ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಡೆಗೋಲ ತಾರೆನ್ನ ಚಿನ್ನವೆ ಮೊಸ ರೊಡೆದರೆ ಬೆಣ್ಣೆ ಬಾರದೊ ಮುದ್ದು ಕೃಷ್ಣಯ್ಯ ಪ. ಅಣ್ಣ ಬಲರಾಮನು ಚಿಣ್ಣರ ಸಹಿತಾಗಿ ಬೆಣ್ಣೆ ಹಣ್ಣನು ಮೆಲುವಿಯಂತೆ ಯನ್ನಣ್ಣನೆ ಸಣ್ಣವನಾಗಿ ಎನ್ನೊಡನಾಟವೆ ಕಣ್ಣಿಗೆ ಕಾಡಿಗೆ ಇಡುವೆ ಬಾ ರಂಗಯ್ಯ 1 ಹಸುರಂಗಿ ಕೊಡಿಸುವೆ ಹಸುಳೆ ಬಾ ಕಂದನೆ ಹೊಸಪರಿಯಾಭರಣಗಳನಿಡುವೆ ಹಸನಾದ ಹಸುವಿನ ತುಪ್ಪದ ದೋಸೆಯ ಹಸುಳೆ ನಿನಗಾರೋಗಣೆಗೆ ಹೊತ್ತಾಯಿತೊ 2 ಪಡೆದ ಜನನಿಯಲ್ಲೆ ಎನ್ನೊಡೆಯ ಶ್ರೀ ಶ್ರೀನಿವಾಸ ನಿನ್ನ ಕಡೆಹಾಯಿಸೊ ಕಡೆಗೋಲನಿತ್ತು ಎನ್ನ ಗೋಪಿ ಕಡುಮುದ್ದು ರಂಗನ ಬಿಡದೆತ್ತಿ ಮುದ್ದಿಸಿ ಸಡಗರದಿಂದಲಿ 3
--------------
ಸರಸ್ವತಿ ಬಾಯಿ
ಕಡೆಗೋಲ ತಾರೆನ್ನ ಚಿನ್ನವೆ- ಮೊಸರೊಡೆದರೆ ಬೆಣ್ಣೆಬಾರದು, ಮುದ್ದುರಂಗ (ಮಗುವೆ ಪಾ) ಅಣ್ಣನ ಒಡಗೊಂಡು ಬಾರೈಯ-ಸವಿಬೆಣ್ಣೆಯ ಮುದ್ದೆಯ ಮೆಲುವಿರಂತೆಬಣ್ಣದ ಸರವನ್ನು ಕೊರಳಲ್ಲಿ ಹಾಕುವೆಚಿಣ್ಣರೊಡನೆ ಆಡಕಳುಹುವೆ ರಂಗ 1 ಪುಟ್ಟ ಬಚ್ಚಿಯ ತಂದು ನಿನ್ನಯ ಚಿನ್ನದತೊಟ್ಟಿಲ ಕಾಲಿಗೆ ಕಟ್ಟಿಸುವೆಬಟ್ಟಲು ತುಂಬಿದ ಸಕ್ಕರೆ ನಿನಗೀವೆಕಟ್ಟಾಣಿ ಮುತ್ತಿನ ಸರವನೀವೆ 2 ಬಡವರ ಭಾಗ್ಯದ ನಿಧಿಯೆ ಗೋಕುಲ-ದೊಡೆಯನೆ ಮಾಣಿಕ್ಯದ ಹರಳೆಕಡುಮುದ್ದು ಉಡುಪಿನ ಬಾಲಕೃಷ್ಣಯ್ಯದÀುಡುಕು ಮಾಡುವರೇನೊ ಪೆಂಗಳೊಳುರಂಗ3
--------------
ವ್ಯಾಸರಾಯರು
ನಿನ್ನ ನಾಮವೆ ಘನವಆಗಿದೆ ನೆನೆವರಕಾವ ಕರುಣಿಯೆಂದು ಪ ಪಾದ ಯುಗವನಾ ಕಾಣಬಲ್ಲನೆ ಕೇಳಿ ಗರುಢಾ ರೂಢ ನಾಗಿ ಬಂದು ಗಜವ ಕಾಯ್ದವನೆಂದು 1 ಸಂಗದಿಂದಲಿ ಯಿರುತಿರಲು ಬಂದು ಯಮನ ದೂತರೆಳೆಯೆ ಭಯದಿ ತನ್ನ ನಂದನ ಕರೆದರೊಂದು ನಾಮವೆ ಕಾದುದೆಂದು 2 ದುರುಳ ಕಶ್ಯಪುಸುತನ ಭಾಧಿಸೆ ಮೊರೆಯಿಡಲದನುಕೇಳಿ ಭರದಿ ಕಂಬದಿ ಬಂದು ನರಹರಿಯಾಗಿ ನಿಂದು ಕರದೊಳವನ ಕೊಂದು ತರಳನ ಕಾಯ್ದೆಯೆಂದು 3 ಅಂಬುಧಿಶಯನ ನಿನ್ನ ರುಕ್ಮಾಂಗದ ಮೃತ್ಯವೆಂಬುದೆಲ್ಲವಗೆದ್ದು ಕುಂಭಿನಿಯೊಳು ಪೆಸರೊಡೆದರೆಂಬುದ ಕೇಳಿ 4 ಓಲಗದೊಳು ಶಾಲೆಯ ಸುಲಿಯೆ ದ್ರುಪದ ಭೀಮನಕೋಣೆ ಲಕ್ಷ್ಮೀ ಲೋಲ ಸೀರೆಯ ಸೆರಗ ಬೆಳೆಸಿದ ನಾಮವೆಂದು 5
--------------
ಕವಿ ಪರಮದೇವದಾಸರು