ಒಟ್ಟು 10 ಕಡೆಗಳಲ್ಲಿ , 7 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉತ್ತರಾದಿಯ ಮಠದ ಪೀಠವಾಸಾ ಪ ಸತ್ಯಧರ್ಮಾಖ್ಯ ಯತಿ ಭಕ್ತ ಜನ ಪೋಷಾ ಅ.ಪ. ಪಂಚಮುಖ ಪ್ರಾಣನೂಪಾಸಕನೆ ಎನ್ನವಂಚಿಸದೆ ಭವದೊಳಗೆ ಕಾಯೊ ಬೇಗಾ |ಸಂಚಿತವ ಪರಿಹರಿಸೊ ವಾಂಛಿತಾರ್ಥದ ಹರಿಯಮಂಚ ಪದ ಯೋಗ್ಯಾಂಶ ಸಂಭೂತ ಯತಿಯೇ 1 ಭದ್ರೆ ತೀರದಿ ವಾಸ ಭವದುಪದ್ರವ ಕಳೆಯೊಕಾದ್ರ ವೇಯನ ಪದವು ಭದ್ರ ನಿನಗೇ |ಮಾದ್ರ ವೇಯಾಗ್ರಜಗೆ ವಲಿದಿತ್ತೆ ಅಸ್ತ್ರವನುರೌದ್ರ ಮೂರುತಿ ಕಾಯೋ ಗುರು ವರೇಣ್ಯಾ 2 ಭಾಗವತ ವ್ಯಾಖ್ಯಾ |ಸಜ್ಜನೋದ್ಧಾರಿಯನ್ನ ಜ್ಞಾನ ಪರಿಹರಿಸಿವಿಜ್ಞಾನಮಯ ಹರಿಯ ತೋರೈಯ್ಯ ಜೀಯಾ 3 ಸತ್ಯವರ ಕರಜಾತ ಶ್ರೀ ಸತ್ಯ ಧರ್ಮಾಖ್ಯನಿತ್ಯ ತವ ಸಚ್ಚರಣ ಸ್ತುತಿಪ ಜನರಾ |ಅತ್ಯಧಿಕ ಪ್ರೀತಿಯಲಿ ಹತ್ತಿರಕೆ ಕರೆಯುತ್ತಸತ್ಯ ಮೂರುತಿ ಪುರಕೆ ಎತ್ತೊಯಿವ ಗುರುವೇ4 ವತ್ಸರ ಸುವಿಕೃತವು ಅಸಿತ ಶ್ರಾವಣದಲ್ಲಿಮತ್ಸ್ಯಾದಿ ದಶ ಮತ್ತೆ ಮೂರನೆಯ ದಿನದೀ |ವತ್ಸಾರಿ ಶ್ರೀ ಗುರು ಗೋವಿಂದ ವಿಠ್ಠಲನಹೃತ್ಸರೋಜದಿ ಭಜಿಸಿ ತನುವ ತ್ಯಜಿಸಿದನೇ 5
--------------
ಗುರುಗೋವಿಂದವಿಠಲರು
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಪಂಚಾಂಗವನು ಪಾದಪದ್ಮಕೊಪ್ಪಿಸುವೆಪಂಚೇದ್ರಿಯಂಗಳನು ಪಾಲಿಸುವ ವಿಭುವೇ ಪಮೂರು ಗುಣಯುಕ್ತದಲಿ ಮೂಡುವಿಂದ್ರಿಯವೈದುಮೂರು ಮಡಿಯೆನೆ ಪಕ್ಷ ಮೊದಲು ಬಹುದುತೋರೆ ಸತ್ಫಲ ಶುಕ್ಲ ತಾಮಸದಿ ಕೃಷ್ಣವದುಈ ರೀತಿುಂ ಪಕ್ಷವೆರಡೆ ತಿಥಿಯಹುದೂ 1ಪ್ರಕೃತಿಯಹಂಕಾರಗಳು ಪಂಚ ಮಹಭೂತಗಳುವಿಕೃತಿುಂದಿವೆಯೇಳು ವಾರಂಗಳುಸುಕೃತ ದುಷ್ಕøತಗಳಿಗೆ ಸದ್ಮವಹ ತತ್ವಗಳುಪ್ರಕೃತಿಗುಣ ಮೂರು ಸಹ ಪೊಳೆವ ತಾರೆಗಳು 2ಈ ತತ್ವ ಕರ್ಮಗಳಿಗೆಡೆಯಾಗೆ ಯೋಗಗಳುವೋತು ತಿರುಗುವ ಕರಣವವು ಮನಗಳುಪ್ರೀತಿುಂ ತಿರುಪತಿಯ ಪತಿ ನೀನು ನಿರ್ಮಿಸಲುಸೋತಿಹವು ವೆಂಕಟನೆ ಸುಖದಿ ಲಾಲಿಸಲು 3ಓಂ ತೃಣೀಕೃತ ತೃಣೇವರ್ತಾಯ ನಮಃ
--------------
ತಿಮ್ಮಪ್ಪದಾಸರು
ಪಾಲಿಸೋ ಫಂಡರಿಪುರಾಯಾ ಪಾವನ ಕಾಯಾ ಪ ಶ್ಲೋಕÀ : ತರುಣ ತುಲಸಿಮಾಲಾ ತಪ್ತಗಾಂಗೇಯ ಚೇಲಾ ಶರಧಿ ತನಯಲೋಲಾ ಶಕ್ವರೀಕಾರಿ ಫಾಲ ಶಿರಿ ಅಜಭವ ಮೂಲಾ ಶುದ್ಧ ಕಾರುಣ್ಯ ಲೀಲಾ ವೈಜಯಂತಿ ಮಾಲಾ ಕುಂಡಲ ಕೇಯೂರ ಕೌಸ್ತ್ತುಭ ಲೋಕದಿ ವ್ಯಾಪ್ತಾ ದೋಷ ಸಿರ್ಲಿಪ್ತ ದೇವರ ದೇವಾ ಧರುಮಾದ್ಯರ ಭಾವಾ 1 ಅಮಿತ ಸುಗುಣಧಾಮಾ ಆತ್ಮಭೂಪೂರ್ಣ ರಾಮಾ ಅಮರಕುಲಲಲಾಮ ಅಬ್ಜಧಾಮಾಭಿರಾಮಾ ಯಮಿಕುಲೋದಧಿ ಸೋಮ ಯಜ್ಞ ಭೃದ್ಯಜ್ಞ ನಾಮಾ ಕರ್ಮ ಸಂರಕ್ಷಿತ ಸರ್ವ ಲೋಕಾ ವಿತತ ಮಹಿಮ ವಿಶ್ವನಾಟಕ ವತ್ಪ್ರ ಘೋಟಕಾ ಶೋ ನಳಿನ ಜಾಂಡೋದರಾ ಸರ್ವರಾಧಾರಾ ಸಂತತ ನಿರ್ವಿಕಾರಾ ಮತಿ ಮಂದನಾಗಿ ನಿನ್ನನು ಬಿಟ್ಟೆ ಮ ಬಟ್ಟೆ 2 ಶ್ಲೋಕ : ಜನನ ಮರಣ ದೂರ ಜಂಗಮಾಚಾg ವಿಹಾರಾ ದನುಜವನ ಕುಠಾರಾ ದೀನಮಂದಾರ ಧೀರಾ ಪ್ರಣತ ಭಯ ವಿಹಾರಾ ಪ್ರಾಕೃತಾತೀತ ಸಾರಾ ದಿನಪನಿಭ ಶರೀರಾ ದುಃಖವಾರಿಹ ಸಮೀರಾ 3 ವನಧಿ ಜಿತಾಸುರಯೂಥ ನಿರ್ಮಲ ಶ್ರುತಿಗಾಥಾ ಎನ್ನ ಸಂತತ ಸಂಪ್ರಸನ್ನಾ ಜೀಯ ಕರಣಾದಿ ಪಿಡಿಕಯ್ಯಾ ಗೋಪಕುಮಾರಾ 3 ಕಮಠ ಕೋಲಾ ಶತ್ರುಕಾಶ್ಯಪಿಬಾಲಾ ನೃಪಕುಲ ಈರವಾಳಾ ನೀಲಕಂಠಾಸ್ತ್ರಕಾಲಾ ದ್ರುಪದತನಯ ಪಾಲಾ ದುರವರ್ಜಿತದುಕುಲಾ ನಿರ್ಮಲ ಓಂಕಾರಾ ಪರಮ ಪ್ರೀಯ ಜಾಮಿ ಕಳೆದ್ಯೊ ತಾಪವಾ 4 ಶ್ಲೋಕ : ನಗಧರ ನಳಿನಾಕ್ಷ ನಾಕನಾಥಾದ್ಯ ಪಕ್ಷ ನೃಗ ನಗಪತಿ ಶಾಪಾ ನಿರ್ವಹಕಾರ ಶ್ರೀಪಾ ಭೃಗು ಮುನಿಗೇಯಾ ಭೂತನಾಥ ಸಹಾಯ ಅಗಣಿತ ಅಹಿತರನಳುಹಿದಾ ತೋರಿದೆ ಸತ್ಪುತ್ರರಾ ವಒತ್ತಿ ಕುಂತಿನಂದನಾ ಖಂಡ್ರಿಸಿದ್ಯೊ ಕೃಪಾಳು 5 ಶ್ಲೋಕ :ಶುಭತಮ ಸುಖತೀರ್ಥಾರಾಧ್ಯ ಸದ್ದಾನಪಾತ್ರಾ ಇಭವರರಿಪು ಹತಾನ ವಿಶ್ವಜನ್ಮಾವಿಕರ್ತಾ ಯುಗ್ಮ ಪ್ರಸಾದಾ ತರುಜನ್ಮ ವಿದೂರಾ ನಿರ್ಗುಣ ನಿರಂಜನಾ ಗೋಪರೊಡಗೂಡಿ ಮೆದ್ದೆ ತೋರಿದೆ ದಯಸಿಂಧೂ 6 ಶ್ಲೋಕ :ಅತಿವಮಲಸುಗಾತ್ರ ಅಖಿಳಲೋಕೈಕ ಪಾತ್ರಾ ಷತತಿಜದಳನೇತ್ರಾ ವೃತ್ತಹಾದ್ಯ ಮರಮಿತ್ರಾ ಶ್ರುತಿಕಮಂಜ ಸೂತ್ರಾ ಸ್ತುತ್ಯ ಪಾವನ ಪವಿತ್ರಾ ಕಳತ್ರ ನಿನ್ನಯ ದಿವ್ಯ ಖ್ಯಾತಿ ಈ ನಿತ್ಯ ಸುಖಿಸೋರು ಆನಂದಾಬ್ಧಿ ಸದ್ಗತರೋ ಮಾನವ ಜನಕ್ಲೇಶ ಭಂಜನಾ ಭಾಷಾ ಎನ್ನಯ ಅಭಿಲಾಷಾ 7 ಶ್ಲೋಕ :ವನರುಹಭವತಾತಾ ವೀತ ತನ್ಮಾತ್ರಭುತ ದ್ಯುನದಿ ಜಲವಿಧೂತ ದಿವ್ಯ ಪಾದಾಂಬುಜಾತಾ ಅನಿಲತನಯ ಪ್ರೀತಾ ಅತ್ರಿಸದ್ವಂಶಜಾತಾ ಅನಿಮಿಷಜಯಸೂತಾ ಆನತೇಷ್ಟಪ್ರದಾತಾ ಮಂಗಳಶ್ರೇಣಿ ಲೋಕೈಕಸತ್ರಾಣಿ ಶರಣು ಹೊಕ್ಕರ ಕಾಯುವ ಛಲದಂಕಾ ಕಾಳಿಂಗನ ಬಿಂಕಾ ಬಿಡಿಸಿದ್ಯೊ ನಿಷ್ಕಳಂಕಾ ಮುರ ದಂತವಕ್ತ್ರಾದ್ಯರ ಹಿಂಸಾ ಬಿಡಿಸಿದೆಯೋ ಓಜಿಷ್ಠಾ 8 ಶ್ಲೋಕ :ಹನುಮನತ ಪಾದಾಬ್ಜಹಂಸ ಸಂವಕ್ತ್ರುಕುಬ್ಜಾ ತನುವಿಕೃತ ವಿನಾಶಂ ಕಾಳಿ ಜಿಹ್ವಾಶುದೇಶಂ ದನುಜವಿಕರಾಳ ಮತ್ತೆ ಪೌಂಡ್ರೇ ಶೃಗಾಲಂ ಮೋದ ಸುಪದ ಮೂರುತಿಯನ್ನು ತೋರು ಮಾತಾ ಲಾಲಿಸು ಜಗನ್ನಾಥ ನಿನ್ನವರಿಗೀಯೋ ಶ್ರೀಶಾ 9
--------------
ಜಗನ್ನಾಥದಾಸರು
ಮಗನೆಂದೆಂಬುವ ಇನ್ನು ಮತ್ತಾವನೊ ಜಗದೊಳಗೆ ನಿನ್ನ ವಿನಾ ಕಾಣೆಯೆಲ್ಲಿ ಪ ರಕ್ತ ಶುಕ್ಲ ಮಿಶ್ರವಾದ ಸಮ್ಮಂಧ ವಿಷ_ ಭುಕ್ತನಾಗಿದ್ದ ಸಂಸಾರದೊಳಗಾ ಸಕ್ತತನದಲಿ ಇಪ್ಪ ಎಂದಿಗೆಂದಿಗೆ ಇವನು ಮುಕ್ತಿ ಕೊಡುವನೇನೊ ಮುಂದೊಲಿದು ಕೊಂಡಾಡೆ1 ಪ್ರಕೃತಿ ಬದ್ಧನಾಗಿ ನಾನಾ ಜನುಮಗಳಲ್ಲಿ ವಿಕೃತಿಯ ಮಾಡುವ ಮದದಿಂದಲೀ ಸುಕೃತವನು ಮರೆದು ದೂರಾಗಿ ಸಂಚರಿಸುವ- ನುಕ್ರ ಮವಂದುಮಾಸ ಜನತೆ ಕ್ಯೆಡೆಯಿರದವ 2 ಪುತ್ರ ಉಳ್ಳರೆ ಅವಗೆ ಕಂಡಕಡೆ ತಿರುಗಿ ಉ- ನ್ಮತ್ತನಾಗಿ ಕೆಟ್ಟ ಗ್ರಾಸವನ್ನು ಹೊತ್ತಹೊತ್ತಿಗೆ ತಂದು ಹಾಕಬೇಕು ಸಾಕಿ ನಿತ್ಯದಲ್ಲಿ ಅವಗಾಗಿ ಕ್ಲೇಶಬಡಲಿ ಬೇಕು 3 ನಾಡೊಳಗೆ ನೀನೆ ಮಗನೆಂದವನ ಭಾಗ್ಯಕ್ಕೆ ಈಡುಗಾಣೆನು ಎಲ್ಲಿ ವಿಚಾರಿಸೆ ಕಾಡಿ ಬೇಡುವೆ ಮುನ್ನೆ ಪರಿಪರಿಬಾಧೆಬಡಿಸಿ ಕೂಡಿರುವೆ ಮುಕ್ತರೊಳು ಮುಕ್ತಿಗಳವಲ್ಲಿದೊ 4 ನಿನ್ನಂಥ ಮಗನ ಪಡದಮ್ಯಾಲೆ ಎನಗೆ ಅನ್ಯಚಿಂತೆಗಳಿಲ್ಲ ಚಿಂತಾಮಣೀ ಘನ್ನಮೂರುತಿ ನಮ್ಮ ವಿಜಯವಿಠ್ಠಲರೇಯ ಅನಂತಕಾಲಕ್ಕೆ ವಹಿಸುವ ದೇವ 5
--------------
ವಿಜಯದಾಸ
ಮಲ್ಲಮರ್ಧನ ರಾಣಿ - ಮಹ ಲಕ್ಷುಮೀ ಪ ಖುಲ್ಲ ಜನರೆದೆದಲ್ಲಣೆಯೆ | ಕೊಲ್ಲಾಪುರ ನಿಲಯೆ ಅ.ಪ. ಪ್ರಕೃತಿ ಚೇತಾತ್ಮೆ ಜಡ | ಪ್ರಕೃತಿ ದ್ರವ್ಯದ ಕಾರ್ಯವಿಕೃತಿ ಗೊಳಿಸುತ ಮೊದಲು | ವೈಕೃತವು ತದನಂತರಾ |ವ್ಯಕುತಿ ಗೈಯುತ ಲಿಂಗ | ಪ್ರಕೃತಿ ಕಾರ್ಯವ ಮಾಡಿಸುಕೃತ ತ್ರಿವಿಧರ ಸಹಜ | ಪ್ರಕೃತಿ ಶಬ್ದನಿಗೀವೇ 1 ಪರಿಭವ ಕಾರ್ಯನೀ ಮಾಳ್ಪೆ ಪ್ರಜ್ಞಾಂತ | ಪ್ರೇಮ ರೂಪದಲೀಈ ಮಹತ್ತುಪಕಾರ | ಸಾಮಸನ್ನುತ ಹರಿಯನೇಮದಿಂದಲಿ ಗೈವ | ಭಾಮೆಗಾ ನಮಿಪೇ 2 ಹರಿಕಾರ್ಯ ಸತ್ಸಾಧ್ಯೆ | ವಿರಜೆ ರೂಪದಿ ಹರಿಯೆ ||ವರ ಮಂದಿರಾವರಣ | ನೆರೆ ವಿರಚಿಸೀ |ಸರುವ ಸಜ್ಜೀವ ತವ | ಸರಿತದೋಲ್ ಅವಭೃತವವಿರಚಿಸಲು ಜಡ ಪ್ರಕೃತಿ | ಹರಿಸುವೆಯೆ ದಯದೀ 3 ಶ್ರೀ ಸಿತ ದ್ವೀಪಾದಿ | ಆ ಸುರೂಪವ ತಾಳಿವಾಸುದೇವನ ಸೇವೆ | ಆಶೆಯಲಿ ಗೈವೇ |ಈಸು ತವ ಮಹಿಮೆಯನು | ತೋಷದಲಿ ಸ್ತುತಿಪರಭಿಲಾಷೆ ಸಲಿಸುತ ತೋರ್ಪೆ | ವಾಸುದೇವನ ರೂಪ 4 ಸತಿ ಪತಿ ತೋರೇ 5
--------------
ಗುರುಗೋವಿಂದವಿಠಲರು
ಮುದ್ದು ಮೋಹನ ದಾಸರೇ ನಿಮ್ಮ | ಶುದ್ಧ ಪಾದವ ನಂಬಿದೇತಿದ್ದಿಯೆನ್ನಯನಾದ್ಯ ವಿದ್ಯೆಯ | ಬುದ್ಧಿ ನಿಲಿಸಿರಿ ಹರಿಯಲೀ ಪ ನಡುಮನೆ ದ್ವಿಜನೆಂಬನಾ | ವಡ್ಡಲೊಳು ಉದಿಸೀದನಾ |ಆಡ್ಯಮತವನುಕರಿಸಿದಾ | ದೊಡ್ಡ ಬಳ್ಳಾಪುರದಲೀ1 ವಿಕೃತಿ ಸಂವತ್ಸರದಲೀ | ಪ್ರಕೃತ ಜನ್ಮವ ಪಡೆದನಾಸುಕೃತ ಪೊಗಳುವ ಜನರ ದು | ಷ್ಕøತವ ನೀ ಪರಿಹರಿಸುವೀ 2 ಚಿಪ್ಪಗಿರಿ ಸುಕ್ಷೇತ್ರದೀ | ಗೊಪ್ಪ ಶ್ರೀ ಅಂಕಿತವನೂ ಅಪ್ಪ ಶ್ರೀ ವರರಿಂದಲೀ | ವಪ್ಪಿ ನೀ ಕೈಗೊಂಡೆಯೋ 3 ಮೂರೊಂದು ಸಲ ಶ್ರೀಕಾಶಿಗೇ | ಭೂರಿಸಲ ಶ್ರೀ ಉಡುಪಿಗೇಸಾರಿ ವೆಂಕಟ ಪತಿಯನೂ | ಬಾರಿ ಬಾರಿಗೆ ನೋಡಿದೇ4 ದಾಸ ಪೀಳಿಗೆ ಬೆಳೆಸಲೂ | ಶೇಷನಾಮಕ ದಿವಿಜಗೇಭಾಸಿಸುವ ಅಂಕಿತವನಿತ್ತೂ | ಪೋಷಿಸಿದೆ ಸದ್ವೈಷ್ಣವತತ್ವ 5 ಸುಜನ ಜನ ಸಂಸೇವಿಸೆ | ವಿಜಯ ವಿಠಲನ ಸ್ಥಾಪಿಸೇಭಜನೆ ಗೈಯುತ ಮೆರೆದೆಯೊ | ನಿಜಪುರದಿ ನೀ ನಿಲ್ಲುತಾ 6 ಸಿರಿಯಧರಿಸಿ ಮೆರೆಯುವ ಗುರು | ಗೋವಿಂದ ವಿಠಲನ ಭಜಿಸುವಾಪರಮ ಗುರುಗಳೆ ನಿಮ್ಮ ಚರಣವ | ಪರಿಪರೀಯಲಿ ಪೂಜಿಪೆ 7
--------------
ಗುರುಗೋವಿಂದವಿಠಲರು
ಶ್ರೀಮನೋಹರ ನಿನ್ನ ನಾಮವೇ ಯೆನ್ನುಸಿರು ಕ್ಷೇಮ ನಾಡಿಗಳಲ್ಲಿ ತಿರುಗುತಿರಲಿ ಪ ಕಾಮಾದಿ ಷಡ್ವರ್ಗವ್ಯಾಪನೆಯನೋಡಿಸುತ ಪ್ರೇಮದಿಂ ಹೃತ್ಪದ್ಮದಲಿ ತೋರು ಸತತ ಅ.ಪ ಪ್ರಾಪಂಚಿಕರ ಮನವು ವಿಷಯಗಳಿಗೆಳೆವಂತೆ ಪಾಪಹರ ನಿನ್ನೊಳಗೆ ಯನ್ನ ಮನವಿರಲಿ ತಾಪತ್ರಯಂಗಳಿಗೆ ತನಯನನು ಸಿಲುಕಿಸದೆ ಕಾಪಾಡಿಕೋ ಸ್ವಾಮಿ ದಾಸಾನುದಾಸನಂ1 ಕನಸು ಎಚ್ಚರ ನಿದ್ದೆ ಎಂಬವಸ್ಥೆಗಳಲ್ಲಿ ದಿನಕರಪ್ರಭು ಮೂರ್ತಿಯವತಾರ ತೋರಿ ಅನುನಯದಿ ಪದಯುಗವ ಶರಣು ಹೊಂದುವ ಪರಿಯ ಕನಿಕರದಿ ಕರುಣಿಸೈ ಕಮಲನಯನ 2 ಕಫವಾತ ಪಿತ್ಥಗಳ ವಿಕೃತಿಗಳು ಬಾರದೆಲೆ ಅಪರಿಮಿತ ಸುಂದರಾನಂದ ನೀಡಿ ಸಫಲಮಂತ್ರವ ನುಡಿಸಿ ಕೃಪೆಯಿಂದ ಕೈಪಿಡಿದು ಸುಪಥದಿಂ ನದಿದಾಟಿ ಸೇರಿಸಿಕೊ ಅಡಿಗೆ 3 ಹರಿಹರೀ ಹರಿಯೆಂಬೆ ತಾಯಿ ತಂದೆಯೆ ಗುರುವೆ ದೊರೆಯೆನೀ ಸೋದರನು ಸಖನು ಬಂಧೂ ಧರಣೀಧರ ಸರ್ವತ್ರ ಬೆಂಬಿಡದೆ ಸಹಕರಿಸಿ ಪೊರೆವುದೈ ಭವನಾಶ ಹೆಜ್ಜಾಜಿ ಶ್ರೀಶಾ 4
--------------
ಶಾಮಶರ್ಮರು
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು