ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ನಾರದ ಪ್ರಾರ್ಥನೆ) ನಾರದ ಮುನಿಯ ನಂಬಿರೋ ಸಜ್ಜನರೆಲ್ಲ ಪ. ನಾರದ ಮುನಿಯ ನಂಬಿ ಸೇರಿ ರಮೇಶನ ಘೋರದುರಿತ ಪರಿಹಾರಗೊಳಿಸುವಂಥ ಅ.ಪ. ಫಾಲದಿ ತಿಲಕ ನಾಮವು ಕಂಠದ ಮೇಲೆ ಜೋಲುವ ತುಳಸಿ ಮಾಲೆಯು ತಾಳ ವೀಣೆಗಳಿಂದ ಕಾಲಾನುಗುಣಸ್ವರ ಮಾಲೆ ತೋರುತ ಲಕ್ಷ್ಮೀಲೋಲನ ವಲಿಸಿದ 1 ವೇದೋಪನಿಷತ್ತುಗಳಗಾಂಧರ್ವ ವಿದ್ಯ ಹಾದಿಲಿ ತರಲು ಬಲ್ಲ ಬೋಧಿಪ ಪರತತ್ವ ವಾದವ ಸುರಕಾರ್ಯ ಸಾಧಿಸಿ ಹರಿಯ ಪ್ರಸಾದಕೆ ಪಾತ್ರನಾದ 2 ಪ್ರಲ್ಹಾದ ಧ್ರುವ ದ್ರೌಪದಿ ಮುಖ್ಯ ವೈಷ್ಣವ ರೆಲ್ಲರೀತನ ದಯದಿ ಎಲ್ಲ ಠಾವಲಿ ಲಕ್ಷ್ಮೀವಲ್ಲಭನಿಹನೆಂಬ ಸೊಲ್ಲ ತಿಳಿದು ಪರಮೋಲ್ಲಾಸ ಪಡೆದರು 3 ದೇವಾಸುರರ ಬಳಿಗೆ ಪೋಗುವ ತನ್ನ ಭಾವಾ ತೋರನು ಕಡೆಗೆ ಆವಾವ ಜನಕನುವೀವ ಮಾತುಗಳಾಡಿ ಪಾವನಾತ್ಮಕ ಹರಿ ಸೇವಾಫಲವ ಕೊಂಬ 4 ಬಂದನು ಕಲಿಯುಗದಿ ದಾಸರೊಳು ಪುರಂದರ ನಾಮದಲೀ ಮಂದಮತಿಯ ಕಳೆವಂದದಿ ಪ್ರಾಕೃತ ದಿಂದ ವೆಂಕಟಪತಿಯಂದವ ತಿಳಿಸಿದ 5
--------------
ತುಪಾಕಿ ವೆಂಕಟರಮಣಾಚಾರ್ಯ