ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನಾಥನೆ ನೀಲಘನಂಗ ದೇವರದೇವ ಗು-ಣಂಗಳ ಖಣಿಯೆ ನಿನ್ನ ಪದಂಗಳು ಗತಿಯೆಮಗೆ ಪ. ಉಭಯಕಾವೇರಿ ಮಧ್ಯದಲಭಯನೀವುತ ಪವಡಿಸಿದಬುಜಲೋಚನನೆ ನಿನ್ನ ವಿಭವಕ್ಕೆ ನಮೋಯೆಂಬೆ 1 ದೋಷದೂರನೆ ಭೂಮಿಗೆ ಭೂಮೋಹನನೆ ರಂಗಶ್ರೀಶ ನಿನ್ನ ನಂಬಿದೆ ಶೇಷÀಶಯನ ಕಾಯೊ 2 ಚೆಲುವ ನಿನ್ನನು ಪೋಲುವರಿಲ್ಲ ಮೂಜಗದೊಳು ಲಕುಮಿಯನಲ್ಲ ನಿನ್ನನು ಬಣ್ಣಿಸಲಳವಲ್ಲವೋ ಹಯವದನ 3
--------------
ವಾದಿರಾಜ