ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ.
ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು
ಭಂಗವ ಪಡುವುದ್ಯಾಕೆ
ಮಂಗಲದಾತ ನರಸಿಂಗನ ನಾಮವ
ಹಿಂಗದೆ ನೆನೆದರಿಷ್ಟಂಗಳ ಕೊಡುವ1
ಉಪವಾಸ ಮಾಡಲ್ಯಾಕೆ ಕಪಟದೊಳು
ಗುಪಿತದಿ ಕುಳ್ಳಲ್ಯಾಕೆ
ಉಪಮೆರಹಿತ ಶ್ರೀಪತಿ ಕೃಷ್ಣರಾಯನ
ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2
ಧ್ರುವನು ಸದ್ಗತಿ ಪಡೆದ ಕರುಣದಿಂದ
ಪವಮಾನಿಗೆ ಒಲಿದ
ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ
ಬವರದೊಳಗೆ ದಾನವರನ್ನು ಮಡುಹಿದ3
ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು
ತೀರ್ಥಸ್ನಾನಗಳ್ಯಾತಕೋ
ಮಾಧವ ಶತಪತ್ರನಾಭನ ಸಂ-
ಕೀರ್ತನಾದಿಗಳೆ ಪರತ್ರಸಾಧನವಲ್ಲೊ4
ಭೂರಿಯಾಯಾಸವ್ಯಾಕೋ ಬರಿದೆ ಸಂ-
ಸಾರವ ನಂಬಲ್ಯಾಕೋ
ಮಾರಾರಿಸಖ ಲಕ್ಷ್ಮೀನಾರಾಯಣನನ್ನು
ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5