ಒಟ್ಟು 107 ಕಡೆಗಳಲ್ಲಿ , 30 ದಾಸರು , 101 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನ್ಯವನರಿಯೆನು ಮತ್ತೆಂದು ಅನ್ಯವ ಅರಿಯೆನುನಿನ್ನ ಕಾಂಬೆ ಕಂಡದನೆಲ್ಲ ನಿರ್ವಿಕಾರ ಬಗಳೆ ಕೇಳು ಪ ತನ್ನ ಹೆಂಡತಿಯನೀಗ ತನ್ನ ಸುತನು ರಮಿಸುತಿರಲುಭಿನ್ನದಿಂದ ಕಂಡೆನಾದರೆ ಮೆಚ್ಚಬೇಡಎನ್ನಲಿ ಇಚ್ಚೆ ಬೇಡ ಹೊನ್ನುರನ್ನವು ಮುಂದೆ ಇರಲು ಹರಿದುದಾದರೆಎನ್ನ ಚಿತ್ತ ನಿನ್ನ ಮೇಲೆ ಎನಗೆ ಆಣೆ ಸತ್ಯ-ವೆನ್ನು ಇದು ತಪ್ಪದೆನ್ನು 1 ಪಡೆದ ತಾಯಿ ತಾನು ಹೋಗಿಕಂಡವನ ಕೂಡುತಿರಲುಮಿಡುಕು ಹುಟ್ಟಿತಾದರೆ ನಾನು ಸತ್ಯ ಬಿಟ್ಟೆ-ನಾದರೆ ನೀನು ದೊರೆವುದೆಂತು ನಿನ್ನ ಕರುಣವೆಂತು2 ತಂದೆ ಕೆಡಹಿ ಕೊರಳನೀಗ ನಂದನನನು ಕೊರೆಯುತಿರಲುಎಂದೆನಾದರೆ ಮನದಿ ಇವನ ಜ್ಞಾನಿಯಲ್ಲವು ನಾನು ಏನು ಅಲ್ಲವುಸುಂದರವ ಚಿದಾನಂದ ಬಗಳೆ ಎಂದು ಕಾಣದಿರಲುಎಂದು ಎಂದಿಗೆ ನಿನ್ನ ಚರಣ ಭಕ್ತನಲ್ಲವುನಾನು ಮುಕ್ತನಲ್ಲವು 3
--------------
ಚಿದಾನಂದ ಅವಧೂತರು
ಇಂದಿರಾನಂದ ಉದಧಿವರ್ಧನನೆಂದು ಪ ಕಂದರ್ಪಕೋಟಿ ಲಾವಣ್ಯನಿಧಿ ಮನಪೊಂದು ಅ.ಪ ನಾನು ನನ್ನದು ಎಂಬ ಜ್ಞಾನ ಸಂತತಿಯಿಂದ ನಾನಾ ಯಾತನೆ ಭಾವ ಬಲೆಯ ಕಟ್ಟಿ ಹೀನಗೋಜಿಲಿ ಸಿಕ್ಕಿ ಬಲುನೊಂದೆ ಗೋವಿಂದ ನೀನು ನಿನ್ನದು ಎಂಬ ಅಮೃತಗಾನದಿ ನಿಲಿಸು 1 ದರ್ವಿಯಂದದಿ ನಾನು ನೀ ಸರ್ವ ಸ್ವಾತಂತ್ರ ನಿರ್ವಾಹ ನಿನ್ನಿಂದ ಸರ್ವ ಜಗಕೆ ದೂರ್ವ ಏರಿಸೆ ಸಕಲ ದುರಿತವಳಿಸಿ ಮುಕ್ತಿಸುಖ ತೋರ್ವಂಥ ಗುಣನಿಧಿ ಸರ್ವಾತ್ಮ ಹೊರೆ ಹೊರೆಯೊ 2 ನಿನ್ನ ದರುಶನ ಬಿಟ್ಟು ಅನ್ಯತ್ರ ನಿರ್ಭೀತಿ ಎನ್ನಲಿ ಎಂದೆಂದು ವೇದವೇದ್ಯ ನಿನ್ನ ದರುಶನ ಫಲಕೆ ನಿನ್ನ ಮಹಕರುಣ ಇನ್ನು ಕಾರಣದೇವ ಧನ್ಯರಲಿ ಇಡು ಎನ್ನ 3 ಮನೋವಿಕಾರಗಳೆಂಬ ದುಃಖಾರ್ಣದಿ ಬಿದ್ದು ಅನುಮಾನ ಮಾಡಿದೆನೊ ನಿನ್ನ ಅಮೃತ ತನುಧ್ಯಾನ ಮನಕಿಡಿಯದೇನುಗತಿ ಯದುವರ್ಯ ತೃಣಕೆ ಕೈವಲ್ಲೀವ ತ್ರ್ಯಧೀಶಮನಪೊಂದು 4 ಜ್ಞಾನಮನ ಬಿಡದಿರು ದೀನ ಬಾಂಧವ ಕೃಷ್ಣ ಇನ್ನು ಮಾಯವನು ತೆಗೆದೆನ್ನ ಬೆರೆಯೊ ಜ್ಞಾನನಿಧಿ ಜಯೇಶವಿಠಲನೆ ವಿಧಿವಂದ್ಯ ಪ್ರಾಣಾಧಾರಕ ಶುಕನ ಆನಂದನಿಧಿ ಪಾಹಿ 5
--------------
ಜಯೇಶವಿಠಲ
ಸರ್ವತಂತ್ರ ಸ್ವತಂತ್ರ | ನಿರ್ವಿಕಾರನೆ ದೇವ ಅವ್ವ ಲಕುಮಿಗು ಪ್ರೇರಕ ಪ ದುರ್ವಿಭಾವ್ಯನೆ ಜಗಕೆ | ದರ್ವಿ ಜೀವನ ಕಾವಹವಣೆ ನಿನದಲ್ಲೇ ಸ್ವಾಮಿ ಅ.ಪ. ಕಾಯ ರಕ್ಷಿಸಿದೇ 1 ಕಾಯ ವೈರಿ ಪತಿ ನೀನೆ | ಜಾಯೆಯಿಂದೊಡಗೂಡಿಗೇಯ ಸಂಕರುಷಣನೆ | ಆಯತನ ಪೊರೆದೇ 2 ಸಾಯಮಭಿಧಾನದ | ಸವನ ಮೂರಲಿ ದಿವ್ಯಗಾಯಿತ್ರಿ ದ್ವಯ ಮಾತೃಕಾ |ಆಯತನದೊಳಗಿದ್ದು | ಆದಿತ್ಯ ದೇವಕಿಂಆಯುರ್ಹವಿಷವ ಗೊಳ್ಳುತಾ |ಜೀಯ ನೀ ಪೊರೆಯುತಿರೆ | ಧಾತು ಸಪ್ತಕ ತನುವಧಾರ್ಯವಾಗಿಹುದೊ | ದ್ಯುಮ್ನ |ಗೇಯ ಗುರು ಗೋವಿಂದ | ವಿಠಲನೆ ತವ ಪದಕೆಕಾಯ ಇದನರ್ಪಿಸುವ | ದೇಯ ಕೊಡು ಸತತ 3
--------------
ಗುರುಗೋವಿಂದವಿಠಲರು
(ಊ) ಲೋಕನೀತಿಯ ಕೃತಿಗಳು ಕೆಟ್ಟಗುಣಗಳು ನರನ ಅಟ್ಟಿಕೆಡಹುತಲಿಹುವು ಭ್ರಷ್ಟನೆನಿಸದೆ ಬಿಡವು ಇವನ ಪ ಸೃಷ್ಟಿಯೊಳಗಿವುಗಳಿಂದೆಷ್ಟುಜನ ಕೆಟ್ಟಿಹರೋ ಕಟ್ಟುತ್ತ ಮುಸಲದಿಂ ಕುಟ್ಟುತಿಹುವೂ ಅ.ಪ ಸರಿಧರೆಯ ಸ್ತ್ರೀಯರಂ ಕಾಯಿಸಲು ನರತಾನು ಹರಿಯಿಂದ ಹತನಾಗಿ ಹೋದಾ ವರವಿಪ್ರನಲಿ ಕ್ರೋಧಮಾಡಿದ ಬಕಾಸುರನ ತರಿದನಲ್ಲವೆ ಭೀಮ ತಾನು 1 ದಾಯವನು ಲೋಭದಿಂ ಕೌರವನು ಪಾಂಡವರಿ ಗೀಯದುದಕವನೇನು ಪಡೆದಾ ರಾಯದಶರಥ ತನ್ನ ಸತಿಸುತರ ಮೋಹವಿರೆ ಆಯುವಿಂ ಗತನಾಗಿ ಹೋದಾ 2 ಜಮದಗ್ನಿಯ ಹೋಮಧೇನುವಂ ಮದದಿಂದೆ ಕಾರ್ತಿವೀರ್ಯಾರ್ಜುನನು ಕೊಳಲು ಅಮಿತಬಲನಾಪರಶುಧಾರಿಯು ತಾನು ಸಮರದೊಳೆ ಸವರುತ್ತ ಅವನ ಕಳೆದ3 ಕೃಷ್ಣನನು ಮತ್ಸರದಿ ಶಿಶುಪಾಲ ಬಯ್ಯಲು ವಿಷ್ಣುಚಕ್ರವು ಕೊಂದಿತವನ ಬಾಣ ತಾನೀರ್ಷೆಯಿಂ ಭವಗವಂತನಿದಿರೇಳೆ ಪ್ರಾಣವುಳಿಯುತ ನಾಲ್ಕು ತೋಳ್ಗಳಾಯ್ತು 4 ವಾಸುದೇವನ ಮೇಲಸೂಯೆಯಿಂ ಪೌಂಡ್ರಕ ವಾಸುದೇವನೊಳು ಅಳಿದ ಕಂಡ್ಯಾ ದೂಷಣೆಯು ಡಂಬಗಳು ನಾಶನವ ಗೈಯುವುವು ಈಶ ಸುಜನರಿಗಾಗಿ ಭಾವಿಸುವ ಜಗದೀ5 ದರ್ಪದಿಂ ದಶಶಿರನು ಮರೆಯುತ್ತಲಿರಲಾಗಿ ಅಪಹಾರಗೈದ ಶ್ರೀರಾಮ ತಲೆಯಾ ರಿಪುಗಳಾ ಮಧು ಕೈಟಭರ ಮಮತೆಯನು ಉಪಮೆಯಲ್ಲಿದು ಮಾಯಿ ಮುರಿದ ನೋಡಾ 6 ನಿರ್ವಿಕಾರನ ನೆನೆದು ಗರ್ವವರ್ಜಿತರಾಗಿ ಸರ್ವವೂ ಹೆಜ್ಜಾಜಿ ಕೇಶವಾ ಯೆಂದು ಪರ್ವತೋದ್ಧರನಲ್ಲಿ ಕರ್ಮಾರ್ಪಣೆಯ ಮಾಡಿ ಒರ್ವನೇ ಜಗದೀಶನೆಂದು ನಮಿಸೀ 7
--------------
ಶಾಮಶರ್ಮರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
ಅನಂತಪದ್ಮನಾಭ | ವಿಠ್ಠಲನೆ ನೀನಿವನಅನಂತ ಜನ್ಮದ ಪಾಪ | ಕಳೆದು ಸಲಹೋ ಪ ಗುಣಗಣಾರ್ಣವ ಸ್ವಾಮಿ | ಪೂರ್ಣಕರುಣೆಯೆಂದುನಿನಗೆ ನಾ ಬಿನ್ನೈಪೆ | ಸತತ ಹರಿಯೇ ಅ.ಪ. ಹಂಚಿ ದೈತ್ಯರಿಗೇ |ಸಂಚಿತಾಗಮ ಕಳೆವ | ಸಂಚುಗಳ ನೀ ತೋರಿವಾಂಛಿತಪ್ರದನಾಗೊ | ಅಂಚೆವಹ ಪಿತನೇ 1 ಭವ ತಾರಕವು | ನಾಮಸ್ಮøತಿಯೆಂಬಮೃತಯಾಮಯಾಮಕೆ ಉಣಿಸಿ | ರಾಮನೇ ಸಲಹೋ 2 ಮೂರೆರಡು ಭೇದಗಳು ತಾರತಮ್ಯ ವನರುಹಿಸಾರತಮ ನೀನೆಂಬ | ಸುಜ್ಞಾನವೀಯೋ |ಕಾರಣಿಕ ಶ್ರೀಹರಿಯೆ | ವೈರಾಗ್ಯ ಧನದಿ ಸಂಸಾರ ನಿಸ್ಸಾರೆಂಬ | ಸನ್ಮತಿಯ ನೀಯೋ 3 ದಾಸನಿವನೆಂದೆನುತ | ನೀ ಸಲಹ ಬೇಕಿವನಈಶಾದಿ ದಿವಿಜೇಡ್ಯ | ಶೇಷಶಾಯೀಕ್ಲೇಶ ಆನಂದಗಳು | ಶ್ರೀಶ ನಿನ್ನಿಂದೆಂಬಈಸು ಸನ್ಮತಿ ಕೊಟ್ಟು | ನೀ ಸಲಹಬೇಕೊ4 ಸರ್ವವ್ಯಾಪ್ತ ಸ್ವಾಮಿ | ನಿರ್ವಿಕಾರನೆ ದೇವಸರ್ವಜ್ಞ ನೀನಿರಲು | ನಾ ಪೇಳ್ವುದೇನೋದರ್ವಿ ಜೀವನ ಕಾವ | ಸರ್ವಭಾರವು ನಿಂದುಸರ್ವ ಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅರಿ ನಿನ್ನ ನಿಜವಾ ಆನಂದಘನವಾ ಚೈತನ್ಯದಿರವಾ ಮರಣರಹಿತವಾ ಆತ್ಮಾನುಭವ ಪ ಮನವಾಣಿ ಮೀರಿ ತನು ಮೂರ ಮೀರಿ ಕಲ್ಪನ ತೀರೀ ತಾ ನಿರ್ವಿಕಾರಿ ಅದೇ ನೀನು ತಿಳಿಯೈ ಇದು ನೀನಲ್ಲ 1 ಜಗವಿದು ಕನಸೋ ಪುಸಿಯೆಂದೆಣೆಸೋ ಮನದಿ ವಿವೇಕವ ಮಾಡಿ ನಿಶ್ಚಯಿಸೋ ಶಂಕರಬೋಧಾ ಇದುವೇ ಮೋದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಇದÉೀ ಸೌಖ್ಯ ತಾಣ ತಿಳೀ ನೀನೆ ಜಾಣಾ ಪ ಶರೀರಾದಿ ಸಂಘಾತವೆಲ್ಲ ವಿಕಾರಿ ಬರೀ ತೋರಿಕೆ ಸ್ವಪ್ನವೇ ಕೇಳ್ ವಿಚಾರಿ ಅರೀ ನೀ ಸ್ವರೂಪಾ ಶರೀರಾದಿ ಭಿನ್ನ 1 ಸದಾ ನಿರ್ವಿಕಾರ ಪರಾನಂದಸಾರ ಜಾಗರ ಸ್ವಪ್ನ ನಿದ್ರಾದಿ ದೂರ ಅದೇ ನೀ ಇದೇ ಕೇಳ್ ಸ್ವರೂಪಾತ್ಮಜ್ಞಾನ 2 ತಿಳೀ ನಿನ್ನ ನೀ ಈ ವಿಚಾರಾಕ್ಷಿಯಿಂದೆ ಇದೇ ಮೋಕ್ಷವೆಂದ ಸ್ವರೂಪಾನಂದ ಇದೇ ಶಂಕರಾರ್ಯಾ ನಿಜಾನಂದವೆಂದ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ನೋಡು ನಿನ್ನ ನಿಜವಾದ ಸ್ವರೂಪ ಜೀವ ಇದೇ ಸಕಲ ಜಗದ ಕಾರಣಾ ಬ್ರಹ್ಮ ಪೂರಣ ಪ ಅನಿಸುವಿಕೆಯು ಇಲ್ಲದಿರುವಾ ತೋರಿಕಿಲ್ಲದಾ ಬರಿ ಇರವಿದೇ ಮನಸಿಲ್ಲದೆ ಬೆಳಗುತಿರುವ ನಿದ್ರೆಹೊದ್ದದಾ ಬರಿ ಅರಿವಿದೆ ಘನ ನಿರಾಕಾರವೇ 1 ವಿಷಯಜನಿತ ದುಃಖಸುಖದ ಸುಳಿವು ತೋರದ ಘನಾನಂದವೇ ಶೇಷ ಮಾತ್ರನಾಗಿ ಸದಾ ಶಾಂತಿರೂಪದ ನಿರ್ವಿಕಾರ ನೀ ಹಸನಾಗಿ ತಿಳಿದುಕೊಳ್ಳು ಬೋಧವಾ ನೀನದೆ ಎಂಬುದ ಈ ಸತ್ಯಸ್ವರೂಪವೇ 2 ಸ್ವರೂಪಾತ್ಮ ಮಾತ್ರ ಪರಮಸತ್ಯನಾಗಿಹ ನಿತ್ಯನಾಗಿಹ ಬರೀ ತೋರಿ ಅಡಗುತಿರುವ ಜಗವು ಭ್ರಾಮಕಾ ಮಿಥ್ಯಾಭಾಸಕ ಗುರುವರ್ಯ ಶಂಕರಾತ್ಮಬೋಧನಾವೇದಾಂತಸಾರವಾ ಪರಮಾತ್ಮ ಜ್ಞಾನವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಪುರುಷಾರ್ಥ ಮನಜ ಪರಮಾತ್ಮ ಪಡೆವುದಿದು ವೇದಾರ್ಥ ಇದನ್ನು ಬಿಸುಟಿನ್ನು ಬಾಳುವೆ ಬದುಕನ್ನು ಮಾಡುವುದಿದುದೇ ವ್ಯರ್ಥ S ದೇಹವಿರುವಾಗಲೇ ಪೂರ್ಣಪದನಾ ದೊರಕಿಪನೆ ಜಾಣ ಮೋಹಮಾಯಾವಿಕಾರವ ದಾಂಟಿ ಪೋಗುವನೆ ಜಾಣ ಸಾಹಸದಿ ಈ ಸಾವನು ನೀಗೀ ಮೋದಿಸುವ ಜಾಣ ಉಳಿದ ನರ ಕೋಣ ಅವನಿಯುಳು ಪ್ರಾಣ ತಳೆದಿರುವುದೇ ವ್ಯರ್ಥ ತನ್ನ ಒಳಗಿರ್ವ ಸಂಪೂರ್ಣ ಸುಖತಾ ಅರಿಯುವನೆ ಜಾಣ ಭಿನ್ನವಾಗಿರ್ಧ ತೋರಿಕೆ ಇದನಾ ಭಾದಿಸುವ ಜಾಣ ಮುನ್ನ ಸುಖದುಃಖಗಳನ್ನು ನೀಗಿ ನಿಲ್ಲುವನೆ ಜಾಣ ಇವನೇ ಗುರುನಾಥಾ ಶಂಕರ ಭಗವಂತಾಪೇಳಿದ ನುಡಿ ವೇದಾರ್ಥ
--------------
ಶಂಕರಭಟ್ಟ ಅಗ್ನಿಹೋತ್ರಿ
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಈ ಮಹಿಮೆಗೆ ಏನೆನಬಹುದು ಧ್ರುವ ರೂಪವಿಲ್ಲದೆ ರೂಪಾಗಿ ರೂಪಕ ಅರೂಪನಾದ ಅಪಾ ಮೂರು ಲೋಕಕ ಚಿದ್ರೂಪನಾದ ಮೂರ್ತಿಗೆ 1 ಸರ್ವರೊಳು ಸಾಕ್ಷವಾಗಿ ನಿರ್ವಿಕಲ್ಪ ನಿರ್ಗುಣಿ ತಾ ನಿರ್ವಿಕಾರನಾದ ನಿರ್ಭರ ನಿರ್ವಿಶೇಷಗೆ 2 ಭಾವಕ ಸ್ವಭಾವನಾದ ಪವಿತ್ರಪಾವನನೀತ ಭವನಾಶಗೈಸಿದ ಮಹಿಪತಿ ಗುರುಮೂರ್ತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿ ನೋಡಿದರು ಹಾನಂತೆ ಹರಿ ಎಲ್ಲ ಜಗವ ತುಂಬಿಹನಂತೆ ಪ ಮಣ್ಣುಮುಳ್ಳು ಎಲ್ಲ ಬಿಡದೆ ಸೋಸಿಲಿನೋಡಲಲ್ಹಾನಂತೆ ಅ.ಪ ಸಾಗರ ನಿಲಯ ತಾನಂತೆ ಕೂಗಲು ಕಂಬಂದಿ ಬಂದನಂತೆ ನಾಗಶಾಯಿದ್ದ್ವೊಯ್ಕುಂಠಂತೆ ಬೇಗನೆ ಸರಸಿಯಲ್ಲಿದ್ದನಂತೆ ನೀಗಿ ಚಂಚಲಮನ ಬಾಗಿ ವಿಚಾರಿಸಲು ಯೋಗಿ ವಂದ್ಯ ಎಲ್ಲಿಲ್ಲಂತೇ 1 ದ್ವಾರಕಾಪುರದಲ್ಲಿ ಮನೆಯಂತ ಕ್ರೂರನ ಸಭೆಗೊದಗಿದನಂತೆ ಸಾರನಿಗಮಕಗೋಚರನಂತೆ ಪೋರಗೆ ದೊರೆತ್ವವಿತ್ತನಂತೆ ಸಾರಮನದ ವಿಕಾರವಳಿದು ತಿಳಿ ಅ ಪಾರಮಹಿಮ ಯಾರೆಲ್ಲಂತೇ 2 ಘೋರರಕ್ಕಸ ಸಂಹರನಂತೆ ಸೇರಿಭಕ್ತರ ಸಲಹುವನಂತೆ ಮೂರು ಲೋಕಗಳ ದೊರೆಯಂತೆ ಸಾರಥಿತನ ಮಾಡಿದನಂತೆ ಮೂರುಲೋಕದ ಧಣಿ ಓರ್ವ ಶ್ರೀರಾಮನೆ ಆರಾಧಿಪರಲ್ಲಿ ಹಾನಂತೆ 3
--------------
ರಾಮದಾಸರು
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ