ಒಟ್ಟು 16 ಕಡೆಗಳಲ್ಲಿ , 7 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಯಸೋದು _ ಉತ್ತಮ ಸಂಗ - ಬಯಸೋದು ಪ ಬಯಸೂವುದುತ್ತಮ ಸಂಗ | ಭವಭಯ ಪರಿಹರಿಸೂವ ಸಂಗ | ಆಹಭಯ ದೂರಾಭಯಪ್ರದ | ದಯ ಪೂರ್ಣ ಹರಿಯ ಹೃ-ದಯ ವ್ಯಾಪ್ತವಾದಂಥ | ವಿಯದೊಳು ಕಾಂಬಂಧ ಅ.ಪ. ವಿಭವ | ಹೇತು ಇವರೆಂದು ಖ್ಯಾತಿಲಿ ಇರುವ | ಬೊಮ್ಮದಿವಿಜೇಡ್ಯ ವೈಕುಂಠನವ | ಮೃಗ್ಯನವರಿಂದನಾಗುತಲಿರುವ | ಆಹಅವನ ಪದ ಕಮಲದಿ | ಧೃವ ಚಿತ್ತ ಉಳ್ಳವರವರಿಗೆಂಬರು ವೈ | ಷ್ಣವಾಸ್ಯರೆಂದೆನುತಲಿ 1 ತಾಪ ಶಮನ | ಸೇವಿಪರ ಹೃದಯಾಂತಃಕರಣ | ಆಹದಿರುತ ತೋರಿಕೊಳ್ಳೆ | ತಾರೇಶನಂದದಿಪರಿತಾಪವಿನ್ನುಂಟಿ | ಮರಳಿ ಅಂಥವನಿಗೆ 2 ಶುದ್ಧಾಂತಃಕರಣರ ಭಕ್ತಿ | ಪಾಶಬದ್ದನಾಗಿಹ ಹರಿಮೂರ್ತಿ | ಇಂಥಶುದ್ಧರ ವಸ ಹರಿಕೀರ್ತಿ | ಇಂದದಗ್ದ ಪಾಪದ ಮೂಟೆ ಭರ್ತಿ | ಆಹಊಧ್ರ್ವ ಪುಂಡ್ರವು ಶಂಖ | ಮುದ್ರಾದಿ ಚಿನ್ಹಿತಶಬ್ದರಿವರು ಪ್ರ | ಸಿದ್ಧ ಭಾಗ್ವತರೆಂದು 3 ಕಾಮ ಕಾರ್ಮಾಅವಿದ್ಯದಿಂದ | ದೇಹಭೂಮಿಯೊಳುತ್ಪನ್ನದಿಂದ | ಜಾತಿಬ್ರಾಹ್ಮಣಾಹಂಭಾವದಿಂದ | ಶೂನ್ಯಶ್ರೀಮನೋಹರ ಜೀವರಿಂದ | ಆಹಸಾಮಸನ್ನುತ ಭಿನ್ನ | ನೇಮ ತಿಳಿದು ತಾರ-ತಮ್ಯವ ತಿಳಿದವ | ಪ್ರೇಮ ಭಕ್ತನವನು 4 ನೋವು ಸಂತೋಷಗಳೆಂಬ | ದ್ವಯಭಾವಗಳ್ಸಮತೇಲಿ ಉಂಬ | ಜ್ಞಾನಿದೇವ ದೇವಗೆ ಪ್ರಿಯನೆಂಬ | ಬುದ್ಧಿಲೋಪಿ ಅವರ ಭಜಿಸೆ ತುಂಬ | ಆಹಗೋವ ಪಾಲಕ ಗುರು | ಗೋವಿಂದ ವಿಠ್ಠಲಕಾವನು ಬೆಂಬಿಡದೆ | ಈ ವಿಧ ಭಕುತರ 5
--------------
ಗುರುಗೋವಿಂದವಿಠಲರು
ಯತಿಕಕ್ಷೆ - ದಾಸಕಕ್ಷೆ ಮುನಿಜನರ ನೆನೆಸಿ ಜನರೂ | ಮುನಿ ಜನರ ನೆನೆಸಿ ಬಿಡ | ದನುದಿನದಲಿ ನಿಮ್ಮ | ಮನ ಮಲಿನ ಪೋಗಿ ಸ | ವನಧಿ ಹರಿವೊಲಿದು | ಘನವಾಗಿ ಪಾಲಿಸುವನು ಪ ವಿಶ್ವ | ಮಿತ್ರ ಮೈತ್ರಾವಾರುಣಿ ಭೃಗು | ವೀತಿ ಹೋತ್ರ ಕಪಿ ಗಾಗ್ರ್ಯ ಗಾಲವ | ಗರ್ಗಗಾರ್ಚಮಾ || ಪತ್ರ ಫಾಲಾಶವಟು | ಶಾಂಡಿಲ್ಯ ಶಕಟ ಸು | ಕೃತಿ ಗೋತ್ರ ಗೌರೀವೀತಹವ್ಯ | ಕಪಿ ಶಂಖಕಟ ಮೈತ್ರಾವರುಣವಾಧುಳಾ || 1 ಉಪಮನ್ಯು ಶಂಕು ಉದ್ದಾಲಕ ಕೌಂಡಿಣ್ಯ | ಅಪುನವಾನ ಅತಿಥಿ ಪಾಂತುಚಾವನ ಚವನ | ಕ | ಶ್ಯಪ ಪೂತಿಮಾಷರೈಭ || ವಿಪುಳ ಜಮದಗ್ನಿ ವಾಲ್ಮಿಕಿ ರೇಭ ಜಾಬಾಲಿ | ಸ್ವಪನ ಸಾತ್ಯಕಿಯು ಸಾಮ್ಯಾಳ ದೇವರತತಿ | ಕಪಿಕುತ್ಸ್ನ ಪೌರಕುತ್ಸಾ 2 ಮುನಿಮಾದ್ರಮ ಶಣಶರ್ಮ ಬಾದರಾಯಣ | ಕನಕ ಕಾತ್ಯಾಯನ ಮಾರ್ಕಾಂಡ್ಯ ಮಾಂಡವ್ಯ | ತೃಣಬಿಂದು ಭಾಷ್ಕಾಳಾಖ್ಯ || ಪನಸ ಅಘಮರ್ಷಣ ಪ್ರಮಧ ಪ್ರಾಗಾಧ ಜೀ | ವನಯಾಜ್ಞವಲ್ಕ್ಯ ಜಿವಂತಿ ಮಾತಂಗ ಶೋ | ದನ ಧೌಮ್ಯ ಆರ್ಯ ರುಚಿರಾ || 3 ವಾಸಿಷ್ಟ ಶ್ರೀವತ್ಸ ಲೋಹಿತಾಷ್ಯಕಶರ್ವ | ಕರ್ದಮ ಮರೀಚಿ ಪಾ | ಬೇಷಿ ಜಾವಾಯುಲಿಕೆಯೂ || ಭೂಷಣೌ ಬಾರ್ಹಸ್ಪತ್ಯದಾಲ್ಭ್ಯ ಸುಯಜ್ಞಾಜ್ಞಿ | ವೇಶ್ಯ ಮುಖ ಸಪರಿಧಿಸಾಲಂಕಾಯನಾ ಧರ್ಮ | ನಾಶಯ ದೇವಶ್ರವತಾ ||4 ಶ್ರವ ಪೂರ್ಣವಾಹಕ ಕೃತು ಅಂಗಿರಸಾಂಗಿರಾ || ಲವ ಶಮನ ಋಷಿಶೃಂಗ || ಕವಿ ವೇದಶಾಲ ವಿಶಾಲ ಕೌಶಿಕ ಶುಚಿ | ಭುವನ ಉರ್ಜಯನ ಮಾಹಋಷಿಭಹುದ ಸಂ | ಭವಸ್ತಂಭ ಕಿರಾಠಿ ಕಪಿಸೇನ ಶಾಂಡಿಲ್ಯ | ಪವನದಮ ಬೀಜವಾಪಿ || 5 ಉಲಿಖಲು ಧನಂಜಯ ವಾಲಿಖ್ಯಮಾಯ | ಕಲಿಕಿ ಸೃಂಗಿ ಮಧು ಚಂದವಿತನು ಬಹು | ಶರಭ || ಪುಲಸ್ತ್ಯ ದಧೀಚಿ ಕಥಾಸೂನು ಸೇವಾಸ್ಯ ಮಾ | ದ್ಗಲ ವಿಷ್ಣು ತ್ರಿಧಕುಕ್ಷಿ ಶುಕ್ಷ ಮನತಂತು | ಬಲವೀರ್ಯ ಬಬ್ರಾಮೇನೂ6 ಅಪವರ್ಗ ಹಿರಣ್ಯನಾಭ ಅ | ದ್ಭುತ ಅಜಾಮೀಡ ಪರ್ವತ ಶ್ವೇತಕೇತಮಾಹ || ಸತ್ಯವ್ರತ ಶ್ರ್ರುತಿದೃತಿ ಆಯತಾ || ಶ್ರುತಿಕೀರ್ತಿ ಸುಪ್ರಭಾವತ್ಸ ಮೃತಾಂಡ ಸೂ | ಕ್ರೋಢ ಕೋಲ ಗೋಬಲ ಮಾತೃಕಾನಂದ || ಕಥನ ಸರ್ವಸ್ಥಂಬವಾ 7 ನೈಧ್ರುವಾ ದೀರ್ಘತಮ ಜಮದಗ್ನಿ ಕಾರುಣಿ | ಸದ್ಮುನಿಕಾಂಡಮಣಿ ಮಾಂಡವ್ಯವಾಚÀಸಕ | ಶಿದ್ಧಿಸನಕಸ ನಂದನಾ || ವಿದ್ಯಾಂಗ ಹವ್ಯರೋಹಿತಶರ್ಮ ಸೂಕರ್ಮ | ಮೇಧ ಮೇಧ ಪ್ರ | ಶುಕ ಬುದ್ಧಿ ಸಮೇಧ ಪೇರ್ಮಿ 8 ಪಂಚ ಪಂಚಾಸಪ್ತ ಅಪ್ಟ ಕಾಲದಲಿ ಪ್ರಾ | ಪಂಚದೊಳು ತೊಡಕದಲೆ ಬುದ್ಧಿ ಚಿತ್ತದೊಳಿಟ್ಟು | ಗಿದ್ದವರ ಕೊಂಚ ಮುನಿಗಳ ಪೇಳಿದೆ || ವಂಚನೆಯಿಲ್ಲದೆ ಸ್ಮರಿಸಿ ಮಧ್ವಮತಪೊಂದಿ | ಸಂಚಿತಾಗಮ ಕಳೆವ ಸರ್ವಸುಖವೀವ ವಿ | ಮಿಂಚಿನಂದದಿ ಪೊಳೆವನು 9
--------------
ವಿಜಯದಾಸ
(38ನೇ ವರ್ಷದ ವರ್ಧಂತಿ) ದಯಾನಿಧೆ ಪರಿಪಾಲಯ ಮಾಂ ಪ. ಮಾನುಷತ್ವವು ಬಂದ ಸಮಯದಿ ಹೀನ ಭೋಗವೆ ಬಯಸಿದೆ ನಾನು ನನ್ನದು ಎಂಬ ಕೀಳಭಿ- ಮಾನವೇ ನಾ ವಹಿಸಿದೆ ಏನನೆಂಬೆನು ಎನ್ನ ಬುದ್ಧಿವಿ- ಹೀನತೆಯ ಬಯಲಾಸೆ ಬಿಡಿಸು 1 ಇಳೆಯೊಳಿರುತಿಹ ನಿನ್ನ ಮಹಿಮೆಯ ತಿಳಿಯದಾದೆನು ಮೋಹದಿ ಕಳೆದೆ ಮೂವತ್ತೆಂಟು ವತ್ಸರ ಹಲವು ವಿಷಯದಿ ಚೋಹದಿ ಕಲಿಮಲಾಪಹ ಕೃಪಾಳು ನಿನ್ನಯ ನೆಲೆಯನರಿಯದೆ ನೊಂದೆನಲ್ಲೊ 2 ಆಸ್ಯದಲಿತ್ವನ್ನಾಮ ನುಡಿಸುತ ದಾಸ್ಯವನು ದಯ ಮಾಡುತ ಹಾಸ್ಯ ಮಾಳ್ಪರ ಹಲ್ಲ ಮುರಿದು ವಿಲಾಸ್ಯ ಮತಿ ಕಾಪಾಡುತ ಪೋಷ್ಯ ಪದವನು ನೀಡು ಲಕ್ಷ್ಮೀ- ವಾಸ್ಯ ವಕ್ಷನ ವೆಂಕಟೇಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಉ) ಯತಿವರರು ಜಿತಾಮಿತ್ರ ತೀರ್ಥರು 52 ವಂದನೆ ಮಾಡಿರೈ ಯತಿಕುಲಚಂದ್ರನ ಪಾಡಿರೈ ಪ. ಬಂದ ದುರಿತಗಳ ಹಿಂದೆ ಕಳೆದು ಆ- ನಂದ ಪಡುವ ವಿಭುದೇಂದ್ರ ಕರೋಧ್ಭವನಅ.ಪ. ಸೂತ್ರ ಅಗಣಿತ ಮಹಿಮರ1 ವರಮಹಾತ್ಮೆ ತಿಳಿಸಿ ಮೊದಲಿಂದೀ ಪರಿಯಂದದಿಚರಿಸಿ ನಿರುತ ಮನವ ನಿಲಿಸಿ ಶ್ರೀಹರಿ ಕರಿವರದನ ಒಲಿಸಿದರೆ ಜನರಿಗೆ ಅರಿಯದೆ ಮರೆಯಾಗುತ ಹರುಷದಿ ಗೋನದ ತರವಲ್ಲಿರುವವರ2 ಮುದದಿ ಕೃಷ್ಣಾ ತಟಿಯ ಮಧ್ಯದಿ ಸದನದ ಪರಿಯಸದಮಲ ಯತಿವರ್ಯ ತಪಮೌನದಲಿಇದ್ದು ದ್ರುತ ಕರಿಯಕಾರ್ಯ ಒದಗಿ ನದಿಯು ಸೂ -ಸುತ ಬರಲೇಳು ದಿನಕುದಯಾದವರ ಸುಪದ ಕಮಲಂಗಳ3 ಮಾಸ ಮಾರ್ಗಶೀರ್ಷಾರಾಧನೆಗಶೇಷದಿನ ಅಮಾವಾಸ್ಯ ದಾಸರು ಪ್ರತಿವರುಷ ಮಾಳ್ಪರುಲೇಸೆನಲು ಶ್ರಿತಿಗೋಷ ಕಾಶಿಯ ಕ್ಷೇತ್ರ ಈ ಸ್ಥಳ ಮಿಗಿಲೈದಾಸರಿಗೆ ಭೂಸುರ ಪದಗಳ 4 ಮಧ್ವಶಾಸ್ತ್ರ ಗ್ರಂಥಸಾರದ ಪದ್ಧತಿ ತಿಳಿಸಿದಂಥರುದ್ರವಂದ್ಯ ಮೂರುತಿ ರಂಗವಿಠಲ ಪದ ಪದ್ಮಾರಾಧಕ ಪ್ರಸಿದ್ಧ ಮುನೀಂದ್ರರ5
--------------
ಶ್ರೀಪಾದರಾಜರು
ಕಾವಲಿರು ಕಮಲಾಕ್ಷ ಕರುಣಿ ನಿರಪೇಕ್ಷ ದೇವ ದೇವಾಧ್ಯಕ್ಷ ದುರಿತಾಳಿಶೀಕ್ಷ ಪ. ಪಾಂಡುಕುವರರ ಪರಮ ಪ್ರೇಮದಿಂದಲಿ ಕಾಯ್ದೆ ತೋಂಡಮಾನಗೆ ಚಕ್ರ ಶಂಖಗಳನಿತ್ತೆ ಪಂಡಿತಾಗ್ರಣಿ ಬಲಿಯ ಬಾಗಿಲೊಳು ಶಾಙ್ರ್ಞಕೋ- ದಂಡ ಶರಗಳ ಧರಿಸಿಕೊಂಡು ಕಾಪಾಡುವನೆ 1 ವಿತತರೂಪನೆ ನಿನ್ನೊಳಿಟ್ಟಹೆನು ಭರವಸವ ಸತತ ನೀ ಸಲಹುವುದು ಸರ್ವಸ್ವವ ಕ್ಷಿತಿಯನಾಳುವ ಜನರೊಳಂತರಾತ್ಮಕ ನೀನೆ ಗತಿಯೆಂದು ನಂಬಿದೆನು ಗರುಡಾಂಗಗಮನ 2 ಕಂಟಕವ ಪರಿಹರಿಸು ಕಂಠೀರವಾಸ್ಯ ವೈ- ಕುಂಠಗಿರಿಯರಸ ಮೂರೆಂಟು ತತ್ವೇಶ ಸ್ವಿಂಟನಾಭಿದನ ನಿಷ್ಕಂಟತನವನು ಬಿಡಿಸಿ ಬಂಟವಾಗಿಹರ ಮೇಲೆ ತಂಟೆ ಬರದಂದದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗುರುಸತ್ಯವರರೆಂಬ ಕಲ್ಪಭೂಜಾ ಧರೆಯೊಳಗೆಮ್ಮನುದ್ಧರಿಸ ಬಂತಿದಕೊ ಪ ಶ್ರೀಮಧ್ವಮತವೆಂಬೋ ಭೂಮಿಯೊಳಗುದ್ಭವಿಸಿ ರಾಮ ವೇದವಾಸ್ಯರಂಘ್ರಿ ಯುಗಳ ವ್ಯೋಮ ಮಂಡಲವನಾಶ್ರಯಿಸಿ ಸತ್ಕೀರ್ತಿನಿ ಸ್ಸೀಮ ಶಾಖೋಪಶಾಖೆಗಳಿಂದ ಶೋಭಿಸುತ 1 ಭವವೆಂಬ ಭಾಸ್ಕರತಪದಿಂದ ಬೆಂದು ಬಂ ದವರ ಮಂದಸ್ಮಿತ ನೆಳಲಿಂದಲೀ ಪ್ರವಣರಂತಃಸ್ತಾಪ ಕಳೆದು ನಿತ್ಯದಲಿ ಸ ತ್ಕವಿ ದ್ವಿಜಾಳಿಗಲಿಗಾಶ್ರಿತರಾಗಿ ಮೆರೆವ 2 ಕರ್ಮ ಜ್ಞಾನ ಮಾರ್ಗಸ್ಥ ಜನರಿಗಾಗಿ ಲ್ಲಿಹವು ಫಲ ಪುಷ್ಪ ಐಹಿಕಾಮುಷ್ಮಿಕಾ ಭುಜಗ ಹೃ ದ್ಗುಹದೊಳಿಪ್ಪದು ಮಾಯಿಮೂಷಕಗಳೋಡಿಸುತ 3
--------------
ಜಗನ್ನಾಥದಾಸರು
ಪನ್ನಗಾಚಲವಾಸ-ಪ್ರಪÀನ್ನರ ಪಾಲಕ ಶ್ರೀಶಾ-ಸರ್ವೇಶಾ ಕನಕ ರತುನಮಯ ಮುಕುಟಾಧಾರ ಘನ ನವಮಣಿಮಯ ಕುಂಡಲಧರ ಇನಕೋಟಿಪ್ರಭಕೌಸ್ತುಭಹಾರ ಮನಸಿಜಧನುಸಮ ಭ್ರೂಸಮಾಕಾರ ಘನ ಚಂಪಕಗೆಣೆ ನಾಸ ಗಂಭೀರ ವನಜದಳಾಯತೇಕ್ಷಣಾಕಾರ ವನರುಹಾ ಘನ ಸ್ಮಿತ ಸುಗಂಭೀರ ಮುನಿಮಾನಸಮಂದಿರ ಸುವಿಹಾರ ಅಪ್ರಾಕೃತ ಶರೀರ ತನುಮನ ವಚನದಿ ಅನವರತದಿ ಕಿನ್ನರ ಸುರಮುನಿಗಣ ತನುಸದನದಿ ಹೃದ್ವನಜದಿ ಘನಪದ ವನರುಹ ಧೇನಿಸಿ ದೃಢಸ್ನೇಹದಿಂದಿರುವ ಕರ್ಮ ಒಪ್ಪಿಸುವ ಘನಮೋದದಿಂದಲಿರುವಾ ನುತಿಸುವಾ ಬೇಡುವಾ ಜನುಮ ಸ್ಥಿತಿ ಮೃತಿಗೆ ಬೆದರದಿರುವಾ ನಿನ್ನವರೊಳು ತನ್ನಿರವ ತೋರಿಸುಹ ಘನ್ನಪಾತಕವ ಕಳೆದುನ್ನತ ಸಾಧನವನ್ನೆ ಕೊಟ್ಟು ನನ್ನಿಯಿಂದಲೆ ಪೊರೆವಾ ತನ್ನಧಾಮದಿ ಕಾಪಿಡುವಾ 1 ಉತ್ತಮ ಮೌಕ್ತಿಕ ಸರಿಗೆ ನ್ಯಾವಳ ಒತ್ತೊತ್ತಾಗಿಹ ತ್ರಿವಳಿಯ ಮಾಲಾ ರತುನ ಪದಕದಾ ಸರದ ವಿಹಾರ ಅತಿಮನೋಹರ ಹೃದಯ ವಿಶಾಲ ಸಲೆಸಿರಿವತ್ಸ ವಕ್ಷದಿ ಲೋಲ ಸುತ್ತಿದ ಭಾಪುರಿ ಭುಜದ ವಿಸ್ತಾರ ಸಿತಾನಿಸಿತ ಉಪವೀತದಿ ಲೊಲ ದಾತಾಪಿತ ತವನಾಭಿಯ ಕಮಲ ಉತ್ತಮಕಮಲ ಕಲ್ಹಾರದ ಮಾಲ ಹಸ್ತಾಭರಣದಿ ಮೆರೆಯುತ ಪೊತ್ತಿಹ ಚಕ್ರಾಧ್ಯಾಯುಧನೆತ್ತಿ ದುರುಳೊನ್ಮತ್ತರ ಸದೆದು ತ್ವದ್ಭಕ್ತರ ಮನೋರಥ ಪೂರ್ತಿಗೈವ ಪುರುಷೋತ್ತಮ ಭವಭಯಹಾರೀ ನಿತ್ಯನೂತನವಿಹಾರೀ-ಪ್ರಣವಸ್ತನೆ ನೀ ಕಂಸಾರೀ ಪೃಥಕ್ ಪೃಥಕ್ ತದಾಕಾರೀ-ನರಹರೀ-ಶ್ರೀಹರೀ ಹೃತ್ಪುಷ್ಕರದಳ ವಿಹಾರೀ ಭಕ್ತವತ್ಸಲ ಅವ್ಯಕ್ತನೆ ಜಗದುತ್ಪತ್ತಿ ಸ್ಥಿತಿಲಯ ಕರ್ತ ವ್ಯಾಪ್ತ ನಿರ್ಲಿಪ್ತ ಸತ್ಯಸು- ಹೃತ್ತಮ ನೀನೆ ಮುರಾರೀ ಉತ್ತಮ ಸಮರಹಿತ ಶೌರೀ 2 ಪಕ್ಷಿಧ್ವಜ ಸುಖಭರಿತ ವಿಹಾರ ಕುಕ್ಷಿಯೊಳು ಅಬ್ಜಾಂಡಕೋಟಿಗಾಧಾರ ತ್ರಕ್ಷಾದ್ಯಮರನುತ ಗುಣಾಧಾರ ಸಾಕ್ಷಿಮೂರುತಿ ಸರ್ವಕಾಲಾಧಾರ ವಕ್ಷದೊಳು ಶ್ರೀವತ್ಸ ಗಂಭೀರಾ ಮು- ಮುಕ್ಷುಗಳೊಡೆಯನೆ ವೈಕುಂಠಾಗಾರ ಅಕ್ಷರಕ್ಷರರವಿಲಕ್ಷಣಧೀರ ರಕ್ಷಕ ಭಕುತಜನರುದ್ಧಾರ ದಕ್ಷಿಣಾಕ್ಷಿಕಂಠ ಹೃದಯವಿಹಾರ ರಕ್ಷಕ ತ್ರಿಜಗದಾಧ್ಯಕ್ಷ ಕರುಣಕಟಾಕ್ಷದಿ ಈ ಜಗ ವೃಕ್ಷದೊಳು ನಿರಪೇಕ್ಷನಾಗಿ ಫÀಲಭಕ್ಷಿಪ ಜೀವರ ಲಕ್ಷಕೋಟಿ ನೀ ಸಾಕ್ಷಿಯಾಗಿಹೆ ನೀ ರಕ್ಷ ಕಮಲಾಕ್ಷ ಪಕ್ಷಿವಾಹನನೆ ನಿನ್ನ ಪರೋಕ್ಷಾಪೇಕ್ಷಿಗಳಿಗೆ ನಿನ್ನ ಕ- ಟಾಕ್ಷವೀಕ್ಷಣದಿಂದ ಪ್ರತ್ಯಕ್ಷ ರಿಪುಶಿಕ್ಷ ಅಧ್ಯಕ್ಷ ಸಾಕ್ಷಿಯಾಗಿಹೆ ನೀ ರಕ್ಷಾ ಮೋಕ್ಷ ಜೀವರಿಗಪರೋಕ್ಷವನಿತ್ತು ನಿ- ಷ್ಪಕ್ಷನಾಗಿ ಜಗರಕ್ಷಿಸುತ್ತ ಸುರಪ ದಕ್ಷ ಚತು- ರಾಕ್ಷರಸ್ಥ-ನರಹರ್ಯಕ್ಷ ಶರಣಜನರ ಕಲ್ಪವೃಕ್ಷ3 ಪಟುತರಾಂಗ ಸುಕಟಿಯ ವಿಸ್ತಾರ ತೊಟ್ಟಿಹÀರತುನದ ಪಟ್ಟವಿಹಾರ ಉಟ್ಟಿಹ ಪಟ್ಟೆ ಪೀತಾಂಬರ ಧಾರಾ ಬಟ್ಟ ಜಾನುದ್ವಯ ಜಂಘಾಶೂರ ಇಟ್ಟಿಹ ಸಾಲಿಗ್ರಾಮದ ಹಾರ ದಟ್ಟವಾಗಿಹ ಕಾಲಂದಿಗೆಯ ವಿಹಾರ ಇಟ್ಟಿಹ ಬೆರಳಲಿ ರತ್ನದುಂಗುರ ಶ್ರೇಷ್ಟಪದದಿ ಧ್ವಜಚಿಹ್ನಾಕಾರ ದಿಟ್ಟಿ ನಖಾಗ್ರದಿ ತಟಿತ ಪ್ರಭಾಕರ ಪಟುತರ ಕರಪಾದ ಚಟುಲರೂಪ ಮನ- ತಟದಿ ಇಟ್ಟು ಲವತೃಟಿಯು ಬಿಡದೆ ಸುರ- ನಿತ್ಯ ಕರಪುಟದಿ ನಮಿಸಿ ಉತ್ಕಟದಿ ಗುಣಗಳ ಪಠಣದಿಂದಿರೆ ಮುದದಿ ಪಟುತರ ಭಕುತಿಯ ಭರದೀ ನಟಿಸುತ ತನು ಮರೆದಾತುರದಿ ಉ- ತ್ಕಟದಲಿ ನುತಿಸುತ ಭರದೀ ನಟಿಸುವಾ ಸ್ಮರಿಸುವಾ ಭಕುತಜನರ ಕಂಟಕವಾ ಆ ಧಿಟರು ನೀತ ಭಟರಂದು ನಿಜ ಜಠರಾಲಯದಿ ಇಂ- ಬಿಟ್ಟು ಭಕುತರ ಕಟಕಪೊರೆದು ಭವಾಬ್ಧಿಯ ಕಂಟಕ ಜಗಶಿಕ್ಷಾ 4 ಸ್ವಗತಭೇದವಿವರ್ಜಿತಶೂನ್ಯ ನಿಗಮಾತೀತ ದೇವವರೇಣ್ಯ ಬಗೆಬಗೆ ಸ್ವರ ಶಬ್ದವಾಚ್ಯವರೇಣ್ಯ ಅಗಣಿತಗುಣಗಣಪೂರ್ಣ ಸಂಪೂರ್ಣ ಯೋಗಿಗಳ್ ಪೊಗಳುವ ಸವಿತೃವರೇಣ್ಯ ಬಗೆಗಾಣರೊ ಸಾಕಲ್ಯದಿ ನಿನ್ನ ತ್ರಿಗುಣ ವಿರಹಿತನಾಗಿಹನ್ನ ನಗಜಾಧವ ಪಿಕನುತಪಾವನ್ನ ದುರ್ಗಾ ಶ್ರೀ ಭೂದೇವಿಯರಮಣ ಯುಗ ಯುಗದೊಳು ಜಗಕಾರ್ಯದಿ ಧರ್ಮ ಪ್ರಘಟ- ನೆಗೋಸುಗ ಸ್ವಗತರೂಪ ತಾ ನೆರಹಿ ಕ್ರೂರ ಪಾ- ಪೌಘರ ಮಡುಹಿ ಜಗದೇಕ ವೀರ ಮಿಗೆ ಜನಿಸಿದೆ ಜಗದೀಶಾ ಸುಗುಣ ಸಾಕಾರ ಸರ್ವೋತ್ತಮ ಶ್ರೀಶಾ ಜಗಜ್ಜಾಲ ಲೀಲಾವಿಲಾಸ ಜಗವೆಲ್ಲಾ ಈಶಾವಾಸ್ಯ ಸೃಜಿಸಿ ನೆಲೆಸೀ ಸ್ವಪ್ರಯೋಜನ ರಹಿತನೆನಿಸೀ ಖಗವರೂಥÀ ಶ್ರೀ ವೇಂಕಟೇಶ ಪನ್ನಗಗಿರಿಯೊಳು ನೆಲೆಸಿ ಜೀವರ ಯೋಗ್ಯಸಾಧನೆ ಇತ್ತು ಮನೋಭೀ-ಷ್ಟವನ್ನೆ ಸಲಿಸಿ ಉರಗಾದ್ರಿವಾಸವಿಠಲನೆನಿಸೀ 5
--------------
ಉರಗಾದ್ರಿವಾಸವಿಠಲದಾಸರು
ಪುರಂದರ ಗುರುವೆ ಪ ಕಡು ಜ್ಞಾನ-ಭಕ್ತಿ-ವೈರಾಗ್ಯದ ನಿಧಿಯೆ ಅ.ಪ ವರ ಮಧ್ವಮತ ಕ್ಷೀರಾಂಬುಧಿಗೆ ಚಂದ್ರನಾದೆ | ಗುರು ವ್ಯಾಸರಾಯರಿಂದುಪದೇಶಗೊಂಡೆ || ಎರಡೆರಡು ಲಕ್ಷದಿಪ್ಪತೈದು ಸಾವಿರ | ವರ ನಾಮಾವಳಿ ಮಾಡಿ ಹರಿಗೆ ಅರ್ಪಿಸಿದೆ 1 ಗಂಗಾದಿ ಸಕಲ ತೀರ್ಥಂಗಳ ಚರಿಸಿತು | ರಂಗವದನ ವೇದವಾಸ್ಯನ || ಹಿಂಗದೆ ಮನದಲ್ಲಿ ನೆನೆದು ನೆನೆದು ಮರೆವ | ಮಂಗಳ ಮಹಿಮೆಯ ನುತಿಸಿ ನುತಿಸಿ ನಾ 2 ನಿನ್ನತಿಶಯಗುಣ ವರ್ಣಿಸಲಳವಲ್ಲ | ನಿನ್ನ ಸೇವಕನ ಸೇವಕನೆಂತೆಂದು || ಪನ್ನಗಶಯನ ಮುಕುಂದ ಕರುಣ ಪ್ರ | ಸನ್ನ ವಿಜಯವಿಠ್ಠಲ ಸಂಪನ್ನ 3
--------------
ವಿಜಯದಾಸ
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಯತಿಗಳು ಶ್ರೀಜಯತೀರ್ಥರು ಕರುಣಿಸೊ ಜಯರಾಯಾ ಗುರುವರ್ಯ ಚರಣವೆ ಗತಿಯಯ್ಯ ಹೇ ಜಿಯಾ ಪ ರಘುನಾಥನ ಪುತ್ರ ಪವಿತ್ರ ರಾಘವನ ಪ್ರೀತಪ್ರಾತ್ರ ಚರಿತ್ರ ಮಘವನಾ ನೀ ನಘದೂರ ಶ್ರೀ ರಘುರಾಮನ ಕಿಂಕರನ ಅಮೋಘ ಸೇವಕನೊ 1 ಕುಕರ್ವಿಣಿಯ ತೀರಾ ಘೋರಕುವಾದಿಗಳ ಕು ಲಕುಠಾರ ಗಂಭೀರ ಸಕಲಶಾಸ್ತ್ರಸತ್ಸಾರ ಟೀಕಕರ ಕುಕವಿಶೃಗಾಲಕುಲಕಾಲಭಯಂಕರ 2 ಎರಗೋಳಾದ್ರಿಯೊಳು ಗುಹೆಯೊಳು ನಿರುತ ಪ್ರವಚನಗಳು ನಿತ್ಯದೊಳು ಮರುತಮತಾಂಬುಧಿಚಂದಿರ ಸುಂದರ ವರಸುಜ್ಞಾನಮಣಿಕಿರಣವ ತೋರಿದೆ 3 ಗುರು ಮಧ್ವಮುನಿ ತತ್ತ್ವಗ್ರಂಥದ ಕ್ಷೀರಶರಧಿಗೆ ಮಂಥಾ ವುನ್ನಂಥಾ ಮರುತನನುಗ್ರಹ ಪ್ರಗ್ರಹದಿಂದಲಿ ವರಮಥನದಿ ಇತ್ತೆ ಅಮೋಘವಸ್ತುಗಳೆಲ್ಲಾ4 ಉತ್ತಮ ಗ್ರಂಥವನಧೀ ಮಥನದಿ ಉತ್ತಮ ವಸ್ತುಗಳನಿತ್ತೆಯೊ ತತ್ತ್ವಪ್ರಕಾಶಿಕಾ ಮಹಾಲಕುಮಿಯು ಚಂದಿರನೇ ಪ್ರಮೇಯದೀಪಿಕಾ ಸುಧೆಯೇ ನ್ಯಾಯಸುಧಾಗ್ರಂಥ ಶ್ರೀ ಕೌಸ್ತುಭದಂತಿಹ ನ್ಯಾಯದೀಪಿಕಾ 5 ದುರುಳ ಮಾಯಾಖಂಡ ನಾಯುಧವೂ ಸರ್ವಜೀಯನೆ ಐರಾವತದಂತೆ ಋ ಗ್ಭಾಷ್ಯಟೀಕಾ ನ್ಯಾಯವಿವರಣವು ಉಚ್ಛೈಶ್ರವಸ್ಸು 6 ಕರ್ಮನಿರ್ಣಯ ಟೀಕಾ ವಜ್ರಾಯುಧ ಆ ಮಹಾಪಾರಿಜಾತ ವಿಖ್ಯಾತಾ ಶ್ರೀಮದ್ವಿಷ್ಣು ತತ್ತ್ವ ನಿರ್ಣಯ ಟೀಕೆಯು ಕಲ್ಪವು ಉಪನಿಷತ್ ಭಾಷ್ಯ ಟೀಕೆಯು 7 ಈಶಾವಾಸ್ಯ ಭಾಷ್ಯ ಟೀಕಾ ಸಂತಾನವೆಂಬೋ ಮಹಾವೃಕ್ಷಾ ಪ್ರ ಬಿಸಜ ಮಂದಾರ ಪ್ರಮಾಣ ಪದ್ಧÀ್ದತಿ ಹರಿಚಂದನಕೆ ಸಮನಾದ ವಾದಾವಳಿ 8 ಪಾಕಶಾಸನಾಂಶಾ ಕರುಣಿಸು ಶ್ರೀಕರಪದಪಾಂಸ ಯತೀಶಾ ನಾರ ಪತಿಯೆ ಶ್ರೀಕಾಗಿನೀ ತೀರದಿ ಏಕಾಂತದಿ ನಿಂದೆ ಲೋಕ ವಂದಿತ ದೇವಾ 9 ಮಂದಭಾಗ್ಯಜನರಾ ಪರಮಾ ನಂದದಿಂದಲಿ ನೋಡಿ ದಯಮಾಡಿ ತಂದೆಯಂದದಿ ಕಾಯ್ದಾನಂದವೀವೆ ನಿತ್ಯಾ10 ಪರಮಪಾತಕಿ ನಾನು ಗುರುವೆ ತವ ಪಾ ದ ರಕ್ಷಕವಚವ ತೊಡಿಸೊ ಉಳಿಸೋ ನಿರುತ ಶರಣರ ಕಾಯ್ವ ಶ್ರೀ ವೆಂಕಟೇಶನ ಪ್ರೀಯಾಉರಗಾದ್ರಿವಾಸವಿಠಲನ ದಾಸಾ 11
--------------
ಉರಗಾದ್ರಿವಾಸವಿಠಲದಾಸರು
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು
124-2ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಆರಣೀ ಸಜ್ಜನರ ಸೌಭಾಗ್ಯ ಏನೆಂಬೆಸೂರಿವರ ಸತ್ಯವರ್ಯ ಭಾವಿ ಸತ್ಯಪ್ರಿಯರಆರಾಧಿಸಿ ಕಳುಹಿಸಿದ ಸ್ವಲ್ಪ ಕಾಲದಲೆಆರಣಿಗೆ ಬಂದರು ಸತ್ಯವಿಜಯಾರ್ಯ 1ಸಂಸ್ಥಾನ ಮೂರ್ತಿಸ್ಥ ಹರೀಪೂಜೆ ವೈಭವವುನಿತ್ಯಪ್ರವಚನ ಪಾಠ ಕೀರ್ತನೆ ಏನೆಂಬೆಸತ್ಯವಿಜಯರು ಯುಕ್ತ ಕಾಲದಲಿ ದೇಹಅದಾರುಢ್ಯ ಹೊಂದಿದರು ರಾಜಗೆ ಹೇಳಿದರು 2ತಮ್ಮ ತರುವಾಯ ಸಂಸ್ಥಾನ ಸರ್ವಾಡಳಿತಶ್ರೀಮನೋಹರ ಹರಿಪ್ರಿಯರು ಸತ್ಯವರ್ಯಸುಮನೋಹರ ಸತ್ಯಪ್ರಿಯ ತೀರ್ಥ ನಾಮದಲಿರಮಾರಮಣನ ಸೇವೆಗೆ ವಹಿಸಬೇಕೆಂದು 3ಆದ ಕಾರಣ ಆ ಸ್ವಾಮಿಗಳ ಕರೆತರಿಸಿಭಕ್ತಿ ವಿನಯದಿ ಮಠವ ಒಪ್ಪಿಸಬೇಕೆಂದುಹಿತದಿ ಆಜ್ಞಾಪಿಸಿ ಹರಿಪುರಯೈದಿದರುಚೈತ್ರ ಕೃಷ್ಣ ಪುಣ್ಯದಿನ ಏಕಾದಶಿ ದ್ವಾದಶಿಲಿ 4ಆರಣೀರಾಜನು ಸತ್ಯವರ್ಯ ತೀರ್ಥರಲಿಅರಿಕೆ ಮಾಡಿ ಸ್ವಾಮಿಗಳು ಕೆಲವು ದಿನಮೇಲ್ಆರಣಿಗೆ ಪೋದರು ಶ್ರೀಮಠದ ಆಡಳಿತಹರಿಪ್ರೀತಿ ಸೇವೆಗೆ ಕೊಂಡರು ತಾವು5ಮೊದಲೇವೆ ಶ್ರೀ ಸತ್ಯವರ್ಯ ತೀರ್ಥರ ಮಠಸಂಸ್ಥಾನ ವೈಭವದಿ ಪ್ರಕಾಶಿಸುತ್ತಿತ್ತುಸತ್ಯ ವಿಜಯರ ಕೋರಿಕೆಯಂತೆ ಈವಾಗಹೊಂದಿದರು ಸತ್ಯವಿಜಯರ ಸಂಸ್ಥಾನ 6ಸತ್ಯಾಭಿನವರ ಪದ್ಧತಿಯಲ್ಲಿ ಶ್ರೀಮಠಸತ್ಯಪೂರ್ಣ ಸತ್ಯವಿಜಯರಿಂದ ವೈಭವದಿಇದ್ದ ಆಮಠ ಪೀಠ ಅಲಂಕರಿಸಿದರೀಗಸತ್ಯವರ್ಯ ವೈರಾಗ್ಯ ನಿಧಿಯು ಶ್ರೀಮಾನ್ 7ಬಾದರಾಯಣರಾಮ ಯದುಪತಿಯ ಸೇವೆಗೆಪ್ರೀತಿಗೆ ಸ್ವಾಮಿಗಳು ಮಠವನ್ನು ಹೊಂದಿಸತ್ಯವಿಜಯರು ಕೋರಿದಂತೆ ತಮ್ಮಯನಾಮಸತ್ಯಪ್ರಿಯತೀರ್ಥರೆಂದು ಕೊಂಡರು ಮುದದಿ 8ಧನ ಸತ್ಯಪ್ರಿಯ ತೀರ್ಥರುವಿಜೃಂಭಣೆಯಿಂದ ಚರಿಸಿ ಪುರಜನರ್ಗೂರಾಜನಿಗೂ ಫಲ ಮಂತ್ರಾಕ್ಷತೆಗಳ ಕೊಟ್ಟುರಾಜ ಮಾರ್ಯಾದೆ ಕೊಂಡುಹೊರಟರು ಅಲ್ಲಿಂದ 9ಆಂಧ್ರದೇಶದ ಕಡಪ ಉತ್ತರ ಕರ್ನಾಟಕಮತ್ತು ದಕ್ಷಿಣ ಕರ್ನಾಟಕ ಶ್ರೀರಂಗಇಂಥ ಸ್ಥಳಗಳಲ್ಲಿ ಸಂಚಾರ ಮಾಡುತ್ತಾಹಿತದಿ ಅನುಗ್ರಹಿಸಿದರು ಭಕ್ತವೃಂದಕ್ಕೆ 10ಪೀತಾಸಿಂಗ ರಾಘವಜಿ ಮುರಾರಿ ಮೊದಲಾದಕೃತಜÕ ಜನ ಪ್ರಮುಖರ ಭಕ್ತಿ ಯುತವಾದಭೂದಾನ ಗ್ರಾಮದಾನ ಮಾಡಿದ್ದ ಸ್ವೀಕರಿಸಿಶ್ರೀದನಿಗೆ ಅರ್ಪಿಸುತ ಒಲಿದರು ಸಜ್ಜನಕೆ 11ರಾಯಚೂರು ಹರಿಯಾಚಾರ್ಯರೆಂಬ ವೈಷ್ಣವಕಾಯವಾಙ್ಮನ ಇದ್ದ ಬ್ರಾಹ್ಮಣ ದಂಪತಿಯುಪ್ರಿಯ ವತ್ಸರುಗಳೊಡೆ ಸ್ವಾಮಿಗಳ ಕಡೆ ಬಂದುವಿನಯದಿ ನಮಿಸಿ ನಿಂತರು ಮಠದಲ್ಲಿ 12ಹರಿಯಾಚಾರ್ಯರ ಮಕ್ಕಳಲಿ ರಾಮಾರ್ಯಸ್ಫುರದ್ವರ್ಚಸ್ ಯುತ ಬಹುಚೂಟಿಯಾದ ಮಗನುಶ್ರೀ ಶ್ರೀಗಳು ಆ ಹುಡುಗಗೆ ಮಠದಲ್ಲಿಶಾಸ್ತ್ರಾಭ್ಯಾಸಾದಿಗಳ ಒದಗಿಸಿದರು 13ಕಾಲಕ್ರಮದಲ್ಲಿ ವಟುಗೆ ವಿವಾಹ ಮಾಡಿದರುಮಕ್ಕಳು ರಾಮಚಾರ್ಯರಿಗೆ ಎರಡುಮಾಲೋಲ ಇಚ್ಛೆಯಿಂ ಸ್ವಾಮಿಗಳು ದಕ್ಷಿಣಸ್ಥಳ ಯಾತ್ರೆ ಗೈದರು ಸೇತು ಸಮೀಪ 14ಮಾನಾಮಧುರೆಯ ವೇಗವತೀ ತೀರವುತನ್ನ ಮಠವನ್ನು ಸ್ಥಾಪಿಸಿದರು ಅಲ್ಲಿಘನಮಹಾ ಸೂರಿಯು ರಾಮಚಾರ್ಯರನ್ನತನ್ನ ಸಮೀಪದಲ್ಲೇ ನಿಲ್ಲಿಸಿದರು 15ಬಹು ವರ್ಷ ಸಂನ್ಯಾಸ ರತ್ನರಾಗಿ ಬೆಳಗಿವಹಿಸಿ ಸಂಸ್ಥಾನವ ಏಳು ವರ್ಷಶ್ರೀಹರಿಗೆ ಪ್ರಿಯರಾಮಾಚಾರ್ಯರಿಗೆ ಸಂನ್ಯಾಸವಿಹಿತದಿ ಇತ್ತರು ಶ್ರೀ ಸ್ವಾಮಿಗಳು 16ಸತ್ಯಪ್ರಿಯ ಗುರುವರ್ಯ ತಮ್ಮ ಪ್ರಿಯ ಶಿಷ್ಯರಿಗೆಸತ್ಯಬೋಧ ತೀರ್ಥವೆಂಬ ಸಂನ್ಯಾಸ ನಾಮವನ್ನಿತ್ತುಚೈತ್ರ ಶುದ್ಧ ಹದಿಮೂರನೆ ಪುಣ್ಯ ದಿನದಿಯದುಪತಿಯ ಧ್ಯಾನಿಸುತ ಹರಿಪುರಯೈದಿದರು 17ಮತ್ತೊಂದು ಅಂಶದಲಿ ಬೃಂದಾವನದಲ್ಲಿನಿಂತಿಹರು ಅಶ್ವಾಸ್ಯಧ್ಯಾನಪರರಾಗಿಹಿತದಿ ಕೊಡುತಿಹರು ವಾಂಛಿತವ ಶರಣರಿಗೆಸದಾನಮೋ ಮಾಂಪಾಹಿ ಗುರುವರ್ಯ ಶರಣು 18ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 19 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಥಮ ಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪಅಖಿಳಗುಣಆಧಾರ ನಿರ್ದೋಷ ಶ್ರೀರಮಣಜಗದಾದಿ ಮೂಲಗುರು ಅಗುರು ಶ್ರೀ ಹಂಸವಾಗೀಶಸನಕಾದಿ ದೂರ್ವಾಸಾದಿಗಳಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1ಪುರುಷೋತ್ತಮತೀರ್ಥಅಚ್ಯುತಪ್ರೇಕ್ಷರಿಗೆಪುರುಷೋತ್ತ ಮಾರ್ಯರಕರಕಮಲಜಾತವರವಾತಅವತಾರ ಆನಂದತೀರ್ಥರಚರಣಪದ್ಮದಲಿ ನಾ ಶರಣಾದೆ ಸತತ2ಶ್ರೀ ಮಧ್ವ ಆನಂದತೀರ್ಥಕರಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆನಮಿಪೆಶ್ರೀ ಮನೋಹರ ಪ್ರಿಯರು ಸಂತೈಪರೆಮ್ಮ 3ತ್ರೇತೆಯಲ್ಲಿ ಶ್ರೀ ರಾಮಚಂದ್ರನ್ನ ಸೇವಿಸಲುಸೀತಾ ಪ್ರತಿಕೃತಿಯಲ್ಲಿ ತಾಪೊಕ್ಕವಾತನ್ನೊಲಿಸಿಕೊಳ್ಳ ದವರ್ಗೆಹರಿಒಲಿಯಎಂದು ಜಗಕೆ ತೋರ್ದ ವಾಲಿಯೇ ಇಂದ್ರ 4ವಾತಾವತಾರ ಹನುಮಂತನೇ ದ್ವಾಪರದಿಕೌಂತೇಯ ಭೀಮನು ಅವನಿಗೆಅನುಜಇಂದ್ರ ಅರ್ಜುನನಾಗಿ ಸೇವಿಸಿ ಹನುಮಧ್ವಜಪಾದಮೂಲದಿ ಕುಳಿತ ಕೃಷ್ಣನು ಒಲಿದ5ಅಖಂಡೈಕ ಸಾರಾತ್ಮ ಅನಂತರೂಪಾಭಿನ್ನಶ್ರೀಕೃಷ್ಣ ರಾಮನೇ ಋಷಿವಂಶದಲ್ಲಿಈ ಕುವಲಯದಲ್ಲಿ ಪ್ರಾದುರ್ಭವಿಸಿದ ವ್ಯಾಸಅಕಳಂಕ ಸುಖಜಿತ್ವಪುಷಶ್ರೀಪತಿಯು6ಆಮ್ನಾಯತತಿಪುರಾಣಗಳು ಪೇಳ್ವಂತೆರಮೆಯರಸ ವ್ಯಾಸನ್ನ ಸೇವಿಸಲು ಇಳೆಯೋಳ್ಭೀಮನೇ ಯತಿ ರೂಪದಲ್ಲಿ ಬಂದಿಹನೆಂದುಸುಮನಸರಾಜ ಪುಟ್ಟಿದನು ಪುನಃ7ಹದಿನೆಂಟು ವರುಷಗಳು ಎತ್ತಾಗಿ ತಾನಿದ್ದುಹೊತ್ತು ಮಧ್ವಾಚಾರ್ಯರ ಪುಸ್ತಕಗಳಭಕ್ತಿಯಲಿ ಸೇವಿಸಿ ಮಧ್ವರಾಯರು ಪಾಠಬೋಧಿಸುವದು ಕೇಳ್ದ ವೃಷಭರಾಟ್ ಇಂದ್ರ 8ಆನಂದಪ್ರದ ತತ್ವಬೋಧಕ ಭಾಷ್ಯಾದಿಗಳಆನಂದ ಮುನಿಮಧ್ವ ಬೋಧಿಸಲು ಗ್ರಹಿಸಿವಿನಯದಿ ಕೇಳ್ದರು ಶಿಷ್ಯರು ಟೀಕೆಗಳಗ್ರಂಥಗಳಿಗೆ ಯಾರು ಮಾಡುವುದು ಎಂದು 9ಈ ಗೋರಾಜನೇ ಟೀಕೆಗಳ ಸಂರಚಿಸಿಜಗತ್ತಲ್ಲಿ ಸತ್ತತ್ವ ಶಾಸ್ತ್ರ ಪ್ರಕಟಿಸುವಹೀಗೆಂದು ಶ್ರೀ ಮಧ್ವಾಚಾರ್ಯರಾಜ್ಞಾಪಿಸಲುಮಿಗೆ ಹರುಷದಲಿ ಗೋರಾಟ್ ಶಿರವ ಬಾಗಿದನು 10ಯುಕ್ತ ಕಾಲದಿ ಈ ಗೋರಾಜ ನೇವೆರಘುನಾಥ ದೇಶಪಾಂಡೆ ರುಕ್ಮಾಬಾಯಿಗೆಮಗನಾಗಿ ಜನಿಸಿದನು ಮಂಗಳವೇಢೆಯಲಿಈ ಗ್ರಾಮ ಪಂಢರಪುರದ ಸಮೀಪ 11ಧೋಂಡುರಾಯನು ಎಂಬ ನಾಮದಲಿ ಬೆಳೆದಗಂಡಿಗೆ ಉಪನಯನ ಮದುವೆಯೂ ಆಯ್ತುಹೆಂಡತಿ ಭೀಮಾಬಾಯಿ ಸುಗುಣೆ ಸೌಂದರ್ಯವತಿಚಂಡ ಶ್ರೀಮಂತರ ಮನೆತನದವಳು 12ಒಂದುದಿನ ಧೋಂಡುರಾಯನು ನದೀ ದಡಕೆಬಂದನು ಕುದುರೆಯ ಮೇಲೇರಿಕೊಂಡುಅಂದು ಅಕ್ಷೋಭ್ಯ ಮಠ ಸಂಚಾರ ಕ್ರಮದಲ್ಲಿನಿಂತಿತ್ತು ಮೊಕ್ಕಾಮಾಗಿ ಆಚೆಕಟ್ಟೆಯಲಿ 13ನದೀತೀರ ಕುಳಿತಿದ್ದ ಅಕ್ಷೋಭ್ಯ ತೀರ್ಥರುಎದುರಾಗಿ ನದಿಯಲ್ಲಿ ಆಚೆದಡದಿಂದಕುದುರೆ ಸವಾರನು ವರ್ಚಸ್ವಿ ಯುವಕನುಬೆದರದೆ ಪ್ರವಾಹದಲಿ ಬರುವದು ನೋಡಿದರು 14ಕುದುರೆ ಮೇಲ್ ಅಸೀನನಾಗಿದ್ದ ಯುವಕನುಕ್ಷುತ್ತೃಷೆಶಮನಕ್ಕೆ ಯತ್ನ ಮಾಡುತ್ತಾಉದಕವ ಕೈಯಿಂದ ತುಂಬಿಕೊಳ್ಳದಲೇಎತ್ತಗಳು ಕುಡಿವಂತೆ ಬಾಯಿ ಹಚ್ಚಿದನು 15ಮಾಧವಮಧ್ವರು ಮೊದಲೇ ಸೂಚಿಸಿದಂತೆಇಂದುಆ ಕುರುಹ ಅರಿತು ಅಕ್ಷೋಭ್ಯರುಇದು ಏನು `ಪಶು' ವಂತೆ ಎಂದು ಧ್ವನಿಕೊಟ್ಟರುಹಿಂದಿನ ಜನ್ಮ ಧೊಂಡೋಗೆ ನೆನಪಾಯ್ತು 16ಪ್ರವಾಹದ ನಗಾರಿಯ ಸಮಬಲಿ ಧೋಂಡುವೇಗ ಲೆಕ್ಕಿಸದಲೇ ದಡಕೆ ತಾ ಬಂದುಮುಗಿದಕರಬಾಗಿ ಶಿರ ನಮಿಸಿ ಅಕ್ಷೋಭ್ಯರಆಗಲೇ ಸಂನ್ಯಾಸಕೊಡಲು ಬೇಡಿದನು 17ಗಾಧಿ ಅರ್ಜುನ ಸಮ ಬಲ ರೂಪದಲಿ ತೋರ್ಪಈತ ರಾಯರ ಸುತನಾದರೂ ವೈರಾಗ್ಯಯುತ ಭಕ್ತಿಮಾನ್ ಸುಶುಭ ಲಕ್ಷಣನೆಂದುಹರಿಮಧ್ವ ನಿಯಮಿತ ಅವಗೆ ಕೊಟ್ಟರು ಸಂನ್ಯಾಸ 18ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವಜಯ ಶೀಲ ಹೊಸಯತಿಗೆ ಇತ್ತು ಅಭಿಷೇಕಅಕ್ಷೋಭ್ಯಗುರು ಮಾಡೆ ಗಗನದಿ ಪೂವರ್ಷಜಯ ಷೋಷ ಹರಡಿತು ಪರಿಮಳ ಸುಗಂಧ 19ತಂದೆ ರಘುನಾಥರಾಯನು ಸುದ್ದಿಕೇಳಿಬಂದು ಅಕ್ಷೋಭ್ಯರ ಕಂಡು ಬಲುಕೋಪದಿಂದ ಯಾಕೆ ಸಂನ್ಯಾಸ ಯುವಕಗೆ ಕೊಟ್ಟಿರಿಎಂದು ವಾದಿಸಿದನು ಪುತ್ರ ಮೋಹದಲಿ 20ಪೂರ್ವಧೋಂಡುರಾಯ ಈಗ ಜಯತೀರ್ಥರುತಾವೇ ಸ್ವೇಚ್ಛೆಯಿಂದ ಕೊಂಡರು ಸಂನ್ಯಾಸಈ ವಿಷಯ ತಿಳಕೊಂಡರೂ ಸಹ ರಘುನಾಥಸೇವಕರ ಸಹ ಮಗನ ಕರಕೊಂಡು ಹೋದ 21ರಾಯನು ಮಗನನ್ನ ಗೃಹಸ್ಥ ಚರ್ಯದಲಿರಿಸೆಶಯನಗೃಹದೊಳು ಪತ್ನಿ ಸಹಿತ ಕಳುಹಿದನುಶಯನ ತಲ್ಪದಿ ದೊಡ್ಡ ಸರ್ಪಕಂಡಳು ಯುವತಿಭಯದಿಂದ ಹೊರಬಂದು ಹೇಳಿದಳು ವಿಷಯ 22ತನ್ನಪತಿಧೊಂಡರಾಯನ್ನ ತಲ್ಪದಲಿಕಾಣದೆ ಅವರಿದ್ದ ಸ್ಥಾನದಲಿ ಸರ್ಪಘನಧೀರ್ಘಗಾತ್ರವಿಸ್ತಾರ ಹೆಡೆಯಿಂದಮಿನುಗುತ್ತ ಕುಳಿತಿದ್ದ ವಿವರ ಪೇಳಿದಳು 23ರಘುನಾಥರಾಯನು ಹರಿಚಿತ್ತ ಇದು ಎಂದುಮಗನ ಪ್ರಭಾವವ ಅರಿತು ತ್ವರಿತದಲಿಅಕ್ಷೋಭ್ಯರಲಿ ಹೋಗಿ ಶಿಷ್ಯನ್ನ ಒಪ್ಪಿಸಿಬಾಗಿ ಶಿರ ಸನ್ನಮಿಸಿ ಕ್ಷಮೆಯ ಬೇಡಿದನು 24ವಂಶ ವೃಧ್ಧಿಗೆ ಮತ್ತೂ ಪುತ್ರಪುಟ್ಟವನೆಂದುದೇಶಪಾಂಡೆಯ ಅನುಗ್ರಹಿಸಿ ಕಳುಹಿಸಿದಶಪ್ರಮತಿ ಪೀಳಿಗೆಯೊಳು ಅಕ್ಷೋಭ್ಯಮುನಿಗ¼ Àುಶಿಷ್ಯ ಜಯತೀರ್ಥರಿಗೆ ಸ್ಥಾನ ನೇಮಿಸಿದರು 25ಶ್ರೀ ಮದ್ವಾಚಾರ್ಯರು ಬೋಧಿಸಿ ತೋರಿಸಿದಶ್ರೀ ರಮಾಪತಿ ಪೂಜಾ ಸತ್ತತ್ವವಾದದುರ್ಮತ ಖಂಡನದ ರೀತಿಯ ಜಯಾರ್ಯರಿಗೆಸಮ್ಮುದದಿ ಅರುಹಿದರು ಅಕ್ಷೋಭ್ಯ ಗುರುವು 26ಶಕ ವರುಷ ಹನ್ನೊಂದು ನೂರು ಅರವತ್ತೇಳುಮಾರ್ಗಶಿರ ಕೃಷ್ಣ ಪಂಚಮಿ ವಿಶ್ವಾವಸುವಲ್ಲಿಅಕ್ಷೋಭ್ಯ ತೀರ್ಥರ ಪೀಠ ಆರೋಹಿಸಿಶ್ರೀಕರಗೆ ಪ್ರೀತಿಕರ ಪಟ್ಟವಾಳಿದರು 27ದೇವತಾರ್ಚನೆ ಶಿಷ್ಯ ಉಪದೇಶ ಮಾಡುತ್ತದಿಗ್ವಿಜಯದಲಿ ದುರ್ವಾದಿಗಳ ಗೆದ್ದುಮಧ್ವಗ್ರಂಥಗಳಿಗೆ ಟೀಕೆಗಳ ರಚಿಸಿಪ್ರಖ್ಯಾತರಾದರು ಜಯತೀರ್ಥ ಆರ್ಯ 28ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನ ಕರುಣಿಜಯತೀರ್ಥಗುರುನಮೋಪಾಹಿ29|| ಪ್ರಥಮ ಕೀರ್ತನೆ ಸಮಾಪ್ತ ||ದ್ವಿತೀಯಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪನರಹರಿಯ ಮಹಾದುರ್ಗೆಯ ಕುರಿತು ತಪಸ್ ಆಚರಿಸಿವರವ ಪಡೆದಿಹರು ಈ ಜಯತೀರ್ಥ ಆರ್ಯಬರೆವುದಕೆ ಲೇಖನವು ಅಡಿಕೆಯುಅರದೂರದುರ್ಗೆಯು ಕೊಟ್ಟಿಹಳು ಇವರ್ಗೆ1ಎರಗೋಳದಲ್ಲಿದ್ದು ಶ್ರೀ ಮದಾಚಾರ್ಯರಪರಸುಖಪ್ರಮೂಲಗ್ರಂಥಗಳ ಟೀಕಾಬರೆದಿಹರು ಅನುಪಮ ಉತ್ತಮ ರೀತಿಯಲಿಭರದಿ ಓದುವವರೇ ಬಲ್ಲರು ಮಹಿಮೆ 2ಶ್ರೀ ಮಧ್ವಕೃತವು ಶ್ರೀ ಬ್ರಹ್ಮಸೂತ್ರಭಾಷ್ಯವುಆ ಮೂಲಗ್ರಂಥವು ಎರಡು ಸಾವಿರವುಆ ಮಹಾಭಾಷ್ಯಕ್ಕೆ ಟೀಕೆ ಅಷ್ಟ ಸಹಸ್ರವುಅಮ್ಮಮ್ಮ ಏನೆಂಬೆ ಈ ಮಹಾ ಕಾರ್ಯ 3ಅನುವ್ಯಾಖ್ಯಾನದ ನಾಲಕ್ಕು ಸಾವಿರಘನತರ ಗ್ರಂಥಕ್ಕೆ ಜಯತೀರ್ಥರಜ್ಞಾನಪ್ರದ ಅಜ್ಞಾನಗಿರಿವಜ್ರಟೀಕೆಯಗ್ರಂಥ ಇಪ್ಪತ್ತೆಂಟು ಸಾವಿರ ಸಂಖ್ಯಾ 4ಈ ನುಡಿ ಬರೆವಾಗ ಬಿಂದುಮಾಧವ ಪೇಳ್ದಘನ್ನ ಶುಭತರ ಮಧ್ವ ವಿಜಯದಲ್ಲಿಅನುವ್ಯಾಖ್ಯಾನದ ಟೀಕಾ ಸುಧಾ ಎಂದುಶ್ರೀ ನಾರಾಯಣಾಚಾರ್ಯ ಸೂಚಿಸಿಹರೆಂದು 5ತತ್ವ ಸಂಖ್ಯಾನಕ್ಕೂ ಕಥಾ ಲಕ್ಷಣಕ್ಕೂತತ್ವ ವಿವೇಕಕ್ಕೂ ಋಗ್ಬಾಷ್ಯಕ್ಕೂತತ್ವ ನಿರ್ಣಯಕ್ಕೂ ಪ್ರಮಾಣ ಲಕ್ಷಣಕ್ಕೂತತ್ವೋದ್ಯೋತಕ್ಕೂಕರ್ಮನಿರ್ಣಯಕ್ಕೂ6ಮಾಯಾವಾದಉಪಾಧಿಖಂಡನಗಳಿಗೂಮಿಥ್ಯಾತ್ವಾನುಮಾನ ಖಂಡನಕ್ಕೂನ್ಯಾಯ ವಿವರಣಕ್ಕೂ ಗೀತಾ ಭಾಷ್ಯಕ್ಕೂನ್ಯಾಯ ತೇಜೋಜ್ವಲ ಗೀತಾ ತಾತ್ವರ್ಯಕ್ಕೂ 7ಪಟ್ಟ್ರಶ್ನ ಈಶಾವಾಸ್ಯ ಭಾಷ್ಯಗಳಿಗೂಅಷ್ಟಾದಶ ಈ ಗ್ರಂಥಗಳಿಗೆಪಟು ಪಟೀಯಸವಾಗಿ ಟೀಕೆಯಾ ಬರೆದಿಹರುಇಷ್ಟೇ ಅಲ್ಲದೇ ಇನ್ನೂ ನಾಲ್ಕು ರಚಿಸಿಹರು 8ಪ್ರತ್ಯಕ್ಷ ಅನುಮಾನಆಗಮಪ್ರಮಾಣಗಳರೀತಿ ಲಕ್ಷಣ ಪೇಳ್ವ ಪ್ರಮಾಣ ಪದ್ಧತಿಯುಮಾಧವನ ಸರ್ವೋತ್ತಮ ಜಗತ್ ಸತ್ಯತ್ವಇಂಥಾದ್ದು ಸಾಧಿಸುವ ವಾದಾವಳಿಯು 9ತಂತ್ರಸಾರಪಾಂಚರಾತ್ರಾಗಮಾನುಸರಿಸಿಪದ್ಯಮಾಲಾನಾಮ ಗ್ರಂಥದಲ್ಲಿಶ್ರೀಧರ ಸರ್ವೋತ್ತಮಾರ್ಚನೆ ಬಗೆ ಪೇಳಿದರುಶತಾಪರಾಧ ಸ್ತೋತ್ರವು ಮಾಡಿಹರು 10ದಿಗ್ವಿಜಯ ಮಾಡಿ ಸಜ್ಜನರ ಉದ್ಧರಿಸುತ್ತಾದುರ್ವಿದ್ಯಾ ದುರ್ಮತಗಳನ್ನ ಛೇದಿಸುತಸುವೈದಿಕ ಮಧ್ವಸಿದ್ಧಾಂತ ಸ್ಥಾಪಿಸುತಭುವಿಯಲಿ ಪ್ರಖ್ಯಾತರಾದರು ಜಯಾರ್ಯ 11ಒಂದು ಸಮಯದಿ ವಿದ್ಯಾರಣ್ಯರು ಶ್ರೀಮಧ್ವಗ್ರಂಥ ಓದಿ ನೋಡಿ ಅರ್ಥವಾಗದಲೆಗ್ರಂಥಕ್ಕೆ ಜಯರಾಯರು ಬರೆದ ಟೀಕೆಯಓದಲು ಅರ್ಥವು ವಿಶದವಾಯ್ತು 12ಪೂರ್ವಾಪರ ಸಂಗತಿ ಮತ್ತು ವಾಕ್ಯಾರ್ಥಸರ್ವ ಪ್ರಕಾರದಲೂ ಉತ್ತಮವಾಗಿಹುದುಸರ್ವಜÕ ಮುನಿಗಳ ಗ್ರಂಥದ ಸರಿಯಾದಭಾವವ ವಿವರಿಸುವುದೆಂದು ಹೇಳಿದರು 13ಈ ರೀತಿ ವಿದ್ಯಾರಣ್ಯರು ಕೊಂಡಾಡಿಪುರಿ ರಾಜಬೀದಿಯಲಿ ಆನೆ ಅಂಬಾರಿಮೆರವಣಿಗೆ ಮಾಡಿಸಿ ಜಯಘೋಷ ಮಾಡುತ್ತಾಮರ್ಯಾದೆ ಮಾಡಿದರು ವಿಜಯನಗರದಲಿ 14ಮಧ್ವಗಂಥಗಳನ್ನು ಜಯಾರ್ಯ ಬರೆದಿರುವಉತ್ತಮ ಟೀಕೆಗಳ ಬಲು ಶ್ಲಾಘಿಸುತ್ತವಿದ್ಯಾರಣ್ಯರು ನಮಸ್ಕಾರ ಮಾಡಿದರುಎಂದು ಇತಿಹಾಸವ ಸುಜನರು ಪೇಳುವರು 15ಸ್ವಮತ ಪರಮತ ವಿದ್ವಜ್ಜನರಿಂದಈ ಮಹಾಮಹಿಮ ಟೀಕಾಚಾರ್ಯ ಆರ್ಯಈ ಮಹಿಯಲ್ಲಿ ಪ್ರಖ್ಯಾತ ಪೂಜಿತರಾಗಿತಮ್ಮ ಗುರುಕ್ಷೇತ್ರ ಮಳಖೇಡ ಸೇರಿದರು 16ಮಳಖೇಡ ಕ್ಷೇತ್ರದಲ್ಲಿ ಕಾಗಿನೀ ನದಿತೀರಮಾಲೋಲ ಪ್ರಿಯ ಅಕ್ಷೋಭ್ಯರ ವೃಂದಾವನಶೀಲತಮ ಜಯರಾಯ ಅಲ್ಲಿಯೇ ನಿಂತರುಅಳವೇ ವರ್ಣಿಸಲು ಈ ಮಹಾತ್ಮರ ಮಹಿಮೆ 17ಹನ್ನೊಂದು ತೊಂಭತ್ತು ಶಕವಿಭವಆಷಾಢಕೃಷ್ಣ ಪಂಚಮಿ ಪುಣ್ಯದಿನದಲ್ಲಿ ಇವರುತನ್ನ ಸೇವಾ ವಿಷ್ಣು ಮಧ್ವರಿಗೆ ಪೂರೈಸಿಶ್ರೀ ನಾರಾಯಣನಪಾದಸೇರಿದರು18ಮತ್ತೊಂದು ಅಂಶದಲ್ಲಿ ವೃಂದಾವನದಲ್ಲಿಇದ್ದು ಸೇವಿಸುವವರ್ಗೆ ವಾಂಛಿತವೀಯುತ್ತಮಧ್ವಸ್ಥ ಶ್ರೀ ಹರಿಯ ಧ್ಯಾನಿಸುತ ತಮ್ಮಗುರುಬದಿಯಲ್ಲಿ ಕುಳಿತಿಹರು ಸ್ಮರಿಸೆ ಪಾಲಿಪರು 19ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನಕರುಣಿ ಜಯತೀರ್ಥಗುರುನಮೋಪಾಹಿ20||ಇತಿ ಶ್ರೀ ಜಯತೀರ್ಥವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧರ್ಮಪುರಿ ಕ್ಷೇತ್ರ ಪರವಾಸುದೇವ ಸ್ತೋತ್ರ61ಶರಣು ಹೊಕ್ಕೆನೋ ನಿನ್ನ |ಪರವಾಸುದೇವನೇ ಪಾಲಿಸೆನ್ನಲಿ ಕೃಷ್ಣ |ಕರಿರಾಜವರದನೇ ಶರಣ ವತ್ಸಲ ಘನ್ನ |ಭಕ್ತಜನ ಪ್ರಸನ್ನ |ಉರುಗುಣಾರ್ಣವ ವೇದವೇದ್ಯನೆ |ಶಿರಿ ಕರಾಂಬುರುಹಾಚೀತಾಂಘ್ರಿ |ಸರೋಜವಿಧಿಶಿವಾದ್ಯಮರ ವಂದ್ಯನೆ ಸರ್ವಕರ್ತಾಶರಣುಹೊಕ್ಕೆನೋ ನಿನ್ನ|| ಪಮೀನಕೂರ್ಮವರಾಹ| ಚಿನ್ಮಾತ್ರವಪುಷವೀರಭದ್ರ ನೃಸಿಂಹ||ಬಲಿರಾಯಗೊಲಿದು ಕೆಡಹಿದೈತ್ಯ ಸಮೂಹ ||ದುಷ್ಟನೃಪರ ಸೀಳಿ ಬಿಸುಟು ಬ್ರಹ್ಮ | ಕುಲವರವಾಯು ಮಹಾರ್ಹಹನುಮಪ್ರಿಯರವಿ ಸುತ ವಿಭೀಷಣರಿಗೆ ನೀ ಅಭಯನೀಡಿ ಪಾಂಡು -ತನಯರು ದ್ರೌಪದೀ ವಿದುರಉದ್ಧವಇನ್ನುಬಹು ಸಜ್ಜನರಿಗೊಲಿದು ||ಜನಜನೆನಿಸಿದಿ ದೈತ್ಯಮೋಹಕ ಸುರಸುಬೋಧಕ ಬುದ್ಧಶರಣು |ಕ್ಷೋಣಿಯಲ್ಲಿ ಚೋರರಾಜರ ಸದೆದು -ಧರ್ಮಸ್ಥಾಪಿಸಿದಿ ಹೇ ಕಲ್ಕಿ ನಮೋ ನಮೋಪಾಹಿಸಂತತ1ಸರ್ವಗತ ಸರ್ವೇಶ | ಸರ್ವೇಶ್ವರನು ನೀನೇ ಕಾಲವಸ್ತುದೇಶ ||ಸರ್ವತ್ರಒಳಹೊರ ವ್ಯಾಪ್ತನಾಗಿಹ ಶ್ರೀಶ ||ಶ್ರೀತತ್ವ ನಿನ್ನಲಿ ಓತಪ್ರೋತಮಹೇಶ | ಅಕರನೇನಿರ್ದೋಷ ||ಸಚ್ಚಿತ್ ಸುಖಮಯ ಆತ್ಮಾಪ್ರೇದಕ್ಕೂ ಅಮಿತ ಸತ್ಕಲ್ಯಾಣಗುಣನಿಧೇ ||ಸರ್ವಜಗಚ್ಚೇಷ್ಟೆಯನು ಗೈಸುತಿ ಸ್ವಪ್ರಯೋಜನ ರಹಿತಸ್ವಾಮಿಯೇ |ಅಜಿತರುಚಿರಾಂಗದನೇ ಸ್ವಾಸ್ಯನೇ ಸರ್ವಭೂತಾಂತರಾತ್ಮನೇ ||ಅಚ್ಯುತನೇ ಸಂಪೂರ್ಣ ಕಾಮನೇ ಅತಿಜ್ಞಾನ ವೈರಾಗ್ಯ ಸಂಪತ್‍ದಾತಕರುಣಿ | ಗುರುವೇಂಕಟ || ಶರಣು || 2ಧರ್ಮಪುರಿಯಲ್ಲಿರುತ್ತಿ | ಶೇಷಶಯನನೇನಮೋ ಪರವಾಸುದೇವ ಪ್ರಮೋದಿ ||ಮದ್ದೋಷ ಕಳೆದು ಸದ್ಧರ್ಮದಲಿ ಇಡು ದಯದಿ |ವೃಷಾತಪಿಯೇ ಕಪಿತನಾಮಕನಮೋ ಆನಂದಿ ನಂದಾ ನಂದನ ನಂಹಿಜಗದಾಧಾರ ಶ್ರೀಕೂರ್ಮನಭ ಅರ್ಕಾದಿ ಧಾರಕ ಶಿಂಶುಮಾರನೇಸಾಗರವು ಭೂಮಿಯನು ನುಂಗದೇ ಹಿಂದೆ ಸೆಳೆದು ಧರೆಯರಕ್ಷಿಪ ||ಸಾಗರದಲ್ಲಿರುವ ವಡವಾವತ್ತಅಗ್ನಿನೀನು ಸವತ್ರ ಹರವು |ಮುಖ್ಯ ರಕ್ಷಕ ವೇಧತಾತ ಪ್ರಸನ್ನ ಶ್ರೀನಿವಾಸ ಶ್ರೀಪತಿಗರುಡಕೇತನಶರಣು ಹೊಕ್ಕೆನೋನಿನ್ನ 3
--------------
ಪ್ರಸನ್ನ ಶ್ರೀನಿವಾಸದಾಸರು