ಒಟ್ಟು 33 ಕಡೆಗಳಲ್ಲಿ , 18 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಭಾರತೀ ಪ್ರಾರ್ಥನೆ) ಭಕ್ತ ಚಿಂತಾಮಣಿ ಭರತನರಮಣಿ ಮುಕ್ತಿಸಾಧನ ವೀಣಾಪಾಣಿ ಕಲ್ಯಾಣಿ ಪ. ವಿದ್ಯಾಮಾನಿನಿ ವಿಭವನಿದಾನಿ ಸದ್ಯೋಜಾತಸುಪರ್ಣರ ಜನನಿ ಹೃದ್ಯವರುದ್ಧನಾದ್ಯ ವಿದ್ಯಾವಿದಾರಣಿ ನೀ- ನಿದ್ದುಮನದಿ ಶುದ್ಧ ಬುದ್ಧಿಯ ಕರುಣಿಸು 1 ನಾಲಿಗೆಯೊಳು ನಿನ್ನ ಲೀಲೆಯ ತೋರೆ ಪಾಲಕರನು ಕಾಣೆ ಪವನನೊಲಿವ ಜಾಣೆ ನೀಲ ಮೇಘ ನಿಭಾನನೆ ನವ ಪ್ರವೀಣೆ 2 ಅಸು ಗಣವೆಲ್ಲ ನಿನ್ನೊಶದೊಳಗಿಹವು ಅಸಮಸಾಹಸ ವಾಯು ವಶದಿ ನೀನಿರವು ಅಸುರಾರಿ ಶೇಷಾದ್ರಿವಶೀಯ ಮೋಹದ ಚಿಕ್ಕ ಸೊಸೆಯೆ ಸಕಲಜನ ವಶಕರಿ ವರದೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಶ್ರೀ ವೆಂಕಟರಮಣ ದೇವರನ್ನು ನೆನೆದು) ವೈರಿ ವಿದಾರಣ ವೀರ ವೆಂಕಟಪತಿಯಾ ಪ. ಸುಜನಾರ್ತಿ ವಾರಣಾ ಮೃತ್ಯಬ್ಧಿತಾರಣ ಧೀರತನದಿ ಕಠಾರಿ ನಡುವಿಗೆ ಸೇರಿ ದಟ್ಟಿಯನುಟ್ಟು ಕೊಂಕಣ ಸ್ವಾರಿ ಬರುವನ 1 ಪಿಡಿವುತ್ತ ನಡುನಡು- ಮತ್ತಲ್ಲಿ ಮೆರೆವಾ ಸಿರಿನಲ್ಲ ದಾಸರ ಮಸ್ತಕದಿ ಕರ ಪಲ್ಲವವನಿರಿಸೆಲ್ಲರನು ತಡವಿಲ್ಲದಲೆ ಸುಖದಲ್ಲಿ ಸಲಹುವÀ 2 ಮಂಗಳಾಭಿದ ಪಟ್ಟಣಾಧೀಶಾ ಪದ್ಮಾ ಪುರುಷಾ ಶ್ರೀ ವೆಂಕಟೇಶಾ ತುಂಗವಿಧಿ ಮಾಲಿಕಾಭೂಷಾ ಅತಸೀ ಭಾಸಾ ಸ್ಮಿತಪೂರ್ಣಭಾಷಾ ಇಂಗಿತಗಳರಿತೀವ ಸೌಖ್ಯ ತರಂಗಗಳ ಸುರ ಸಾರ್ವಭೌಮ ಕು- ರಂಗ ನಯನಾಲಿಂಗಿತಾಂಗ ಮತಂಗಜಾವರಮೋಹಿರೂಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಉದಾರಗುಣ ಶಾರದಾಮನೋಹರ ಸದಾನಂದ ರಾಮಾನುಜಂ ಪ ಮದೀಯ ಗುರುವರ ಸದಾ ಶ್ರಿತಾಕರ ತ್ರಿದಂಡಧರ ರಾಮಾನುಜಂ ಅ.ಪ ವಿಭೂತಿಯುಗ ಸತ್‍ಪ್ರಭಾವಿರಾಜಿತ ಸುಭೂಜವರ ರಾಮಾನುಜಂ ವಿಭುಂ ಭಜೇ ರಾಮಾನುಜಂ 1 ಪಾತಕನಾಶನ ಭೂತವಿಮೋಚನ ಪತಿತಪಾಲ ರಾಮಾನುಜಂ ಭೀತಿವಿದಾರಣ ಭವಭಯಹರಣ ಕರುಣಾಮಯ ರಾಮಾನುಜಂ 2 ಧರಾಂಬುಧರ ರಾಮಾನುಜಂ ಪರಾತ್ಪರ ಮಾಂಗಿರೀಶ ಪದ ಚಂಚರೀಕ ಮುನಿ ರಾಮಾನುಜಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಂತು ವರ್ಣಿಸಲಮ್ಮ ನಾನು ಕಂತುಜನಕನಾನಂತನಗಮ್ಯನನÀಂತವತಾರನಪ. ಸಂತತ ಸಜ್ಜನರಂತರಂಗದಲಿ ನಿಂತಿಹ ಲಕ್ಷ್ಮೀಕಾಂತನ ಮಹಿಮೆಯ ಅ.ಪ. ನೀರೊಳಾಡುತ ಭಾರವ ಹೊರೆವ ಧಾರುಣಿಯ ಪೊರೆವ ಘೋರ ರೂಪದಲಿ ಭೂಮಿಯನಳೆವ ಕ್ರೂರನೃಪರಳಿವ ಆ ರಾವಣನ ಬಲವ ಮುರಿವ ಚೋರ ದಿಗಂಬರವ ಚಾರು ಕುದುರೇಯನೇರಿ ಬರುವ ಸುಕು- ಮಾರ ಜಗದೊಳು ಶೂರ ಜಾರುವ ಕಠಿಣಶರೀರದಿ ಭೂಮಿಯ ಸೇರುವ ಕಂಬವಿದಾರಣ ಮಾಡುವ ಮೀರುವಭುವನಕೆ ತೋರುವ ಪರಶುವ ಜಾರ ವಸನಹೀನ ಧೀರ ಸುಅಶ್ವವನೇರಿ ಮೆರೆವನ 1 ನಿಗಮೋದ್ಧರಿಸುವ ನಗವನು ತರುವ ಜಗತಿಯುದ್ಧರಿಸುವ ಮಗುವ ಪಾಲಿಸುವ ಮಾಯದಿ ಬೆಳೆವ ದುಗುಡ ನೃಪಕುಲವ ಬಗಿದು ಭಾಸ್ಕರ ತನಯನಿಗೊಲಿವ ನೆಗಹಿ ಗೋವರ್ಧನವ ಬಗೆಬಗೆ ಮಾತಾಡಿ ಸುಗುಣ ವಾಜಿಯನೇರಿ ಬಂದ ಸಚ್ಚಿದಾನಂದ ಹುಗಿದು ಸೋಮಕನ ಅದ್ರಿಗೆ ಬೆನ್ನಿತ್ತು ಅಗಿದು ಭೂಮಿಯ ನರಮೃಗನಾಗುತ ಗಗನಕೆ ಬೆಳೆದು ಘಾತಿಸಿ ಕ್ಷತ್ರಿಯರ ರಘುವರ ಯದುಪತಿ ವಿಗತವಸನನಾಗಿ ಜಗಕೆ ಬಲ್ಲಿದ ಹಯವೇರಿ ಬರುವನ 2 ನಳಿನೋದ್ಭವನಿಗಾಗಮವನಿತ್ತ ಗಿರಿಯ ನಿಲಿಸಿತ್ತ ಇಳೆಯ ಕದ್ದೊಯ್ದ ದಾನವನಳಿದ ನರಹರಿ ತಾನಾದ ಬಲಿಮುಖವ ಮುರಿದ ಖಳಭೂಪರಳಿದ ದÀಶಶಿರನÀಳಿದ ಕೊಳಲನೂದಿದ ದುಷ್ಟ ಲಲನೇರ ವ್ರತವಳಿದ ಕಲಿಯ ಮರ್ದಿಸಿದ ಹೊಳೆವ ಬೆನ್ನಲಿ ಗಿರಿತಳವೆತ್ತಿದನ ನೆಲನ ಬಗಿದು ಕಂಬದಲಿ ಬಂದವನ ಬೆಳೆದ ಬೊಮ್ಮಾಂಡಕೆ ಭಾರ್ಗವಾಧಿಪನ ಬುದ್ಧ ಕಲ್ಕಿ ಚೆಲುವ ಹಯವದನನ ಬಲ್ಲಿದನ 3
--------------
ವಾದಿರಾಜ
ಕಾಯಿ ಕಾಯಯ್ಯಾ | ಅನಾಥ ಬಂಧೋ ಪ ಶರಣರ ದುರಿತಪಹರಣ ಸುಪಾವನ | ಚರಣನೆ ಕೌಸ್ತುಭಾಭರಣ ಹೇಮಾಂಬರಾ | ತರಣಿ ಶತ | ಕಿರಣ ವಿರಾಜಿತ ಕರುಣಾ ಸಿಂಧೋ 1 ವಾರಣಭಯ ನಿವಾರಣ ಸುರಜನ | ತಾರಣ ದೈತ್ಯ ವಿದಾರಣ ಸೃಷ್ಟಿಯೆ | ಕಾರಣ ಚಿತ್ಸುಖ ಪೂರಣ ಮುನಿಜನ | ಪ್ರೇರಣ ಫಣಿಮದ ಹಾರಣ ಧೀರಾ2 ಚಕೋರ ಸು | ಚಂದಿರ ಸ್ಮರಚಿತ ಸುಂದರ ಸದ್ಗುಣ | ಮಂದಿರ ವಿಧಿಹರ ವಂದ್ಯ ಮುಕಂದನೇ | ತಂದೆ ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗಣೇಶ ಸ್ತವನ ನೀ ದಯವಾಗು ಶುಭೋದಯ ಗಣಪತಿ ಕಾದುಕೊಂಡಿರು ಸಂತತಂ ಪ. ವಾದವಿರಲಿ ನಿಷುಸೀದ ಗಣಪನೆಂಬ ವೇದಾರ್ಥವ ಪರಿಶೋಧಿಸಿ ನಮಿಸುವೆ ಅ.ಪ. ಯದ್ಯದ್ವಿಭೂತಿಮದೆಂದು ಪೇಳಿದ ಪರಿಶುದ್ಧವಾದ ವಚನ ಶ್ರದ್ಧಾಪೂಜಿತ ಸಕಲ ದೇವರೊಳಗಿದ್ದು ಉಲಿವ ಕಥನ ಮಧ್ವಾಗಮ ಸಂಸಿದ್ಧವಾಗಿರೆ ವೃಥಾ ಪದ್ಧತಿ ತಿಳಿವದು ದುರಾಧ್ಯರಂತಿರಲಿ 1 ಸರ್ವದೇವ ನತಿಯೆಲ್ಲವು ಕೇಶವನಲ್ಲಿ ಸೇರುವದೆಂದು ಯಲ್ಲಾ ಕಡೆಯಲಿ ಚಲ್ಲದೆ ಜಲವ ಬೇರಲ್ಲಿ ಸುರಿಯಿರೆಂದು ಫುಲ್ಲನಾಭ ಶಿರಿವಲ್ಲಭ ವ್ಯಾಸರ ಸೊಲ್ಲ ತಿಳಿದು ನಿಂನಲ್ಲಿಗೆ ಸೇರಿದೆ 2 ವಿಘ್ನಮಹೌಘ ವಿದಾರಣ ಭವಸಂವಿಘ್ನಮನ:ಶರಣಾ ರುಗ್ಣಾತ್ವಾದಿ ನಿವಾರಣ ಸಂಗದ-ಭಗ್ನಸುರಾರಿ ಗಣಾ ನಗ್ನ ಚಿದಾತ್ಮಜ ನೀಲಾಭರಣ ಭ- ಯಾಗ್ನಿ ಶಮನ ನಿರ್ವಿಘ್ನದಿ ಕರುಣಿಸು 3 ಪುಂಡರೀಕ ನಯನ ಅಂಡಜಾಗಮನಾಖಂಡಲ ಸೈನಿಕ ಚಂಡವೈರಿ ಮಥನಾ ಪಂಡಿತ ಪಾಮರ ಸಮದೃಗಭೀಪ್ಸಿತ ಶುಭ ಮಂಡಲ ಮಧ್ಯಗ 4 ವಿಶ್ವಂಭರ ವಿಬುಧೇಶ ಗಣಾರ್ಚಿತ ವಿಶ್ವನಾಥವಿನುತಾ ವಿಶ್ವಜನಿಸ್ಥಿತಿ ಕಾರಣವಾರಣ ವಿಶ್ವಭೂತಿ - ಶರಣ ವಿಶ್ವಾಸಾನುಗುಣಾರ್ಥ ವಿಭಾವನ ವಿಶ್ವದೇವಗತ ವೆಂಕಟರಮಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು
ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು
ಜಯ ಜಯ ಸಕಲಾಧಾರಾ | ಕೃಷ್ಣ ಜಯ ಜಯ ಭಕ್ತೋದ್ಧಾರಾ ಜಯಸಕಲಾಲಂಕಾರಾ | ಕೃಷ್ಣಾ ಯಮುನಾ ವೇಗ ಸಂಹಾರಾ ಜಯ ಜಯ ನಂದಕುಮಾರಾ ಕೃಷ್ಣ ಜಯ ಜೀಮೂತ ಶರೀರಾ ಪ ದೇವಕೀಕುಮಾರಾ ನಿಗಮಗೋಚರಾ ಶಂಖಚಕ್ರಧರ ವಸುದೇವಾನಂದಕರ ಸುರುಚಿರ ಪೀತಾಂಬರಧರ 1 ನಯನ ಮನೋಹರ ಗೋಪೀ ಮಂದಿರ ಸರಸಿಜ ದುರುಳ ಭಯಂಕರ ಶಕಟ ಬಕಾಂತಕ ಶೂರಾ ಕೃಷ್ಣ ಪೂತನಿ ಸಂಹಾರಾ ಅಜ ಸುರ ಮುನಿ ಪರಿವಾರ2 ಧೇನುಕ ದೈತ್ಯವಿದಾರಾ | ಕೃಷ್ಣ ಮರಕತ ಮಣಿಮಯ ಹಾರಾ ತರುಣೀ ಮಣಿಗಣನಿಕರಾ | ಕೃಷ್ಣ ಸರಸಿಜಲಸದಾಕಾರಾ ನವನೀತಕರಾ ಘನ ಮುರಳೀಧರ | ಕುಂಜವಿಹಾರಾ ವಿಷಧರ ಭಯಹರ ಗೋವರ್ಧನಧರ | ಮುಷ್ಟಿಕ ಮಧುರಾ 3 ವಿಹಾರಾ | ಕೃಷ್ಣ ನಾದಾನಂದ ಪ್ರಚಾರಾ ಅಕ್ರೂರಾನತ ಚರಣಾ | ಕೃಷ್ಣ ಮುನಿಜನ ಹೃದಯಾಭರಣ ಕುಬ್ಜಾವಂದಿತ ಚರಣ | ಕೃಷ್ಣ ಘನಮಹಿಮಾ ವಿಸ್ತರಣ ಗೋಪೀಜನಗಣ ಮೌಢ್ಯನಿವಾರಣ 4 ದುರುಳ ವಿದಾರಣ | ಭವಜನಕರುಣ ಹಲಧರ ಭುಜಬಲ ಪ್ರಾಣಾ ಕೃಷ್ಣ ಬೃಂದಾರಕಗಣ ಪ್ರಾಣ 5 ಶಿಶುಪಾಲೋತ್ಸವ ಬಾಣಾ | ಕೃಷ್ಣ ರುಕ್ಮ ಲೋಭ ಮದ ಯಾಣಾ ಅರಿಕುಲ ಸೈನ್ಯ ಕೃಪಾಣಾ | ಕೃಷ್ಣ ಚತುರೋಪಾಯ ಪ್ರವೀಣಾ ರುಕ್ಮಿಣೀರಮಣ ಶುಭಕರಕಂಕಣ ಪಾಂಡವಪೋಷಣ ಹರಣ ಚಕ್ರವಿಭೂಷಣ6 ದ್ರುಪದಸುತಾನತಚರಣಾ | ಕೃಷ್ಣ ಪರಮಾನಂದಾವರಣ ವಿದುರಾನತ ನೀಲಾಂಗ | ಕೃಷ್ಣ ಕರಧೃತವ್ಯರಥಾಂಗ ಕುರುಕುಲ ವನ ಸಾರಾಂಗಾ | ಕೃಷ್ಣ ಗೀತಾವನಜತರಂಗಾ ಕಮಲಾ ಅಂಗ | ಸತ್ವ ತುರಂಗಾ | ಧರ್ಮವಿಹಂಗಾ 7 ಮಾಂಗಿರಿ ರಂಗ ಸುಧಾಂಗಾ ಶುಭಾಂಗ | ಜಯ ಜಯ ಮಾಂಗಿರಿ ರಂಗಾ | ಕೃಷ್ಣ ಜಯ ಜಯ ಗರುಡ ತುರಂಗಾ 8
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣ ಜಯ ಪಾವನ ದಿವ್ಯಚರಣ ಪ. ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯ ಪೂರ್ವಾಮರಪುರದಹನ ಪೂರ್ಣಗುಣಗಣ 1 ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನ ತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2 ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣ ಲಕುಮಿನಾರಾಯಣಶರಣ ಬಕವಿದಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ದೋಷ ರಾಸಿಯಳಿದು ಪ ಭಾಸುರ ಗುಣಗಣ ಭವ್ಯ ಶರೀರ ಅ.ಪ ಚಿತ್ತ ನಿನ್ನ ಪದ ಸೇವೆಯೊಳಿರಲಿ-ಚಿಂತೆ ಇತರ ಬಿಡಲಿ ಅಂತರಂಗದಲ್ಲಾನಂದಿಸಲಿ-ಅಹಂಕೃತಿಯನ್ನೆ ಬಿಡಲಿ ಪಂಕಜ ಪಂಥವ ಪಾಲಿಸೊ ಪರಮ ಪುರುಷ ಹರಿ 1 ಅರಿಷಡ್ವರ್ಗಗಳಟವಿಯ ಖಂಡಿಸು-ಆನಂದದಲಿರಿಸು ದುರ್ಮತಿಯನೆ ಬಿಡಿಸು ಸನ್ನುತ ನಿರುತವು ನಿಲ್ಲಿಸೋ ನೀರಜಾಕ್ಷ ಹರಿ2 ತ್ರಿಜಗನ್ಮೋಹನಾಕಾರ ತ್ರಿ-ಗುಣಾತೀತ ತೀರ್ಥಪಾದ ಭಜಕರ ಪಾವನ ಭವನುತ ಚರಣ-ಋಜಗಣನುತಾಭರಣ ವಿದಾರಣ ಕೋವಿದನುತ ಹರಿ 3
--------------
ವಿಜಯದಾಸ
ನಮೋಸ್ತುತೇ ಕಮಲಾಪತೇ || ಪ ನಮೋಸ್ತು ತೇ ಶತಧೃತಿ ಶಂಕರ ಮುಖ ವಿಮಾನ ಚರಗಣ ವಂದಿತ ಚರಣ || ಅ.ಪ. ದೈತ್ಯವಿದಾರಣ ಶುಭಗುಣ1 ಗಾತ್ರ 2 ಶರಣಾಗತಜನ ಭರಣಾಧೃತ ರಥ ಚರಣ ಫಣಿಗಿರಿ ವರದ ವಿಠ್ಠಲ 3
--------------
ಸರಗೂರು ವೆಂಕಟವರದಾರ್ಯರು
ನಮೋಸ್ತುತೇ ಕಮಲಾಪತೇ ಪ ನಮೋಸ್ತುತೇ ಶತಧೃತಿ ಶಂಕರ ಮುಖ ವಿಮಾನಚರಗಣ ವಂದಿತ ಚರಣ ಅ.ಪ ವಾರಣಭೀತಿನಿವಾರಣ ಭವಜಲ ತಾರಣ ದೈತ್ಯವಿದಾರಣ ಶುಭಗುಣ 1 ಪಂಕಜಲೋಚನ ಪಂಕವಿಮೋಚನ ಪಂಕಜಾಲಯಾಲಂಕೃತಗಾತ್ರ 2 ಶರಣಾಗತಜನ ಭರಣಾಧೃತರಥ ಚರಣಾ ಫಣಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಾರಾಯಣ ನರಹರಿ ನಾರದಪ್ರಿಯ ನರಸುರಮುನಿ ವರದಾಯಕ ಧ್ರುವ ವೇದ ಕದ್ದೊಯ್ದವನ ಮರ್ದಿಸಲಿಕ್ಕೆ ಸಾಧಿಸಿ ಬಂದ್ಯೊ ಮಚ್ಛರೂಪನೆ ಮಾಧವ ನೀ ಬಂದು ಕೂರ್ಮನಾಗಿ ನಿಂದು ಮೇದಿನಿಯ ಭಾರವ ತಾಳಿದೆ 1 ಧರೆಯ ಕದ್ದಸುರನ ಕೋರದಾಡಿಂದ ಸೀಳಿ ವರಾಹರೂಪಬಂದು ದೋರಿದೆ ಹಿರಣ್ಯಕಶ್ಯಪ ವಿದಾರಣ ಮಾಡಿ ನೀ ತರಳ ಪ್ರಲ್ಹಾದನ ರಕ್ಷಿಸಿದೆ 2 ವಾಮನ ರೂಪವದೋರಿದೆ ನೇಮದಿಂದಲಿ ಪಿತನಾಜ್ಞೆಯ ನಡೆಸಲು ಸ್ವಾಮಿ ಭಾರ್ಗವರೂಪ ತಾಳಿದೆ 3 ದೇವತೆಗಳ ಸ್ಥಾಪಿಸಲಿಕ್ಕೆ ಬಂದು ದೈತ್ಯ ರಾವಣನ ಕೊಂದ್ಯೊ ಶ್ರೀರಾಮ ನೀ ದೇವಕಿ ಉದರದಲಿ ಜನಿಸಿ ಬಂದು ಕೃಷ್ಣ ಗೋವಳರನ್ನು ಪ್ರತಿಪಾಲಿಸಿದೆ 4 ಪತಿವ್ರತೆಗಳ ವ್ರತ ಅಳಿಯಲಿಕ್ಕಾಗಿ ಬಂದು ಸುಳಹುದೋರಿದೂ ಬೌದ್ದ್ಯರೂಪನೆ ಹತ್ತಿ ಕುದರಿಯ ಒತ್ತಿ ಆಳಲಿಕ್ಕೆ ಮತ್ತೆ ಬಂದೆಯ ಕಲ್ಕಿರೂಪನೆ 5 ಹತ್ತವತಾರ ಧರಿಸಿ ಬಂದು ಕ್ಷಿತಿಯೊಳ ಪತಿತರ ಪಾವನಗೈಸಿದೆ ಭಕ್ತಜನರುದ್ದರಿಸಲಿಕ್ಕೆ ಬಂದು ಶಕ್ತಿಪರಾಕ್ರಮದೋರಿದೆ 6 ಸಾವಿರ ನಾಮದೊಡೆಯ ಸ್ವಾಮಿ ನೀ ಬಂದು ಭಾವಿಸುವರೊಡನೆ ಕೂಡಿದೆ ಭವಭಂಧನ ತಾರಿಸಿ ಮಹಿಪತಿಯ ಪ್ರಾಣ ಪಾವನ ನೀ ಮಾಡಿದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು