ಭೃಂಗ ಜಯ
ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ
ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ
ಗುರು ಪುರಂದರದಾಸರೆ ನಿಮಗೆ ಪ
ಪಾಕಶಾಸನಪುರದ ಚಿನಿವಾರ ವರದಪ್ಪ
ನಾ ಕುಮಾರನಾಗಿ ಜನಿಸಿ ಸಂಸಾರದೊಳು
ಸಂಚರಿಸಿ ಲೌಕಿಕವನ್ನೆ ತೊರೆದು
ಈ ಕಲಿಯುಗದಲ್ಲಿ ತುಂಗಾತೀರ ಪಂಪಾ
ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ
ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1
ಕಾಮಕ್ರೋಧ ಲೋಭ ಮದ ಮತ್ಸರ ಡಂಭ
ಈ ಮರಿಯಾದಿಗಳ ಮರ್ಮವನೆ ಕಡಿದು ನಿ
ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ
ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ
ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ
ಹುಯಿಸಿ ಕಾವನೈಯನ ಕುಣಿಸಿದ 2
ಸಿರಿ ವಿಠ್ಠಲನ್ನ ಮೃದು
ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ
ಬುದ್ಧಿ ಪೂರ್ವಕದಿಂದಲಿ
ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ
ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ
ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3
ವರದಪ್ಪನೇ ಸೋಮ ಗುರುರಾಯ ದಿನಕರನು
ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ
ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ
ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ
ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ
ಕರಣ ಚರಿತೆಯಲಿ ನಲಿದಾಡಿದ 4
ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ
ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ
ಹಿತನಾಗಿ ದೃಢನೋಡಿದ
ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ
ಸುತನಾಗಿ ನೀರು ನಿಶಿತದಲಿ ತಂದ ಅ
ಪ್ರತಿ ದೈವತಾ ಕಿಂಕರ 5
ವಜ್ರ ಪ್ರಹರವಿದು
ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು
ಹೆಚ್ಚು ಲಜ್ಜೆಯನು ತೊರೆದು ನಿತ್ಯ
ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ
ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ
ಅಬ್ಜಭವನೊಡನೆ ಗತಿಗೆ 6
ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ
ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ
ದಾಸರನ ಸಂತರಿಸಿ ಧರೆಗೆ ತೋರಿ
ಸಿರಿ ವಿಠಲನ ಸ್ಮರಿಸುತ ಸು
ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು
ಚಿಂತೆಯೊಳಗಿಟ್ಟ ಗುರುವೆ 7