ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲ್ಲವರೆ ಬಲ್ಲರು ಎಲ್ಲವರು ಅರಿಯರುಪುಲ್ಲಲೋಚನ ಪರಬ್ರಹ್ಮನೆಂಬುದನು ಪ ಅಜಜ್ಞಾನಾಧಿಕ ಬಲ್ಲ ಅನ್ನಲಸ್ನೇಹಿತ ಬಲ್ಲಗಜ ಚರ್ಮಾಂಬರ ಬಲ್ಲ ಗರುಡ ಬಲ್ಲಭುಜಗೇಶ್ವರ ಬಲ್ಲ ಭೂರಿಲೋಚನ ಬಲ್ಲತ್ರಿಜಗದಧಿಪತಿ ತ್ರಿವಿಕ್ರಮನೆಂಬುದನು1 ಶುಕಯೋಗೀಶ್ವರ ಬಲ್ಲ ಸುಗುಣ ನಾರದ ಬಲ್ಲಭಕುತ ಪ್ರಹ್ಲಾದ ಬಲ್ಲ ಬಲಿಯು ಬಲ್ಲರುಕುಮಾಂಗದ ಬಲ್ಲ ಋಷಿ ಪರಾಶರ ಬಲ್ಲಮಕರಕುಂಡಲಧರ ಪರಾತ್ಪರನೆಂಬುದನು 2 ಚಕ್ರಧರ ಕರ್ಮಹರನೆಂಬುದನು 3 ವಿದೇಹ ಬಲ್ಲಶಶಿಮಿತ್ರನೇತ್ರ ಸರ್ವೋತ್ತಮನೆಂಬುದನು 4 ವಾಗಿನಿಂದಕ್ರೂರ ಬಲ್ಲ ವಚನಿ ಶೌನಕ ಬಲ್ಲಯೋಗಿ ಕಪಿಲ ಬಲ್ಲ ಭೃಗು ಬಲ್ಲನುತ್ಯಾಗಿ ಧರ್ಮಜ ಬಲ್ಲ ರಣದೊಳರ್ಜುನ ಬಲ್ಲಕಾಗಿನೆಲೆಯಾದಿಕೇಶವ ಕೈವಲ್ಯನೆಂಬುದನು 5
--------------
ಕನಕದಾಸ
ಮುಟ್ಟು ದೋರಿತು ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ಒಂದಿಷ್ಟು ಕೊರತೆ ಕೃಷ್ಣನೆಂಬ ಅ.ಪ ಹೇಯಗುಣವಿಲ್ಲ ಮುನಿಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ 1 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ಮಿಥ್ಯಾವಚನಿಲ್ಲವೆಂಬೊಂದಿತ್ಯಧಿಕ ಕೊರತೆಯೆಂಬ 2 ಜ್ಷಾನವಂತನೆಯ ಬಹುಮಾನವಂತನಾದರೂ ಅ ಜ್ಞಾನಶೂನ್ಯನೆಂಬ ದೊಡ್ಡ ಹಾನಿಯೊಂದಿರುವುದೆಂಬ3 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ 4 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳನಪಹರಿಪ ದೀಪನಾ ಬಿಡದು ಎಂಬ 5 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರಿವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ 6 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ 7 ನಿತ್ಯತೃಪ್ತನಾದರೂ ನಿಜ ಭೃತ್ಯರನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನುನೀನಲ್ಲವೆಂಬ 8 ಕಷ್ಟಪಡಬೇಡವೆನ್ನೊಳೆಷ್ಟು ದುರ್ಗುಣಂಗಳಿಹ ವಷ್ಟನು ಒಪ್ಪಿಸಿ ನಿನಗಿಷ್ಟ ನಾಗಬೇಕೆಂಬ 9 ಕ್ಷೀರದಧಿನವನೀತ ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ 10 ಕೊರತೆಯೆಂಬಾ ಜನರಿಗೆಲ್ಲಾ ವರವನಿತ್ತು ಪೊರೆವೆನೆಂಬ ಸ್ಥಿರವಾಗಿ ಶ್ರೀ ವ್ಯಾಘ್ರಗಿರಿಯೊಳಿರುವ ವರದ ವಿಠಲನೆಂಬ11
--------------
ವೆಂಕಟವರದಾರ್ಯರು
ನಿನಗೆ ತಿಳಿದಂತೆ ಮಾಡುವದಯ್ಯ ಬೇಡೆನಲು |ಯನಗೆ ಸ್ವಾತಂತ್ರ್ಯವುಂಟೇ ||ಮನಸಿಜಪಿತ ನಿನ್ನ ಮೀರಿ, ಸಿರಿ, ವಿಧಿ,ಶರ್ವ|ತೃಣ ಮುರಿಯೆ ಶಕ್ತರಲ್ಲಾ ಹರಿಯೇ ಪಅಪಮಾನ ಮಾಡಿಸೊ ಕೋಪವನೆ ಹೆಚ್ಚಿಸೊಕೃಪಣತನದಲ್ಲಿರಿಸೊ |ಅಪಹಾಸಗೈದಿಸೋ ಡಾಂಭಿಕದವನೆನಿಸೋಉಪವಾಸದಲ್ಲೇ ಇರಿಸೊ |ಕೃಪೆಯುಳ್ಳ ನರನೆನಿಸೋ ಮಾನವೆಗ್ಗಳ ಕೊಡಿಸೊಚಪಲ ಬುದ್ಧಿಯನೆ ಕಲಿಸೊ |ಅಪರಾಧವನೆ ಹೊರಿಸೊ ಬಲು ಭಯವ ತೋರಿಸೋತ್ರಿಪುರಾಂತಕರ್ಚಿತ ಪದ ಹರಿಯೇ 1ಬೈಸು ಬೈದಾಡಿಸೊ ಬಾಂಧವರನಗಲಿಸೊಹೇಸಿಕೆಯು ಲಜ್ಜೆ ತೋರಿಸೊ |ಗ್ರಾಸವನೇ ಉಣಿಸೋ ನರರಾಲಯವ ಕಾಯಿಸೋಕ್ಲೇಶನಿತ್ಯದಲಿ ಬಡಿಸೊ |ಆಶೆಯನು ಜರಿಸು ಕೈಕಾಲುಗಳ ಕುಂಠಿಸೊದೋಷಕ್ಕೆ ಮನವಂಜಿಸೋ |ವಾಸುದೇವನೆ ನಿನ್ನ ವ್ರತವ ಮಾಡಿಸುವಂದುದೇಶ ಬಹುಕಡೆಗೆ ತಿರುಗಿಸೊ ಹರಿಯೇ2ಕವನಗಳ ಪೇಳಿಸೊಕರ್ಮಬಾಹಿರನೆನಿಸೊಭುವನದೊಳು ಭಂಡನೆನಿಸೊ |ಕವಿಸು ಅಜ್ಞಾನವನು ಸನ್ಮತಿಯ ಪ್ರೇರಿಸೊಕಿವಿ ಮಾತ್ರ ದೃಢದಲಿರಿಸೋ |ಜವನ ಸದನದ ಪೊಗಿಸೋ ಬಂಧಾನದೊಳಗಿರಿಸೊತವ ದಾಸರೊಳು ಕೂಡಿಸೊ |ದಿವಿಜರೊಲ್ಲಭ ನ್ಯಾಯವನ್ಯಾಯವನೆಮಾಡುಭವಪಂಕದೊಳು ಮುಳುಗಿಸೋ ಹರಿಯೇ 3ಹೆತ್ತವರ ಸೇವೆ ಮಾಡಿಸೊ ನೀಚರ ಬಳಿಯತೊತ್ತು ಕೆಲಸವ ಮಾಡಿಸೋ |ಚಿತ್ತ ಚಂಚಲಗೊಳಿಸೊ ವೈರಾಗ್ಯ ಪುಟ್ಟಿಸೊಉತ್ತಮರ ನೆರೆಯಲಿರಿಸೊ |ಮುತ್ತಿನಾಭರಣಿಡಿಸೊ ತಿರುಕೆಯನೆ ಬೇಡಿಸೊವಿತ್ತಸಂಗ್ರಹ ಮಾಡಿಸೊ |ಮುತ್ತೆಗೊಲಿದಿಹನೆ ವಿಷ ಕುಡಿಸೊ ಅಮೃತವುಣಿಸೊಮತ್ತೊಬ್ಬರಾರು ಗತಿಯೋ ಹರಿಯೇ 4ಸಾಲಗೊಯ್ಯನಮಾಡುಕಂಡ ಕುಲದಲಿ ತಿನಿಸುಕೀಳು ಮನುಜರ ಪೊಂದಿಸೋ |ನಾಲಿಗೆಗೆಡಕನೆನಿಸೊ ಸತ್ಯ ವಚನಿಯು ಎನಿಸೊಸ್ಥೂಲ ಪುಣ್ಯವ ಮಾಡಿಸೋ |ಕೇಳಿಸೋ ಸಚ್ಛಾಸ್ತ್ರ, ನೀತಿಯರಿಯನು ಎನಿಸೋಆಲಯದಿ ಸುಖದಲಿರಿಸೋ |ಮೂಲೋಶ ಪತಿಯೆಹರಿಕುದುರೆಯೇರಿಸೊ ಮತ್ತೆಕಾಲು ನಡಿಗೆಯಲೆ ನಡೆಸೊ ಹರಿಯೇ 5ಅರಸು ಪದವಿಯ ಕೊಡಿಸೊಕಾಷ್ಠಭಾರವ ಹೊರಿಸೊಪರದೂಷಣೆಯ ಮಾಡಿಸೊ |ಮರ್ಯಾದೆಗಳು ತಿಳಿಸು ಅತಿಮೂಢನೆಂದೆನಿಸೊನಿರುತ ರೋಗದಲಿ ಇರಿಸೋ |ಕರೆಕರೆಯ ಹಿಂಗಿಸೊ ದಿವ್ಯ ವಸನವನುಡಿಸೊಸುರಗಂಗಿ ತಡಿಯೊಳಿರಿಸೊ |ಪರಮಾತ್ಮನೆ ವಂಧ್ಯನೆನಿಸೊ ಸುತರನ್ನೆ ಕೂಡೊಮರಿಸೋ ದುರ್ವಿಷಯಗಳನೂ ಹರಿಯೆ6ಮಾಕಾಂತ ಪ್ರಾಣೇಶ ವಿಠಲ ನೀನಿತ್ತುದಕೆಶೋಕಿಸಲು ಸಲ್ಲದಯ್ಯ |ಆ ಕುಂಭೀಪಾಕ ಮೊದಲಾದ ನರಕದೊಳೆನ್ನಹಾಕಿದರೂ ಒಳಿತೆ ಜೀಯಾ |ಈ ಕಲಿಯುಗದಿಪಂಚಭೇದತಿಳಿಯದ ದೈತ್ಯರಾಕುಲದೊಳಿರಿಸಬೇಡ |ಶ್ರೀ ಕಾಳೀಕಾಂತನರ್ಚನೆ ಸರ್ವ ಕಾಲದಲಿಬೇಕುಬಿನ್ನಪಲಾಲಿಸೋ ಹರಿಯೇ 7
--------------
ಪ್ರಾಣೇಶದಾಸರು
ಮಹತಿಗೆ ಮಹತು ಹರಿನಾಮಬಹುಜನ್ಮಜಲಧಿ ಶೋಷಿಸುವ ಹರಿನಾಮ ಪ.ಹಿಂದೊದಗಿದಘರಾಶಿ ಬೇಯಿಸಿ ಬಿಸುಟುವ ನಾಮಮುಂದೆ ಬಹ ದುರಿತಕಡ್ಡಹ ನಾಮಮಂದಮತಿ ಕತ್ತಲೆಗೆ ಬಾಲಾರ್ಕಸಮ ನಾಮದಂದುಗದ ಬಳ್ಳಿಯನು ಹರಿವ ನಾಮ 1ಮುಕುತಿ ನಗರವ ತುಂಬಿಸುವ ಅಭಯಕರ ನಾಮಶಕುತ ಯಮಾಲಯಕೆÉ ಭಯಂಕರದ ನಾಮಅಕಳಂಕ ದಾಸರಿಗೆ ಆದ್ಯಂತಗತಿ ನಾಮಭಕುತರೆಡರಿನ ಗಿರಿಗೆ ವಜ್ರನಾಮ 2ಸರ್ವ ಶ್ರುತಿಮುನಿಗಳುಗ್ಗಡಿಸುತಿಹ ನಾಮಉರ್ವಿಯೊಳು ನಂಬಿದರ ಪೊರೆವ ನಾಮಸರ್ವಜÕರಾಯಗುರು ನಿರ್ವಚನಿಸುವ ನಾಮಸರ್ವೇಶ ಪ್ರಸನವೆಂಕಟೇಶನ ಶ್ರೀನಾಮ 3
--------------
ಪ್ರಸನ್ನವೆಂಕಟದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು