ಕರುಣಿಸುವ ಹರಿ ನಿರಂತರವು ಮನವೆ
ಪಾದ ಸ್ಮರಣಿಯನು ನೆರೆನಂಬು ಪ
ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ
ವಿಂದ ಘನ ಸ್ತಂಭದೊಳ್ ಬಂದು ತಾಮುದದಿ
ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು
ಕುಂದ ವರದ ಯೆಂದು ನೀ ಭಜಿಸು 1
ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ
ಕಳುಹಲಾಕ್ಷಣವೆ ಶ್ರೀ ನಳಿನನಾಭ
ಒಲಿದು ಪೊರಿದನು ಮಹಾಒಳಿತೆಂದು ಅವಗೆ
ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2
ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ-
ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು
ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ
ಸಿರಿ ಕೃಷ್ಣಾ 3