 19 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಥಮ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಹಂಸನಾಮಕ ವಿಷ್ಣು ವನರುಹಾಸನಸನಕದೂರ್ವಾಸಮೊದಲಾದಗುರುವಂಶಜಾತದಶಪ್ರಮತಿಸರಸಿಜನಾಭನರಹರಿತೀರ್ಥಬಿಸಜಚರಣಂಗಳಲಿ ಸತತ ನಾ ಶರಣು |1ಮಾಧವಅಕ್ಷೋಭ್ಯ ಜಯವಿದ್ಯಾಧಿರಾಜ ರಾ-ಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯತತ್ವಜÕ ರಘೂತ್ತಮಾರ್ಯರಿಗೆವೇದವ್ಯಾಸ ಯತಿಗಳಿಗೆ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯ ಸತ್ಯಬೋಧರಿಗೆಭೃತ್ಯನಾ ಎನ್ನ ವಂದನೆಗಳರ್ಪಿಸುವೆ4ಸತ್ಯಬೋಧರ ಮಹಿಮೆ ಬಹು ಬಹು ಬಹುಳವುವೇದ್ಯ ಎನಗೆ ಅತಿ ಸ್ವಲ್ಪ ಮಾತ್ರಆದರಲ್ಲೂ ಬಿಟ್ಟದ್ದು ಬಹು ಇಲ್ಲಿ ಪೇಳಿಹುದುಅತಿ ಕಿಂಚಿತ್ ಅಣುಮಾತ್ರ ಸುಜನರು ಲಾಲಿಪುದು 5ರಾಮಾಚಾರ್ಯರು ಸಣ್ಣ ವಯಸ್ಸಿನವರುನೇಮದಿಂದಾಶ್ರಮೋಚಿತ ಕರ್ಮಪರರುರಾಮ ಹಯಶೀರ್ಷ ನರಸಿಂಹನ ಗುಣರೂಪಸಮ್ಮುದದಿ ಜ್ಞಾನಭಕ್ತಿಯಲಿ ಧ್ಯಾನಿಪರು 6ಈ ರಾಯಚೂರು ರಾಮಾಚಾರ್ಯರೇ ಸತ್ಯಪ್ರಿಯಗುರುಗಳ ಸಂಸ್ಥಾನ ಪೀಠಕ್ಕೆ ಬಂದುಸೂರಿವರ್ಯರು ಸತ್ಯಬೋಧ ತೀರ್ಥರು ಎಂದುಧರೆಯಲ್ಲಿ ಪ್ರಖ್ಯಾತರಾಗಿಹರು ಕರುಣಿ 7ಬಾದರಾಯಣಮಾಧ್ವ ಸಚ್ಛಾಸ್ತ್ರ ಬೋಧಿಸಿಅಧಿಕಾರಿಗಳ ಉದ್ಧರಿಸಿ ಅಲ್ಲಲ್ಲಿವೇದ ವಿರುದ್ದ ದುರ್ವಾದಗಳ ಕತ್ತರಿಸಿಮೇದಿನಿಸಜ್ಜನರ ಪೊರೆದಂಥ ಧೀರ 8ಪೀಠ ಆರೋಹಿಸಿದ ಪೂರ್ವಗುರುಗಳ ಪೋಲುಮಠಕ್ಕೆ ಮಾನ್ಯಗಳ ಅಭರಣಗಳನ್ನಪಟ್ಟಣ ಪ್ರಮುಖರು ಧನಿಕರು ಭೂಪಾಲರುಕೊಟ್ಟದ್ದು ಅಲ್ಲಲ್ಲಿ ಸ್ವೀಕರಿಸಿದರು 9ಸತ್ಯಪ್ರಿಯರಾರಾಧನೆಗಾಗಿ ಬಂದಿದ್ದಸತ್ಯಬೋಧರ ಮಹಿಮೆಯನ್ನು ಲೆಕ್ಕಿಸದೆಬಂಧಿಸಿದ ಶ್ರೀಮಠವ ರಾಮೇಶ್ವರ ರಾಜಬಂತು ಸೈನ್ಯವು ತಿರುಚಿನಾಪಳ್ಳಿಯಿಂದ 10ತಿರುಚಿನಾಪಳ್ಳಿಯಿಂದ ಜಾನೋಜಿರಾವ್ ನಿಂಬಳ್ಕಾರನು ಸೈನ್ಯವನು ಕಳುಹಿಸಿದನುವಿರೋಧ ಬಿಡುಗಡೆ ಮಾಡಿ ಆ ರಾಜನ್ನ ಶಿಕ್ಷಿಸಿಗುರುಗಳ ಕರೆತಂದ ತಿರುಚಿನಾಪಳ್ಳಿಗೆ 11ತಿರುಚಿನಾಪಳ್ಳಿಯ ಮ್ಲೇಛ್ಬರಾಜನು ಈಗುರುಗಳ ಪ್ರಭಾವವ ಅರಿಯದೆ ಮೌಢ್ಯದಲಿವರಧನಾಪಹಾರಿಯು ಎಂದು ಆಪಾದಿಸಿನಿರೋಧಿಸಿದ ಶೋಧನೆ ಮಾಡುವ ನೆವದಿ 12ಪರಿಶೋಧನೆಯಲ್ಲಿ ಮೈಲಿಗೆ ಆಗದಿರೆಗುರುಗಳು ರಾಮದೇವರ ಪೆಟ್ಟಿಗೆಯತಿರುಕಾಟ್ಟು ಪಳ್ಳೀಗೆ ಕಳುಹಿಸಿ ಉಪೋಷಣದಿಹರಿಯ ಮಾನಸ ಪೂಜೆ ಮಾಡುತ ಕುಳಿತರು 13ಜಾನೋಜಿರಾಯನು ವಾದಿಸೆ ಸುಲ್ತಾನತನ್ನ ಸರ್ಕಾರ ಶೋಧಕರ ಕಳುಹಿಸಿದತನ್ನ ಹಿರಿಯರ ಮತ್ತು ಇತರ ರಾಜರುಗಳಚಿಹ್ನೆ ಮುದ್ರಿತ ಒಡವೆ ಮಾತ್ರವೆ ಕಂಡ 14ವಿರೋಧ ನೀಗಿಸಿ ನಿಂಬಳ್ಕರನ ಕೈಯಿಂದಹರಿಪೂಜೆಗುರುಪೂಜೆ ಮಾಡಿಸಿ ಕಾಣಿಕೆಯುಗುರುತರದಿ ಅರ್ಪಿಸಿದ ಆ ಮ್ಲೇಛ್ಭರಾಜನುಗುರುಸತ್ಯಬೋಧರ ಕೀರ್ತಿವರ್ಧಿಸಿತು15ತಿರುಕಾಟ್ಟುಪಳ್ಳಿಯಿಂದಲಿ ಪೂಜೆ ಪೆಟ್ಟಿಗೆಯತರಿಸಿ ಹರಿಪೂಜೆಯ ಮಾಡಿ ಮುದದಿಂದಮರ್ಯಾದೆ ಕಾಣಿಕೆಗಳಕೊಂಡು ದಿಗ್ವಿಜಯಚರಿಸಿದರು ಹರಿಗುರು ತೀರ್ಥಸ್ಥಳಗಳಿಗೆ 16ಮಾರ್ಗದಲಿ ತಂಜಾವೂರಿನ ರಾಜನುಶ್ರೀ ಗುರುಗಳಿಗೆ ಸೇವೆಸÀಲ್ಲಿಸಿದನಗರದಲಿ ಪ್ರಮುಖಪಂಡಿತಗೋಸಾಯಿಯನಿಗಮಾಂತ ವಾದದಲಿ ಸೋಲಿಸಿದರು 17ಕುಂಭಕೋಣದಿ ಬ್ರಾಹ್ಮಣರ ಬೀದಿಯಲ್ಲಿಗಂಭೀರತರ ದೊಡ್ಡ ಮಂಟಪಕಟ್ಟಿಸಂಭ್ರಮದಿ ಹರಿಪೂಜೆಗೈದು ವಿದ್ವಜ್ಜನಸಭೆಯಕೂಡಿ ವಾಕ್ಯಾರ್ಥ ನಡೆಸಿದರು 18ಶ್ರೀರಂಗ ಕ್ಷೇತ್ರ ತಂಜಾವೂರು ತರುವಾಯಸಾರಂಗಪಾಣಿ ಕುಂಭೇಶ್ವರ ಕ್ಷೇತ್ರಪರಿಕಲ್ಲು ತಿರುಕೋಯಿಲೂರು ಮಾರ್ಗದಿ ಬಂದುಸೇರಿದರು ತಿರುಪತಿ ವೇಂಕಟಾಚಲಕ್ಕೆ 19ಶ್ರೀರಂಗನಾಥನಿಗೆ ಶ್ರೀರಂಗನಾಯಕಿಗೆಕ್ಷೀರಾಬ್ಧಿಯಲಿತೋರ್ದ ಧನ್ವಂತರಿಗೆನೀರುಮಧ್ಯದಿ ಇರುವ ಜಂಬುಕೇಶ್ವರನಿಗೆಭಾರಿ ಪುಣ್ಯದೆ ಕಾವೇರಿಗೆ ನಮಿಪೆ 20ಶಾಙ್ರ್ಗಧರಚಕ್ರಧರಕುಂಭೇಶ್ವರಅಂಬಮಂಗಳನಾಯಕಿ ವಿಜಯೀಂದ್ರರಿಗೆನಾಗೇಶ್ವರನಿಗೆ ವಿದ್ಯುಪುರಿ ಶ್ರೀಶನಿಗೆಭೃಗುಸುತಪತಿ ಶ್ರೀನಿವಾಸನಿಗೆ ನಮಿಪೆ 21ಪರಿಕಲ್ಲು ಎಂಬುವ ಗ್ರಾಮದಲಿ ನರಸಿಂಹಶ್ರೀರಮಾಪತಿ ಇಹನು ಸರ್ವೇಷ್ಟದಾತಪರಿಪರಿ ಭಕ್ತರ ಪೀಡೆಗಳ ಪರಿಹರಿಪಶರಣಾದೆ ಶ್ರೀ ಲಕ್ಷ್ಮಿ ನರಸಿಂಹನಲ್ಲಿ 22ತಿರುಕೋಯಿಲೂರಲ್ಲಿ ಮೂರ್ಲೋಕ ಅಳೆದವನಭಾರಿಆಲಯಉಂಟು ಶಿವಕುಮಾರರಿಗೂಪಾತ್ರ ವಿಶಾಲವು ದಕ್ಷಿಣ ಪಿನಾಕಿನಿಯತೀರದಲಿ ಶ್ರೀರಘೂತ್ತಮರು ಕುಳಿತಿಹರು 23ಪಿನಾಕಜಾ ಈ ಪಿನಾಕಿಯಲ್ಲಿಹನುಅನಿಮಿತ್ತ ಬಂಧುಶ್ರೀಕೇಶವ ಸರ್ವೇಶಸ್ನಾನ ಜಪದಾನಗಳು ಪಣ್ಯಪ್ರದತತ್ತೀರವನದಲ್ಲಿ ಶ್ರೀ ರಘೂತ್ತಮರ ವೃಂದಾವನ 24ಶ್ರೀಯುತ ತ್ರಿವಿಕ್ರಮ ವಿಶ್ವರೂಪಗೆ ನಮೋಕಾತ್ಯಾಯನಿ ಶಿವಗೂ ಸ್ಕಂಧವಲ್ಲಿಗೂಕಾಯವಾಕ್ಕು ಮನದಿ ಟೀಕಾಭಾವಬೋಧರಿಗೂಕಾಯಮನ ಶುದ್ಧಿಕರ ಪಿನಾಕಿನಿಗೂ ನಮಿಪೆ 25ತಿರುಕೋಯಿಲೂರಿಗೆ ಕ್ರೋಶತ್ರಯದೊಳಗೇವೆವೀರ ಚೋಳಪುರದಲ್ಲಿ ಶ್ರೀ ಸತ್ಯನಾಥತೀರ್ಥರು ಅಭಿನವ ಚಂದ್ರಿಕಾಕಾರರುಇರುತಿಹರು ವೃಂದಾವನದಲ್ಲಿ ವಂದೇ 26ತಿರುಕೋಯಿಲೂರಿಂದ ತಿರುವಣ್ಣಾಮಲೆಯೆಂಬಅರುಣಾಚಲಕೆ ಪೋಗಿ ಅಲ್ಲಿ ರಾಜಿಸುವಕರುಣಾಬ್ಧಿ ಗಿರಿಜಾರಮಣನ್ನ ವಂದಿಸಿತಿರುಪತಿಗೆ ಹೊರಟರು ಗುರುಸರ್ವಭೌಮ 27ಹೇಮಗರ್ಭನತಾತಶ್ರಿಪತಿ ಜಗನ್ನಾಥಆಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 28 ಪ
--------------
ಪ್ರಸನ್ನ ಶ್ರೀನಿವಾಸದಾಸರು