ಒಟ್ಟು 11 ಕಡೆಗಳಲ್ಲಿ , 8 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಕ್ಕೆಯಿಲ್ಲ ನಮ್ಮ ಕಡೆಗೆ ಸೊಕ್ಕಿ ಬಂದರಾರೆರು ಚಿಕ್ಕ ಮನುಷ ಕೆಂಚೆಗೌಡ ಠಕ್ಕ ಮುನಿಯ ಭಾವಬಿರಿಯ ಬೆಂಕಿಯಂತೆ ತೋರ್ಪನೊಬ್ಬ ಪರಶುರಾಮನು ಪ ಆನೆಯಲ್ಲಿ ತೇಜಿಯಿಲ್ಲ ಸೇನೆ ಬಹಳವಾಗಿಯಿಲ್ಲ ಹೀನಗೆಟ್ಟು ದಂಡು ಬಂದು ಮಾನಗೊಂಡು ಹೆಣ್ಣುಗಳನು ಭಾನು ಮುಟ್ಟಲೆತ್ತಿ ಆಸಿಯ ದೀನ ಬೇಕು ಬೇಡೆಂದೆಂಬರಿಲ್ಲ 1 ಮನೆಗಳನ್ನು ಹೊಕ್ಕು ಚಾರುವರಿದು ಕೊಟ್ಟ ಕಣ್ಣಿಯ ಸೂರೆಮಾಡಿ ಕಟ್ಟಿಕೊಂಡು ತೆರೆದ ಮನೆಯ ಸುಟ್ಟು ದಾರಿದೆಗೆದು ಹೋಗುವಾಗ ಧೀರರಾಗಿ ನಿಲ್ಲಿರೆಂದು ಎಂಬವರೊಬ್ಬರಿಲ್ಲ ವೋ 2 ಯಾವಜನರ ದಂಡು ಗಂಟು ಹಣದಾಸೆಗಾಗಿ ಮಾಡಿ ದಾವ ಕಡೆಗೆ ಬರುವರೆಂದು ಸೋವ ನೋಡು ತಲ್ಲಿತಮ್ಮ ಜೀವ ದೊಳಗೆ ಜೀವ ವಿಲ್ಲದಾಗಿ ಜನರುಬಾಯಬಿಡಲು ಕೋವಿ ಕತ್ತಿ ಎಂಬುದೊಂದು ಶಬ್ದವಿಲ್ಲ ನಮ್ಮ ಕಡೆಗೆ 3 ಬೀಸಿ ಬೀಸಿ ಕತ್ತಿಯನ್ನು ಸಾಸವನ್ನು ತೋರಿರೋರ ದಾಸೆಗಾಗಿ ಕಂಡ ಜನರ ಮೋಸದಿಂದ ಕಡಿದುಕೊಚ್ಚಿ ಲೇಸುಗಾಣದಾಗಿ ಮತ್ತೆ ಭಾಸೆಯಿಂದ ತಮ್ಮ ತಾವೆ ಮಾರ್ಗವಿಡಿಯೆ4 ಕೆಟ್ಟು ಪ್ರಜೆಯು ನಾಶವಾಗಿ ಸುಟ್ಟು ಮನೆಯು ಮಾರುಬಿದ್ದು ನಿಟ್ಟು ಹಾಳುಸುರಿಯೆ ಪ್ರಜೇಯು ಹೊಟ್ಟೆಗಿಲ್ಲ ದಳಲುತಿಹುದು ಸೃಷ್ಟಿ ಗೊಡೆಯನಾದ ಲಕ್ಷ್ಮೀರಮಣ ಬಲ್ಲನೆಲ್ಲವನ್ನು 5
--------------
ಕವಿ ಪರಮದೇವದಾಸರು
ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1 ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2 ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು ಸಂಚಿತ ಕರ್ಮ | ವಳಿಯೆ ತುಳಿಯೆ ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
--------------
ವಿಜಯದಾಸ
ಎಂತು ಎನ್ನ ತಾರಿಸುವಿಯೋ ತಿಳಿಯದಿಂದಿಗೆ ಕಂತುಪಿತನೆ ಮುಕುತಿ ಮಾರ್ಗ ಹೊಂದುವೆನೆಂದಿಗೆ ಪ ಓದಿತತ್ವ ಶಾಸû್ರಗಳನು ಜನರಿಗ್ಹೇಳುವೆ ನಾನು ಮೇದನಿಯೊಳು ಬಲ್ಲವನೆಂಬ ಗರ್ವ ತಾಳುವೆ ಸಾಧು ಸಂತರ ನಡಿಯ ನುಡಿಯ ಮಹಿಮೆ ಕೇಳುವೆ ಮತ್ತೆ ಹಾದಿತಪ್ಪಿ ಕುಜನ ವೃತ್ತಿಯಲ್ಲಿ ಬಾಳುವೆ 1 ಸ್ವಾದ ಲಂಪಟ ದುರ್ವಿಷಯ ಬಿಡದ ಸಕ್ತನು ಕಪಟ ಕಲುಷ ಚಿತ್ತನು ಸಾಧಕಗುರು ಹಿರಿಯರ ಅನುಸರಿಸಿದ ಭಕ್ತರು ಸಾಧಿಪಕರ್ಮ ವೃತ್ತಗಳಲ್ಲಿ ಡಂಭಯುಕ್ತನು 2 ಒಂದು ಎರಡು ಹೇಳಲೇ ಎನ್ನತಪ್ಪವಾ ಹೃದಯ ಮಂದಿರ ಮೊಳಗಿಲ್ಲವಾಯಿತು ಜ್ಞಾನ ದೀಪವಾ ನೊಂದು ಬೆಂದು ತಾಪತ್ರಯದಿ ಸುಖದ ರೂಪವಾ ಬಗೆವೆ ನಿಂದು ಒಮ್ಮಿಗ್ಯಾರ ವಿಡಿಯೆ ಪಶ್ಚಾತ್ತಾಪವಾ 3 ಪತಿತಪಾವನ ದೀನೋದ್ಧರಣನೆಂಬ ಬಿರುದವಾ ಕ್ಷಿತಿಯೊಳಿನ್ನು ತಾಳಿದುದರ ಕೇಳು ಮಾಧವಾ ಮತಿವಿವೇಕದಿಂದೆ ಹಚ್ಚಿ ಭಕುತಿ ಸ್ವಾದವಾ ಗತಿಯ ಕೊಟ್ಟ ಕರಿಯೆ ನಾನು ನಿನ್ನ ಮರೆದವಾ 4 ನಿನ್ನ ಭಕ್ತರ ಮನಿಯ ನಾಯಿ ಯಂದು ಎನ್ನನು ಮುನ್ನಿನವರು ಉಂಡ ವೆಂಜಲ ಶೇಷವನ್ನನು ಇನ್ನು ಇಕ್ಕಿಸಿ ಸಲಹಬೇಕು ಮೂಢ ಚಿನ್ನನು ಘನ್ನ ಗುರು ಮಹಿಪತಿಸ್ವಾಮಿದಯ ಸಂಪನ್ನನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನೊಳು ನ್ಯೂನವಾರಿಸದೇ ಸಲಹಯ್ಯಾ ಪ ಕಾಮಕ್ರೋಧ ಸಂಗವ ಮಾಡೀ | ತಾಮಸ ಲೋಭದಿ ಮೋಹವ ಕೂಡಿ | ತಾಮದ ಮತ್ಸರದಲಿ ಬೆರೆದಾಡೀ | ನೇಮದಿಗೆಟ್ಟೆ ವೃಥಾಯಕ1 ವಿಷಯೇಂದ್ರಿಯ ಸುಖ ವಿಷಯೆಂದರಿಯದೆ | ವಿಷಯದಿ ನಿಸಿದಿನಗಳೆದೆನು ಹರಿಯೇ | ಕುಶಲದ ಕರ್ಮದ ದಾರಿಯ ವಿಡಿಯೆ | ಘಸಣಿಗೆ ಬಿದ್ದೆನು ಭವದಿಂದ2 ತಂದೆ ಮಹಿಪತಿ ನಂದನ ಪ್ರಾಣಾ | ಮುದದಿ ಕೈಯನು ಪಿಡಿಯಲೋ ಪೂರ್ಣಾ | ಛಂದದಿ ತೋರಿಸಿ ನಾಮದ ಖೂನಾ | ಇಂದಿಗೆ ಧನ್ಯನ ಮಾಡು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚರಣಕೆರಗುವೆ ಕೃಷ್ಣಾ ಪರಿಹರಿಸು ಜನ್ಮವನುಶರಣಜನಬಂಧು ನೀನು ಕೃಷ್ಣಾ ಪಕರುಣನಿಧಿಯಡಿಗೊಮ್ಮೆ ಶಿರವೆರಗಿದವರು ಭವಶರಧಿಯೊಳು ಬೀಳರೆಂದೂ ಕೃಷ್ಣಾ ಅ.ಪಹಲವು ದೇಹಂಗಳಲಿ ಮಾಡಿದಘ ವೃಂದಗಳುಬಲವಂದಡವಕೆ ಲಯವು ಕೃಷ್ಣಾಜಲಜಸಂಭವ ತೊಡಗಿ ಶಲಭಾಂಕದೊಳಗೊಂದನುಳಿಯದೇ ಪ್ರಾಣಿಗಳಲಿ ಕೃಷ್ಣಾತೊಳಲಿ ಬಂದೆನು ನೀನು ನಿರ್ಮಿಸಿದ ಪರಿಯಲ್ಲಿತೊಲಗಿಸಿನ್ನೀ ಭವವನು ಕೃಷ್ಣಾನಳಿನಾಕ್ಷ ನಿನ್ನ ಪ್ರಾದಕ್ಷಿಣವು ಬಳಿಕಾಯ್ತುನಿಲಿಸೆನ್ನ ನಿನ್ನಡಿಯೊಳು ಕೃಷ್ಣಾ 1ಜನನ ಜನನಗಳಲ್ಲಿ ಕಿವಿಮುಚ್ಚಿ ತಲೆವಾಗಿನಿನಗೆರಗಿದವನಾದೆನು ಕೃಷ್ಣಾಗಣನೆುಲ್ಲದ ಜನ್ಮಗಳಲಿನಿತು ನಮಿಸಿದರೆಗಣನೆಗೊಳದಿಪ್ಪುದೇನು ಕೃಷ್ಣಾಅಣು ಮಾತ್ರದವನಾಗಿ ಘನತರದವಿದ್ಯೆಯಲಿಮನಮುಳುಗಿ ಬಹು ನೊಂದೆನೋ ಕೃಷ್ಣಾಯೆಣಿಸದಪರಾಧ ಕೋಟಿಗಳ ಭವ ಭೀತನನುಅನುಪಮನೆ ಕೊಡು ಗತಿಯನು ಕೃಷ್ಣಾ 2ಮರೆಯೊಕ್ಕವರ ಕಾಯ್ವ ಬಿರಿದು ನಿನ್ನದು ದೇವಮರೆಯೊಕ್ಕೆನೆಂದೆನೀಗ ಕೃಷ್ಣಾಮರಳಿ ನುಡಿವರೆ ಗುಣಗಳಡಿಮೆಟ್ಟುತಿವೆ ಬೇಗಸ್ಮರಣೆದೊರಕೊಳ್ಳದಾಗ ಕೃಷ್ಣಾಸೆರೆಯವನ ಬಂಧುಗಳು ಬಿಡಿಸುವರು ಕಂಡಾಗಸೆರೆಯವನಿಗುಂಟೆ ಯೋಗ ಕೃಷ್ಣಾತಿರುಪತಿವಿಹಾರಿ ದುರಿತಾರಿ ವೆಂಕಟರಮಣಕರವಿಡಿಯೆ ಸದ್ಗತಿ ಸರಾಗ ಕೃಷ್ಣಾ 3ಓಂ ವಿದುರಾಕ್ರೂರಾಯ ನಮಃ
--------------
ತಿಮ್ಮಪ್ಪದಾಸರು
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ಬೇಡ ಬೇಡ ಹೋಗೆಂದು ಕಾಡದಿರು ಕೃಪೆಯೊಂದ ಬೇಡದಿರಲಾರೆ ಮಾಂಗಿರಿಯರಂಗ ಪ ಬೇಡುವನ ಕೈ ಕೀಳು ನೀಡುವನ ಕೈ ಮೇಲು ಬೇಡಿದಲ್ಲದೆ ಕೃಪೆಯ ಮಾಡನೈರಂಗಾ ಅ.ಪ ಗಾನಕೆ ನಲಿಯುವೆಯೋ ಧ್ಯಾನಕೆ ಒಲಿಯುವೆಯೋ ಜ್ಞಾನಕೆ ಸಿಗುವೆಯೋ ನಾನರಿಯೆನು ಗಾನದರಿವೆನಗಿಲ್ಲ ಧ್ಯಾನಮಾಡುವನಲ್ಲ ಜ್ಞಾನಾನುಭವವಿಲ್ಲ ಆಧಾರವಿಲ್ಲ 1 ನೀನೆನ್ನ ಕಡೆಗಣಿಸಿ ಹೀನ ಹೋಗೆಂದೆನಲು ನಾನಳುವೆನನವರತ ಶ್ವಾನದಂತೆ ಸೂನು ಬಾ ಬಾರೆಂದು ಸಾನುರಾಗದಿ ರಮಾದೇವಿ ಸಂತೈಪಳು 2 ಎನ್ನಮ್ಮ ಕೃಪೆಯಿಂದ ನಿನ್ನ ಕಾಲ್ವಿಡಿಯೆಂದು ಎನ್ನ ಕಳುಹುತ ನಿನಗೆ ಎನ್ನ ತೋರ್ದು ಎನ್ನನತಿಕೃಪೆಯಿಂದ ಮನ್ನಿಸೆನ್ನುವಳಾಗ ನಿನ್ನ ಕೃಪೆ ಯೆನಗುಂಟು ಮಾಂಗಿರೀಶಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1 ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2 ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3 ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4 ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5 ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6 ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7 ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8 ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9 ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10 ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
--------------
ಶ್ರೀಪಾದರಾಜರು
ಯೋಗಿಯಹುದಹುದೋ ಚಿದಾನಂದಯೋಗಿಯಹುದುಹುದೋ ದಯಾಸಾಗರ ಕಾರಣ್ಯದಾಗರ ನಿತ್ಯಾತ್ಮಪಅಷ್ಟಮದಂಗಳನ್ನು ಸುಟ್ಟು ಭಸ್ಮವ ಮಾಡಿಹಅಷ್ಟ ಪ್ರಕೃತಿಯನ್ನು ಕಾರಿ ಕಾರಿ ಮಹದಷ್ಟ ಯೋಗವ ಸಾಧಿಸಿ ಶ್ರವಣವನ್ನುಕೊಟ್ಟುನಾದವ ಭೇದಿಸಿ ಆತ್ಮದಲ್ಲಿದೃಷ್ಟಿ ಎಂಬುದ ನಿರಿಸಿ ಸರ್ವಕಾಲಶಿಷ್ಟರೆಂದೆನಿಪ ಉತ್ಕøಷ್ಟಮಾರ್ಗದವಾಸಿ1ಆರು ಅರಿಯ ಮೀರಿದರು ಭ್ರಮೆಯ ವಿಕಾರವ ತರಿದುತರಿದು ಹೀರಿ ಆರು ಚಕ್ರದ ಮೇಲೆಏರಿ ಸಹಸ್ರಾರ ಸ್ಥಳದಿನಿಂದುಜ್ಯೋತಿರ್ಮಯಸಾರವ ಸೇವಿಸುತಲಂದು ನಿತ್ಯಾನಿತ್ಯಘೋರತಪದಿಯೋಗಿಶೂರ ಭಕ್ತರ ಬಂಧು2ಸಪ್ತವ್ಯಸನರೂಪಕೆಡಿಸಿ ಬಳಿಕ ದುಷ್ಟಸಪ್ತಾವರಣವನ್ನು ತುಳಿದು ಪಾದದಲೊದ್ದುಗುಪ್ತವಾಗಿಹ ಪ್ರಭೆಯ ಶೋಧಿಸಿಘನತೃಪ್ತ ಅಮೃತ ಸುಧೆಯ ಸುರಿದು ಮೇರುಕಾಂಚನ ಗಿರಿಯ ಸೇರಿಯೆ ಜ್ಯೋತಿವ್ಯಾಪಕಭಾಸ್ಕರದೀಪ್ಯಮಾನ ಪ್ರಭಾ3ಕರ್ಮಪಾಪವು ಪುಣ್ಯಹಮ್ಮುವಾಸನಕ್ಷಯದುರ್ಮತಿ ದುರ್ಗುಣವೆಲ್ಲ ದೊಡ್ಡಬ್ರಹ್ಮಾನಂದದ ಲಕ್ಷಣ ತಿಳಿದಾ ನಿತ್ಯಾನಿರ್ಮಳ ನಿರಾವರಣ ರೂಪಿತ ಆತ್ಮಸ್ವರ್ಮಣಿ ಸುಗುಣನಿರ್ಗುಣಪರಬ್ರಹ್ಮವೇ ತಾನಾಗಿ ಬೆಳಗುವ ಯತಿ ಜಾಣ4ಸಾಧನ ನಾಲ್ಕನು ಸಾಧಿಸಿನಾದವ ಭೇದಿಸಿ ಜ್ಯೋತಿ ಸಂಪಾದಿಸಿ ಆತ್ಮನಭೇದವೆಂಬುದನರಿತ ಬಳಿಕಘನಸಾಧನಗುಣಚರಿತಯೋಗಿ ತಾನೆನಿಸಿ ಕೈವಿಡಿಯೆನ್ನಬೋಧಸದ್ಗುರು ಚಿದಾನಂದಅವಧೂತ5
--------------
ಚಿದಾನಂದ ಅವಧೂತರು
ವಾರಿಜರಮಣ ನಮ್ಮ ಸಾಕೊ ಪ.ಉಬ್ಬಸಕೇಳುವರೊಬ್ಬರ ಕಾಣೆಗರ್ಭವಾಸದ ಬಲೆನಿಬ್ಬರಕಾಣೊ1ಕಳೇವರಪ್ರಿಯರು ಕಳಿಸಿ ಉಳಿವರುಬಳಲುವಾಗ್ಯಮನಲ್ಲಿ ಸುಳಿಯರವರು 2ಉಮ್ಮಯ ತೀವಿದ ನಿಮ್ಮನಾಗರದಿಒಮ್ಮ್ಯಾದರೆನ್ನಿಡು ಧರ್ಮದಯಾಬ್ಧಿ 3ಕಂಗಳಿಲ್ಲವು ಸುಜÕ ಕಂಗಳ ಕೊಡು ನೀಪಂಗುಗುಲ್ಲಾಸ ಪಾದಂಗಳ ಕೊಡು ನೀ 4ಕಡೆಯ ಮಾತಿಗೆ ಕೈಯವಿಡಿಯೆನ್ನ ತಂದೆದೃಢ ಪ್ರಸನ್ವೆಂಕಟ ಒಡೆಯ ಪೊರೆಯೆಂದೆ 5
--------------
ಪ್ರಸನ್ನವೆಂಕಟದಾಸರು
ಸಂಗವಿಡಿಸು ರಂಗಾ ವಿಬುಧರಹಿಂಗದೆ ನಿನ್ನಯ ನಾಮ ಪಾಡ್ವ ಭಕುತರ ಪ.ಸಂಗವಿಡಿಯೆಭವಹಿಂಗುವ ಲೆಕ್ಕದಅಂಗವಣೆಯನರಿತಂಗವಿವೇಕದಿಲಿಂಗವಪುವಿಭಂಗ ವಿಚಾರಕೆರಂಗಿ ವಿಷಯಭಯ ನುಂಗುವರ 1ಹರಿದಿನ ನಿಶಿಜಾಗರದ್ಯಶನಂಗಳಮರೆದಂಬುಜಾಕ್ಷನ ಬಿರುದೊಕ್ಕಣಿಸುತಮರುದಂಶರ ಮತವರಿದಿತರಾಗಮಜರಿದುವಿರತಿಯಲಿ ಪಿರಿದಪ್ಪರ2ಬೆನ್ನಬಿಡದೆ ಊರು ಬನ್ನವಬಡಿಸಲುತನ್ನ ವಿಮಲಮತಿಯನ್ನು ಬಿಸಾಡದೆಅನ್ಯವಧುವಿಗೆ ಬಿನ್ನವಿಸದೆ ಪಾವನ್ನವ ಮಾಳ್ಪ ಮಾನವರ 3ಸರಿಸ ಸಮನಿಹ ಹರುಷಪಡೆನುತಲಿಸುರಸಂಪದಕೆ ಮನವಿರಿಸಿ ಪರಂಪರಾಅರಸಪದವಿ ಓಕರಿಸಿ ಪರೇಶನಸ್ಮರಿಸಿ ಪದಾಬ್ಜವ ಸ್ಮರಿಸಿಪ್ಪರ 4ಅರಿಸಖರೊಳು ಸಮವೆರಸಿ ನೋಡುತಹರಿಯಿರಿಸಿದೊಲಂಗೀಕರಿಸಿ ನಿರಂತರಪರಸನ್ನ ವೆಂಕಟಗಿರೀಶ ನಾಮಾಸ್ತ್ರವಧರಿಸಿ ಸಂಸಾರವ ಉತ್ತರಿಸುವರ 5
--------------
ಪ್ರಸನ್ನವೆಂಕಟದಾಸರು