ಹೆಚ್ಚುಕಡಿಮೆಯೆಂದು ಹೆಣಗಾಡಬೇಡಿ
ಸಚ್ಚಿದಾನಂದ ಬ್ರಹ್ಮನ ಗುಟ್ಟು ನೋಡಿ ಪ
ಪರಮಾತ್ಮ ಕಾಯದೊಳಿರುತಿರ್ಪತನಕಾ
ಪರಿಪರಿ ಹೆಸರಿಂದ ಕರಿವರು ಅನಕಾ
ಶರೀರ ಭೋಗವ ತೀರಿಸಿಕೊಂಡು ಹೋಹಾಗೆ
ಲ್ಲರಿಗೊಂದೆ ಪೆಸರಿಂದ ಕರೆಯುವರಾಗಾ 1
ಅರಸು ಮಂತ್ರಿ ಕರಣೀಕ ತಳವಾರಾ
ಕವಿ ಶಾಸ್ತ್ರಿ ಉದಾರಾ
ಪರಿಯ ನಾಮಗಳಿಂದ ಉಪಾಧಿಯೋಗಾ
ಪರಮಾತ್ಮ ತೊಲಗಲು ಹೆಣವೆಂಬರಾಗಾ 2
ಪರಮಾತ್ಮನಾಟದ ಲೀಲೆ ಇದೆಲ್ಲಾ
ಗುರುಪುತ್ರನಾದ ಮಹಾತ್ಮನೆ ಬಲ್ಲಾ
ಗುರು ವಿಮಲಾನಂದ ಶರಧಿಯೊಳಾಡಿ
ಹಿರಿದು ಕಿರಿದು ಯಾವಲ್ಯುಂಟೆಂದು ನೋಡಿ 3