ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀನಾಥ ವಿಠಲ | ರಕ್ಷಿಸೊ ಇವನಾ ಪ ಇಕ್ಷುಚಾಪನ ಪಿತನೆ | ಅಕ್ಷರನೆ ದೇವಾ ಅ.ಪ. ನಿತ್ಯ ತೃಪ್ತಾತ್ಮಾಅರ್ಥಿಯಲಿ ಲಕ್ಷ್ಮಿಯನು | ಭಕ್ತಿಯಿಂ ಸೇವಿಸುತಪ್ರಾರ್ಥಿಸುವ ತವಪ್ರೀತಿ | ಲಕ್ಷ್ಮಿವಲ್ಲಭನೇ 1 ಅಪ್ರಮೇಯನ ಪತ್ನಿ | ಲಕ್ಷ್ಮಿಯನೆ ತುತಿಸುತ್ತಸುಪ್ರಸಾದವ ಕೊಂಡು | ಗೃಹಕಾಗಿ ತೆರಳೀಅಪ್ರತಿಮ ಸಂತಸದಿ | ಹರಿಯ ಕೊಂಡಾಡುತ್ತಅಪ್ಪವೆಂಕಟನನ್ನು | ಹಾಡಿ ಹೊಗಳಿದನಾ 2 ವೇದಾಂತ ವೇದ್ಯ ಹರಿ | ವೇದ್ಯವಾಗಲಿ ಇವಗೆಮೋದ ತೀರ್ಥರ ಮತದ | ಸಾದು ತತ್ವಗಳುಹಾದಿಯಾಗಲಿ ಮುಕುತಿ | ಸಾಧನ ಸುಮಾರ್ಗಕ್ಕೆಬಾದರಾಯಣ ದೇವ | ಮಾಧವನೆ ಹರಿಯೆ 3 ಕರ್ಮಮರ್ಮವ ತಿಳಿಸಿ | ದುಷ್ಕರ್ಮ ಪರಿಹರಿಸಿನಿರ್ಮಮನ ಮಾಡಯ್ಯ | ಬ್ರಹ್ಮಾದಿ ವಂದ್ಯಪ್ರಮ್ಮೆಯಂಗಳ ಬೋದ | ಸಲ್ಲಲಿತವಾಗಿರಲಿಅಮ್ಮಹಾ ಪರದೈವ | ಹರಿಯೆಂದು ತಿಳಿಸೊ4 ಅದೈತ ತ್ರಯದರಿವು | ಬುದ್ದಿಗೇ ನಿಲುಕಿಸುತಸಿದ್ಧಾಂತ ಪಥವೆಂಬ | ಹೆದ್ದಾರಿ ನಡಸೋಕೃದ್ಧಬಳಮರ್ದನನೆ | ಮುದ್ದು ನರಹರಿದೇವಅದ್ವಿತೀಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೃಂಗಾರ ಬೇಕಾಯಿತೆ ಶ್ರೀಕಾಂತ ನಿನಗೆ ಶೃಂಗಾರವಾರ್ಧಿ ವೇಲಾಪುರದ ಚೆನ್ನಾ ಪ ಕರದಲ್ಲಿ ದಂಡ ಕೋಲು ಕಮಂಡಲನೀವ ಪರಿ ಹೇಗೆ ದಾಸಾನುದಾಸನಲ್ಲ ಇರಲಿಯಂತದುವೆ ಶ್ರೀಧರನೆಂಬ ಪೆಸರು ಬಿ ಟ್ಟುರದ ಲಕ್ಷ್ಮಿಯನು ಕಡೆಗಿರಿಸು ನೋಡುವೆನೊಮ್ಮೆ 1 ಎನ್ನ ಬಿನ್ನಪವೊಂದುಂಟು ಕೇಳೆಲೊ ಸ್ವಾಮಿ ನಿನ್ನ ಬಾಲಬ್ರಹ್ಮಚಾರಿಯೆಂದು ಸನ್ನುತಿಸುತಿದೆ ವೇದ ಶಾಸ್ತ್ರಾಗಮಗಳೆಲ್ಲ ಇನ್ನದಕುಪಾಯವೇನಯ್ಯ ಚೆನ್ನಿಗರಾಯ 2 ಶೃಂಗಾರಗಳನು ತತ್ವಂಗಳನು ಪೇಳುವಡೆ ಗುಂಗುರುಹಿನೊಳಲ್ಪ ಮನುಜನಲ್ಲ ಮಂಗಳಾತ್ಮಕನೆ ಆಡಿಸಿದೊಡಾಡುವೆ ಎನಗೆ ಭಂಗವೇಕಯ್ಯ ವೈಕುಂಠ ಚೆನ್ನಿಗರಾಯ 3
--------------
ಬೇಲೂರು ವೈಕುಂಠದಾಸರು