ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕ ನಾಯಕ ಲಕ್ಷ್ಮೀಲೋಲನಾ ಸ್ಮರಣೆ ಬಿಟ್ಟೂ ಪ ವಿದಿ ಮುನ್ನೆ ಬರದಿಷ್ಟಾ ಯಡಿಯಾತಪ್ಪಾದು ತುದಿಮೊದಲಿಂದಾ ಮಾಡಿದ ದೋಷವೆಲ್ಲಾ ಬೆದರಿಸಿದರೆ ಅದು ಬಿಡಲು ಬಲ್ಲುದೆ ಕೇಳೂ ಪಾದ ಭಜನಿಯ ಬಿಟ್ಟು 1 ನಾನಾಪರಿಯ ಮನಸೂ ನಟಿಸುವದಲ್ಲಾದೆ ಏನು ಎಲ್ಲವೂ ವ್ಯರ್ಥಾ ವೇದನೆ ನಿಂದೆ ನೀನು ಮಾಡಿದಾ ಫಲ ನಿನಗುಣಿ ಸದೆ ಬಿಡದೂ ಮಾನವಾಧೀಶನಂಘ್ರಿ ಧ್ಯಾನವೆಂಬುದು ಬಿಟ್ಟು 2 ಸಕಲಕೆ ಕರ್ತನಾಗಿ ಸರ್ವೋತ್ತಮನಿರಲು ಭಕುತಿ ಭಾವನೆಯಿಂದ ಭಜಿಸಾದೆ ನಿ ವಿಕಟಯೋಚನೆಯಿಂದ ಏನುಫಲವು ಇಲ್ಲಾ ನಿಕರ `ಹೊನ್ನೆಯ ವಿಠ್ಠಲನ ' ನಾಮೋಪಾಸನೆ ಬಿಟ್ಟು 3
--------------
ಹೆನ್ನೆರಂಗದಾಸರು
ಸುಮ್ಮನೆ ಹರಿಯ ದೂಷಿಸದಿರು ಯಮ- ಧರ್ಮನಾಳ್ಗಳು ನಿನ್ನ ಎಳದೊಯ್ವರೊ ಪ ಇಷ್ಟೂನು ವಿಷ್ಣು ಮಾಯವು ಎಂದು ಈ ಸೃಷ್ಟಿ ಕರ್ತನು ಶ್ರೀಹರಿ ಎಂದು ಸ್ಪಷ್ಟದಿ ಮನದಲ್ಲಿ ತಿಳಿಯದೆ ದುರುಳ ಮಾತನಾಡಬಹುದೆ 1 ಲೋಕನಾಯಕ ಲಕ್ಷ್ಮೀಲೋಲನಾ ಜಗದೇಕ ವಿನುತರಾಮ ದೇವರನಾ ಶ್ರೀ ಕರುಣಾಂಬುದಿ ಶಾಂತನಾ ಇನ್ನು ನೀ ಕಾಣದೆ ಈ ಪರಿನಿಂದೆಯೆನೆ 2 ಹರಿಶರಣರ ಕೊಂಡಾಡುತಿರು ಘೋರ ನರಕದೊಳಗೆ ಬಿದ್ದು ನರಳದಿರು ಪರಮಭಕ್ತರ ಬಾಯಿಲೆ ಬೊಗಳದಿರು ಅತಿ ಪಾಪಿಯಾಗಿರುವರ ಸೇರಿ ಹೋಗದಿರು 3 ಶೃತಿ ಶಾಸ್ತ್ರಗಳು ಸುಜ್ಜನ-------- ಇಂಥ ಕೃತಕ ಶಾಸ್ತ್ರಗಳ ನೋಡಿ ಕೂಗಬೇಡಾ ಸದ್ಗತಿ ಮಾರ್ಗಕೆ ಹೊರಗಾಗ ಬೇಡಾ 4 ಹರಬ್ರಹ್ಮ ಇಂದ್ರಾದಿಗಳೆಲ್ಲ ಶ್ರೀಹರಿಯ ಸೇವಕರೆಂಬುದು ಬಲ್ಲ 'ವರಹೆನ್ನ ವಿಠ್ಠಲನ ’ ನೀನೆ ಬಲ್ಲ ಅವರ ಚರಣಕ್ಕೆ ಎರಗುವದು ಅಲ್ಲಾ 5
--------------
ಹೆನ್ನೆರಂಗದಾಸರು