ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ಇದ್ದೀಯಯ್ಯ ಎನ್ನೊಳಗೆನೀ ಇನಕುಲರಾಯ ಪ ಇದ್ದೀಯೈ ಸರ್ವರ ಹೃದ್ಗುಹೆಯೆಂತೆಂಬ ಪದ್ಮದೊಳಗೆನೀನು ಪದುಮೆಯಿಂದೊಡಗೂಡಿ ಅ.ಪ ಮರುತಾತ್ಮಜ ನಿನ್ನ ಚರಣವನೊತ್ತಲು ಸರಸಿಜಭವ ಮುಖ್ಯ ಪರಿವಾರಸಹಿತನು 1 ಮೂರು ಲೋಕದ ವ್ಯಾಪಾರ ನಡೆಸುತ್ತ ಯಾರಿಗು ತಿಳಿಸದೆಯೆಲ್ಲೆಲ್ಲಿಯು ನೀನೆ 2 ಪ್ರೇಮದಿಂದಲಿ ಭಕ್ತಸ್ತೋಮವೋಲೈಸುವದು ಸ್ವಾಮಿಯಾಗಿ ಗುರು ರಾಮವಿಠಲ ತಂದೆ 3
--------------
ಗುರುರಾಮವಿಠಲ
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು