ಒಟ್ಟು 45 ಕಡೆಗಳಲ್ಲಿ , 20 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಶೆ ಅಳಿಯದೆ ಮನದ ರೋಷವಡಗದೆ | ವೇಷ ದಂಭಕಗೆಲ್ಲಿ ಶಿವಯೋಗವು ಪ| ತನ್ನ ತಾನರಿಯದೆ ಉನ್ಮತ್ತದಿಂದಲಿ ನನ್ನದು ನಾನೆಂದು ಜಲ್ಪಿಸುತ || ಕುನ್ನಿಯಂದದಿ ಕೋಟಲೆ ಯೊಳಗಿಹ ಹೀನ ಮನುಜಗೆಲ್ಲಿ ಶಿವಯೋಗವು 1 ಎಲಬು ತೊಗಲು ಮಲ ಮೂತ್ರದಿ ತೋರುವ | ಹೊಲಸಿನ ದೇಹವು ತಾನೆನುತ || ಹಲವು ಪಾಪಂಗಳನು ಹೇಸದೆ ಮಾಡುವ | ಕುಲಹೀನನಿಗೆಲ್ಲಿ ಶಿವ ಯೋಗವು 2 ಆರು ವೈರಿಗಳಿಗೆ ವಶವಾದನು ಈ ದೀನ | ವಾರಿಜನಾಭನ ಚರಣವನು || ಸೇರಿ ತನ್ನ ಹಿತವ ಮಾಡಿಕೊಳ್ಳದಾ- |ಚಾರಿಗೇಡಿಗೆಲ್ಲಿ ಶಿವ ಯೋಗವು 3 ಮೂರು ದೇಹಕೆ ಮೀರಿ ಬೇರೆ ತಾನಾಗದೆ | ಆರು ಇಂದ್ರಿಯಗಳಿಗೆ ವಶವಾಗಿಯು || ನಾರಿಯರ ಸಂಗ ಸುಖವ ಬಯಸುವ | ಕ್ರೂರ ಮನುಜನಿಗೆಲ್ಲಿ ಶಿವ ಯೋಗವು 4 ಶ್ರೀ ಗುರು ವಿಶ್ವಪತಿಯ ಪದ ಕಮಲವ | ಬೇಗದಿ ಸೇರಿ ಸುಖಿಯಾದೆ || ರಾಗರೋಷದಿ ತನ್ನಾಡಿತವ ತಾ ಮರೆತಂಥ | ಭೋಗಲಂಪಟಗೆಲ್ಲಿ ಶಿವಯೋಗವು ? 5
--------------
ನರಸಿಂಹ
ಆವಭೂತ ಬಡಕೊಂಡಿತೆಲೊ ನಿನಗೆ ದೇವ ಕೇಶವನಂಘ್ರಿಧ್ಯಾಸವೆ ಮರೆದಿ ಪ ಸತಿಸುತರ ಮಮತೆಂಬ ವ್ಯಥೆ ಭೂತ ಬಡಿಯಿತೆ ಅತಿ ವಿಷಯಲಂಪಟದ ದುರ್ಮತಿಭೂತ ಹಿಡಿಯಿತೆ ಅತಿ ಸಿರಿಯಭೂತ ನಿನ್ನ ಮತಿಗೆಡಿಸಿತೇನೆಲೊ ರತಿಪತಿಪಿತನಂಘ್ರಿಸ್ತುತಿಯನೆ ಮರೆತಿ 1 ಸೂಳೆಯರ ಗಾಳ್ಯೆಂಬ ಹಾಳುಬವ್ವ ತಾಕಿತೇ ಕೀಳು ಸಂಸಾರದ ಮಹ ಗೋಳು ಭೂತ್ಹಿಡೀತೇ ಸಾಲಿಗರ ಭಯಭೂತ ನಾಲಿಗೆಯ ಸೆಳೆಯಿತೇ ನೀಲಶಾಮನ ಭಜನಫಲವೆ ಮರೆತೆಲ್ಲೊ 2 ಪೋದವಯ ಪೋಯಿತು ಆದದ್ದಾಗ್ಹೋಯಿತು ಪಾದದಾಸರಕೂಡಿ ಶೋಧಮಾಡಿನ್ನು ಭೂಧವ ಶ್ರೀರಾಮನ ಪಾದವನು ನಂಬಿ ಭವ ಬಾಧೆ ಗೆಲಿದಿನ್ನು ಮುಕ್ತಿ ಹಾದಿಯ ಕಾಣೊ 3
--------------
ರಾಮದಾಸರು
ಈ ವಿಬುಧರ ಸಂಗವೆ ಮಹಾಪ್ರಮೋದ ದುರ್ಲಭ ಜ್ಞಾನಿಯ ನಿಜಾತ್ಮಬೋಧ ಭಾಗ್ಯವಿದೇ ಬಹುಜನ್ಮದ ಪುಣ್ಯ ಯೋಗ್ಯರಬೋಧಾ ದೊರಕುವುದಣ್ಣ ಬೋಗ್ಯದಿ ಲಂಪಟನಾದವಗಿನ ಅಗ್ಗದಿ ಸಿಗುವದೆ ಸಜ್ಜನರನ್ನಾ ಸ್ವರ್ಗದಿ ಸಿಗದಿಹ ಸಂತರ ಬೋಧ ದುರ್ಲಭ ಜ್ಞಾನಿಯ ನಿಜಾತ್ಮಬೋಧ 1 ಉಪದೇಶದಿ ಈ ಭವವನು ಕಡಿವಾ ಬಾಧೆಯ ಸುಡುವಾ ಮುಕುತಿಯ ಕೊಡುವಾ ಹೃದಯದೊಳಿರುವಾ ಆತ್ಮಸ್ವರೂಪ ಜ್ಞಾನದಿ ತಿಳುಹಿನಿ ಮೋದವ ಕೊಡುವಾ ಸ್ವಾನು ಭವಾನಂದಾನ್ವಿತರೂಪ ಸನ್ನುತ ಶಂಕರಗುರುಸ್ವರೂಪ2
--------------
ಶಂಕರಭಟ್ಟ ಅಗ್ನಿಹೋತ್ರಿ
ಎಂತು ಎನ್ನ ತಾರಿಸುವಿಯೋ ತಿಳಿಯದಿಂದಿಗೆ ಕಂತುಪಿತನೆ ಮುಕುತಿ ಮಾರ್ಗ ಹೊಂದುವೆನೆಂದಿಗೆ ಪ ಓದಿತತ್ವ ಶಾಸû್ರಗಳನು ಜನರಿಗ್ಹೇಳುವೆ ನಾನು ಮೇದನಿಯೊಳು ಬಲ್ಲವನೆಂಬ ಗರ್ವ ತಾಳುವೆ ಸಾಧು ಸಂತರ ನಡಿಯ ನುಡಿಯ ಮಹಿಮೆ ಕೇಳುವೆ ಮತ್ತೆ ಹಾದಿತಪ್ಪಿ ಕುಜನ ವೃತ್ತಿಯಲ್ಲಿ ಬಾಳುವೆ 1 ಸ್ವಾದ ಲಂಪಟ ದುರ್ವಿಷಯ ಬಿಡದ ಸಕ್ತನು ಕಪಟ ಕಲುಷ ಚಿತ್ತನು ಸಾಧಕಗುರು ಹಿರಿಯರ ಅನುಸರಿಸಿದ ಭಕ್ತರು ಸಾಧಿಪಕರ್ಮ ವೃತ್ತಗಳಲ್ಲಿ ಡಂಭಯುಕ್ತನು 2 ಒಂದು ಎರಡು ಹೇಳಲೇ ಎನ್ನತಪ್ಪವಾ ಹೃದಯ ಮಂದಿರ ಮೊಳಗಿಲ್ಲವಾಯಿತು ಜ್ಞಾನ ದೀಪವಾ ನೊಂದು ಬೆಂದು ತಾಪತ್ರಯದಿ ಸುಖದ ರೂಪವಾ ಬಗೆವೆ ನಿಂದು ಒಮ್ಮಿಗ್ಯಾರ ವಿಡಿಯೆ ಪಶ್ಚಾತ್ತಾಪವಾ 3 ಪತಿತಪಾವನ ದೀನೋದ್ಧರಣನೆಂಬ ಬಿರುದವಾ ಕ್ಷಿತಿಯೊಳಿನ್ನು ತಾಳಿದುದರ ಕೇಳು ಮಾಧವಾ ಮತಿವಿವೇಕದಿಂದೆ ಹಚ್ಚಿ ಭಕುತಿ ಸ್ವಾದವಾ ಗತಿಯ ಕೊಟ್ಟ ಕರಿಯೆ ನಾನು ನಿನ್ನ ಮರೆದವಾ 4 ನಿನ್ನ ಭಕ್ತರ ಮನಿಯ ನಾಯಿ ಯಂದು ಎನ್ನನು ಮುನ್ನಿನವರು ಉಂಡ ವೆಂಜಲ ಶೇಷವನ್ನನು ಇನ್ನು ಇಕ್ಕಿಸಿ ಸಲಹಬೇಕು ಮೂಢ ಚಿನ್ನನು ಘನ್ನ ಗುರು ಮಹಿಪತಿಸ್ವಾಮಿದಯ ಸಂಪನ್ನನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನುದ್ಧರಿಸಲು ಘನ್ನ ಬಿರುದುಗಳು ಪ ಇನ್ನು ಉನ್ನತವಾಹವು ಕೇಳೊ ಹರಿಯೆ ಅ.ಪ ಅನವರತದಿ ದುರ್ವಿಷಯ ಲಂಪಟದೊಳು ಚನ್ನಾಗಿ ಪತಿತ ಎನ್ನಂತಜಾಮಿಳನೆ ಇನ್ನಿದು ತಿಳಿದು ನೀ ಎನ್ನ ಪೂತನ ಮಾಡೆ ನಿನ್ನನಿಮಿತ್ತ ಬಂಧುತನವೆ ವೆಗ್ಗಳವೊ 1 ಮನ್ನಿಸಿದವನಲ್ಲ ಪೂಜಿಸಲಿಲ್ಲ ತನ್ನ ಸಂಬಂಧಿಯು ಮೊದಲಿಗನಲ್ಲ ಎನ್ನಂತೆ ಗಜೇಂದ್ರನೆ ಎನ್ನನುದ್ಧರಿಸಲು ನಿನ್ನ ಪತಿತಪಾವನತೆ ಘನ್ನವೊ 2 ಏಸಪರಾಧ ಮಾಡಿದ ಚೈದ್ಯಾದಿಗಳು ಈಸಪರಾಧ ರಾಶಿಗಳ ಮಾಡಿದರೆ ವಾಸುದೇವವಿಠಲ ಎನ್ನ ರಕ್ಷಿಸಲು ಸೂಸುವುದೋ ನಿನ್ನ ಭಕುತ ವಾತ್ಸಲ್ಯತನವೊ 3
--------------
ವ್ಯಾಸತತ್ವಜ್ಞದಾಸರು
ಒಂದರಿಂ ಸುಖವಿಲ್ಲ ಹುಟ್ಟು ಮೊದಲು ಡಂಭ- ಪ ದಿಂದ ಭೈರೂಪ ತೊಟ್ಟು ತಿರುಗುತಿದೆಅ.ಪ ಬಟ್ಟೆ ಸಂಸಾರ ವಿಷಯ ಕೋಟಲೆಗೊಂಡುನಾಯ್ ಬಾಯ ಕೊಚೆಯಂತೆ ನಸಿಯುತಿದೆ ದೇಹ 1 ಬುದ್ಧಿ ದೃಢ ದುರ್ಮಾರ್ಗದಿಂದ ನೋಡದೆ ಹೋಯ್ತುಶುದ್ಧ ಸತ್ಕರ್ಮವಿಲ್ಲದೆ ಸೂರೆ ಹೋಯ್ತುದುರ್ದೆಸೆಯ ಪಥದ ಲಂಪಟ ಮಾಯಕೆ ಸಿಲುಕಿಮದ್ದಳೆಯ ಇಲಿಯಂತೆ ಆಯಿತೀ ದೇಹ 2 ಭೋಗ ಸಂಗವಮಾಡಿ ಪೋಗಲೈಸಿತು ದೇಹರಾಗಲೋಭವು ಹೆಚ್ಚಿ ವೈರಾಗ್ಯ ಹೊಯ್ತುಆಗಮವ ತಿಳಿಯದೆ ಕೃಷ್ಣನ್ನ ಧ್ಯಾನಿಸದೆಜೋಗಿ ಕೈ ಕೋಡಗನಂತೆ ತಿರುಗುತಿದೆ 3
--------------
ವ್ಯಾಸರಾಯರು
ಕಾಲ ಮೃತ್ಯು ಗೆಲಿಯಲಿಲ್ಲ ಕಾಲ ಪ ಪೃಥ್ವಿಯಮೇಲೆ ಕೃತಕೃತ್ಯನಾಗಲು ಬಂದ ವೃತ್ತಾಂತ ತಿಳಿಯಲಿಲ್ಲಅ.ಪ ನಂಬಿಕೊಂಡೆಯಲ್ಲ ಈ ಜಗ ಬೆಂಬಲ ಬರೋದಲ್ಲ ಜಂಬಬಡುವಿ ಸುಳ್ಳೆ ಮನದ ಡಂಬವ ಬಿಡಲಿಲ್ಲ ಕುಂಭಿನಿಸುಖದ ಹಂಬಲದಲಿ ದಿನ ಶುಂಭತನದಿಗಳೆದಿಂಬಿಲ್ಲದ್ಹೋಗುವಿ 1 ಕುಮತಿಯ ಬಿಡಲಿಲ್ಲ ಮಾಯಮಮತ ಕಡಿಯಲಿಲ್ಲ ನಮಿಸಿ ಬಿಡದೆ ಸದಾ ಸುಮನಸರೊಳಗಾಡಿ ಭ್ರಮೆಯನಳಯವಿಲ್ಲ ಬಂದ ಸಮಯ ತಿಳಿಯಲಿಲ್ಲ ವಿಮಲಸುಖದನಿಜ ಕ್ರಮವ ತಿಳಿಯಲಿಲ್ಲ 2 ಆಸೆ ನೀಗಲಿಲ್ಲ ವಿಷಯದ್ವಾಸನ್ಹಿಂಗಲಿಲ್ಲ ಕ್ಲೇಶ ತೊಡೆಯಲಿಲ್ಲ ಲಂಪಟ ಮೋಸದಿಂದುಳಿಲಿಲ್ಲ ಶೇಷಶಯನ ಮಮ ಶ್ರೀಶ ಶ್ರೀರಾಮನ ದಾಸನಾಗಿ ಭವಪಾಶ ಗೆಲಿಯಲಿಲ್ಲ 3
--------------
ರಾಮದಾಸರು
ಕುಟಿಲವನು ಕಳಿಯೋ ನಿಟಿಲ ನಯನಾ ಪ ದುರ್ವಿಷಯ ಲಂಪಟದಿ ಮುಳಿಗಿ ಘನ ಸಂಕಟಕೆ ಒಳಗಾದೆನೊ ಪ್ರಭುವೇ ಅ.ಪ. ಪಂಚಭೇದ ಜ್ಞಾನವನು ಪಂಚವಿಧ ತೋರೆಂದು ಬಿನ್ನೈಪೆ ಮಂಚಪದಯೋಗ್ಯಾ ವೈರಾಗ್ಯ 1 ಕಾಮಿನಿಯಳಾ ಇಟಕೊಂಡು ಅನ್ಯಳ ಕಾಮಿಸುವುದುಚಿತವೇ ರಾಯಾ ಕಾಮರೂಪದಿಂದೆನ್ನ ಕಡೆಗೆತ್ತಿ ಕಾಯದಿರೆ ಕಾಮಹರನೆಂಬ ಬಿರುದ್ಯಾತಕೊಕಾಮಪಿತನೇ ಕೇಳು ಕಾಲಕಾಲಕೆ ನಿನ್ನ ಕಾಲಿಗೆರಗುವಂತೆ ಮಾಡಿ 2 ಬಿಲ್ವಭಜಕನೆ ಕೇಳು ಮತ್ತೊಂದು ನಾನೊಲ್ಲೆಶಪಥ ಪೂರ್ವಕ ಪೇಳ್ವೆ ಮಿಥ್ಯಮತವೊಲ್ಲೆನೊಒಲ್ಲದ ಸುರನಿಗೆ ಚೆಲ್ವಿಯಾಗಿತ್ತು ಕಂಗೆಡಿಸಿ ಉಳಿಸಿದೆ ಬಿಲ್ಲುಗಾರನೆ ಮಗನ ಕಾಳಗದಿ ಕೆಡಹಿ ತಂದೆ-ವರದಗೋಪಾಲವಿಠಲನ ನೋಡಿ ತೋರಿದೇ 3
--------------
ತಂದೆವರದಗೋಪಾಲವಿಠಲರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೋಪಿಸದಿರು ಸ್ವಾಮಿ ಶ್ರೀ ನರಸಿಂಹ ಪ. ಕೋಪಿಸದಿರು ಕರುಣಾಪಯೋನಿಧಿಯೆ ಮ- ಹಾಪರಾಧಗಳನು ಲೇಪಗೊಳಿಸದಿರು ಅ.ಪ. ಮಧ್ವ ವಲ್ಲಭ ನಿನ್ನ ಸೇವೆಯ ನಡಸುವ ಮಧ್ಯ ಮಧ್ಯದೊಳೆದ್ದು ಹೋದ ತಪ್ಪು ಶುದ್ಧಿಯಿಲ್ಲದ ತಪ್ಪು ಸೂಕ್ತಿ ಪಾಠಗಳೊಳಾ- ಬದ್ಧ ಬರುವ ತಪ್ಪೆನಿದ್ದರು ಕ್ಷಮಿಸಿನ್ನು 1 ಸಂಸಾರ ಲಂಪಟನಾಗಿ ಬಳಲುವೆನು ಕಂಸಾರಿ ನಿನಗಿನ್ನು ಪೇಳ್ವದೇನು ಹಂಸವಾಹನ ಪೀಠ ಹಲಧರನನುಜನೆ ಸಂಶಯಿಸದೆ ಎನ್ನ ಕಾಯೊ ಕಮಲನಾಭ 2 ಪತಿತಜನರಿಗಧಿಪತಿಯಾಗಿರುವೆ ನಾನು ಮತಿಹೀನನೆಂಬುದ ಬಲ್ಲಿ ನೀನು ಪಾದ ಪದ್ಮವೆ ಇನ್ನು ಗತಿ ಎಂದು ನಂಬಿದನ ಮೇಲೆ ಮುನಿಸಿನ್ನೇನು 3 ಪಾತಕ ಕಡಲೊಳು ಪೊರಳುತ ನೆರಳುತ ಯಾತರಿಂದಲು ಏಳಲಾರದಿನ್ನು ಶ್ರೀ ತರುಣಿಯವರ ನಿನ್ನ ಸೇರಿದ ಜಗ ನ್ನಾಥ ದಾಸರ ಪಾದದವಲಂಬಗೊಂಡೆನು 4 ಶ್ರೀಶ ಶೇಷಗಿರೀಂದ್ರ ವಾಸ ನಿನ್ನನೆ ನಂಬಿ ದಾಸ ಕೂಟದಿ ಸೇರಿಕೊಂಡಿಹೆನು ಣಾ ಸಮುದ್ರನೆ ಎನ್ನ ಕಾವದುಚಿತವಿನ್ನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಘನ ಲಂಪಟಗೆಲ್ಲಿಹುದು ಗುರುಕೃಪೆ ಜ್ಞಾನ ತನು ಲಂಪಟಗೆಲ್ಲಿಹುದು ತನ್ನೊಳು ಖೂನ ಧ್ರುವ ವಿಷಯ ಲಂಪಟಗೆಲ್ಲಿಹುದು ತಾ ವಿರಕ್ತಿಯು ದೆಸೆಗೆಟ್ಟವಗೆಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆಲ್ಲಿಹುದು ಮುಕ್ತಿಯು ಹುಸಿಯಾಡುವಂಗೆಲ್ಲಿಹುದು ಋಷಿ ಭಕ್ತಿಯು 1 ಮರುಳಗುಂಟೆ ಅರುಹ ರಾಜಸನ್ಮಾನದ ತರಳಗುಂಟೆ ಭಯವು ಘಟಸರ್ಪದ ಮೃಗ ಜಲವೆಂಬುವದ ಸೂರಿಗೆ ಉಂಟೆ ಮಾತು ಚಾತುರ್ಯದ 2 ಕನಸ ಕಾಂಬುವಗೆಲ್ಲಿಹುದು ತಾನಿರುವ ಸ್ಥಾನ ಮನದಿಚ್ಛೆಲಿದ್ದವಗೆಲ್ಲಿಯ ಧ್ಯಾನ ದೀನ ಮಹಿಪತಿ ಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳ್ಳದೆ ಜನ್ಮಕ ಬಂದದ್ದೇನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚಿಂತೆ ಪರಿಹರ ಮಾಡೋ ಎನ್ನಯ್ಯ ಸಜ್ಜನರ ಪ್ರಿಯ ಪ ಚಿಂತೆ ಪರಿಹರ ಮಾಡೊ ಎನ್ನಯ ಚಿಂತೆ ಪರಿಹರ ಮಾಡಿ ಎನ್ನ ಅಂತರಂಗದಿ ನಿಮ್ಮ ನಿರ್ಮ ಲಂತ:ಕರುಣದ ಚರಣವಿರಿಸಿ ಸಂತಸದಿ ಪೊರೆ ಸಂತರೊಡೆಯ ಅ.ಪ ನಿಮ್ಮ ಪಾದವ ನಂಬಿಕೊಂಡಿರುವ ಈ ಬಡವನನ್ನು ಕಮ್ಮಿ ದೃಷ್ಟಿಯಿಂ ನೋಡದಿರು ದೇವ ನಿನ್ನ ಬಿಟ್ಟೆನ ಗ್ಹಿಮ್ಮತನ್ಯರದಿಲ್ಲ ಜಗಜೀವ ಭಜಕಜನ ಕಾವ ಮೂಡಿಮುಳುಗುತಿಹ್ಯದೈ ಸಮ್ಮತದಿ ಸಲಹೆನ್ನ ದಯಾನಿಧಿ ಬ್ರಹ್ಮಬ್ರಹ್ಮಾದಿಗಳ ವಂದ್ಯನೇ 1 ಆರುಮೂರರಿಕ್ಕಟ್ಟಿನೊಳು ಗೆಲಿಸೋ ಘನಪಿಂಡಾಕಾರ ಆರು ಎರಡರ ಸಂಗ ತಪ್ಪಿಸೋ ಮಹಬಂಧ ಬಡಿಪ ಘೋರ ಸಪ್ತಶರಧಿ ದಾಂಟಿಸೋ ತವದಾಸನೆನಿಸೊ ಗಾರುಮಾಡಿ ಕೊಲ್ಲುತಿರ್ಪ ದೂರಮಾಡೆನ್ನ ದುರಿತದುರ್ಗುಣ ಸೇರಿಸು ತ್ವರ ದಾಸಸಂಗದಿ ನಾರಸಿಂಹ ನಾರದವಿನುತ 2 ಪಾಮರತ್ವ ತಾಮಸವ ಬಿಡಿಸೋ ವಿಷಯಲಂಪಟ ಪ್ರೇಮ ಮೋಹ ಕಾಮ ಖಂಡ್ರಿಸೋ ಹರಲಿರುಳು ನಿಮ್ಮ ಭಜನಾನಂದ ಕರುಣಿಸೊ ಸುಚಿಂತದಿರಿಸೊ ಕಾಮಿತಜನಕಾಮಪೂರಿತ ನಾಮರೂಪರಹಿತಮಹಿಮ ಸ್ವಾಮಿ ಅಮಿತಲೀಲ ವರ ಶ್ರೀರಾಮ ಪ್ರಭು ತ್ರಿಜಗದ ಮೋಹ 3
--------------
ರಾಮದಾಸರು
ಜಗದಯ್ಯಾ ಜಗದಯ್ಯಾ ಜಗತ್ರಾಣ ಜಗಜೀವನ ಪಾವನ ಪ ಸಾವು ಹುಟ್ಟುಯೆಂಬ ಹೇಯಕುಣಿಯೊಳು ಬಿದ್ದು ನೋಯಲಾರದೆ ಬಲು ಬಾಯಬಿಡುತ ನಿಮ್ಮ ಪಾವನ ಪಾದಕ್ಕೆ ಮರೆಯಬಿದ್ದೆನಯ್ಯ ಸೇವಕಜನರಯ್ಯಾ ಕಾಯೋ ಎನ್ನಾರ್ಯ 1 ಪರಿಭವಶರಧೆಂಬ ಉರಿವಕಿಚ್ಚಿನೊಳು ಪರಿಪರಿಮರುಗುತ ಕರುಣಾಂಬುಧಿ ನಿನ್ನ ಅರಿವಿಟ್ಟರಿದೆ ವರ ಪರಮ ಬಿರುದುಗಳು ಶರಣಾಗತರ ಪ್ರಿಯಕರ ಪಿಡಿದೆತ್ತಯ್ಯ 2 ವಿಷಯಲಂಪಟವೆಂಬ ವ್ಯಸನಕೂಪದಿ ಬಿದ್ದು ಬಸವಳಿದನುಪಮ ದೆಸೆಗೆಟ್ಟೆ ಕುಸುಮಾಕ್ಷ ಶಿಶುವಿನ ತವಪಾದ ಅಸಮದಾಸಜನ ರೊಶದಿ ಇಟ್ಟು ಪೊರೆ ಕುಶಲಮತಿಯ ನೀಡಿ3 ಭವಭವದಲಿ ಬೇಡುವೆನಭವನೆ ಬಾಗಿ ದಯಪಾಲಿಸಿ ಸ್ಥಿರಜ್ಞಾನಸುಪದವ ಭವಗುಣಹಿಂಗಿಸಿ ದಿವನಿಶೆನ್ನುವುದಕೆ ಸವಿನಾಮವಿತ್ತು ಕಾಯೋ ಭವರೋಗವೈದ್ಯನೆ 4 ಮೂರರಿಂ ಗೆಲುವಿತ್ತು ಮೂರರಿಂದಾಂಟಿಸಿ ಮೂರರ ಮೋಹನಿವಾರಿಸು ದೇವ ಮೂರು ನಿನಗರ್ಪಿಸಿ ಸಾರಿಬೇಡುವೆ ನೀಡ ಪಾರಮೋಕ್ಷಪದ ಧೀರ ಶ್ರೀರಾಮಯ್ಯ 5
--------------
ರಾಮದಾಸರು
ತನುಲಂಪಟಗೆ ಎಲ್ಲಿಹುದು ತನ್ನೊಳು ಖೂನ ಧ್ರುವ ದೆಸೆಗೆಟ್ಟವಗೆ ಎಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆಲ್ಲಿಹುದು ಮುಕ್ತಿಯು ಹುಸಿಯಾಡುವವಗೆಲ್ಲಿಹುದು ಋಷಿಭಕ್ತಿಯು 1 ತರಳಗುಂಟೆ ಭಯವು ಘಟಸರ್ಪದ ಎರಳೆಗುಂಟೆ ಖೂನ ಮೃಗಜಲವೆಂಬುವದ ಸೋರೆಗುಂಟೆ ಮಾತು ಚಾರ್ತುಯದ 2 ಕನಸು ಕಾಂಬವಗೆ ಎಲ್ಲಿಹುದು ತಾನಿಹ ಸ್ಥಾನ ಮನದಿಚ್ಛೆಯಿದ್ದವಗೆ ಎಲ್ಲಿ ಧ್ಯಾನ ದೀನಮಹಿಪತಿ ಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳದೆ ಜನ್ಮಕೆ ಬಂದಿದೇನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು