ಒಟ್ಟು 62 ಕಡೆಗಳಲ್ಲಿ , 29 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅ. ಗಣಪತಿ - ಸರಸ್ವತಿಯರು ಶ್ರೀ ಗಣಪತಿ ಓಂ ನಮೋನಮೋ | ಜಯ ಶ್ರೀ ಗಣಪತಿ ಓಂ ನಮೋನಮೋ ಪ ಅಗಜಾವರಸುತ | ನಿಗಮಾಗಮನುತ | ಯೋಗಿಗಳರಸನೆ | ಭಾಗವತರ ಪ್ರೀಯ ಅ.ಪ ಶುಭ | ಲಗ್ನಪ್ರದಾಯಕ | ಭಗ್ನದುರಿತ ನಿಜ | ಮಗ್ನ ಪ್ರಭಾಕರ1 ವಿದ್ಯಪ್ರದಾಯಕ | ಬುದ್ಧಿ ಪ್ರದಾಯಕ | ಸಿದ್ಧಿಸಂಪದ ಆಯುರ್ ವೃದ್ಧಿ ಪ್ರದಾಯಕ 2 ಶಕ್ತಿ ಪ್ರದಾಯಕ | ಸೌಖ್ಯಪ್ರದಾಯಕ | ಭಕ್ತಿದಾಯಕ ನಿಜ | ಮುಕ್ತಿದಾಯಕ ನಮೋ 3 ಋಣಬಂಧಂಗಳ | ಗುಣದಿಂ ಬಿಡಿಸುತ್ತ | ತ್ರಿಣಯಕುಮಾರನೆ | ಪ್ರಣತನ ಪಾಲಿಸೋ 4 ಭವ ಭಯ ಹರ | ತ್ರೈಭುವನಜನಾರ್ಚಿತ | ಕವಿಸುತಲೋಲನೆ | ಶಿವಸದಾನಂದನೆ 5
--------------
ಸದಾನಂದರು
ಆನೆ ಬಂದಿದೆ ಇದಿಗೊ ಮದ್ದಾನೆ ಪ ಜ್ಞಾನಿಗಳೊಳಾಡುವ ಮದ್ದಾನೆ ಅ ದೇವಕಿಯೊಳು ಪುಟ್ಟಿದಾನೆ - ವಸುದೇವನ ಪೆಸರೊಳೈತಂದ ಮದ್ದಾನೆಶ್ರೀ ವಾಸುದೇವನೆಂಬಾನೆ - ಗೋಪಿದೇವಿಯ ಗೃಹದೊಳಾಡುವ ಪುಟ್ಟಾನೆ 1 ನೀಲವರ್ಣದ ನಿಜದಾನೆ - ಸ್ವರ್ಣಮಾಲೆಗಳಿಟ್ಟು ಮೆರೆವ ಚಲುವಾನೆಶ್ರೀಲೋಲನೆನಿಪ ಪಟ್ಟದಾನೆ - ದುಷ್ಟಕಾಲಿಂಗನ ಪೆಡೆಯ ಮೆಟ್ಟಿ ತುಳಿದಾನೆ 2 ಬಾಲೇಂದು ಮುಖದ ಮರಿಯಾನೆ - ಕದ್ದುಪಾಲನ್ನು ಕುಡಿದ ಮರಿಯಾನೆಕೈಲಿ ಗಿರಿಯನೆತ್ತಿದಾನೆಕಾಳ್ಕಿಚ್ಚನ್ನು ನುಂಗಿದ ಪಟ್ಟದಾನೆ 3 ಧೇನುಕಾಸುರನ ಕೊಂದಾನೆತನಗೆ ಜೋಡಿಲ್ಲದಿಹ ನಿಜದಾನೆಮಾನವರಿಗೆಲ್ಲ ಸಿಲ್ಕದಾನೆಶೌನಕಾದಿಗಳೊಂದಿಗಿಪ್ಪಾನೆ 4 ಮಲ್ಲರೊಡನೆ ಗೆಲಿದಾನೆ - ಕಡುಖುಲ್ಲ ಕಂಸನ ಕೆಡಹಿದಾನೆ - ವಿದ್ಯೆ ಸಾಂದೀಪರಲಿ ಕಲಿತ ಮರಿಯಾನೆಸಲೆ ಭಕ್ತರ ಕಾವ ಪುಟ್ಟಾನೆ 5 ತರಳೆ ರುಕ್ಮಿಣಿಯ ತಂದಾನೆ - ಬಹುಕರುಣದಿಂ ಪಾಂಡವರ ಪೊರೆದಾನೆವರ ವೇಲಾಪುರದೊಳಿಪ್ಪಾನೆಸಿರಿಯಾದಿಕೇಶವನೆಂಬ ಮದ್ದಾನೆ 6
--------------
ಕನಕದಾಸ
ಇ. ಶ್ರೀ ಹರಿಯ ಸ್ತುತಿ ತಿರುಪತಿ ಶ್ರೀನಿವಾಸ ದೇವರು ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1 ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2 ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3 ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4 ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
--------------
ಇಂದಿರೇಶರು
ಇಷ್ಟಾದರು ದಯಮಾಡು ಪಂಡರಿನಾಥ ಪಾದ ಮುಟ್ಟಿ ಪ್ರಾರ್ಥಿಪೆನು ಪ ದಾನಧರ್ಮವು ಮಾಡಬೇಕೆಂದು ಮನವಿರೆ ದಾನವಾಂತಕ ಕೃಷ್ಣ ಧನವಿಲ್ಲವಯ್ಯ ಗಾನಲೋಲನೆ ಭಕ್ತಪಾಲ ನಿನ್ನಯ ಪಾದ ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1 ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ- ಮೂರ್ತಿ ಸೇವಿಸಲಸಮರ್ಥನಾಗಿರುವೆ ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2 ಜ್ಞಾನಿಗಳೊಡನಾಡಿ ಶ್ರೀನಿವಾಸನೆ ನಿನ್ನ ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ ಜ್ಞಾನಿಗಳರಸ ಭಕ್ತರ ಸುರಧೇನು ಅಜ್ಞಾನಿಗಳಳಿದು ಸುಜ್ಞಾನಜನರ ಸಂಘ 3 ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ ಖಗವಾಹನ ಕಂಸಾರಿಯೆ ದೇವ ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ ಪಾದಗಳು ಸೇವಿಪ ಪರಮಲಾಭವನು 4 ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
--------------
ನಿಡಗುರುಕಿ ಜೀವೂಬಾಯಿ
ಎಂದಿಗಾಹುದೋ ನಿನ್ನ ದರುಶನ | ಇಂದಿರೇಶ ಮುಕುಂದ ಕೇಶವ ಪ ಗಾನಲೋಲನೆ ದೀನವತ್ಸಲ | ಮಾನದಿಂದಲಿ ನೀನೆ ಪಾಲಿಸೋ 1 ಯಾರಿಗೆ ಮೊರೆ ಇಡುವೆ ಶ್ರೀ ಹರಿ | ಸಾರಿ ಬಂದು ನೀ ಈಗಲೆ ಪೊರಿ 2 ಗಜವ ಪಾಲಿಸೊ ಗರುವದಿಂದಲಿ | ಭುಜಗಶಯನ ಶ್ರೀ ವಿಜಯವಿಠಲಾ 3
--------------
ವಿಜಯದಾಸ
ಕರುಣಾಳುವೈ ನಿಂನ ಭಜನೆಯೊಂದೇ ಸಾಕು ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ ಅಜಮಿಳ ಜನ್ಮದಿ ಘೋರ ಪಾಪವ ಗೈದು ಭಜನೆ ಮಾಡಲು ತನುನೀಗು ಕಾಲದಲೀ ಭಜಕರ ಲೋಲನೆ ಹೀನನಿಗೊಲಿದು ನೀ ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1 ದುರುಳ ವಾಲ್ಮೀಕನು ಹೀನ ಕೃತ್ಯವಗೈದು ಸುರಮುನಿಯಾಜÉ್ಞಯಿಂ ನಾಮವಭಜಿಸೇ ದುರಳನ ಸರಸದ ಭಕ್ತಿಗೆ ವಲಿಯುತ ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2 ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ ಪರಮ ಆದರದಿಂದ ಹರಿಯಂನ ಮನವನ್ನು ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3 ರಂಗನ ಮಹಿಮೆಯ ನುಡಿಯಲಾರೆನು ನಾನು ಅಂಗಜ ಪಿತನಾದ ದಶರೂಪಧರನ ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4
--------------
ಕರ್ಕಿ ಕೇಶವದಾಸ
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣೆ ತೋರಿಸೊ ದೇವಾ ಕರಿವರದನೆ ಪ. ಕರುಣ ತೋರಿಸೊ ದೇವ ಗರುಡಗಮನ ನಿನ್ನ ಕಮಲ ಧ್ಯಾನ ನಿರುತ ನೆನೆವ ಹರಿಅ.ಪ. ವೇದಾಂತ ವೇದ್ಯ ನೀನೆ ಆದಿನಾರಾಯಣ ಸಾಧುವಂದಿತನು ನೀನೆ ದೇವೇಶನೆ ವೇದವ್ಯಾಸನು ನೀನೆ ಬಾದರಾಯಣ ನೀನೆ ಭವ ಭಯಹರ ನೀನೆ 1 ಚಿಂತೆ ಕೊಡುವ ನೀನೆ ಚಿಂತಿತಾರ್ಥನು ನೀನೆ ಅಂತಕ ದೂತರಿಂದೆಳೆಸುವ ನೀನೆ ಸರ್ವ ಅಂತರ್ಯಾಮಿ ಅಂತÀರಂಗದಿ ನಿಂತು ಪ್ರೇರಿಸಿ ನಿನ ಪಾದ ಪಂಥದಿ ಸ್ತುತಿಗೊಂಡು ಸಂತಸ ಪಡುವವ ನೀನೆ2 ಮಾನುನಿ ದ್ರೌಪದಿಯಾ ಮೊರೆಯ ಕೇಳಕ್ಷಯ ನೀನೆ ಪಾಲಿಸಲಿಲ್ಲವೆ ಶ್ರೀ ಕೃಷ್ಣ ನೀನಿತ್ತು ಸಲಹಿದ ಶ್ರೀ ಶ್ರೀನಿವಾಸ ದೊರೆ ಗಾನಲೋಲನೆ ಭಕ್ತರ ಸಲಹುವೆನೆಂಬುವ ಆಭಯ ಹಸ್ತವ ನೀನಿತ್ತು ಸಲಹೆನ್ನದೇವಾಧಿದೇವ 3
--------------
ಸರಸ್ವತಿ ಬಾಯಿ
ಕಾಯಬೇಕೆನ್ನ ಕೇಶವನೇ ಬಂದು ಪಾಯವನರಿಯೆನು ಹರಿಯೇ ಮಾಧವನೇ ಪ ಭವಸಾಗರವÀ ದಾಟಿ ಬಂದೇ ಇನ್ನು ಭವವನ್ನು ಬಂಬಿದೆ ಹರಿಯೇ ಶರಣೆಂದೆ ಅ.ಪ. ಜವನ ಬಾಧೆಗೆ ಅಂಜಿ ಬಂದೇ ಭವರೋಗ ವ್ಯೆದ್ಯನೇ ರಕ್ಷಿಸೋ ತಂದೇ 1 ಯೋನಿಗೆ ಬರಲಾರೆ ಹರಿಯೇ ಬಂದು ಮೌನದಿ ವೇಳೆಯನನ್ಯರೊಳ್ತಳೆಯೇ 2 ಜನ್ಮವ ಕಳದೆನು ಬರಿದೇ ಗಾನಲೋಲನೆ ಎನ್ನ ರಕ್ಷಿಸೋ ತಂದೇ 3
--------------
ಕರ್ಕಿ ಕೇಶವದಾಸ
ಕೇಶಿದನುಜನ ನಾಶಗೊಳಿಸಿದ ಕೇಶವನೆ | ಕಾಯೋ ಶ್ರೀಧರ ಪ ನಾಶರಹಿತ ಪರೇಶ ದಿನಪಸಂಕಾಶ | ಕ್ಲೇಶವಿನಾಶ ಭೂಧರ ಅ.ಪ ದೀನಪಾಲನೆ ಗಾನಲೋಲನೆ ಧೇನುಕಾಸುರ ಸೂದನೆ ಸಾನುರಾಗ ವಿನೋದನೆ 1 ರಥಾಂಗ ವೈರಿ ಗೋಪಾಲನೆ ಮಂಗಳಾಂಗ ಶುಭಾಂಗ ಮಾಂಗಿರಿ ರಂಗ ಗೋಪೀ ಬಾಲನೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೊಡುವೆ ವೀಳ್ಯವನು ಕಡಲ ಶಯನನೇ ನಾ ಪ. ಬುತ್ತಿ ಚಿಗುರು ಎಲೆಯು ಕತ್ತರಿಸಿದ ಅಡಕೆ ಮುತ್ತಿನ ಸುಣ್ಣವನ್ನು ನಾ 1 ಯಾಲಕ್ಕಿ ಲವಂಗ ಬಾಲ ಮೆಣಸು ಸಹ ಬಾಲೆ ನಾನು ಬೇಡುವೆನು ನಾ 2 ಶ್ರೀ ಶ್ರೀನಿವಾಸನೆ ಶ್ರೀ ರಮಾಲೋಲನೆ ಶಿರವನಿಂದು ಬಾಗುವೆನು ನಾ 3
--------------
ಸರಸ್ವತಿ ಬಾಯಿ
ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ. ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1 ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2 ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3 ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4 ಅರಳು ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5 ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6 ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7
--------------
ಗಲಗಲಿಅವ್ವನವರು
ಗೋಪಾಲವಿಠಲ ನೀ ಕಾಪಾಡೊ ಎನ್ನನುಅಪಾರ ಜನುಮದಿ ಪೊಂದಿ ಇಪ್ಪೆ ನಿನ್ನ ಪ. ಉದಿತ ತರಣೀನಿಭ ಪದಪದ್ಮ ನಿನ್ನಯಹೃದಯದೊಳಗಿರಿಸಿ ಮುದದಿಂದ ಧ್ಯಾನಿಪಸದಯುಗಳ ಪಾದಪದುಮಸೇವೆಯನುಒದಗಿ ಪಾಲಿಸೊ ಶಶಿವದನ ಸಂ(ಕಂ)ಸದನನೆ 1 ವಾಸುದೇವನೆ ಎನ್ನ ದೋಷಿಯೆಂತೆಂದರೆಆಸರಿನ್ನ್ಯಾರು ನಿನ್ನ ದಾಸರದಾಸಗೆದಾಸವಿನುತ ಹೀಗುದಾಸೀನ ಮಾಡಲುದಾಸಜನರು ನಿನ್ನ ಲೇಶವು ಮೆಚ್ಚರು 2 ಪಿರಿಯರೆಲ್ಲರು ನಿನ್ನ ಚರಣವ ಪೂಜಿಸಿಪರಮಾನುಗ್ರಹ ಪರಿಪಾಲಿಸಿಪ್ಪರೆನ್ನನಿರುತದಿಬೇಡುವೆ ಗೋಪಾಲವಿಠಲ ಶ್ರೀಲೋಲನೆದೊರೆಯೆ ನಿನ್ನ ಮೂರುತಿ ಬರವೆನ್ನ ಮನಸಿಗೆ 3
--------------
ಗೋಪಾಲದಾಸರು
ಗೋಪಿ ಇವನು ನಿನ್ನಾ ಪ ಜಗವ ನಿರ್ಮಿಸಿ ಪಾಲಿಸಿ ಅಳಿಸುವ ಅಗಣಿತ ಸುಗುಣಾ ಭರಣನೆ ಇವನು ಅ.ಪ ಬೆಣ್ಣೆಯ ಕದ್ದನು ಸಣ್ಣವನಿಹ ಬಹು ಚಿಣ್ಣರ ಕೂಡುತ ಗೋಗಣ ಕಾಯುವ ಮನ್ಮನ ಪುಥ್ಥಳಿ ಕಳಿಸುವದಾಗದು ಎನ್ನುವ ನುಡಿಗಳ ಬದಿಗಿಡು ತಾಯಿ ಉಣ್ಣುತ ಉಣ್ಣುತ ಮೊಲೆಯನು ಕೊಂದಿಹ ಉನ್ನತ ರಕ್ಕಸಿ ಪೂತಣಿಯನ್ನಿವ ಮಣ್ಣನು ಕಂಡರು ಕಂಸನದೂತರು ಪೂರ್ಣಾನಂದನು ಸರಿ ಇವನಮ್ಮ 1 ಜಾರ ಚೋರ ಸುಕುಮಾರನು ಸುಂದರ ನಾರೇರ ವಲಿಸಿ ಸೇರಿದ ನಿಶಿಯಲಿ ಪೋರನೆಂಬ ಮನ ದೂರವಗೈದುಗ ಭೀರ ಮಹಿಮ ಜಗ ಸಾರನೆಂದರಿಯೆ ಭಾರಿಗಿರಿಯನೆತ್ತಿ ಊರಿಗೆ ಊರನು ಸೇರಿಸಿ ಪೊರೆದಿಹಪಾರಮಹಿಮ ಜಂ ಭಾರಿದರ್ಪಹರ ಪೋರನೆ ಬಿಡುಬಿಡು ನಿಗಮ ಸಂಚಾರನೆ ಖರೆಯೆ 2 ಕಾಲ್ಗಳು ಸೋಕಲು ಶಕಟನು ಬಿದ್ದನು ಶೀಳುತ ಕೊಕ್ಕನು ಬಕನಂ ಕೊಂದನು ಕಾಳಿಯ ತುಳಿಯುತ ಗರ್ವವ ನಿಳಿಸಿದ ಲೀಲಾಜಾಲದಿ ಜ್ವಾಲೆಯ ನುಂಗಿದ ಬಾಲರು ಕೇಳಲು ಆಲಯತೋರಿದ ಪಾಲಿಸಿ ವರುಣನ ತಂದೆಯ ಕಂದನ ಲೋಲನೆ ಸರಿ ಜಗಮೂಲನು ಕೇಳೆ 3 ನೀರಜ ನಾಭಗೆ ಗೊಲ್ಲತಿಯ ಗಣ ಬೀರಲ್ ಸಾಧ್ಯವೆ ಮೋಹವ ನೆಂದಿಗು ಶ್ರೀರತಿದಾಯಕ ಕೊಳ್ಳುವನೇ ರತಿ ಭವ ತಾರಕ ಶುಭ ಶೃಂಗಾರ ಪೂರ್ಣ ಪರಿವಾರದಭೀಷ್ಠವ ಖರೆ ಭೂರಿದಯಾಮಯ ನಾರಾಯಣನಿವ ದೋಷ ವಿದೂರ 4 ಮೆಲ್ಲಗೆ ಬಾಯೊಳು ಎಲ್ಲವ ತೋರಿದ ಮಲ್ಲನು ಸರ್ವರ ವಲ್ಲಭ ಸಿದ್ಧವು ಗೊಲ್ಲನ ವೇಷದಿ ಇಲ್ಲಿಹನಮ್ಮ ಇಲ್ಲವೆ ಸಮರಿವಗೆಲ್ಲಿಯ ಸತ್ಯ ಮಲ್ಲರ ಮರ್ದಿಸಿ ಕೊಲ್ಲುತ ಕಂಸನ ನಿಲ್ಲಿಸಿ ಧರ್ಮವ ಕಾಯುವ ನಮ್ಮ ಬಲ್ಲಿದ “ಶ್ರೀಕೃಷ್ಣವಿಠಲ” ಬೇಗನೆ ನಿಲ್ಲಿಸಿ ಕೊಳ್ಳದೆ ಕಳುಹೇ ತಾಯಿ 5
--------------
ಕೃಷ್ಣವಿಠಲದಾಸರು
ಘನವೇನೋ ನಿನಗಿದು ಗುಣವನದೀ | ಮಾನದ ಮಾನ್ಯ ||ಮನವ ನಿನ್ನಲಿ ನಿಲ್ಲಿಸೋ ಪ ತನುಮನ ಸಕಲ ಸಾಧನವೆಲ್ಲ ಎನಗಿತ್ತುಮನ ಆದಿ ಕರಣವ ಎನಗೊಶಪಡಿಸದೆ ಅ.ಪ. ಅಚ್ಯುತ ಮೂರ್ತಿ | ಸತತ ಎನ್ನಲ್ಲಿ ಇದ್ದುಹಿತವ ಮಾಡಿದೆ ಎನ್ನ | ಹತಭಾಗ್ಯನೆನಿಪುದು 1 ಹೀನ ಬುದ್ಧಿಯ ಕಳೆಯದೇ | ಮುನಿಜನ ವಂದ್ಯಾ |ವಾನರ ನಾನಾದೆ ಹರಿಯೇ ||ಶ್ವಾನ ಮತಿಯ ನೀಗಿ | ಧ್ಯಾನ ಸಾಧನ ನೀಡೋ |ಗಾನ ಲೋಲನೆ ನಿಧಾನ ಮಾಡಲಿ ಬೇಡ 2 ತಂದೆ ಮುದ್ದು ಮೋಹನರೂ | ಮಂದನು ಎನ್ನ |ತಂದೆ ನಿನ್ನಡಿಗ್ಹಾಕಿದರೊ ||ಇಂದಿರೆಯರಸ ಗುರು | ಗೋವಿಂದ ವಿಠಲಯ್ಯ |ಛಂದಾಗೀಯೆನ್ನ ಮನ | ಮಂದಿರದೊಳು ನಿಲ್ಲೊ 3
--------------
ಗುರುಗೋವಿಂದವಿಠಲರು