ಒಟ್ಟು 7 ಕಡೆಗಳಲ್ಲಿ , 5 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಮೂರು ಪೂತನಾ ಅಸುಹಾರಿಣಿ ನಮಃ ಪದ್ಯ ಪೊಡವಿಯಲಿ ಎಲ್ಲರಿಗೆ ಒಡಿಯನಾಗಿರುವಂಥ ಖಡು ಪಾಪಿ ಕಂಸಗೆ ಬಿಡದೆ ಪ್ರತಿವರ್ಷಕ್ಕೆ ಕೊಡತಕ್ಕ ಕಪ್ಪವನು ಕುಡಬೇಕು ಎಂತ್ಯೆಂದು ನಡದು ತಾ ಮಥುರೆಯಲಿ ಖಡುನಂದಗೋಪಾ| ಒಡಿಯನಪ್ಪಣಿಯಿಂದ ಗಡಬಡಿಸೆ ಪೂತನಿಯು ಹುಡುಗರನ್ನು ಹುಡುಕುತಲೆ ಬಡಿವಾರ ತೋರುತಲೆ ನÀಡದು ಬಂದುಳು ಹಾದಿ ಹಿಡಿದು ಗೋಕುಳಕೆ|| 1 ಧಡಿಯ ದಿವ್ಯಾಂಬರವು ಶಡಗರದಿ ಉಟ್ಟಿಹಳು ಕಿಡಿಯಂಥ ಕುಪ್ಪುಸವು ದೃಢ ಬಿಗಿದು ತೊಟ್ಟಿಹಳು| ಬಿಡÀದೆ ಸರ್ವಾಭರಣ ಜಡದಿಹಳು ತಾ ಮಿಂಚು ಹೊಡದಂತೆ ತೋರುವಳು ಉಡುರಾಜ ಮುಖಿಯು| ಎಡಬಾರಿ ದುರಬಿನಲಿ ದೃಢವಾಗಿ ಮಲ್ಲಿಗಿಯು ಮುಡಿದಿಹಳು ಉರದಲ್ಲಿ ದೃಢವಾದ ಕುಚವೆರಡು ನಡವುದಾ ಕಾಲಕ್ಕೆ ನಡಗುತಿಹವು 2 ಬಿಂಬೋಷ್ಟಿ ಮಾಯ ಅವಲಂಬಿಸುತ ಗೋಕುಲದ ತುಂಬ ಬೆಳಕವು ಮಾಡಿ ಜಂಭದಲಿ ಬರುತಿಹಳು ಗಂಭೀರಳಾಗಿ ತನಗುಂಭ ತಿಳಿಗುಡದೆ ಕುಚ ಕುಂಭಗಳವಳಗ ವಿಷ ತುಂಬಿಟ್ಟು ಕೊಂಡು ಅಂಬುಜಾಕ್ಷಿಯ ಕಂಡು ಸಂಭ್ರಮದಿ ಗೋಕುಲದ ಜಗದಂಬಿಯೊ ಎಂದೂ 3 ಮುಂದ ಆ ಪೂತನಿಯು ನಂದಗೋಪನ ಮನಿಗೆ ಬಂದು ದೇವೇಚ್ಛಿಯಲಿ ನಂದನಂದನನ ಕಣ್ಣಿಂದ ನೋಡಿದಳಾಗ ಛಂದದ್ಹಾಸಿಕೆಯಲಿ ಛಂದಾದ ಲೌಕೀಕದ ಕಂದನಂತೆ| ಮುಂದವನ ತೊಡಿಯ ಮ್ಯಾಲೆ ಛಂದಾಗಿ ಧರಿಸಿದಳು ಕಂದರ್ಪನೈಯನೆ ಕಂದನಾಗಿರುವನೆಂತ್ಯೆಂದು ತಿಳಿಯದೆ ನಿದ್ರಿ ಯಿಂದಿರುವ ಸರ್ಪ ಕರದಿಂದ್ಹಿಡಪರಿ ರಜ್ಜು ಎಂದುಬ್ಯಾಗೆ 4 ಶ್ರೀನಿವಾಸನ ಜನನಿ ಮೌನ ಹಿಡಿದಳು ಕಪಟತನ ತಿಳಿಯದೆ ಬುದ್ಧಿಹೀನ ಪೂತನಿಯು ಸ್ತನಪಾನ ಮಾಡಿಸಿದಳಾ ದಾನವಾರಿಗೆ ಅವನು ಪ್ರಾಣಸಹಿತಾಗಿ ವಿಷಪಾನ ಮಾಡಿದನು| ದ್ರೂಣನಾಗಿರುವವನ ಪಾಣಿಯಲಿ ಸಿಕ್ಕು ಗತಿಗಾಣದಲೆ ಉತ್ಕøಷ್ಟ ವಾಣಿಯಿಂದಲೆ ಒದರಿ ಭ್ರೂಣಹನನಕ ಬಹಳ ಜಾಣಿ ಎಂತ್ಯೆನಿಸುವಳು ಪ್ರಾಣ್ಹೋಗಿಬಿದ್ದಳಾ ಪ್ರಾಣಿ ಪೂತನಿಯು. ಪದ:ರಾಗ :ಶಂಕರಾಭರಣ ಅಟತಾಳ, ಸ್ವರಷಡ್ಜ ಬಿದ್ದಾಳು ಪ್ರಾಣ ಹೋಗಿ ಪೂತನಿ ಜನ್ಮಗೆದ್ದಾಳು ಬಾಲಕ ಘಾತಿನಿ| ಬಂತುದೆವಾಯಿತು ಮತ್ತಲ್ಲೆ|| 1 ಗಿರಿಯಂತೆ ಆ ದೇಹ ಇರುವೋದು ಆರು ಹರದಾರಿ ಪರಿಯಂತೆ ಬಿದ್ದಿಹದು| ಕರಚರಣಗಳ್ಹರವಿ ಇರವದು ಅಲ್ಲಿ ಇರವೂ ವೃಕ್ಷಗಳೆಲ್ಲಾ ಮುರದಿಹದು|| 2 ಎರಡು ಕಣ್ಣುಗಳು| ದಾಡುವರಲ್ಲೆ ನದಿಗಳು|| 3 ಭಾವಿಯಪರಿ ತೋರುವುದು ಹೇಳುವದಿನ್ನು ಉಳದಿಹುದು ದಾನವಾರಿಯಕೊಂಡು ಕರದಿಂದ ವಿಷಪಾನ ಮಾಡಿಸಿದ ಕಾರಣಿದಿಂದ | ಹಾನಿತನಗೆ ಬಂತು ತ್ವರದಿಂದ| ಅಚುತಾನಂತಾದ್ರೀಶ ಕರದಿಂದ|5 ಪದ್ಯ ಬಾಲಕಾಕಿಯ ಎದಿಯಮ್ಯಾಲೆ ನಿರ್ಭಯದಿಂದ ಲೀತಿಯನ ಮಾಡುತಿಹ ಬಾಲಿಯರು ಬ್ಯಾಗ ಆ ಬಾಲಕನ ಕರಕೊಂಡು ಮ್ಯಾಲೆ ಗೋಮೂತ್ರದಲಿ ಬಾಲಗ್ಯರದರು ಅವರು ಭಾಳ ಸಂಭ್ರಮದಿ| ಕಾಲ ಆ ಕಾಲಕಿಟ್ಟರು ನಂದ ಬಾಲಕರನೆನಿಸುವ ಜಗತ್ಪಾಲಕಗ ರಕ್ಷಾ|| 1 ಬಾಲ ನಿನ್ನನ್ನು ಜಗತ್ಪಾಲಕನು ರಕ್ಷಿಸಲಿ| ಪದಾಗಳು ಆ ಮೂರು ಪಾದದವ ರಕ್ಷಿಸುತಾ ಜಂಘವನು ಮತ್ತ ಶ್ರೀರಂಗ ತಾ ರಕ್ಷಿಸಲಿ ಜಾನುವನು ರಕ್ಷಿಸಿ ಜಾನ್ಹವಿಜನಕಾ | ಉರುಗಳಾ ರಕ್ಷಿಸಲಿ ಉರ್ವೀಶ ಹರಿತಾನು ನಾಭಿಯನು ಶ್ರೀಪದ್ಮನಾಭ ಸಂರಕ್ಷಿಸಲಿ ಹೃದಯಗತ ಶ್ರೀ ಹರಿಯು ಭುಜಗಳನು ರಕ್ಷಿಸಲಿ ಭುಜಗಶಯನಾ||2 ಕಂಠವನು ಮತ್ತ ವೈಕುಂಠಪತಿ ರಕ್ಷಿಸಲಿ ಮುಬವನ್ನು ರಕ್ಷಿಸಲಿ ಮುಕುಟವರ್ಧನ ಹರಿಯು| ಶಿರವನ್ನು ರಕ್ಷಿಸಲಿ ಶಿರಿಯರಮಣನನು ತಾನು ಅಂಗಜನ ಜನಕ ಸರ್ವಾಂಗ ರಕ್ಷಿಸಲಿ| ಜಲಜಾಕ್ಷಿಯರು ಹೀಂಗ ಹಲವು ದೇವತಿಗಳನ ಬಲಗೊಂಡು ಮತ್ತವರ ಬಲದಿ ರಕ್ಷೆಯ ನೀಡಲು| ಜಲಜಮುಖಿ ಜನನಿ ತನ್ನ ಚಲುವ ಬಾಲಕಗ ತಾ ಮೊಲಿಕೊಟ್ಟು ಮಂಚದಲಿ ಮಲಗಿಸಿದಳವನಾ| ಖಳಕಂಸಗಾ ಕಪ್ಪುಗಳ ಕೊಟ್ಟು ನಂದ ತಾ ಇಳದ ಮನಿಯಲಿ ಇರಲು ತಿಳದು ಆ ಸುದ್ದಿ ತನ್ನ ಸ್ಥಳವನ್ನು ಬಿಟ್ಟು ಆ ಸ್ಥಳಕ ಬಂದನು ಪರಮ ಗೆಳೆಯ ವಸುದೇವ ಮನದೊಳಗ ಹಿಗ್ಗುತಲೆ|| 3 ಆರ್ಯಾ ಜಾಣನು ಆತನ ಕಾಣುತಲ್ಯದ್ದನು ಪ್ರಾಣಬರಲು ದೇಹದ ಪರಿಯು| ಪ್ರಣಾಮಮಾಡಿ ಆ ಪ್ರಾಣಯನಪ್ಪಿದ ಪಾಣಿಹಿಡಿದು ಗೋಕುಲ ಧೊರಿಯು|| 1 ಆಮ್ಯಾಲಿಬ್ಬರು ಪ್ರೇಮದಿ ಕುಳಿತರು ಕ್ಷೇಮವಿಚಾರ ಮಾಡುತಲೆ| ಆಮ್ಯಾಲ ಶೌರಿಯು ಕೋಮಲ ಹೃದಯದಿ ತಾ ಮಾತಾಡಿದ ಪ್ರೇಮದಲೆ|| 2 ಪದ:ರಾಗ:ಶಂಕರಾಭರಣ ತಾಳ:ಭಿಲಂದಿ ಸ್ವರ:ಪಂಚಮ ಸಕಲ ಜನರು ನಂದಗೋಪ ಸುಖದಲಿರುವರೆ ಸಖನೆ ನಿನ್ನ ಮನಿಗೆ ಭಾವುಕರು ಬರುವರೆ|| ಪ ದೃಷ್ಟ ವಿಷಯನಾದಿ ನೀ ಅದೃಷ್ಟಯೋಗದಿ| ವೃಷ್ಟಿ ಮಾಡಿದಿ|| 1 ನಿನಗ ಪುತ್ರನಾದ ಸುದ್ದಿ ಎನಗ ಮುಟ್ಟಿತು | ನನಗೆ ಕಡೆಯ ಪುತ್ರನವನೆ ನಿನಗೆ ಒಪ್ಪಿತು|| 2 ಸಕಲರಿಂದ ಕೂಡಿ ಅವನು ಸುಖದಲಿರುವನೆ ಸಕಲ ಜನರಿಗ್ಯವನು ಪ್ರಾಣಸಖನು ಆದನೆ|| 3 ಅಲ್ಯೆ ಗೋಗಳೆಲ್ಲ ರೋಗ ಇಲ್ಲದಿರುವವೆ| ಹುಲ್ಲು ನೀರಿನಿಂದ ಸೌಖ್ಯದಲ್ಲಿ ಇರುವವೆ|| 4 ಚನ್ನಿ ಗಾನಂತಾದ್ರೀಶನ್ನ ನೆನುವರೆ 5 ಆರ್ಯಾ ಛಂದಾಗ್ಯವ ಹೀಗೆಂದ ಮಾತು ಆನಂದಗೋಪ ತಾ ಕೇಳುತಲೆ| ಮುಂದಾ ಶೌರಿಯಮುಂದ ನುಡದನು ಮಂದಹಾಸ್ಯದಲಿ ನಗುವುತಲೆ|| 1 ಪದ, ರಾಗ :ಮುಖರಿ ತಾಳ :ಆದಿ ದುಃಖವು ಸುಖಕಾರಿಯೆ ಪ ಎನಗೆ ತಿಳಿನೀನು|| 1 ಹಿಂದಿನ ದುಃಖ ಹಿಂದೆ ಹೋಯಿತು | ತಿಳಿ ಮುಂದ ನಿನಗೆ ಸೌಖ್ಯವಾದೀತು|| 2 ಚಿಂತಿಮಾಡಲಿ ಬ್ಯಾಡಾ ವಸುದೇವಾ| ಚಲುವಾನಂತಾದ್ರೀಶನೆ ದಯ ಮಾಡಿರುವಾ|| 3 ಆರ್ಯಾ ನಂದ ಗೋಪನಾನಂದ ವಚನಗಳ ಛಂದದಿ ಕೇಳುತ ವಸುದೇವಾ | ಮುಂದ ನುಡದ ಹೀಗಂದು ಮತ್ತ ತ್ವರದಿಂದ ತನ್ನ ಹೃದ್ಗತ ಭಾವಾ || 1 ಪದ ರಾಗ:ಸಾರಂಗ ಆದಿತಾಳ ಸ್ವರ:ಷಡ್ಜ ಭಿಡಯಾ ಬಿಟ್ಟ ಹೇಳುವೆ ಎನ್ನ ನುಡಿಯು ಲಾಲಿಸಿ|| ಪ ಉತ್ತಮ ಕೇಳಿನ್ನಾಮಗನಾ ಉತ್ಪತ್ತಿ ಕಿವಿಯಿಂದ ಕೇಳಿ| ಉತ್ಪನ್ನವಾದಾವು ಬಹಳ ಉತ್ಪಾತಗಳು|| 1 ಕಂಸನ ಅಂಜಿಕೆಯಿಂದ ಸಂಶಯ ಬಿಡುವÀಲ್ಲದಿನ್ನು| ಸಂಸಾರದೋಳ್ಸುಖವು ಸ್ವಲ್ಪಾ ಸಂಶಯವೆ ಭಾಳಾ||2 ಮುಟ್ಟಿತು ಕಂಸಗ ಕಪ್ಪ ಭೆಟ್ಟಿ ಆಯಿತು ನಿಮ್ಮನು| ಘಡ್ಯಾಗಿ ಅನಂತಾದ್ರೀಶನ ಮುಡ್ಡಿ ಭಜಿಸುತ|| 3 ಪದ್ಯ ಯಾದವನ ಮಾತಿಗ್ಯನು ಮೋದವನು ಬಟ್ಟು ನಂದಾದಿಗಳು ಗೋಕುಲದ ಹಾದಿಯನು ಹಿಡಿದು ಪರಮಾದರದಿ ನಡದರು. ಅಗಾಧವಾಗಿಹ ದೇಹ ಹಾದಿಯಲಿ ಬಿದ್ದಿಹುದು ಹಾದಿಯನು ಕಟ್ಟಿ| ಆ ದೇಹ ನೋಡುತ ಅಗಾಧ ಬಟ್ಟವರು ಅಲ್ಯಾದದ್ದು ಮನದಲ್ಲಿ ಶೋಧಿಸ್ಯಂದರು ಹೀಗೆ | ಸಾಧು ವಸುದೇವ ಹುಸಿ ಆದದ್ದು ಉಂಟೇ| 1 ಪರಿ ಅವರು ಕೊಡಲಿಯನು ಕೊಂಡು ಕಡಕಡದು ಈ ದೇಹವನು ಸುಡಲು ದೂರದಲಿಟ್ಟು ಕಡೆ ಬಿಡದೆ ಆಕಾಶಕ್ಕೆ ಅಡರಿತಾಗೆ| ಖಡುಪಾಪಿ ಪೂತನಿಯು ಕುಡಲು ವಿಷ ಮೊಲಿಯನ್ನು ಕುಡುದು ಸದ್ಗತಿಕೊಟ್ಟ ತಡವಿಲ್ಲದಲೆ ಹರಿಯು ದೃಢಭಕ್ತಿಯಿಂದಲೆ ಕಡಿಗೆ ಕ್ಷೀರಾದಿಗಳು ಕೊಡಲು ಸದ್ಗತಿಯನ್ನು ಕುಡವದೇನÀದು|| 2 ಶೌರಿಸಖನಂದ ಪರಿವಾರ ಸಹಿತಾಗಿ ತಾ ಈ ರೀತಿ ಉತ್ಪಾತ ಮೀರಿ ಮನಿಯಲಿ ಬಂದು ಪೂರ್ವದಲಿ ಆಗಿಹ ಅಪೂರ್ವ ವೃತಾಂತವನು ಪೂರ ಕೇಳ್ಯಾಶ್ಚರ್ಯ ಪೂರಿತನು ಆಗಿ ವೈರಿ ಪೂತನಿಯ ಸಂಹಾರಿಯಾ ಕರಕೊಂಡು| ಚಾರುಮುಖ ನೋಡಿ ಸುಖಪೂರನಾದಾ | ಈ ರೀತಿ ಚರಿತವನು ಆರು ಕೇಳುವರು ಅವರ ಘೋರ ದುರ್ಷಟವೆಲ್ಲ ದೂರಾಗಿ ಹೋಗುವದು ಶುಭಚನ್ಹ ಚಾರ್ವನಂತಾದ್ರೀಶ ಮೂರುತಿಯು ಮುಗಿಸಿದಿದು ಭಾಗವತ ದಶಮಸ್ಕಂಧ 3 ಪೂತನಾದಧೋ ನಾಮ ತೃತಿಯೋಧ್ಯಾಯಃ| || ಶ್ರೀ ಕೃಷ್ಣಾರ್ಪಣಮಸ್ತು|| || ಮೂರನೆಯ ಅಧ್ಯಾಯವು ಸಂಪೂರ್ಣ||
--------------
ಅನಂತಾದ್ರೀಶ - ಕಥನಕಾವ್ಯಗಳು
ಕೋಲ ಕೋಲೆನ್ನಿ ಕೋಲ ಕೋಲ ಕೋಲೆನ್ನಿ ಕೋಲಕೋಲೆಂದು ಹರಿಯ ಪಾಡುವರು ಎಷ್ಟಪ. ನಾಗಶಯನನ ಮುಂದೆ ಪೂಗಿ ಫಲಗಳ ಇರಿಸಿನಾಗವೇಣಿಯರು ಸಾಗುವರು ಎಷ್ಟ 1 ಪಂಕಜಾಕ್ಷನ ಮುಂದೆ ಕುಂಕುಮ ಅರಿಷಿಣ ಪಿಡಿದುಕಂಕಣದ ಕೈಯ ಶಂಕಿನಿಯರೆಷ್ಟ2 ಅಂಬುಜಾಕ್ಷನ ಮುಂದೆ ತಾಂಬೂಲ ತಬಕಗಳುಸಂಭ್ರಮದಿ ಧರಿಸಿದ ರಂಭೆಯರು ಎಷ್ಟ3 ಮಂದಗÀಮನೆಯರ ಮುಂದೆಗಂಧ ಕಸ್ತೂರಿ ಪುನಗುಛsÀಂದದಲಿ ಧರಿಸಿ ಮುಂದಾಗÀುವರೆಷ್ಟ4 ಚಲ್ವ ರಂಗನ ಮುಂದೆ ಮಲ್ಲಿಗೆ ಹೂವಿನ ಝಲ್ಲೆಗಳ ಧರಿಸಿದ ನಲ್ಲೆಯರು ಎಷ್ಟ 5 ಬುಕ್ಕಿಟ್ಟು ಮೊದಲಾಗಿ ವಿಶಿಷ್ಠ ಪರಿಮಳ ಧರಿಸಿಕೃಷ್ಣರಾಯನ ಮುಂದೆ ನಡೆವೋರು ಎಷ್ಟ6 ಕ್ಯಾದಿಗೆ ಸಂಪಿಗೆ ಊದಿನ ಖಡ್ಡಿಗಳುಮುದದಲಿ ಧರಿಸಿ ಮುಂದಾಗುವರಷ್ಟ7 ಉತ್ತತ್ತಿಕದಳಿ ಜಂಬುದ್ರಾಕ್ಷ ಚೂತÀ ಫಲ ಹೊತ್ತುಹರುಷದಲ್ಲಿ ಮಿತ್ರೆಯರು ಸಾಗುವರೆಷ್ಟ8 ಹಾಲು ಮೊಸರಿನ ಕುಂಭ ಬಾಲೆಯರು ಧರಿಸುತ ಸಾಲು ಸಾಲಾಗಿ ಸಾಗುವರೆಷ್ಟ 9 ಬೆಂಡು ಬತ್ತಾಸ ದುಂಡುಗಡಲೆ ಕಬ್ಬುತಂಡ ತಂಡದಲಿ ಹಿಡಿದವರು ಎಷ್ಟ10 ರಂಗರಾಯನ ಮುಂದೆ ಗಂಗೋದಕ ಧರಿಸಿಶೃಂಗಾರದಿಂದ ಸಾಗಿದವರು ಎಷ್ಟ11 ಚಲ್ವರಮಿಅರಸಗೆ ಸಲ್ಲಿಸಬೇಕೆಂದುಕಲ್ಲು ಸಕ್ಕರೆ ಹೊತ್ತ ನಲ್ಲೆಯರು ಎಷ್ಟ 12
--------------
ಗಲಗಲಿಅವ್ವನವರು
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ನಿನಗೇನು ಕಡಿಮೆ ಪೇಳೈ ಎನಗೆಲೊ ರಂಗಾ ಪ ಕ್ಷೀರಾಬ್ಧಿ ನಿನ್ನದು ಸಂಸಾರಾಬ್ಧಿ ಎನ್ನದಯ್ಯ ಮೂರೇಳವತಾರ ನಿನಗೆ ನೂರೆಂಟು ಎನಗೇ1 ನಿನಗೆ ಸುರಮುನಿಗಣ ಎನಗೆ ಭೂಸುರಗಣ ನಿನಗೆ ಸತ್ವದ ಗುಣ ಎನಗಾಸೆ ದ್ವಿಗುಣ2 ಜಗವು ಉದರವೆಂದು ಬಗೆದು ಪೋಪೆನೀ ಜಗದ ಸರ್ವಾರ್ಥವ ಮಿಗೆ ಬಯಸುವೆನಾ 3 ನಿನಗೆ ಭಕ್ತರೆ ಪ್ರಿಯ ಎನಗೆ ಮುಕ್ತಿಯೆ ದೈವ ನಿನಗೆ ರಕ್ಷಣೆನಾಮಾ ಎನಗೆ ಭಕ್ಷಣೆ ಕಾರ್ಯಾ 4 ವರಷಡ್ಗುಣವು ನಿನಗೆ ಅರಿಷಡ್ವರ್ಗವು ಯನಗೆ ದುರಿತ ತೃಪ್ತತೆ ಯೆನಗೆ 5 ನಿನಗೆ ನಾನೆಂಬುದಿಲ್ಲ ಎನಗೆ ನಾನೆಂಬುದುಂಟು ರಂಗನಾಥ ಶ್ರೀಶ ತುಂಗವಿಕ್ರಮ ನೀ 6 ಕ್ಷಮಿಸೆನ್ನಪರಾಧವ ವಿಮಲಾಂಗ ಮಾಧವ ಕಮಲಾಕ್ಷ ಪೊರೆದೇವ ರಾಮದಾಸನುತಾ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗವಲಿದ ಗುರುರಾಯರ ನೀ ನೋಡೋ | ಅಂತರಂಗದಿ ಪಾಡೋ ಭಂಗ ಬಡಿಪ ದುರಿತಂಗಳ ಈಡ್ಯಾಡೋ ಸತ್ ಸಂಗವ ಬೇಡೋ ಅ.ಪ ಹಿಂದೆ ಮೂರೊಂದವತಾರ ಧರಿಸಿದಾತ ಇದು ಹಿರಿಯರು ಮಾತ | ಬಂದ ಮರಳಿ ಮಹೀತಳದಿ ಜಗನ್ನಾಥ ದಾಸಾರ್ಯ ಪ್ರಖ್ಯಾತ || ತಂದೆ ನಮಗೆ ತಿಳಿ ಎಂದೆಂದಿಗು ಎಂದೆಂದಿಗು ಈತ ಆನಂದ ಪ್ರದಾತ 1 ಬಣ್ಣಿಸಲೆನಗಿನ್ನೊಶವೆ ಇವರ ಚರಿಯ ಕಣ್ಣುಗಳಿಂದಲಿ ಕಾಣುತ ಪೂರ್ಣಯ್ಯತಾನಾಗಿ ವಿಧೇಯ ಧನ್ಯನೆನಿಸಿ ಸತ್ಪುಣ್ಯ ಪಡೆದುದರಿಯ ಪುಸಿಯಲ್ಲವೊ ಖರಿಯ 2 ದಾಸವರ್ಯರಾ ವಾಸಗೈದ ಸ್ಥಾನ ಗಯಕಾಶಿ ಸಮಾನ ಲೇಸು ಭಕ್ತಿಯಲಿ ಸೇವಿಸಲನುದಿನ ಕೊಡುವುದುಸುಜ್ಞಾನ ಶ್ವಾನ | ಯಾತಕೆ ಅನುಮಾನ 3 ಸಾರ ನಿರ್ಮಿಸಿರುವ ದೇಹಾಖ್ಯ ರಥವ ಸೊಗಸಿಲಿಂದ ತಾನೇರಿ ನಗುತ ಬರುವ ಚತುರ್ದಿಕ್ಕಿಲಿ ಮೆರೆವ ಮಿಗೆ ವಿರೋಧಿಸುವ ಪಾಪಿಗೆ ಪಲ್ಮುರಿವ ಪೊಗಳುವರಷತರಿವ 4 ಶಾಮಸುಂದರನ ಸುಕಥಾಮೃತಸಾರ | ರಚಿಸಿದ ಬಹುಚತುರ ಪಾಮರ ಜನರ ಪ್ರೇಮದಿ ಉದ್ಧಾರ ಮಾಡಲು ಗಂಭೀರ ಶ್ರೀಮಾನ್ ಮಾನವಿಕ್ಷೇತ್ರನೆ | ನಿಜಾಗಾರವೆಂದೆನಿಸಿದ ಧೀರ 5
--------------
ಶಾಮಸುಂದರ ವಿಠಲ
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ತುಳಜಾ ಮಹಾತ್ಮೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸಿರಿಯ ಸಹಿತಾಗಿರುವ ವೆಂಕಟಗಿರಿಯ ರಮಣನ ಮರೆತು ಎಲ್ಲವನು|| ಚರಕೆರಗುವೆನು|| 1 ಧರೆಯೊಳಗವನ ಮೆಟ್ಟಿ ಹಾರುವ ಹಿರಿಯ ಕವಿಗಳಿಗೆಲ್ಲಾ ನಾನೇ ಕಿರಿಯನೆಂದೆನಿಸಿ ಅವರನು ಮರೆಯದಲೆ ನೆನೆವೆ|| ಕಿರಿಯನಾದರೇನು? ನಾ ಈ ಧರೆಯೊಳಗೆ ಎಲ್ಯಿದ್ದರೇನು? ಮರೆಯದಲೇ ಮಾಡುವರು ಗುರುಗಳು ಮಮತೆ ಎನ ಮೇಲೆ||2 ಕೇವಲಾನಂತಾದ್ರಿ ರಮಣನ ಭಾವ ತಿಳಿಸುವ ನಮ್ಮ ಗುರುಗಳು ಭಾರ ಭಾವದಲ್ಲಿ ಪೇಳುವೇನು ತುಳುಜಾದೇವಿಯ ಮಹಿಮೆಯನು|| 3 ಪದ್ಯ ಪೂರ್ವದಲಿ ಕೃತಯುಗ ಪೂರ್ವದಲ್ಲಿ| ದ್ವಿಜವಯ ನೀರ್ವಕದ್ರುಮನೆಂದು ಊರ್ವಿಯಲ್ಲಿ ಪ್ರಖ್ಯಾತ ಸರ್ವದಾ ಮಾಡುವನು ಸರ್ವರಿಗೆ ಸಮ್ಮತಪೂರ್ವಧರ್ಮವು ಭಕ್ತಿ ಪೂರ್ವಕವಾಗಿ|| ಸರ್ವ ಸ್ತ್ರೀಯ ರೊಳಗ ಪೂರ್ವ ಸುಂದರಿಯಾಗಿ ಇರ್ವಳಾತನ ಮಡದಿ ಊರ್ವಶಿಯ ಪೋಲುವಳು ಊರ್ವಿಯಲಿ ಪತಿಸೇವೆ ಸರ್ವದಾ ಮಾಡುತಲೆ ಇರ್ವಳಾತೆಯು ಮನಃ ಪೂರ್ವಕವಾಗಿ||1 ಆ ಕಾಂತನಿಂದಲ್ಲಿ ತಾಕೂಡಿ ತನ್ನ ಮನಕೆ ಬೇಕಾದ ಸೌಖ್ಯದನೇಕ ವರ್ಷಗಳಲ್ಲಿ ಸ್ವೀಕಾರ ಮಾಡಿದಳು ಶ್ರೀಕಾಂತನ ದಯದಿ ಆಕೆಯ ಹೆಸರುಂಟು ಅನಭೂತಿ ಯಂತೆಂದು|| ಆ ಕರ್ದಮಾಖ್ಯ ದ್ವಿಜತಾಕಾಲದಿಂದ ಭೂತೋಕವನು ಬಿಟ್ಟು ಪರಲೋಕಕೆ ಪೋಗುತಿರೆ ಆಕೆ ಪತಿವುತೆಯು ಎಂಬಾಕೆ ಸಹಗಮನವೆಂಬ ಸಹಗಮನೆಂಬೊ ಆಶಾರ್ಯ ಮಾಡುತಿರೆ| ಆ ಕಾಲದಲ್ಲಿ ಆಯಿತಾಕಾಶವಾಣಿ|| ಪದ ಬ್ಯಾಡ ಬ್ಯಾಡಮ್ಮ ಬ್ಯಾಡದು || ನೀ ಮಾಡೋಕಾರ್ಯ ಬ್ಯಾಡ|| ಬ್ಯಾಡು ಬ್ಯಾಡುಮ್ಮ ಕೇಳು ಮಾಡತಕ್ಕ ಕಾರ್ಯದೂರ ನೋಡಿ ಮಾಡುಬೇಕು ಇಂಥ ಮೂಢ ಬುದ್ಧಿ ಮಾಡುವದು||ಪ ಪತಿಯ ಸರಿಯು ಹಿತಕರಿಲ್ಲವು || ಪತಿವ್ರತೆಗೆ ತನ್ನ ಪತಿಯ ಹೊರತು ಗತಿಯು ಇಲ್ಲವು || ಸುಳ್ಳಲ್ಲವು|| ಪತಿಯು ಇಲ್ಲದಿದ್ದರೇನು ಸುತರು ಸುಗುಣರುಂಟು ನಿನಗೆ ಸುತರು ಇರಲು ಪತಿಯ ಕೂಡಿ ಗತಿಯಸಮ್ಮತವು ಅಲ್ಲ|| 1 ಪತಿಯ ಬಿಟ್ಟು ಸ್ಥಿತಿ ಅಧರ್ಮವೇ| ಆ ಸತಿಗೆ ತನ್ನ ಪತಿಯ ಕೂಡೆ ಗತಿಯು ಧರ್ಮವೇ|| ಸತ್ಕರ್ಮವೇ|| ಪತಿಯ ಮ್ಯಾಲೆ ಸತಿಯು ಊಂಟು ಸತಿಗೆ ಸಮ್ಮತವು ಸತ್ಯ ಪತಿಯಿಂದಲೇ ಪತಿಯಲೋಕ ಗತಿಯು ಪತಿವುಲೆಯೇ ನಿನಗೆ||2 ಮುಖ್ಯಮಾತು ನೀನು ಕೇಳಿದ್ದು|| ಗರ್ಭಿಣಿಯು ಮತ್ತು ಮಕ್ಕಳುಳ್ಳ ಸ್ತ್ರೀಯು ಮಾಳ್ಪುದು || ಧರ್ಮಲಿಲ್ಲದ್ದು|| ಮಕ್ಕಳುಳ್ಳವಳು ನೀನು ಮಕ್ಕಳನ್ನು ಪಾಲಿಸುವುದು ಮುಖ್ಯನಂತಾದ್ರಿ ರಮಣ ತಕ್ಕ ಮುಕ್ತಿಕೂಡುವ ನಿನಗೆ|| 3 ಪದ್ಯ ಆ ಕಾಲಕ್ಕಾಗಿರುವ ಆಕಾಶವಾಣಿಯನ್ನು ತಾ ಕೇಳಿ ಅನುಭೂತಿ|| ಕಾಲ ಮೇರು ಶೈಲದಲ್ಲಿ|| 1 ಚಾರು ಮಂದಾಕಿನಿಯ ತೀರದಲ್ಲಿ ಪರ್ಣದ ಕುಟೀರವನ್ನು ಹಾರಿಸುತಾ ಬಂದನಾ ನಾರಿ ಇದ್ದಲ್ಲಿ||2 ಆಗ ಆಕೆಯ ಕಂಡು ಹೋಗಿ ಬದಿಯಲಿ ನಿಂತು ಹೀಗೆಂದು ಮನಸಿನಲಿ ಯೋಗಿಯಂತಲಿ ನಿಶ್ಚಳಾಗಿಹಳು ದಾವಾಕಿ ದೈವಯೋಗದಲ್ಲಿ ನೋಡಿದರೆ ಯೋಗಿಗಳು ತಮ್ಮ ಉದ್ಯೋಗಿವನ್ನು ಬಿಡುವರು ಹೀಗೆಂದು ಅನುಭೂತಿಯಾಗಿ ಮೋಹಿಸಿ ನುಡಿದ ಭೋಗ ಬಯಸುತಲೇ|| 3 ಪದ ರಾಗ:ಶಂಕರಾಭರಣ ನೀಪೇಳೆ ದಾವದಾವದು ನಿನ್ನ ಜೀವಕ್ಕ ಬೇಕು ಹೇಳೆ|| ಪ ನಿತ್ಯ ಶೋಷಣ ಮಾಡುಬ್ಯಾಡೇ|| 1 ದೇವತೆಗಳು ಎಲ್ಲಾರು ಬಿಡದೆ ಎನ್ನ ಕೋಕರಾಗಿಹರು|| ಸಾವಿರ ಸ್ತ್ರೀಯರು ಸೇವಿಸುವರು ಎನ್ನ ಸೇವಿಸುವರು ನಿನ್ನನ್ನು 2 ಚಿಕ್ಕ ಪ್ರಾಯದಲ್ಲಿ ನೀನು ಇರುವಿ ನಿನ್ನ ತಕ್ಕ ಪುರುಷನು ನಾನು|| ಮುಖ್ಯನಂತಾದ್ರೀಶ ಸಿಕ್ಕ ನಿನಗೆ ನಿನ್ನ ತಕ್ಕಂತೆ ಆಯಿತ್ಹೇಳೆ|| 3 ಪದ್ಯ ಧ್ಯಾನದಲ್ಲಿರಲು ದುಷ್ಟ ದನುಜೇಶ್ವರನು ತಟ್ಟನೆ ಮಾಡಿ ದುಕೃಷ್ಟ ತಾಳ ಧ್ವನಿಯು ಕಟ್ಟು ಇಲ್ಲದೇ ಒಳ್ಳೆ ಗಟ್ಟಿ ವದರಿಸಿ ನೋಡಿ ಒಂದಿಷ್ಟು ನುಡಿಯದೆ ಇರಲು, ದಿಟ್ಟಾಗಿ ತನಗೆ ರೀತಿ|| ಸಿಟ್ಟಲೇ ನುಡಿದಾಳು ಆ ಪತಿವುತೆ|| 1 ದಾ ಪೇಳಲೋ ನೀ ಧಿಟ್ಟ ದಾರಿಲ್ಯಾತಕೆ ಬಂದ್ಯೊ ನೀ ಪಾಪಿಷ್ಠ|| ದೂರದಲ್ಲಿ ಇರೋ ನೀ ದುಷ್ಟ || ಧೈರ್ಯದಿ ನೀ ಎನ್ನ ಮುಟ್ಟಿದ್ಯೋ ಭ್ರಷ್ಟ|| 2 ಸುಖಭರಿತ || ಲಗುಬಗೆಯಲಿ ಮೋಹಿಸುತ || ಬಗೆ ಬಗೆಯಲ್ಲಿ ಮಾತನಾಡಿದನು ನಗುನಗುತ| 3 ಪದ, ರಾಗ:ಶಂಕರಾಭರಣ ಮರುಳು ಗೊಂಡೆನೇ || ತರುಳೆ ನೊಂದೆನೆ|| ಮರಳು ಗೊಂಡೆ ತರುಳೆ ನಿನ್ನ ಹೊರಳಿ ನೋಡುವ ಯ್ಹರಳಿನೋಟಕೆ|| ಪ ಮಾನ್ಯ ಮಾನಣಿ || ರನ್ನೆ ಶಿರೋಮಣಿ || ಚೆನ್ನವಾದ ಚಿನ್ನದಂಥ ನಿನ್ನ ದೇಹವನ್ನು ಕಂಡು|| 1 ಮಾತುಲಾಲಿಸೆ|| ಪ್ರೇತಿ ತೋರಿಸೆ ||ಪ್ರೀತಿ ಎಂಬೊದ್ಯಾತಕಿನ್ನ ಸೋತು ಕಾಮಾಪೂರದಲ್ಲಿ|| 2 ನಿಂತು ಮರೆತೆನಾ || ಅನಂತಾದ್ರೀಶನಾ || ಎಂಥಹವರಿಗೆ ಭ್ರಾಂತಿ ಬಿಡಿಸುವಂಥ ನಿನ್ನ ಕಾಂತಿ ನೋಡಿ|| 3 ಆರ್ಯಾ ಇಂಥಾ ಮಾತವು ಕೇಳಿ || ಚಿಂತಾಕ್ರಾಂತಳಾದಳಾಗ ಆಗ ಆ ಬಾಲಿ|| ಬಂದಿತು ಇಂಥಾ ಘೋರಾ || ಚಿಂತಿಸ ಬೇಕಿನ್ನು ಇವನ ಸಂಹಾರಾ|| 1 ಶಾಪಿಸ ಬಾರದು ಜ್ಞನಿ || ಶಾಪಿಸಿದವರ ಅಗುವುದು ತಪಹಾನಿ|| ಪರಿ ಮನಸಿಗೆ ತಂದು ವ್ಯಾಪಾರವು ಮಾಡಿದಳು ಮತ್ತೊಂದು| 2 ಎಂಬಾಕೆ ನಾಮವೇ ತುಳಜಾ|| 3 ಪದ ರಾಗ :ಸಾರಂಗ ತಾಳ :ತಿವಿಡಿ ಸ್ವರಷಡ್ಜ ಸಲಹಬೇಕೆಂದು ನಿಲ್ಲದೆ|| ಪ ಪಾಶಾಕೃಷ್ಟ ಧರಿಸುತಾ||1 ವರೆಂದು || ದಯಮಾಡಿ ವರಗÀಳ ನೀಡುವಳು ಹಿಡಿಯಂದು|| ಕಾರುಣ್ಯಸಿಂಧು|| ಗಾಢನೆ ಧ್ವನಿ ಮಾಡುತಲೇ ಹಾರ್ಯಾಡುತಲೇ ತ್ವರ ಮಾಡಿಸುತಲೇ ಓಡಿ ಬರುತಿಹ ಪ್ರೌಢಗಣಗಳ ಕೂಡಿ ಸಿಂಹಾರೂಢಳಾಗಿ||2 ಎಂತು ಪೊಗಳಲಿ ನಾನು|| ಅತ್ಯಂತ ಬಹಳಾದಂತ ಮಹಿಮೆಗಳನು ಎಂತೆಂಥವರು ಬೇಕಂತ ಹುಡುಕಿದರೇನು|| ಹಿಗಂತ ಆಕೆಯ ಅಂತೂ ತಿಳಿಯದು ಇನ್ನು|| ಗುಣವತಿ ತಾನು|| ಶಾಂತಿಯಿಂದ ಅನಂತಾದ್ರೇಶನ ಕಾಂತಯಳ ಪೋಲುವಂತ ದೇವಿಯು ಚಿಂತೆಯಲಿ ತನ ಚಿಂತಿಸಿರುವಳ ಚಿಂತೆ ಬಿಡಿಸ ಬೇಕಂತ ಧಾವಿಸಿ|| 3 ಆರ್ಯಾ ಸಾರ ಪರಮಾದರದಿಂದ ಕೂತು ಕೇಳಿದವರು || ಪರಿಪೂಜಿಸುತಾ ತುಳಜಾ ತಾನಾಗುವಳು ಪ್ರತ್ಯಕ್ಷ|| 1 ವರಕವಿತಾ ರಚನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದು ಎನ್ನ ಉಪಾಯ|| ಗುರು ಕೃಪೆಯಿಂದಾಯಿತೊಂದಧ್ಯಾಯ|| ಶ್ರೀಹರೇ ಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು