ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಕಿತನಾಮ ಪದಗಳು ಅಚ್ಯುತಾನಂತವಿಠಲ | ಸಲಹ ಬೇಕಿವನಾ ಪ ಸ್ವಚ್ಛಶಪಥದಿ ಹರಿಯ | ನಾಮ ನಂಬಿಹನಾ ಅ.ಪ. ಜೀವಕಾರಣವೆನೆ | ಆವನ ವಿದ್ಯಾಪಟಲಓವಿಕಡಿಯಲು ಸಾಧ್ಯ | ನಾಮ ಸಾಧನದೀಈ ವಿಧದ ಸಂಪ್ರಜ್ಞೆ | ಭಾವ ಉಳ್ಳವನೀತತೀವರದಿ ಕೈಪಿಡಿದು | ಕಾಯೋ ಕೃಪ ಸಾಂದ್ರ 1 ಗುರು ಭಕ್ತಿಯುಳ್ಳವನು | ಸುಜ್ಞಾನಕಾಂಕ್ಷಿತನುಇರುವನೀತನು ಎಂದು | ವರ ಸು ಉಪದೇಶಹರಿಯ ನಾನಿತ್ತಿಹೆನು | ಸ್ವಪ್ನ ಸೂಚೀಯಂತೆಕರುಣದಿಂ ನಿಜತೋರೊ | ಮರುತಂತಾರಾತ್ಮ 2 ಹರಿ ನಾಮ ವೆಂಬಂಥ | ವಜ್ರಾಂಗಿ ತೊಡಿಸಿವಗೆದುರಿತರಾಶಿಗಳಳಿದು | ಪೊರೆಯ ಬೇಕಿವನಾಸುರು ಭೂರಹವು ಆಗಿ | ಪರಿಪರಿಯ ವರಗಳನುಗೆರೆಯುತ್ತ ಹರ್ಷವನೆ | ಸುರಿಸೊ ಶ್ರೀಹರಿಯೇ 3 ಸತ್ಸಂಗವನೆ ಕೊಟ್ಟು | ದುಸ್ಸಂಗವನೆ ಕಳೆಯೊಮತ್ಸಕೇತನ ಜನಕ | ಸಚ್ಚಿದಾನಂದಾತ್ಮಾವತ್ಸಾರಿ ಕೃಷ್ಣ ಗೋ | ವತ್ಸ ದನಿಗಾವು ಬಹುಉತ್ಸವದಿ ಬರುವಂತೆ | ನೀನೆ ಪೊರೆ ಇವನಾ4 ಭಾವಜ್ಞ ನೀನಿರುವೆ | ಪೇಳ್ವದೇನಿಹುದೆನಗೆದೇವ ದೇವೇಶನೆ | ಹರಿ ಸಾರ್ವಭೌಮಗೋವರ್ಧನೊದ್ಧಾರನೆ | ಗೋವಿಂದ ಪತಿಯೆ ಗುರುಗೋವಿಂದ ವಿಠಲ ಮದ್ | ಭಿನ್ನಪವ ಸಲಿಸೊ 5
--------------
ಗುರುಗೋವಿಂದವಿಠಲರು
ದೇವ ಮಾರುತಿ ಜಯಮಂಗಲಂ ಶುಭ ಮೂರುತಿ ದಯಾಬ್ಧಿ ಜಯಮಂಗಳಂ 1 ರಘುರಾಮ ಶ್ರೀಪಾದ ಪ್ರಿಯ ಸೇವಕ ವರದಾಯಕ ಹರಿನಾಯಕ ಕರುಣಿಸೊ ವಜ್ರಾಂಗ ಜೀವೇಶ್ವರ2 ಶ್ರಿ ಶಾಮಸುಂದರ ಭಕ್ತಾಗ್ರಣಿ ಘನ ಸದ್ಗುಣಿ ಚಿಂತಾಮಣಿ ಕೊರವೀಶ ಭಯನಾಶ ನತಪೋಷ 3
--------------
ಶಾಮಸುಂದರ ವಿಠಲ
ವೇಣುಧರ ವಿಠಲಾ | ನೀನೆ ಪೊರೆ ಇವಳಾ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿಯೆ ಅ.ಪ. ಸ್ವಾಪದಲಿ ಗುರುರೂಪ | ರೂಪ ಸಮ್ಮುಖದಲ್ಲಿಗೋಪಕೃಷ್ಣಾಕೃತಿಯ | ಪಡೆದಿಹಳು ಇವಳುಶ್ರೀಪತಿಯೆ ನಿನ್ನೊಲಿಮೆ | ಆಪಾರವಿರುತಿರಲುಪ್ರಾಪಿಸುತ ಅಂಕಿತವ | ಒಪ್ಪಿಸಿಹೆ ನಿನಗೇ 1 ಪಥ ತೋರೋ ಹರಿಯೇ2 ಪತಿ ಸುತನೆ | ಕಾರುಣ್ಯ ತೋರಿ ಆ-ಪಾರ ದುಷ್ಕರ್ಮಗಳ | ಪಾರಗಾಣಿಪುದೋ |ಮಾರುತನ ಮತದಲ್ಲಿ | ಧೀರೆ ಎಂದೆನಿಸಿ ಸಂ-ಸಾರ ಸಾಗರವನ್ನು | ದಾಟಿಸೋ ಹರಿಯೇ 3 ಸೃಷ್ಟಿ ಸ್ಥಿತಿ ಲಯ ಕರ್ತ | ಕೃಷ್ಣಮಾರುತಿ ದೇವಅಷ್ಟಸೌಭಾಗ್ಯಗಳ | ಕೊಟ್ಟು ಕಾಪಾಡೋವಿಷ್ಟರಶ್ರವ ಹರಿಯೆ | ನಿಷ್ಠೆ ಆಚಾರದಲಿಕೊಟ್ಟು ಕೈಪಿಡಿ ಇವಳ | ಜಿಷ್ಣುಸಖ ಹರಿಯೇ 4 ಸರ್ವದಾ ತವ ಮಹಿಮೆ | ಶ್ರವಣ ಸುಖ ಸಾಧನವಹವಣೀಸಿ ತವನಾಮ | ವಜ್ರಾಂಗಿ ತೊಡಿಸೀಭವವನುತ್ತರಿಸತ್ಕಿ | ಬಿನೈಪೆ ಶ್ರೀ ಹರಿಯೆಸರ್ವ ಸುಂದರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಎಂಥ ಮಹಿಮನುನೋಡುನಮ್ಮಯಲಗೂರದ ಹನುಮಾ |ಸಂತತ ನೆನೆವರ ಚಿಂತಾಮಣಿ ನಿಜ ಶಾಂತಸದಾ ನಿಶ್ಚಿಂತ ಪರಾಕ್ರಮಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹುಟ್ಟುತಲಿ ಮಿತ್ರನ ತಿನಬೇಕೆಂದು ಥಟ್ಟನೆ ತಾ ಬಂದು |ಬೆಟ್ಟರಿಯ ಬೆನ್ನನೆ ಬೀಳಬೇಕೆಂದು | ಪುಟ್ಟರಿದಾನೆಂದು |ಮುಟ್ಟಿ ಬರಲುಕವನೆಟ್ಟನೆ ಹೊಯ್ಯಲು |ಧಿಟ್ಟ ಮರಪನೆಂದು ಧಿಟ್ಟನೆ ಧಿಟ್ಟ ಬಂದು1ಅಂಜನಿಯ ಗರ್ಭದಲಿ ತಾ ಬಂದಾ | ಸಂಜೀವನಿ ತಂದಾ |ಕೆಂಜಡಿಯನ ಸ್ವರೂಪನು ಜಗದಾನಂದಾ ಸ್ವಾನಂದ ಕಂದಾ ||ಮಂಜುಳ ಶಬ್ದಪ್ರಭಂಜನಕಪಿ ಜಗರಂಜಿತತೇಜಃ ಪುಂಜ ಸದಯದಾ2ಹರಿಸುತನು ಬ್ರಹ್ಮನೆ ತಾನೆ ಬಂದೂ ಕರವಿಟ್ಟನು ಇಂದೂ |ಪರಿಪರಿಯ ಶಕ್ತಿಯು ನಿನ್ನಲ್ಲಿಂದು ಗುಪ್ತಿರಬೇಕೆಂದು ಸ್ಥಿರಪದ ಕೊಟ್ಟೆ ವಜ್ರಾಂಗವನಿಂದೂ ವರದಾ-ಭಯನಿಟ್ಟು ತನುನಿಧಿ ತಂದೂ3ರವಿತನಯನ ಭೆಟ್ಟಯನು ತಕ್ಕೊಂಡಾ ರಘುರಾಮರ ಕಂಡಾ |ಅವನಂಗುಲಿಯೊಳು ಮುದ್ರಿಯನಿತ್ತಾ ಪ್ರಚಂಡಾಬಹು ಬಾಹೋದ್ದಂಡಾ | ತವಕದಿಅಕ್ಷಯಕುವರನಮರ್ದಿಸಿ ಘವಿ ಘವಿಸುವ ಲಂಕಿಯದಾ ಕೆಂಡಾ4ರಕ್ಕಸರೆಲ್ಲರ ಕುಕ್ಕಿರಿದನು ಅದ್ಭುತಾ ಜಗಕಪಿ ಪ್ರಖ್ಯಾತಾ |ಮಿಕ್ಕರಗಳನೆಲ್ಲ ಪಾಡುವೆ ರಾಮನ ದೂತಾ ಶರಣರ ಸಂಪ್ರೀತಾಉಕ್ಕಿ ಹರುಷದಲಿ ಬೇಗ ಬಾರೊ ಬೇಗ ಬಾರೊನೀಲಮೇಘಶ್ಯಾಮಾ ಭಕ್ತರ ಪಾಲಿಪ ಮುಕ್ತರಮಾಡುವ ಶಂಕರನೀತಾ5
--------------
ಜಕ್ಕಪ್ಪಯ್ಯನವರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರು ಮನವೆಕ್ಲೇಶ ಪಾಶಗಳ ಹರಿದು ವಿಳಾಸದಿ ದಾಸರ ನುತಿಗಳ ಪೊಗಳುತ ಮನದೊಳು ಪ.ಮೋಸದಿ ಜೀವಿಯಘಾಸಿ ಮಾಡಿದ ಫಲಕಾಶಿಗೆ ಹೋದರೆ ಹೋದೀತೆದಾಸರ ಕರೆ ತಂದು ಕಾಸು ಕೊಟ್ಟ ಫಲ ಲೇಸಾಗದೆ ಸಸಿನಿದ್ದೀತೆಭಾಷೆಯ ಕೊಟ್ಟು (ನಿ) ರಾಸೆಯ ಮಾಡಿದಫಲ ಮೋಸವು ಮಾಡದೆ ಬಿಟ್ಟೀತೆಶಶಿವದನೆಯ ಅಧರಾಮೃತ ಸೇವಿಸಿ ಸುಧೆಯೆಂದಡೆ ನಿಜವಾದೀತೆ 1ಕನಕದ ಪಾತ್ರದ ಘನತೆಯ ಪ್ರಭೆಗಳು ಶುನಕನಮನಸಿಗೆ ಸೊಗಸೀತೆಹೀನ ಮನುಜನಿಗೆ ಜಾÕನವ ಭೋಧಿಸೆ ಹೀನ ವಿಷಯಗಳು ಹೋದಿತೇಮಾನಿನಿ ಮನಸು ನಿಧಾನವು ಇಲ್ಲದಿರೆಮಾನಭಿಮಾನ ಉಳಿದೀತೆಭಾನುವಿಕಾಸನ ಭಜನೆಯ ಮಾಡದ ದೀನಗೆ ಮುಕುತಿಯು ದೊರಕೀತೆ 2ಸತ್ಯದ ಧರ್ಮವ ನಿತ್ಯವು ಭೋಧಿಸೆ ತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥ ವಿಚಿತ್ರದಿ ಪೇಳಲು ಕತ್ತೆಯ ಮನಸಿಗೆ ತಿಳಿದೀತೆಪುತ್ಥಳಿ ಬೊಂಬೆಯ ಚಿತ್ರದಿ ಬರೆದಿರೆ ಮುತ್ತುಕೊಟ್ಟರೆ ಮಾತಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆ ಅರ್ತಿಯುತೋರದೆ ಇದ್ದೀತೆ 3ನ್ಯಾಯವ ಬಿಟ್ಟು ಅನ್ಯಾಯ ಪೇಳುವ ನಾಯಿಗೆ ನರಕವು ತಪ್ಪೀತೆತಾಯಿ ತಂದೆಗಳ ನೋಯಿಸಿದ ಅನ್ಯಾಯಿಗೆ ಮುಕ್ತಿಯು ದೊರಕೀತೆಬಾಯಿ ಕೊಬ್ಬಿನಿಂದ ಬೈಯುವ ಮನುಜಗೆ ಘಾಯವುಆಗದೆ ಬಿಟ್ಟೀತೆಮಾಯಾವಾದಗಳ ಕಲಿತಾ ಮನುಜಗೆ ಕಾಯಕಷ್ಟ ಬರದಿದ್ದೀತೆ 4ಸಾಧು ಸಜ್ಜನರನು ಬಾಧಿಸಿದಾ ಪರವಾದಿಗೆ ದೋಷವು ತಪ್ಪೀತೆಬಾಧಿಸಿ ಬಡವರ ಅರ್ಥವ ಒಯ್ವವಗೆ ವ್ಯಾಧಿ ರೋಗಗಳು ಬಿಟ್ಟೀತೆಬದ್ದ ಮನುಜ ಬಹು ಕ್ಷುದ್ರವ ಕಲಿತರೆಬುದ್ದಿ ಹೀನನೆಂಬುದು ಹೋದೀತೆಕದ್ದು ಒಡಲ ತಾ ಪೊರೆವನ ಮನೆಯೊಳಗೆಇದ್ದುದು ಹೋಗದೆ ಇದ್ದೀತೆ 5ಅಂಗದ ವಿಷಯಂಗಳನು ತೊರೆದಾತಗೆ ಅಂಗನೆಯರಬಗೆ ಸೊಗಸೀತೆಸಂಗ ಸುಖಂಗಳು ಹಿಂಗಿದ ಮನುಜಗೆ ಶೃಂಗಾರದ ಬಗೆ ಸೊಗಸೀತೆಇಂಗಿತವರಿಯುವ ಸಂಗ ಶರೀರ ವಜ್ರಾಂಗಿಯಾಗದೆ ಇದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದ ಭಂಗಗೆ ಮುಕ್ತಿಯು ದೊರಕೀತೆ 6ಕರುಣಾಮೃತದಾ ಚರಣವ ಧರಿಸಿದ ಪರಮಗೆ ಸರಳಿ ಬಂದೀತೆಕರಣ ಪಾಶದುರವಣೆ ತೊರೆವಾತಗೆ ಶರಣರ ಪದ್ಧತಿ ತಪ್ಪೀತೆಆರುಶಾಸ್ತ್ರವನು ಮೀರಿದ ಯೋಗಿಗೆತಾರಕ ಬ್ರಹ್ಮವು ತಪ್ಪೀತೆವರದ ಪುರಂದರವಿಠಲನ ಚರಣಸ್ಮರಿಸುವವನಿಗೆ ಸುಖ ತಪ್ಪೀತೆ * 7
--------------
ಪುರಂದರದಾಸರು
ಭಾಪು ಹರಿಮತನೆ ಪ.ಭಾಪು ಹರಿಮತಸ್ಥಾಪಿತನೆ ಮೂರುರೂಪಿನಲಿ ಬಂದು ಶ್ರೀಪತಿಯು ಮೆಚ್ಚುವಾ ಪರಾಕ್ರಮ ವ್ಯಾಪಿಸಿದೆ ಭಾರತೀಪತೆ ತೇ ನಮೊ ಅ.ಪ.ಆದಿಯಲಿ ಅಂಜನಾದೇವಿಯ ಮಂಗಳೋದರದಿ ಪುಟ್ಟಿ ಶ್ರೀದ್ಯುಮಣಿಕುಲಮೇದಿನೀಶನ ಪಾದಕೆರಗಿ ಅಂಬೋಧಿದಾಟ್ಯಾಜÕದಿಆ ದಶಾಸ್ಯನ ಲಂಕಾ ದಹಿಸಿ ಜಾನಕೀದೇವಿಯ ಸುದ್ದಿ ಶ್ರೀಧರಗರುಹಿಯೋಧ ಬಾಧಿತರಾದ ಕಪಿಚೇತನದಾಯಕ ತೇ ನಮೊ 1ತುಂಗಗಿರಿ ಶತಶೃಂಗಕೃತ ಸುವಜ್ರಾಂಗ ಅಗ್ನಿಜಾಸಂಗಮತ್ತನೃಪಂಗಳನು ಭುಜದಿಂ ಗೆಲಿದು ಯಜÕ ಸಂಗ್ರಹವ ಪೂರಿಸಿಸಂಗಡಿಸಿದರಿ ಸಂಗರವ ಪೊಕ್ಕುಸಿಂಗಗರ್ಜನೆಯಿಂ ಗದೆಯ ಕೊಂಡುಭಂಗಿಸಿದೆಯೊ ಯುಗ್ಮಾಂಗ ಕೃಷ್ಣ ಸೇವಾಂಗೀಕೃತ ತೇ ನಮೊ 2ತುಚ್ಛರಿಳೆಯೊಳು ಪೆಚ್ಚಿ ಬಗೆ ಬಗೆಕುಚ್ಛಿತಾರ್ಥ ವಿರಚ್ಚಿಸ್ಯಾತ್ಮಗೆಅಚ್ಚುತೈಕ್ಯವ ಉಚ್ಚರಿಸುತಿರೆ ಸ್ವಚ್ಛ ಯತಿರೂಪದಿಮಚ್ಚರಿಪರನು ಕೊಚ್ಚಿ ತಂತ್ರಸಾರಾರ್ಚನೆಯಭೇದ ನಿಶ್ಚೈಸಿದೆ ಶಿರಿಸಚ್ಚಿದಾತ್ಮ ಶ್ರೀವತ್ಸ ಪ್ರಸನ್ವೆಂಕಟೇಚ್ಛಮತ ತೇ ನಮೊ 3
--------------
ಪ್ರಸನ್ನವೆಂಕಟದಾಸರು