ಪ್ರಾರ್ಥಿಸುವೆ ರಘುನಾಥತೀರ್ಥರ
ಪ್ರಾರ್ಥಿಸುವೆ ಪುರುಷಾರ್ಥಪ್ರದರ ಪ
ಸಾರ್ಥಕವಾಗಲು ಪಾರ್ಥಿವ ದೇಹವು
ಜಗದಲಿ ಕೀರ್ತಿಗಳಿಸಿದವರ ಅ.ಪ
ನೇದೃಶಂ ಸ್ಥಲಿಮಲಂ ಶಮಲಘ್ನಂ
ನಾಸ್ಯತೀರ್ಥಂ ಸಲಿಲಸ್ಯಸಮಂ ವಾಃ
ನಾಸ್ತಿ ವಿಷ್ಣುಂ ಸದೃಶಂ ನನುದೈವಂ
ಸತ್ಯ ವಚನಗಳಿವೆಂದು ಸೂಚಿಸುತ
ಆಸ್ತಿಕ ಜನಮನ ರಂಜಕ ತ್ರಿಮಕುಟ
ಕ್ಷೇತ್ರನಿವಾಸ ಪವಿತ್ರತಮ ಚರಿತರ 1
ವ್ಯಾಸರಾಜ ಗುರುವರ್ಯ ರಚಿತ ತಾ
ತ್ಪರ್ಯ ಚಂದ್ರಿಕಾ ಗ್ರಂಥವನು
ವಾಸುದೇವ ನರಹರ್ಯನುಗ್ರಹದಿ
ಉರ್ವರಿತವ ವಿರಚಿಸಿ ಮೆರೆದ
ಶೇಷಚಂದ್ರಿಕಾಚಾರ್ಯರೆಂಬೊ ಗುರು
ವ್ಯಾಸರಾಜರ ಪರಾವತಾರರ 2
ರಾಗ ದ್ವೇಷಗಳ ತೊರೆಯುತ ತ
ನ್ನನು ರಾಗದಿಂದ ಭಜಿಸುವ ಜನಕೆ
ಭೂಗಕಲ್ಪ ತರುವಂತೆ ಅರಿಷ್ಠವ ನೀಗಿ
ಸಾಧು ಭೋಗಗಳೀವ
ಯೋಗಿಜನ ಮನೋನಯನ ಪ್ರಸನ್ನ ಶ್ರೀ
ರಾಘವೇಂದ್ರರಪರಾವತಾರರ 3